< ಯೆಶಾಯನು 29 >

1 ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
अरीएललाई धिक्‍कार, ए अरीएल, सहर जहाँ दाऊदले छाउनी हाले! वर्षमाथि वर्ष थप् । चाडहरू फेरो मार्दै आऊन्!
2 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
तर म अरीएललाई घेरा हाल्नेछु, र त्यसले विलाप र शोक गर्नेछ । त्यो मेरो निम्ति बलिको वेदीजस्‍तो हुनेछ ।
3 ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.
तेरो विरुद्धमा गोलाकार छाउनी म हाल्‍नेछु र तेरो विरुद्धमा पर्खालसहित घेरा म हाल्‍नेछु, र तेरो विरद्ध घेरा-मचानले म घेर्नेछु ।
4 ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
तँ जमिनमा ढालिनेछस् र जमिनबाट बोल्‍नेछस् । तँ धूलोबाट मलिन सोरमा बोल्‍नेछस् । तेरो आवाज जमिनबाट बोल्‍ने आत्माजस्तै हुनेछ र धूलोबाट तेरो आवाजले सुस्केर हाल्नेछ ।
5 ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
ठुलो सङ्‍ख्‍यामा भएका तेरा आक्रमणकारीहरू मसिनो धूलोजस्ता हुनेछन् र असंख्या निर्दयीहरू उडेर जाने भुसजस्तै हुनेछन् । यो तुरुन्तै, एकै क्षणमा नै हुनेछ ।
6 ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
सर्वशक्तिमान् परमप्रभु तँकहाँ गर्जन, भूकम्म, ठुलो आवाज, शक्तिशाली हावाहुरी र हिंस्रक आँधी र भष्‍म पार्ने आगोको ज्वालासहित आउनुहुनेछ ।
7 ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.
यो सपनाजस्तो अर्थात् रातको दर्शनजस्तो हुने छः सबै जातिहरूका हुलले अरीएल र त्यसको किल्ला विरुद्ध लडाइँ गर्नेछन् । त्यसमाथि दावाब पार्न तिनीहरूले त्यसलाई र त्यसका किल्लाहरूलाई आक्रमण गर्नेछन् ।
8 ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
यो भोकाएको मानिसले खाइरहेको सपना देखेको, तर त्यो ब्युँझदा त्यसको पेट रित्तो भएजस्तै हुनेछ । यो तिर्खाएको मानिसले पानी पिइरहेको सपना देखेको, तर त्यो ब्युँझदा आफ्नो प्यास नमेटिएर छट्पटाइरहेको जस्तै हुनेछ । हो, सियोन पर्वतको विरुद्ध लडाइँ गर्ने धेरै जातिहरूलाई त्यस्तै हुनेछ ।
9 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
आफै चकित होओ र अचम्म मान । आफैलाई अन्धा बन र अन्धा होओ! मतवाला होओ, तर दाखमद्यले होइन । लरखराओ, तर मद्यले होइन ।
10 ೧೦ ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
किनकि परमप्रभुलले तिमीहरूमाथि गहिरो निद्राको आत्‍मा खन्याउनुभएको छ । उहाँले तिमीहरू अर्थात् अगमवक्ताहरूका आँखाहरू बन्द गर्नुभएको छ र तिमीहरू अर्थात् दर्शीहरूलाई शिरहरू ढाक्‍नुभएको छ ।
11 ೧೧ ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
सबै प्रकाश तिमीहरूको निम्ति मोहोर लगाइएको एउटा पुस्तकजस्तो हुनेछ, जसलाई मानिसहरूले कोही जान्‍ने मानिसलाई “पढिदिनुहोस्” भन्‍दै देलान् । उसले पनि भन्छ, “म पढ्न सक्दिनँ, किनकि यसमा मोहोर लगाइएको छ ।”
12 ೧೨ ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.
कोही पढ्न नसक्‍नेलाई “यो पढिदिनुहोस्” भन्दै दिंदा, उसले भन्‍छ, “म पढ्न सक्दिनँ ।”
13 ೧೩ ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
परमप्रभु भन्‍नुभयो, “यी मानिसहरू आफ्‍ना मुखले मेरो नजिक आउँछन् र आफ्‍ना ओठले मेरो आदर गर्छन्, तर तिनीहरूका हृदय मबाट टाढा छ । मेरो निम्ति तिनीहरूले गर्ने आदरचाहिं मानिसहरूले सिकाएका आज्ञा मात्र हुन् ।
14 ೧೪ ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
यसकारण, हेर्, म यी मानिसहरूका माझमा अचम्‍मका कुरा, आश्‍चर्यमाथि आश्‍चर्य गर्नलाई अघि बढ्‍नेछु । तिनीहरूका बुद्धिमान् मानिसहरूका बुद्धि नष्‍ट हुनेछ र तिनीहरूका विवेकशील मानिसहरूका समझ लोप हुनेछ ।”
15 ೧೫ ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
परमप्रभुबाट आफ्‍ना योजनाहरूलाई गहन रूपमा लुकाउनेहरू र अन्धाकारमा काम गर्नेहरूलाई धिक्‍कार! तिनीहरू भन्छन्, “हामीलाई कसले देख्छ, र हामीलाई कसले चिन्छ?”
16 ೧೬ ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?
तिमीहरूले कुराहरूलाई उल्टा बनाउँछौ! के कुमालेलाई माटोजस्तै ठान्‍ने, ताकि बनाइएको थोकले आफूलाई बनाउनेलाई यसो भनोस्, “त्यसले मलाई बनाएको होइन” वा बनाएको थोकले आफूलाई बनाउनेलाई भन्‍ने, “त्यसले मलाई बुझ्दैन”?
17 ೧೭ ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
केही क्षणमा नै लेबनानलाई खेत बनाइनेछ र खेतचाहिं जङ्गल हुनेछ ।
18 ೧೮ ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
त्यो दिनमा बहिराले वचनको पुस्तक सुन्‍नेछ र अन्‍धाका आँखाले गहन अन्धकारबाट देख्‍नेछ ।
19 ೧೯ ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
अत्यचारमा परेकाहरूले फेरि परमप्रभुमा आनन्द मनाउनेछन् र मानिसहरू माझका भएका गरीबहरूले इस्राएलको परमपवित्रमा आनन्द मनाउनेछन् ।
20 ೨೦ ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
किनभने निर्दयीहरूको अन्त हुनेछ र गिल्ला गर्नेहरू लप हुनेछन् । दुष्‍ट गर्न रुचाउनेहरू सबै जनालाई निर्मूल पारिनेछ,
21 ೨೧ ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
जसले एक वचनले मानिसलाई दोष लगाउने बनाउँछ । तिनीहरूले न्याय खोज्ने व्यक्‍तिलाई ढोकामा पासो थाप्छन् र झुठ बोलेर धर्मीलाई तल खसाल्‍छन् ।
22 ೨೨ ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
यसकारण, परमप्रभुले याकूबको घरानाको बारेमा, अब्राहमलाई उद्धार गर्नुहुने परमप्रभुले यसो भन्‍नुहुन्छ, “याकूब कुनै पनि हालतमा लज्‍जित हुनेछैन, न उसको मुहार नै पहेंलो हुनेछ ।
23 ೨೩ ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
तर उसले आफ्ना छोराछोरी अर्थात् मेरा हातका कामलाई देख्‍छ, तब तिनीहरूले मेरो नाउँलाई पवित्र तुल्याउनेछन् । तिनीहरूले याकूबको परमपवित्रको नाउँलाई पवित्र तुल्याउनेछन् र तिनीहरू इस्राएलको परमेश्‍वरको भयमा खडा हुनेछन् ।
24 ೨೪ ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.
ती आत्मामा गल्ती गर्नेहरूले समझ प्राप्‍त गर्नेछन् र गनगन गर्नेहरूले ज्ञान सिक्‍नेछन् ।”

< ಯೆಶಾಯನು 29 >