< ಯೆಶಾಯನು 32 >

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
पाहा, राजा सदाचाराने राज्य करील, आणि त्याचे सरदार न्यायाने सत्ता चालवतील.
2 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
प्रत्येक जण जसा वाऱ्यापासून आडोसा व वादळामध्ये आश्रय व पाऊस तसा होईल, सुक्या भूमीत जसे पाण्याचे प्रवाह, उष्ण प्रदेशातील मोठ्या खडकाखालील सावलीसारखा तो होईल.
3 ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
तेव्हा जे हे पाहतील त्यांचे डोळे मंदावणार नाही आणि ऐकणाऱ्यांचे कान हे लक्षपूर्वक ऐकतील.
4 ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
अविचारी बारकाईने समजून घेईल, तोतरा सहजतेने व स्पष्ट बोलेल.
5 ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
मूर्खाला अधिक काळ सन्मान्य म्हणणार नाही, किंवा फसविणाऱ्यास प्रतिष्ठीत. म्हणणार नाहीत.
6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
कारण मूर्ख मनुष्य आपल्या मनात मूर्खपणाच्या गोष्टी बोलतो आणि वाईट गोष्टींचे बेत आखतो आणि तो दुष्कृत्ये आणि देवविरहीत चुकीच्याच गोष्टी परमेश्वराविरूद्ध बोलतो. तो भुकेलेल्यांना अन्न खाऊ देत नाही आणि तहानेलेल्यांना पाणी पिऊ देत नाही.
7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
फसवणाऱ्याच्या पद्धती वाईट असतात. तो दुष्ट योजना आखून गरीब योग्य ते बोलतो तेव्हाही तो असत्याने गरीबाचा नाश करू पाहतो.
8 ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
परंतु सन्माननीय मनुष्य सन्माननीय योजना करतो कारण त्याच्या सन्माननीय कृतीमुळेच तो उभा राहतो.
9 ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
तुम्ही ज्या निर्धास्तपणे राहणाऱ्या स्त्रियांनो उठा, आणि माझी वाणी ऐका; अहो निश्चिंत कन्यांनो, माझे ऐका.
10 ೧೦ ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
१०अहो निश्चिंत स्त्रियांनो, एक वर्षाहून अधिक काळ तुमचा आत्मविश्वास तुटेल, कारण द्राक्षाचे हंगाम बुडेल, फळे गोळा करता येणार नाही.
11 ೧೧ ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
११तुम्ही आरामात राहणाऱ्या स्त्रियांनो, थरथर कापा; तुम्ही आत्मविश्वास असणाऱ्यांनो, अस्वस्थ व्हा; आपली तलम चांगली वस्त्रे काढा आणि आपल्याला उघडे करा; आपल्या कमरेभोवती तागाची वस्त्रे गुंडाळा.
12 ೧೨ ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
१२रम्य शेतीसाठी व फलदायी द्राक्षवेलीसाठी त्या विलाप करतील.
13 ೧೩ ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
१३माझ्या लोकांच्या भूमीवर काटे व कुसळे उगवतील, एकेकाळी आनंदीत असलेल्या शहरातील घरांवरदेखील त्या उगवतील.
14 ೧೪ ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
१४कारण महाल सोडून दिले जातील, गर्दीची शहरे ओस पडतील; टेकडी व टेहळणीचा बुरूज सर्वकाळपर्यंत गुहा होईल, रान गाढवांचा आनंद, कळपांची कुरणे होतील.
15 ೧೫ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
१५जोपर्यंत आम्हावर देवाच्या आत्म्याची वृष्टी वरून होणार नाही तोपर्यंत असे होईल, आणि रान फलदायी शेती होईल, आणि फलदायी शेती मात्र जंगलासारखी होईल.
16 ೧೬ ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
१६मग रानात न्यायत्वाची वस्ती होईल, फलदायी शेतीत नितीमत्ता वास करील.
17 ೧೭ ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
१७नितीमत्तेचे कार्य शांती; नितीमत्तेचा परिणाम शांतता आणि सर्वकाळचा आत्मविश्वास होईल.
18 ೧೮ ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
१८माझे लोक शांतस्थळी वस्ती करतील, सुरक्षित निवासस्थानी, आणि शांत जागी राहतील.
19 ೧೯ ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
१९पण जंगलाचा नाश होते वेळी गारा पडतील व नगर अगदी जमीनदोस्त केले जाईल.
20 ೨೦ ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!
२०जे तुम्ही सर्व जलांजवळ पेरता, जे तुम्ही बैल व गाढव यांचे पाय मोकळे करता, ते तुम्ही आशीर्वादित आहा.

< ಯೆಶಾಯನು 32 >