< ಯೆಶಾಯನು 37 >
1 ೧ ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
हिजकिया राजाले तिनीहरूको कुरा सुनेपछि, तिनले आफ्ना लुगा च्याते, आफूलाई भाङ्ग्राले ढाके र परमप्रभुको मन्दिरमा गए ।
2 ೨ ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
राजदरवारका निरीक्षक एल्याकीम, र शास्त्री शेब्ना र पुजारीहरूका धर्मगुरुहरूलाई सबैलाई भङ्ग्रा लगाएर तिनले आमोजका छोरा यशैया अगमवक्ताकहाँ पठाए ।
3 ೩ ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
तिनीहरूले उनलाई भने, “हिजकियाले भन्नुहुन्छ, 'आजको दिन बालक जन्माउनलाई प्रसव भएको, तर आफ्नो बलाक जन्माउन आमासँग कुनै बल नभएजस्तो दुःख, हप्की र अपमानको दिन हो ।
4 ೪ ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.
सायद तपाईंका परमप्रभु परमेश्वरले प्रमुख कमाण्डरका कुराहरू सुन्नुहुनेछ जसलाई तिनका मालिक अश्शूरका राजाले जीवित परमेश्वरको निन्दा गर्न पठाएका छन्, र परमप्रभु तपाईंको परमेश्वरले सुन्नुभएको कुराको निम्ति उहाँले हप्काउनुहुनेछ । अब अझै यहाँ बाँकी रहेकाहरूका निम्ति तपाईंले प्रार्थना गरिदिनुहोस् ।’”
5 ೫ ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
त्यसैले हिजकियाले राजाका सेवकहरू यशैयाकहाँ आए,
6 ೬ “ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
र यशैयाले तिनीहरूलाई भने, “आफ्ना मालिकलाई भन, 'परमप्रभु भन्नुहुन्छ, “अश्शूरका राजाले मेरो अपमान गर्न पठाएका सेवकहरूले भनेका जुन तैंले सुनेको कुरादेखि तँ नडरा ।
7 ೭ ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
हेर्, उसमा म एउटा आत्मा हालिदिनेछु, उसले एउटा खबर सुन्नेछ र ऊ फर्केर आफ्नै देशमा जानेछ । उसको आफ्नै देशमा म उसलाई तरवारले मार्नेछु ।”
8 ೮ ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
तब प्रमुख कमाण्डर फर्के र अश्शूरका राजाले लिब्नासँग युद्ध गरिरहेको भेट्टाए, किनकि राजा लाकीशबाट गएका छन् भन्ने तिनले सुनेका थिए ।
9 ೯ ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,
तब कूशका राजा तिर्हाकाह र मिश्रदेशले सनहेरीबको विरुद्ध युद्ध सुरु गरे भन्ने तिनले सुने, त्यसैले तिनले हिजकियालाई यस्तो सन्देशसहित दूतहरू पठाएः
10 ೧೦ “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
“यहूदाका राजा हिजकियालाई यसो भन, 'तिमीले भरोसा गर्ने परमेश्वरले तिमीलाई यसो भनेर छल नगरून्, 'यरूशलेमचाहिं अश्शूरका राजाको हातमा दिइने छैन' ।
11 ೧೧ ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
हेर, अश्शूरका राजाले सबै देशहरूलाई पुर्ण रूपमा नष्ट पारेर के गरेका छन् भन्ने तिमीहरूले सुनेका छौ । त्यसैले के तिमीले चाहिं छुट्कारा पाउनेछौ र?
12 ೧೨ ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
के मेरा पुर्खाहरूले नष्ट पारेका जातिहरूः गोजान, हारान, रेसेप र तेल-अस्सारका अदनका मानिसहरू देवताहरूले तिनीहरूलाई छुटकारा दिए?
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
हमातका राजा, अर्पादका राजा, सपर्बेम सहरहरूका, हेनाका र इव्वाका राजा कहाँ छन्?”
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
हिजकियाले दूतबाट त्यो पत्र प्राप्त गरे र त्यो पढे । अनि तिनी परमप्रभुको मन्दिरमा गए र त्यसलाई उहाँको सामु फिंजाए ।
15 ೧೫ ಹಿಜ್ಕೀಯನು ಯೆಹೋವನನ್ನು ಕುರಿತು
हिजकियाले परमप्रभुसँग प्रार्थना गरे,
16 ೧೬ “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.
“हे सर्वशक्तिमान् परमप्रभु इस्राएलका परमेश्वर, तपाईं करूबहरूमाथि विराजमान हुनुहुन्छ, तपाईं नै पृथ्वीका सारा राज्यहरूमाथि एक मात्र परमेश्वर हुनुहुन्छ ।
17 ೧೭ ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
हे परमप्रभु, तपाईंको कान फर्काउनुहोस् र सुन्नुहोस् । हे परमप्रभु तपाईंको आँखा खोल्नुहोस् र हेर्नुहोस्, अनि सनहेरीबका कुरा सुन्नुहोस्, जुन तिनले जीवित परमेश्वरको गिल्ला गर्न पठाएका छन् ।
18 ೧೮ ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
हे परमप्रभु, यो सत्य हो, अश्शूरका राजाहरूले सबै जातिहरू र तिनीहरूका देशलाई विनाश गरेका छन् ।
19 ೧೯ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
तिनीहरूले उनीहरूका देवताहरूलाई आगोले जलाएका छन्, किनकि ति देवताहरू थिएनन् तर मानिसको हातले बनेका काठ र ढुङ्गाका काम मात्र थिए । त्यसैले अश्शूरीहरूले तिनीहरूलाई विनाश गरेका छन् ।
20 ೨೦ ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”
त्यसैले अब, हे परमप्रभु हाम्रो परमेश्वर हामीलाई त्यसको शक्तिबाट बचाउनुहोस्, ताकि पृथ्वीका सबै राज्यले जानोस् कि तपाईं मात्र परमप्रभु हुनुहुन्छ ।”
21 ೨೧ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
तब आमोजका छोरा यशैयाले हिजकियाकहाँ यसो भनेर सन्देश पठाए, “परमप्रभु इस्राएलका परमेश्वर भन्नुहुन्छ, 'तैंले अश्शूरका राजा सनहेरीबको विषयमा मसँग प्रार्थना गरेको हुनाले,
22 ೨೨ ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
परमप्रभुले उसको बारेमा भन्नुभएको वचन यही होः “सियोनका कन्ये छोरीले तँलाई घृणा गर्छे र खिसी गर्न तँमा हाँस्छे । यरूशलेमकी छोरीले तँलाई आफ्नो टाउको हल्लाउँछे ।
23 ೨೩ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
तैंले कसको निन्दा र अपमान गरेको छस्? कसको विरुद्ध तैंले घमण्डमा आफ्ना आँखा उचालेको र आफ्नो सोर उच्च पारेको छस्? इस्राएलको परमपवित्रको विरुद्ध हो ।
24 ೨೪ ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
तेरो सेवकहरूद्वारा तैंले परमप्रभुको निन्दा गरेको छस् र भनेको छस्, 'मेरा असंख्या रथहरूसहित पहाडहरूको उच्च स्थानहरूमा र लेबनानको उच्च ठाउँहरूमा म गएको छु । यसका अग्ला-अग्ला देवदारुहरू र यसका असल-असल सल्ला रूखहरूलाई म काट्नेछु र यसका सबभैभन्दा उच्च स्थानहरू, यसका सबभन्दा बढी फलदायी जङ्गलहरूमा म पस्नेछु ।
25 ೨೫ ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
मैले इनारहरू खनेको छु र पानी पिएको छु । मिश्रदेशका सबै नदीहरूलाई मेरा गोडाको पैतालमुनि मैले सुकाएको छु ।
26 ೨೬ ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
मैले यसलाई लामो समुअगि नै कसरी निश्चित गरेको छु र यसलाई प्राचीन समयमा नै गरेको छु भन्ने तैंले सुनेको छैनस्? अहिले म यसलाई पुरा गर्दैछु । तँ यहाँ अभेद्य सहरहरूलाई भग्नावशेष बनाउनलाई छस् ।
27 ೨೭ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
थोरै बल भएका तिनीहरूका बासिन्दाहरूलाई चूरचूर पारिन्छ र लज्जित हुन्छन् । तिनीहरू खेतका बिरुवाहरू, हरियो घाँस, पुर्वीय बतासअगिको छाना वा खेतमा भएका घाँस हुन् ।
28 ೨೮ ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.
तर तेरो बसाइ, तँ बाहिर गएको, भित्र आएको र तँ मेरो विरुद्ध रिसाएको मलाई थाहा छ ।
29 ೨೯ ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
म विरुद्धको तेरो रिसको कारणले र तेरो अहङ्कार मेरो कानमा परेको हुनाले, तेरो नाकमा म आफ्नो बल्छी हाल्नेछु र म आफ्नो लगाम तेरो मुखमा हाल्नेछु । तँ जताबाट आएको हो तेतै म तँलाई फर्काउनेछु ।”
30 ೩೦ ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
तेरो निम्ति चिन्ह यो हुनेछ, “यो वर्ष तैंले आफै उम्रेका कुरा खानेछस्, र दोस्रो वर्षमा त्यसबाट उम्रेका कुरा खानेछस् । तर तेस्रो वर्ष तैंले रोप्नुपर्छ र कटनी गर्नुपर्छ, दाखबारी रोप्नुपर्छ र तिनका फल खानुपर्छ ।
31 ೩೧ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
यहूदाको घरानाका बाँचेर बाँकी रहेकाहरूले फेरि जरा हाल्नेछन् र फल फलाउनेछन् ।
32 ೩೨ ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
किनकि यरूशलेमबाट बाँकी रहेकाहरू आउनेछन् । सियोन पर्वतबाट बाँचेकाहरू आउनेछन् । सर्वशक्तिमान् परमप्रभुको जोशले यो गर्नेछ ।”
33 ೩೩ ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
यसकारण परमप्रभुले अश्शूरका राजाको बारेमा यसो भन्नुहुन्छ, “यो सहरभित्र ऊ आउनेछैन र उसेले यहाँ एउटा वाण पनि हान्नेछैन । यसको सामु ऊ ढाल लिएर आउनेछैन वा यसको विरुद्धमा घेरा-मचान बनाउनेछैन ।
34 ೩೪ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.
जुन बाटोबाट ऊ आयो त्यही बाटोबाट ऊ नै जानेछ । यस सहरभित्र ऊ पस्नेछैन— यो परमप्रभुको घोषणा हो ।
35 ೩೫ ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
किनकि मेरो निम्ति र मेरा सेवक दाऊदको निम्ति, म यो सहरको रक्षा गर्नेछु र यसलाई छुटकारा दिनेछु ।”
36 ೩೬ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
तब परमप्रभुको दूत गए र अश्शूरीको छाउनीमा आक्रमण गरेर १,८५,००० सिपाहीहरूलाई मारे । बिहान सबेरै मानिसहरू उठे, तब लाशहरू जताततै छरिएका थिए ।
37 ೩೭ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
त्यसैले अश्शूरका राजा सनहेरीबले इस्राएल छाडे र घर गए र निनवेमा नै बसे ।
38 ೩೮ ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
पछि, उसले आफ्नो देवता निस्रोकको मन्दिरमा पुजा गरिरहँदा, उसको छोरा अद्रम्मेलेक र शरेसरले तिनलाई तरवारले मारे । त्यसपछि तिनीहरू आरारातको देशमा भागेर गए । त्यसपछि उसको ठाउँमा उसको छोरा एसरहदोनले राज्य गरे ।