< ಯೆಶಾಯನು 7 >

1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
यह उल्लेख उस समय का है, जब उज्जियाह का पोता, योथाम के पुत्र यहूदिया के राजा आहाज़, अराम के राजा रेज़िन और रेमालियाह के पुत्र इस्राएल के राजा पेकाह ने येरूशलेम पर हमला किया, और हार गये.
2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
जब दावीद के घराने को यह पता चला कि अराम और एफ्राईम एकजुट हो गए है; तो उनके लोग आंधी से हिलते हुए वन वृक्षों के समान डर से कांपने लगे.
3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
तब याहवेह ने यशायाह से कहा, “तुम्हें और तुम्हारे पुत्र शआर-याशूब को आहाज़ से मिलने राजमार्ग से लगे धोबी खेत में ऊपरी कुंड के पास पहुंचना है.
4 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
और उनसे कहना कि, ‘अराम के राजा, रेज़िन तथा रेमालियाह के पुत्र के क्रोध के कारण जो जलता हुआ धुआं दिखाई दे रहा है, सावधान और शांत बने रहना, भयभीत न होना और न ही घबराना.
5 ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
क्योंकि अराम के राजा, रेमालियाह के पुत्र तथा एफ्राईम ने तुम्हारे विरुद्ध यह कहते हुए नई चाल चली है,
6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
“आओ, हम यहूदाह पर आक्रमण कर उसे मार दें, और ताबील के पुत्र को उसका राजा बना दें.”
7 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
इसलिये प्रभु याहवेह ने कहा: “‘उनकी यह चाल सफल न होगी, यह कदापि सफल न होगी.
8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
क्योंकि अराम का सिर दमेशेक है, और दमेशेक का रेज़िन. आगामी पैंसठ वर्षों के अंदर में एफ्राईम ऐसा नष्ट कर दिया जाएगा.
9 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
एफ्राईम का शीर्ष शोमरोन और शोमरोन का शीर्ष रेमालियाह का पुत्र है. यदि तुम विश्वास नहीं करोगे तो स्थिर भी नहीं रहोगे.’”
10 ೧೦ ಮತ್ತೆ ಯೆಹೋವನು ಆಹಾಜನಿಗೆ,
तब याहवेह ने आहाज़ से कहा,
11 ೧೧ “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol h7585)
“तुम याहवेह अपने परमेश्वर से अपने लिए एक चिन्ह मांगो, चाहे वह गहरे सागर का हो या आकाश का.” (Sheol h7585)
12 ೧೨ ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.
किंतु आहाज़ ने कहा, “नहीं, मैं न तो मांगूंगा और न ही याहवेह को परखूंगा.”
13 ೧೩ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
इस पर यशायाह ने कहा, “हे दावीद के घराने सुनो! क्या तुम्हारे लिए लोगों के धैर्य की परीक्षा लेना काफ़ी न था, कि अब तुम मेरे परमेश्वर के धैर्य को भी परखोगे?”
14 ೧೪ ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
तब प्रभु स्वयं तुम्हें एक चिन्ह देंगे: सुनो, एक कन्या गर्भधारण करेगी, वह एक पुत्र को जन्म देगी और उसे इम्मानुएल नाम से पुकारेगी.
15 ೧೫ ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
बुरे को अस्वीकार करने तथा भले को अपनाने की समझ होने तक वह मक्खन और शहद खाएगा,
16 ೧೬ “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
क्योंकि बालक को बुरे को अस्वीकार करने तथा भले को अपनाने की समझ होने से पहले, जिन दो राजाओं से तुम डर रहे हो उनके राज्य निर्जन कर दिए जाएंगे.
17 ೧೭ ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
याहवेह तुम पर, तुम्हारी प्रजा और तुम्हारे पूर्वजों के वंश पर ऐसा समय लाएंगे जैसा उस समय से, जब अश्शूर के राजा के समय में एफ्राईम यहूदिया से अलग हुआ था, अब तक कभी ऐसा नहीं हुआ था.
18 ೧೮ ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
उस दिन याहवेह सीटी की आवाज से मिस्र देश की नदियों के छोर से मक्खियों को तथा अश्शूर देश से मधुमक्खियों को बुलाएंगे.
19 ೧೯ ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
और वे सभी आकर ढलवां घाटियों, चट्टानों की दरारों में, कंटीली झाड़ियों और जलधाराओं के निकट में बस जाएंगी.
20 ೨೦ ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
उस दिन प्रभु फ़रात नदी के पार के क्षेत्र से भाड़े पर लिए हुए छुरे से अश्शूर के राजा के सिर तथा पूरे शरीर के बाल और दाढ़ी को काट डालेंगे.
21 ೨೧ ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
उस समय, मनुष्य केवल एक कलोर और भेड़ों के जोड़े को पालेगा.
22 ೨೨ ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
दूध की बहुतायत के कारण दही उसका भोजन होगा क्योंकि देश में जीवित रह गए हर व्यक्ति का भोजन दही और मधु ही होगा.
23 ೨೩ ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
उस समय, जहां हजार टुकड़े चांदी की हजार दाख लताएं होती थी, वहां अब कंटीली झाड़ियां तथा ऊंटकटारे उगेंगे.
24 ೨೪ ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
लोग वहां धनुष और तीर लेकर जाएंगे क्योंकि पूरा देश कंटीली झाड़ियों से भरा होगा.
25 ೨೫ ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
जिन पहाड़ियों पर कुदाली से खेती की जाती थी, अब तुम कंटीली झाड़ियों तथा ऊंटकटारों के कारण वहां नहीं जा पाओगे. मवेशी, भेड़, और बकरियां वहां चरेंगी.

< ಯೆಶಾಯನು 7 >