< ಯೆಶಾಯನು 9 >

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
जो वेदनमा थियो, उसबाट नैराश्‍यता दूर गरिनेछ । जबूलूनको देश र नप्‍तालीको देशलाई, पहिलेको समयमा उहाँले होच्‍याउनुभयो, तर पछिल्लो समयमा उहाँले त्‍यसको समुद्र जाने बाटोमा, यर्दनपारि जातिहरूका गलीलमा त्‍यसलाई महिमित पार्नुहुनेछ ।
2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
अन्धकारमा हिंड्ने मानिसहरूले एउटा ठुलो ज्‍योति देखेका छन् । मृत्युको छायाको देशमा बसेकाहरू, तिनीहरूमाथि ज्योति चम्केको छ ।
3 ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
तपाईंले जातिहरूलाई वृद्धि गर्नुभएको छ । तपाईंले तिनीहरूका आनन्दलाई वृद्धि गर्नुभएको छ । कटनीको समयमा झैं तिनीहरू तपाईंको सामु आनन्‍दित हुन्‍छन्, जसरी मानिसहरूले लूटको माल बाँड्दा तिनीहरू आनन्‍दित हुन्‍छन् ।
4 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
किनकि त्यसको भरी जुवा, त्यसको पिठ्युको नाल, त्यसको अत्याचारीको लट्ठीलाई तपाईंले मिद्यानको समयमा झैं चकनाचूर पार्नुभएको छ ।
5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
दुश्‍मन सिपाहीका हरेक जुत्ता र रगतमा मुछिएको पोशाकलाई जलाइनेछ र आगोको निम्ति इन्धन हुनेछ ।
6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
किनकि हाम्रा निम्ति एउटा बालकको जन्म भएको छ, हाम्रो निम्ति एउटा छोरा जन्‍मेको छ, र शासन उहाँको काँधमा हुनेछ । अनि उहाँको नाउँ अचम्मको सल्लाकार, शक्तिशाली परमेश्‍वर, अनन्‍तका पिता र शान्तिका राजकुमार राखिनेछ ।
7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
दाऊदको सिंहासनमा र उनको राज्यलाई स्थापित गर्न, अनि त्‍यसलाई न्याय र धार्मिकताले थाम्‍न उहाँले अहिलेदेखि लिएर सदासर्वदा राज्‍य गर्नुहुँदा, उहाँको शासन र शान्ति वृद्धिको अन्त हुनेछैन । सर्वशक्तिमान् परमप्रभुको जोशले यो पुरा गर्नेछ ।
8 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
परमप्रभुले याकूबको विरुद्धमा वचन पठाउनुभयो र यो इस्राएलमा पर्‍यो ।
9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
सबै मानिसहरूले जान्‍नेछन्, घमण्डसाथ र अहङ्कारी हृदयले भन्‍ने एफ्राइम र सामरियाले पनि जान्‍नेछन्,
10 ೧೦ “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
“इँटहरू खसेका छन्, तर कुँदेका ढुङ्गाहरूले नै हामी पुनःनिर्माण गर्नेछौं । अञ्जीरका रूखहरू काटिएका छन्, तर तिनका ठाउँमा हामी देवदारुका रूखहरू रोप्‍नेछौं ।”
11 ೧೧ ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
यसकारण परमप्रभुले उसको शत्रु रसीनलाई उसको विरुद्धमा खडा हुनुहुनेछ र उसका शत्रुहरूलाई,
12 ೧೨ ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
पुर्वका अरामीहरू र पश्‍चिमका पलिश्‍तीहरू उक्साउनुहुनेछ । तिनीहरूले खुल्ला मुखले इस्राएललाई निल्नेछन् । यी सबै कुराले उहाँको रिस मर्दैन । बरु, उहाँको हात अझै पसारिएकै छ ।
13 ೧೩ ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
तापनि उहाँले प्रहार गरेका मानिसहरू उहाँतिर फर्कंदैनन्, न त तिनीहरूले परमप्रभुको खोजी गर्नेछन् ।
14 ೧೪ ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
यसकारण परमप्रभुले इस्राएलबाट टाउको र पुच्छर, खजूरको हाँगा र नर्कट एकै दिनमा नष्‍ट पार्नुहुनेछ ।
15 ೧೫ ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
अगुवाहरू र भद्र मानिसहरू मुखिया हुन् । झुटो सिकाउने अगमवक्ता पुच्छर हो ।
16 ೧೬ ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
यी मानिसहरूलाई डोर्‍याउनेहरूले तिनीहरूलाई पथभ्रष्‍ट पार्छन् र तिनीहरूद्वारा डोर्‍याइनेहरू निलिन्छन् ।
17 ೧೭ ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
यसकारण परमप्रभु तिनीहरूका जवानहरूसित आनन्‍दित हुनुहुन्‍न, न त उहाँले तिनीहरूका अनाथ र विधवाहरूमाथि दया गर्नुहुनेछ, किनकि हरेक व्‍यक्‍ति अधर्मी र दुष्‍ट छन्, अनि हरेक मुखले मूर्ख कुराहरू गर्छन् । यी सबै कुराहरूमा उहाँको रिस मर्दैन । बरु, उहाँको हात अझै पसारिएकै छ ।
18 ೧೮ ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
दुष्‍टता आगोझैं बल्छ । त्‍यसले सिउँडी र काँढालाई भष्‍म पार्छ । यसले जङ्गलको झाडीलाई पनि जलाउँछ, जसले धूँवाको मुस्लोमा उठ्नेछ ।
19 ೧೯ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
सर्वशक्तिमान् परमप्रभुको क्रोधले देश जलेको छ र मानिसहरू आगोको निम्ति इन्धनजस्तै छन् । कुनै मानिसले आफ्नो भाइलाई छोड्दैन ।
20 ೨೦ ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
तिनीहरूल दाहिने हातमा खानेकुरा समात्छन् तर तिनीहरू अझै भोको नै हुन्‍छन् । तिनीहरूले देब्रे हातमा खाना खानेछन्, तर अझै तृप्‍त हुनेछैनन् । प्रत्‍येकले आफ्नै बाहुलीको मासु पनि खानेछ ।
21 ೨೧ ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
मनश्‍शेले एफ्राइमलाई, अनि एफ्राइमले मनश्‍शेलाई भस्म गर्नेछ । तिनीहरू एकसाथ यहूदालाई आक्रमण गर्नेछन् । यी कुराहरूमा, उहाँको रिस मर्दैन । बरु, उहाँको हात अझै पसारिएकै छ ।

< ಯೆಶಾಯನು 9 >