< ಯೆಶಾಯನು 1 >

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
आमोज याचा मुलगा यशया ह्याने यहूदा व यरूशलेम ह्याविषयी उज्जीया, योथाम, आहाज व हिज्कीया या यहूदी राजांच्या कालकिर्दीच्या काळात पुढे घडून येणाऱ्या गोष्टींविषयीचा दृष्टांत पाहिला.
2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
हे आकाशा, ऐक आणि हे पृथ्वी लक्षपूर्वक कान दे; कारण परमेश्वर हे बोलला आहेः “मी लेकरांचे पालनपोषण करून त्यांना वाढविले, परंतु त्यांनी मजविरूद्ध बंडखोरी केली.
3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
बैल आपल्या धन्याला ओळखतो, आणि गाढव आपल्या मालकाचे खाण्याचे कुंड ओळखतो, परंतु इस्राएल ओळखत नाही, इस्राएलास समजत नाही.”
4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
अहाहा! हे राष्ट्र, पापी, दुष्कृत्यांच्या भाराने खाली दबलेले लोक, दुष्ट जनांची संतती, भ्रष्टाचाराने वागणारी मुले! त्यांनी परमेश्वरास सोडून दिले आहे, इस्राएलाच्या पवित्र परमेश्वरास त्यांनी तुच्छ लेखले आहे. त्यांनी स्वतःस त्याच्यापासून दूर केले आहे.
5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
तुम्ही अजूनही का मार खाता? तुम्ही अधिकाधिक बंड का करता? तुमचे संपूर्ण मस्तक आजारी व संपूर्ण अंतःकरण कमकुवत आहे.
6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
पायाच्या तळव्यापायापासून डोक्यापर्यंत ज्याला दुखापत झाली नाही असा भाग राहीला नाही; फक्त जखमा व घाव आणि ताज्या उघड्या जखमा आहेत; त्या स्वच्छ केल्या नाहीत, पट्टी बांधून त्या झाकल्याही नाहीत किंवा तेलाने उपचार केला नाही.
7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
तुमचा ओसाड झाला आहे; तुमची नगरे जळून गेली आहेत. तुमच्या देखत परकीयांनी तुमची शेते उध्द्वस्त केली आहेत. परकीयांनी ती नासधूस करून, उलथून सोडून दिली आहेत.
8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
सियोनाची कन्या ही द्राक्षाच्या मळ्यातील खोपटीसारखी, काकडीच्या बागेतील पडवीसारखी, वेढा दिलेल्या नगरासारखी झाली आहे.
9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
जर सेनाधीश परमेश्वराने आम्हासाठी थोडेही शिल्लक ठेवले नसते तर आमची अवस्था सदोम व गमोरा या नगरांसारखी झाली असती.
10 ೧೦ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
१०सदोमाच्या अधिकाऱ्यांनो, परमेश्वराचा वचन ऐका; गमोराच्या लोकांनो आमच्या देवाच्या नियमशास्त्राकडे लक्ष्य द्या.
11 ೧೧ ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
११परमेश्वर म्हणतो, “तुमचे असंख्य यज्ञबली माझ्या काय कामाचे? जळालेल्या मेंढरांची अर्पणे, प्राण्यांची चरबी ही मला आता पुरेशी झाली आहेत; आणि तसेच बैल, कोंकरे, किंवा शेळ्या यांच्या रक्ताने मला संतोष होत नाही;”
12 ೧೨ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
१२जेव्हा तुम्ही मजसमोर सादर होण्यास येता, माझी अंगणे आपल्या पायाखाली तुडविता? असे करण्यास तुम्हास कोणी सांगितले?
13 ೧೩ ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
१३पुन्हा निरर्थक अशी अर्पणे आणू नका; धुपाचा मला तिटकारा आहे. तुमचे नवचंद्रदर्शन व शब्बाथ मेळे, असे पापी मेळे मी खपवून घेत नाही.
14 ೧೪ ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
१४तुमची चंद्रदर्शने व तुम्ही नेमलेले सण यांचा माझा जीव द्वेष करतो; त्यांचे मला ओझे झाले आहे; तो सहन करून मी थकलो आहे.
15 ೧೫ ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
१५म्हणून जेव्हा तुम्ही प्रार्थनेत हात पसरता, तेव्हा मी आपले डोळे तुम्हापासून झाकीन; जरी तुम्ही पुष्कळ प्रार्थना केल्या, तरीही मी त्या ऐकणार नाही; तुमचे हात निष्पापांच्या घाताच्या रक्ताने पूर्णपणे भरले आहेत.
16 ೧೬ ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
१६स्वतःला धुवा, स्वच्छ करा; तुमची दुष्ट कृत्ये माझ्या नजरेपासून नाहीशी करा; वाईट करणे सोडा;
17 ೧೭ ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
१७चांगले करण्यास शिका; न्याय मिळवा, पीडितांची मदत करा, पितृहीनांना न्याय द्या, विधवांचे रक्षण करा.
18 ೧೮ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
१८परमेश्वर म्हणतो, “आता या, व एकमेकांशी संवाद करून हे जाणून घ्या; जरी तुमची पातके लाखेसारखी लाल असली, तरीही ती बर्फाप्रमाणे शुभ्र होतील; जरी ती किरमिजी रंगासारखी लाल असली, तरी ती शुभ्र लोकरीसारखी होतील.
19 ೧೯ ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
१९जर तुमची इच्छा असेल व तुम्ही माझ्या आज्ञा पाळाल, तर तुम्हास या भूमीपासून चांगले खावयास मिळेल.
20 ೨೦ ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
२०परंतु जर तुम्ही नाकाराल व बंड कराल, तर तलवार तुमचा नाश करील,” कारण परमेश्वर आपल्या मुखाने हे बोलला आहे.
21 ೨೧ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
२१विश्वासू नगरी वेश्या कशी झाली! ती जी की पूर्णपणे न्यायी होती, धार्मिकतेने परिपूर्ण होती, पण ती आज खुन्यांनी भरून गेली आहे.
22 ೨೨ ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
२२तुमची चांदी अशुद्ध झाली आहे, तुमच्या द्राक्षरसात पाणी मिसळले आहे.
23 ೨೩ ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
२३तुमचे सरदार बंडखोर व चोरांचे साथीदार आहेत; प्रत्येकाला लाच घेणे प्रिय आणि नजराण्यांच्या मागे धावणे आवडते. ते अनाथांचे रक्षण करीत नाहीत किंवा विधवांची कायदेशीर दयेची बाजूही घेत नाहीत.
24 ೨೪ ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
२४यांकरीताच प्रभू, सेनाधीश परमेश्वर, इस्राएलाचा सामर्थ्यशाली देव हे म्हणतो कीः “त्यांचा नाश होवो! मी माझ्या विरोधकांचा सूड घेईन, आणि माझ्या शत्रू विरूद्ध मी स्वतः बदला घेईन;
25 ೨೫ ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
२५मी तुजविरूद्ध आपला हात वळवून, तुझे शुद्धीकरण करून तुझ्यातील निरुपयोगी गोष्टी काढून सर्व प्रकारची अशुद्धता दूर करीन.
26 ೨೬ ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
२६मी तुझे सर्व न्यायधीश पूर्वी जसे होते तसे करीन, तुझे सर्व सल्लागार सुरवातीस जसे होते तसे करीन, त्यानंतर तुला नीतिमानांची विश्वासू नगरी म्हणतील.”
27 ೨೭ ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
२७सियोनेचा न्यायाने उद्धार होईल व तिच्यातील पश्चातापी लोकांचा धार्मिकतेने उद्धार होईल.
28 ೨೮ ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
२८बंडखोर व पापी यांचा एकत्र चुराडा होईल व ज्यांनी परमेश्वराचा त्याग केला त्यांचाही तसाच चुराडा होईल.
29 ೨೯ “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
२९“तुम्हास पवित्र वाटणाऱ्या एलाच्या झाडाची तुम्हास लाज वाटेल, आणि तुम्ही निवडलेल्या बागा तुम्हास लज्जास्पद होतील.
30 ೩೦ ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
३०कारण तुम्ही पाने कोमजलेल्या एलाच्या झाडाप्रमाणे, व पाणी नसलेल्या बागेसारखे व्हाल.
31 ೩೧ ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
३१बलाढ्य मनुष्य वाळलेल्या झाडाच्या ढिलपीप्रमाणे दुर्बल होईल व त्याची कामे जाळाच्या लहानशा ठिणगीसारखी राहतील; ती दोन्ही एकत्र जाळण्यात येतील, तो त्यास कोणीही विझवणार नाही.”

< ಯೆಶಾಯನು 1 >