< ಯೆಶಾಯನು 1 >

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
यहूदाका राजाहरू उज्‍जियाह, योताम, आहाज र हिजकियाका समयमा यरूशलेम र यहूदाको बारेमा आमोसका छोरा यशैयाले दखेका दर्शन ।
2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
ए आकाश सुन्, र ए पृथ्वी कान थाप् । किनकि परमप्रभु बोल्नुभएको छः “मैले छोराछोरीलाई पालनपोषण गरेको र हुर्काएको छु, तर तिनीहरूले मेरो विरुद्धमा विद्रोह गरेका छन् ।
3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
गोरुले आफ्नो मालिक चिन्छ र गधाले आफ्नो मालिकको डूँड चिन्छ, तर इस्राएलले चिन्दैन र इस्राएलले बुझ्दैन ।”
4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
धिक्‍कार! पापी जाति, अधर्मले लादिएका मानिसहरू, खराब गर्नेहरूका सन्तानहरू, भ्रष्‍ट रूपले काम गर्नेहरूका सन्तानहरू! तिनीहरूले परमप्रभुलाई त्यागेका छन्, तिनीहरूले इस्राएलका परमपवित्रलाई घृणा गरेका छन्, तिनीहरूले आफैलाई उहाँबाट टाढा बनाएका छन् ।
5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
तिमीहरूलाई अझै पनि किन पिटाइ खाँदैछौ? तिमीहरू किन झन् विद्रोह गर्छौ? सम्‍पुर्ण टाउको नै बिरामी छ र सम्‍पुर्ण हृदय नै कमजोर छ ।
6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
शिरदेखि पाउसम्म हानि नभएको कुनै अंग छैन । घाउहरू, चोटपटक र भर्खरका खुल्ला घाउहरू मात्र छन् । ती बन्द गरिएका, सफा गरिएका, पट्टि लगाइएका छैनन्, न त तेलले उपचार गरिएका छन् ।
7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
तिमीहरूका देश विनाश भएको छ । तिमीहरूका सहरहरू भष्‍म पारिएका छन् । तिमीहरूका खेतहरू— नचिनेका मानिसहरूले तिमीहरूकै सामु ती नष्‍ट पारिरहेका छन्— उजाड पारेर छोडिएको छ, नचिनेका मानिसहरूले सर्वनाश पारेका छन् ।
8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
सियोनकी छोरीलाई दाखबारीको कटेरोझैं, काँक्राबारीको छायाझैं र घेरा हालिएको सहरझैं त्यागिएको छ ।
9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
सर्वशक्तिमान् परमप्रभुले हाम्रा निम्‍ति थोरै बाँकी रहेका निम्ति नछोड्नुभएको भए, हामी सदोमझैं हुनेथियौं, हामी गमोराझैं हुनेथियौं।
10 ೧೦ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
ए सदोमका शासकहरू हो, परमप्रभुको वचन सुन । ए गमोराका मानिसहरू, हाम्रा परमेश्‍वरको व्यवस्था सुन ।
11 ೧೧ ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
परमप्रभु भन्‍नुहुन्छ, “तिमीहरूका असंख्‍य बलिदानहरू मेरो निम्‍ति के नै हुन् र? थुमाहरूका होमबलि र मोटा पशुहरूका बोसो मसित प्रशस्‍त भएको छ । र साँढेहरू, थुमाहरू वा बोकाहरूका रगतमा म खुसी हुन्‍न ।
12 ೧೨ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
तिमीहरू मेरो सामु देखापर्न आउँदा, यसले मेरा चोकहरू कुल्चोस् भन्‍ने कसको इच्‍छा छ?
13 ೧೩ ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
व्यार्थका बलिदानहरू ल्याउन छोड । धूप मेरो निम्ति घृणित कुरा हो । तिमीहरूका औंसी र सबाथका सभाहरू— यी दुष्‍ट सभाहरू म सहन सक्दिनँ ।
14 ೧೪ ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
तिमीहरूका औंसीहरू र तिमीहरूका तोकिएका चाडहरूलाई म घृणा गर्छु । ती मेरो निम्ति बोझ हुन् । ती बोहोरेर म थाकिसकेको छु ।
15 ೧೫ ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
त्यसैले तिमीहरूले प्रार्थनामा आफ्‍ना हातहरू फैलाउँदा, तिमीहरूबाट म आफ्‍ना आँखा लुकाउँछु । तिमीहरूले धेरै प्रार्थना चढाए तापनि, म सुन्‍नेछैन । तिमीहरूका हातहरू रगतले भरिएका छन् ।
16 ೧೬ ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
नुहाओ र आफूलाई शुद्ध पार । मेरो दृष्‍टिबाट तिमीहरूका सबै दुष्‍ट कामहरू हटाओ । खराब हुन छोड ।
17 ೧೭ ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
असल गर्न सिक । न्याय खोज, थिचोमिचोमा परेकाहरूलाई छुटाओ, अनाथलाई न्याय देओ र विधवाको रक्षा गर ।”
18 ೧೮ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
परमप्रभु भन्‍नुहुन्छ, “अहिले आओ, हामी मिलेर छलफल गरौं । तिमीहरूका पापहरू बैजनी रङका भए तापनि, ती हिउँजस्‍तै सेता हुनेछन् । ती सिन्दुरे रङका भए तापनि ती ऊनजस्‍तै हुनेछन् ।
19 ೧೯ ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
तिमीहरू आज्ञाकारी र इच्‍छुक भयौ भने, तिमीहरूले देशका असल कुरा खानेछौ,
20 ೨೦ ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
तर तिमीहरूले इन्कार गर्‍यौ र विद्रोह गर्‍यौ भने, तरवारले तिमीहरूलाई विनाश पार्नेछ” किनकि परमप्रभुको मुखले यसो भन्‍नुभएको छ ।
21 ೨೧ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
विश्‍वासयोग्‍य सहर कसरी वेश्या भएको छ! त्यो न्यायले पुर्ण थियो— त्यो धर्मिकताले भरिपुर्ण थियो, तर अहिले त्यो हत्याराहरूले भरिएको छ ।
22 ೨೨ ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
तिमीहरूका चाँदी अशुद्ध भएको छ, तिमीहरूका दाखमद्य पानी मिसाइएको छ ।
23 ೨೩ ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
तिमीहरूका शासकहरू विद्रोहीहरू र चोरका साथीहरू हुन् । हरेकले घुसलाई प्रेम गर्छ र उपहारको पछि भाग्‍छन् । तिनीहरूले अनाथहरू रक्षा गर्दैनन्, न त न्‍यायको लागि विधवाको बिन्ति नै तिनीहरूका सामु आउँछन् ।
24 ೨೪ ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
यसकारण सर्वशक्तिमान् परमप्रभु, इस्राएलका शक्तिशाली परमपवित्रको घोषणा यो हो, “तिनीहरूलाई धिक्‍कार! आफ्‍ना विरोधीहरूसँग बदला म लिनेछु र आफ्‍ना शत्रुहरूसँग म टो फेर्नेछु ।
25 ೨೫ ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
म आफ्‍ना हात तिमीहरूका विरुद्ध उठाउनेछु, अशुद्ध मिश्रण हटाएझैं तिमीहरूका मैला शुद्ध पार्नेछु र तिमीहरूका सबै मैलाहरू हटाउनेछु ।
26 ೨೬ ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
म तिमीहरूका न्यायकर्ताहरूलाई पहिलेको झैं र तिमीहरूका सल्‍लाहकारहरूलाई सुरुको झैं पुनर्स्थापना गर्ने छु । त्यसपछि तिमीहरू धार्मिकताको सहर र विश्‍वासयोग्य नगर भनिनेछौ ।”
27 ೨೭ ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
सियोनलाई न्यायले उद्धार गर्नेछ र त्यसमा भएका पश्‍चतापीहरूलाई धार्मिकताले नै उद्धार गर्नेछ ।
28 ೨೮ ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
विद्रोहीहरू र पापीहरू एकसाथ धूलो पारिनेछन् र परमप्रभुलाई त्याग्‍नेहरू नष्‍ट हुनेछन् ।
29 ೨೯ “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
किनभने तिमीहरूले इच्‍छा गरेका फँलाटका पवित्र रूखहरूसित तिमीहरू लज्‍जित हुनेछौ र तिमीहरूले चुनेका बगैंचाद्वारा नै तिमीहरू हतासमा पर्नेछौ ।
30 ೩೦ ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
किनभने तिमीहरू पातहरू ओइलाउने फलाँटजस्ता र पानी नभएको बगैंचाजस्ता हुनेछौ ।
31 ೩೧ ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
बलिया मानिसहरू चाँडै जल्ने सामग्रीजस्ता र उसको काम एउटा झिल्कोजस्तो हुनेछन् । ती दुवै एकसाथ जल्‍नेछन् र कसैले पनि ती निभाउनेछैन ।”

< ಯೆಶಾಯನು 1 >