< ಯಾಕೋಬನು ಬರೆದ ಪತ್ರಿಕೆ 2 >
1 ೧ ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.
၁ငါ့ညီအစ်ကိုတို့၊ သင်တို့သည်ငါတို့၏ဘုန်း အသရေတော်ရှင်သခင်ယေရှုခရစ်ကို သက် ဝင်ယုံကြည်သူများဖြစ်ကြသည့်အလျောက် လူတို့အားမျက်နှာကြီးငယ်လိုက်၍မဆက် ဆံကြနှင့်။-
2 ೨ ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,
၂အကယ်၍သင်တို့စည်းဝေးရာသို့ဝင်လာ သောလူနှစ်ယောက်အနက် လူတစ်ယောက်က ရွှေလက်စွပ်နှင့်ဝတ်ကောင်းစားလှများကို ဝတ်ဆင်ထား၍ အခြားတစ်ယောက်ကမူ ဆင်းရဲနွမ်းပါးသူဖြစ်သဖြင့် စုတ်ပြတ် သောအဝတ်ကိုဝတ်ဆင်ထားသည်ဆိုအံ့။-
3 ೩ ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,
၃သင်တို့သည်ဝတ်ကောင်းစားလှဝတ်ဆင်ထား သူအားအရေးပေးလျက်``ဤနေရာတွင်ထိုင် ပါ'' ဟူ၍လည်းကောင်း၊ ဆင်းရဲသူအား``ထို နေရာတွင်ရပ်နေလော့'' ဟူ၍လည်းကောင်း ဆိုပါမူ၊-
4 ೪ ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
၄အချင်းချင်းလူတန်းစားခွဲခြား၍ မကောင်း သောအကြံအစည်နှင့်အကဲဖြတ်ရာရောက် သည်မဟုတ်ပါလော။
5 ೫ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
၅ချစ်သောညီအစ်ကိုတို့၊ နားထောင်ကြလော့။ ယုံကြည်ခြင်း၌ကြွယ်ဝသူများဖြစ်ကြ စေရန်ကိုယ်တော်ကိုချစ်သောသူတို့အတွက် ကတိထားတော်မူသောနိုင်ငံတော်ကိုဆက်ခံ သူများဖြစ်ကြစေရန် ကိုယ်တော်သည်လောက တွင်ဆင်းရဲသူတို့အားရွေးချယ်တော်မူသည် မဟုတ်လော။-
6 ೬ ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
၆သို့ရာတွင်သင်တို့ကဆင်းရဲသူတို့အား ရှုတ်ချကြသည်တကား။ ကြွယ်ဝသူတို့သည် သင်တို့အားနှိပ်စက်၍တရားသူကြီးများ ရှေ့သို့ဆွဲငင်ခေါ်ဆောင်သွားကြသည် မဟုတ်လော။-
7 ೭ ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?
၇သင်တို့ခံယူရရှိသည့်နာမတော်မြတ်ကို ကဲ့ရဲ့ကြသည်မဟုတ်လော။
8 ೮ ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
၈သင်တို့သည်``သင်၏အိမ်နီးချင်းကိုကိုယ်နှင့် အမျှချစ်လော့'' ဟုကျမ်းစာတော်တွင်ဖော် ပြပါရှိသည့်ရွှေပညတ်တော်ကိုစောင့်ထိန်း လျှင်သင့်လျော်ပေ၏။-
9 ೯ ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.
၉သို့ရာတွင်မျက်နှာကြီးငယ်လိုက်ကြပါမူ အပြစ်ကူးသူများဖြစ်၍ထိုပညတ်တော် အားဖြင့်အပြစ်သင့်လိမ့်မည်။-
10 ೧೦ ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
၁၀ပညတ်တော်တစ်ပါးကိုချိုးဖောက်သူသည် ပညတ်တော်အလုံးစုံကိုချိုးဖောက်ရာရောက် ပေသည်။-
11 ೧೧ ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.
၁၁အဘယ်ကြောင့်ဆိုသော်``သူ့အိမ်ရာကိုမပြစ် မှားနှင့်'' ဟုမိန့်တော်မူသောအရှင်သည် ``သူ့ အသက်ကိုမသတ်နှင့်'' ဟုလည်းမိန့်တော်မူ သောကြောင့်ဖြစ်၏။ သင်သည်သူ့အိမ်ရာကို မပြစ်မှားဘဲနေကောင်းနေလိမ့်မည်။ သို့ရာ တွင်လူ့အသက်ကိုသတ်ပါမူပညတ်တော် ကိုချိုးဖောက်ရာရောက်၏။-
12 ೧೨ ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.
၁၂သို့ဖြစ်၍သင်တို့သည်လွတ်မြောက်ခြင်းဆိုင် ရာတရားတော်အရတရားစီရင်ခြင်းခံ ရကြမည့်သူတို့ကဲ့သို့ပြောဆိုကျင့်ကြံ ကြလော့။-
13 ೧೩ ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
၁၃ဘုရားသခင်သည်သနားကရုဏာမရှိသူ အားသနားကရုဏာကင်းမဲ့စွာတရားစီရင် တော်မူလိမ့်မည်။ သို့ရာတွင်သနားခြင်းကရုဏာ ရှိသူသည်တရားစီရင်ခြင်းကိုကြောက်လန့် ရန်မလိုပေ။
14 ೧೪ ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
၁၄ငါ့ညီအစ်ကိုတို့၊ လူတစ်စုံတစ်ယောက်သည် ယုံကြည်ပါသည်ဟုဆိုသော်လည်း အကျင့် အားဖြင့်သက်သေမပြနိုင်ပါမူအဘယ် အကျိုးရှိမည်နည်း။ ထိုယုံကြည်ခြင်းက သူ့အားကယ်တင်နိုင်မည်လော။-
15 ೧೫ ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
၁၅ညီအစ်ကိုမောင်နှမတို့သည်ဝတ်ရေးစား ရေးချို့တဲ့ဆင်းရဲသောအခါ၊-
16 ೧೬ ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?
၁၆သင်တို့က``သင်တို့ကိုဘုရားသခင်ကောင်းချီး ပေးတော်မူပါစေ။ နွေးနွေးနေကြလော့။ ဝစွာ စားကြလော့'' ဟုဆိုလျက်သူတို့လိုအပ်သည့် အသုံးအဆောင်ကိုမပေးဘဲနေပါမူ အဘယ်အကျိုးရှိပါမည်နည်း။-
17 ೧೭ ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
၁၇ယုံကြည်ခြင်းသည်လည်းထိုနည်းတူပင်ဖြစ် သည်။ အကျင့်အားဖြင့်မပြနိုင်သောယုံကြည် ခြင်းသည်အသေဖြစ်သည်။
18 ೧೮ ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
၁၈သို့ရာတွင်တစ်စုံတစ်ယောက်က``လူတစ်ဦး မှာယုံကြည်ခြင်းရှိ၍အခြားတစ်ဦးမှာ အကျင့်ရှိသည်'' ဟုစောဒကတက်လျှင်``အကျင့် နှင့်ကင်းသည့်ယုံကြည်ခြင်းကိုငါ့အားပြလော့။ ငါမူကားအကျင့်အားဖြင့်ငါ၏ယုံကြည် ခြင်းကိုပြမည်'' ဟုငါဆိုပေအံ့။-
19 ೧೯ ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
၁၉ဘုရားတစ်ဆူတည်းသာရှိသည်ကိုယုံကြည် ၏။ ကောင်းပေ၏။ နတ်မိစ္ဆာများပင်လျှင်ထိုသို့ ယုံကြည်၍ကြောက်ရွံ့တုန်လှုပ်ကြ၏။-
20 ೨೦ ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
၂၀အချင်းလူမိုက်၊ အကျင့်နှင့်ကင်းသည့်ယုံ ကြည်ခြင်းသည် အချည်းနှီးဖြစ်ကြောင်းသိ လိုသလော။-
21 ೨೧ ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
၂၁ငါတို့၏ဘိုးဘေးအာဗြဟံသည် ဘုရား သခင်နှင့်မှန်ကန်စွာဆက်ဆံမှုကိုအဘယ် သို့ရရှိသနည်း။ သူသည်မိမိသားဣဇာက် ကို ပလ္လင်ပေါ်တွင်တင်လှူပူဇော်ခြင်းတည်း ဟူသောအကျင့်အားဖြင့်ရရှိပေသည်။-
22 ೨೨ ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
၂၂သူ၏ယုံကြည်ခြင်းသည်အကျင့်နှင့်ဒွန်တွဲ လျက်နေသည်ကို သင်မသိမမြင်သလော။ အကျင့်အားဖြင့်သူ၏ယုံကြည်ခြင်းကို ပြည့်ဝစုံလင်၍လာ၏။-
23 ೨೩ “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
၂၃သို့ဖြစ်၍``အာဗြဟံသည်ဘုရားသခင်အား ယုံကြည်၏။ သူ၏ယုံကြည်မှုကြောင့်ဘုရား သခင်သည် သူ့အားဖြောင့်မတ်သူအဖြစ် လက်ခံတော်မူသည်'' ဟူသောကျမ်းစကား သည်မှန်ကန်၍လာ၏။ ထို့ကြောင့်အာဗြဟံ သည် ဘုရားသခင်၏အဆွေဟုခေါ်ဝေါ် ခြင်းကိုခံရ၏။-
24 ೨೪ ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.
၂၄သို့ဖြစ်၍လူသည်ယုံကြည်ခြင်းအားဖြင့် သာမဟုတ်ဘဲ ဘုရားသခင်နှင့်မှန်ကန်စွာ ဆက်ဆံမှုကိုရရှိနိုင်ကြောင်းသင်တို့သိ ကြ၏။
25 ೨೫ ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
၂၅ပြည့်တန်ဆာမရာခပ်၏အကြောင်းမှာလည်း ထိုနည်းအတိုင်းပင်ဖြစ်၏။ သူသည်ဣသရေလ သူလျှိုများကိုကြိုဆိုလက်ခံပြီးနောက် အခြား လမ်းဖြင့်ထွက်ခွာသွားနိုင်ရန်ကူညီမစခဲ့ ပေသည်။ ဤအမှုကြောင့်သူသည်ဘုရား သခင်နှင့်မှန်ကန်စွာဆက်ဆံမှုကိုရရှိ၏။
26 ೨೬ ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.
၂၆ထို့ကြောင့်ဝိညာဉ်နှင့်ကင်းသောကိုယ်ခန္ဓာသည် အသေဖြစ်သကဲ့သို့ အကျင့်နှင့်ကင်းသည့် ယုံကြည်ခြင်းသည်အသေဖြစ်သတည်း။