< ಯೆರೆಮೀಯನು 11 >

1 ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
परमप्रभुबाट यर्मियाकहाँ यसो भनेर वचन आयो,
2 “ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
“यस करारका वचनहरूलाई सुन्, अनि यहूदाका हरेक मानिस र यरूशलेमका बासिन्दाहरूलाई ती घोषणा गर् ।
3 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
तिनीहरूलाई भन्, 'परमप्रभु इस्राएलका परमेश्‍वर यसो भन्‍नुहुन्छः यस करारका वचनहरू नसुन्‍ने जोसुकै श्रापित होस् ।
4 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
मैले तिमीहरूका पुर्खाहरूलाई मिश्रदेश अर्थात् फलाम पगाल्ने भट्टीबाट ल्याएको दिनमा यो करारको पालन गर्न आज्ञा दिएको थिएँ । मैले भनें, 'मेरो आवाजलाई सुन र मैले तिमीहरूलाई आज्ञा गरेका यी सबै कुरा पालन गर, किनकि तिमीहरू मेरो जाति हुनेछौ, र म तिमीहरूका परमेश्‍वर हुनेछु ।'
5 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
मेरो आज्ञा पालन गर ताकि दूध र मह बग्‍ने देश दिनेछु भनी मैले तिमीहरूका पुर्खाहरूसित खाएको शपथ म पुरा गर्न सक्‍छु ।' तब म यर्मियाले जवाफ दिएँ र भनें, 'हे, परमप्रभु हवस् ।'
6 ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
परमप्रभुले मलाई भन्‍नुभयो, “यहूदाका सहरहरू र यरूशलेमका सडकहरूका यी सबै कुराको घोषणा गर् । यसो भन्, 'यस करारका वचनहरूलाई सुन र तिनलाई कार्यावन्यन गर ।
7 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
किनकि मैले तिमीहरूका पुर्खाहरूलाई मिश्रदेशबाट ल्याएको दिनदेखि वर्तमान समयसम्म निरन्तर रूपमा तिनीहरूलाई चेताउनी दिंदै र 'मेरो आवाज सुन,' भन्‍दै गम्भीर आज्ञाहरू दिंदै आएको छु ।
8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
तर तिनीहरूले सुनेनन्, वा ध्यानै दिएनन् । हरेक व्यक्ति आफ्नै दुष्‍ट हृदयको कठोरतामा हिंडिरहेको छ । त्यसैले यस करारमा मैले तिनीहरूलाई आज्ञा गरेका सबै श्राप मैले तिनीहरूका विरुद्धमा ल्याएँ । तर मानिसहरूले अझै पनि आज्ञा मानेनन् ।”
9 ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
त्यसपछि परमप्रभुले मलाई भन्‍नुभयो, “यहूदाका मानिसहरू र यरूशलेमका बासिन्दाहरूका बिचमा भएको एउटा षड्यन्त्र पत्ता लागेको छ ।
10 ೧೦ ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
तिनीहरू आफ्‍ना पहिलेका पुर्खाहरूका अधर्मतर्फ लागेका छन् जसले मेरो वचन सुन्‍न इन्कार गरी अरू देवताहरूको पुजा गर्न तिनीहरूको पछि लागे । इस्राएलको घराना र यहूदाको घरानाले मैले तिनीहरूका पुर्खाहरूसित स्थापित गरेको मेरो करार तोडे ।
11 ೧೧ ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
त्यसकारण परमप्रभु यसो भन्‍नुहुन्छ, 'हेर, मैले तिनीहरूमाथि यस्तो विपत्ति ल्याउनै लागेको छु, जुन विपत्तिबाट तिनीहरू भाग्‍न सक्‍ने छैनन् । तब तिनीहरूले मेरो पुकारा गर्नेछन्, तर म तिनीहरूको कुरा सुन्‍नेछैनँ ।
12 ೧೨ ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
यहूदाका सहरहरू र यरूशलेमका बासिन्दाहरू जानेछन्, र तिनीहरूले भेटी चढाएका देवताहरूलाई पुकार्नेछन्, तर तिनीहरूको विपत्तिको समयमा निश्‍चय पनि तिनीहरू ती देवताहरूद्वारा बचाइनेछैनन् ।
13 ೧೩ ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
किनकि तँ यहूदाले तेरा देवताहरूको सङ्ख्या वृद्धि गरेर तेरा सहरहरूको सङ्ख्या बराबर तुल्याएको छस् । तैंले यरूशलेममा त्यसका सडकहरूको सङ्ख्या जत्तिकै धेरै लज्‍जास्पद वेदीहरू, बाल देवताको निम्ति धुप बाल्ने वेदीहरू बनाएको छस् ।
14 ೧೪ ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
त्यसैले ए यर्मिया, तँ आफूले यी मानिसहरूको निम्ति प्रार्थना नचढा । तिनीहरूको पक्षमा तैंले विलाप वा बिन्ती गर्नहुँदैन । किनकि तिनीहरूले आफ्नो विपत्तिमा मलाई पुकारा गर्दा म तिनीहरूको पुकारा सुन्‍नेछैन्‍नँ ।
15 ೧೫ ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
मेरी प्रिय जससित धेरै दुष्‍ट मनसाय थिए, त्यो किन मेरो मन्दिरमा छे? तेरा बलिदानहरूको मासुले तँलाई मदत गर्न सक्दैन । तेरा दुष्‍ट कामहरूको कारणले तँ आनन्द मनाउँछस् ।
16 ೧೬ ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
विगतमा परमप्रभुले तँलाई झ्याम्म परेको जैतूनको रुख, रहरलाग्दो फल भएको सुन्दर रुख भन्‍नुभयो । तर उहाँले यसमा आगो सल्काउनुहुनेछ, जुन आँधीबेहरीको गर्जनजस्तो सुनिनेछ । यसका हाँगाहरू भँचिनेछन् ।
17 ೧೭ ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.
इस्राएलको घराना र यहूदाको घरानाले गरेका दुष्‍ट कामहरूको कारणले तिमीहरूलाई रोप्नुहुने सर्वशक्तिमान् परमप्रभुले तिमीहरूको विरुद्धमा विपत्तिको आदेश दिनुभएको छ— तिनीहरूले बाल देवतालाई भेटीहरू चढाएर मलाई रिस उठाएका छन् ।”
18 ೧೮ ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
परमप्रभुले मलाई यी कुराहरू अवगत गराउनुभयो, त्‍यसैले म यी जान्‍दछु । हे परमप्रभु, तपाईंले नै मलाई तिनीहरूका कामहरू देखाउनुभयो ।
19 ೧೯ ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
म त कसाइकहाँ लगिंदै गरेको अवोध थुमाजस्तै थिएँ । तिनीहरूले मेरो विरुद्धमा यस्तो योजना रचेका थिए भनी मलाई थाहा थिएन, “रुखलाई त्‍यसको फलसमेत नष्‍ट पारौं । फेरि त्यसको नाउँ नै नसम्झने गरी त्यसलाई जीवितहरूको देशबाट निष्काशित गरौं ।”
20 ೨೦ ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
तापनि सर्वशक्तिमान् परमप्रभु धार्मिक न्यायाधीश हुनुहुन्छ जसले हृदय र मनको जाँच गर्नहुन्छ । तिनीहरूको विरुद्धमा तपाईंको बदलाको म साक्षी बन्‍नेछु किनकि मैले मेरो विषय तपाईंको सामु पेस गरेको छु ।
21 ೨೧ ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
त्यसकारण परमप्रभु तेरो प्राण लिन खोज्ने अनातोतका मानिसहरूको सम्बन्धमा यसो भन्‍नुहुन्छ, “तिनीहरू भन्छन्, 'तैंले परमप्रभुको नाउँमा अगमवाणी बोल्‍नुहँदैन, नत्रता तँ हाम्रा हातबाट मर्नेछस् ।'
22 ೨೨ ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
त्यसकारण सर्वशक्तिमान् परमप्रभु यसो भन्‍नुहुन्छ, 'हेर, मैले तिनीहरूलाई दण्ड दिनै लागेको छु । तिनीहरूका हट्टाकट्टा युवाहरू तरवारले मारिनेछन् । तिनीहरूका छोराहरू र छोरीहरू अनिकालद्वारा मर्नेछन् ।
23 ೨೩ ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.
तिनीहरूमध्‍ये कोही पनि छाडिनेछैन, किनकि म अनातोतका मानिसहरूको विरुद्धमा विपत्ति ल्याउँदैछु, जुन तिनीहरूको दण्डको वर्ष हुनेछ' ।”

< ಯೆರೆಮೀಯನು 11 >