< ಯೆರೆಮೀಯನು 14 >

1 ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
परमेश्वराचे वचन जे अवर्षणाबद्दल यिर्मयाकडे आले:
2 ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
“यहूदा शोक करो, तिची दारे पडून जावोत, ते देशासाठी विलाप करत आहेत, त्यांचे यरूशलेमेसाठी रडणे उंचावर गेले आहे.
3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
त्यांचे थोरजन त्यांच्या चाकरांना पाण्यासाठी पाठवतात, ते सर्व अयशस्वी परत येतात, म्हणून ते लज्जित व फजीत होऊन आपले चेहरे झाकून घेतात.
4 ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
ह्यामुळे जमीनीत भेगापडल्या आहेत, कारण भूमीवर कोठेही पाणी नाही. म्हणून शेतकरी लज्जीत होऊन आपली डोकी झाकत आहे.
5 ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
कोठेही गवत नसल्यामुळे हरीणी आपल्या नवजात पाडसास एकटेच सोडून देते.
6 ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
उघड्या डोंगरावर उभी राहून, जंगली गाढवे कोल्ह्यांप्रमाणे धापा टाकतात, त्यांचे डोळे खोल गेले आहेत, कारण खाण्यालायक एकही झुडूप शिल्लक नाही.
7 ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
जरी आमची दुष्टाई आमच्याविरूद्ध साक्ष देते, पण तरी, परमेश्वरा, तुझ्या नामास्तव कार्य कर. कारण आमची अविश्वासू कृत्ये वाढली आहेत. आम्ही तुझ्याविरूद्ध पाप केले आहे.
8 ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
इस्राएलाची आशा, तोच एक ज्याने संकटकाळी त्यास तारले. तू देशात उपऱ्यासारखा किंवा जो वाटसरु रात्री उतरायला वळतो त्याच्यासारखा तू का असावा?
9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
जो वाचवू शकत नाही अशा वीर योद्ध्याप्रमाणे तू का गोंधळात आहेस? कारण परमेश्वरा, तू आमच्याबरोबर आहेस. आम्ही तुझ्या नावाने ओळखले जातो, आम्हास सोडून जाऊ नकोस.”
10 ೧೦ ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
१०परमेश्वर या लोकांस असे म्हणतो: त्यांना भटकने प्रिय झाले आहे, त्यांनी आपले पाय असे करण्या पासून आवरून धरले नाही. यास्तव परमेश्वर त्यांच्यापासून आनंदी नाही, आता तो त्यांची दुष्कृत्ये लक्षात ठेवून त्यांच्या पापांबद्दल त्यांना शिक्षा करील.
11 ೧೧ ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
११परमेश्वर मला म्हणाला, “या लोकांच्या भल्यासाठी तू प्रार्थना करु नकोस.
12 ೧೨ ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
१२कारण जरी ते उपवास करतील, तरी मी त्यांचे रडने ऐकणार नाही, आणि जरी ते होमार्पण व धान्यार्पण करतील, त्यामध्ये मी आनंद पावणार नाही. कारण तलवार व दुष्काळ आणि रोगराई यांनी मी त्यांचा नाश करीन.”
13 ೧೩ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
१३तेव्हा मी म्हणालो, “हे, प्रभू परमेश्वरा, पाहा! संदेष्टे त्यांना सांगत आहेत की, तुम्ही तलवार पाहणार नाही, आणि दुष्काळ तुमच्यासाठी असणार नाही, कारण मी तुम्हास या ठिकाणी खरी सुरक्षितता देत आहे.”
14 ೧೪ ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
१४परमेश्वर मला म्हणाला, “माझ्या नावावर हे संदेष्टे असत्य कथन करतात. मी त्यांना पाठविलेले नाही आणि त्यांना अशी कोणतीही आज्ञा केली नाही किंवा त्याच्याशी बोललोही नाही. पण त्यांच्या हृदयातून निघणारे कपट, खोटे दर्शन, व दैवप्रश्न व व्यर्थता हे भविष्य ते तुम्हास सांगतात.
15 ೧೫ ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
१५यास्तव परमेश्वर असे म्हणतो, मी ज्यांना पाठवले नाही, अशे जे भविष्यवादी माझ्या नावात भविष्य सांगतात आणि असे म्हणतात या देशावर तलवार व उपासमार येणार नाही. ते संदेष्टे तलवारीने आणि उपासमारीने मरतील.
16 ೧೬ ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
१६आणि ज्या लोकांस त्यांनी भवीष्य सांगितले, ते उपासमार व तलवार यामुळे यरूशलेमेच्या रस्त्यावर फेकले जातील. त्यांना व त्यांच्या स्त्रिया व मुलांना आणि मुलींना कोणी पुरणारा पण असणार नाही, कारण त्यांची दुष्टाई मी त्यांच्यावर ओतीन.
17 ೧೭ ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
१७हे वचन त्यांना सांग: माझ्या डोळ्यांत अश्रू रात्रंदिवस वाहोत, ते थांबू नयेत. कारण माझ्या लोकांच्या कन्येचे पडणे खूप मोठे आहे, तिची जखम मोठी आणि ठीक न होणारी आहे.
18 ೧೮ ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
१८जर मी रानात बाहेर गेलो तर पाहा, तीथे तलवारीने मारले गेलेले आहेत. आणि जर मी शहराजवळ आलो तर पाहा! दुष्काळाने ग्रासलेले आहेत. कारण दोघेही, याजक आणि संदेष्टे ज्ञान नसल्याने भटकत आहे.”
19 ೧೯ ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
१९“काय तू यहूदाला पूर्णपणे नाकारले आहे का? तू सियोनचा राग करतोस काय? बरे न होण्या इतके तू आम्हांला का पीडलेस? आम्हांस शांती असेल ही आशा बाळगली, पण आमच्या वाट्याला काहीच चांगले आले नाही. आणि बरे होण्याची वाट पाहिली, पण पाहा, तेथे फक्त भयच आहे.
20 ೨೦ ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
२०परमेश्वरा, आम्ही पापी आहोत, ह्याची आम्हास जाणीव आहे. आमच्या पूर्वजांनी दुष्कृत्ये केली. आम्ही तुझ्याविरूद्ध अपराध केले.
21 ೨೧ ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
२१परमेश्वरा, तुझ्या नामास्तव, आम्हांला नाकारू नकोस, तुझ्या वैभवशाली सिंहासनाची अप्रतिष्ठा होऊ देऊ नकोस. आठवण कर आणि आम्हा बरोबर तुझा करार तोडू नको.
22 ೨೨ ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
२२राष्ट्राच्या मूर्तींत पाऊस पाडण्याचे सामर्थ्य आहे काय? किंवा आकाश स्वत: पावसाच्या सरी पाडण्यास सशक्त आहेत काय? जो हे सर्व करतो, तो तूच आमचा एकमेव परमेश्वर देव नाही काय? आमची आशा तुझ्यामध्ये आहे. कारण तुच या सर्व गोष्टी केल्या आहेत.”

< ಯೆರೆಮೀಯನು 14 >