< ಯೆರೆಮೀಯನು 14 >

1 ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
खडेरीको सम्‍बन्‍धमा यर्मियाकहाँ आएको परमप्रभुको वचन यही हो,
2 ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
“यहूदाले शोक गरोस् । त्यसका मूला ढोकाहरू भाँचिऊन् । तिनीहरू देशको लागि विलाप गर्दैछन् । यरूशलेमको निम्ति तिनीहरूको क्रन्दन माथि जाँदैछ ।
3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
तिनीहरूका शक्तिशाली मानिसहरूले आफ्‍ना नोकरहरूलाई पानीको लागि बाहिर पठाउँछन् । जब तिनीहरू कुवामा जान्‍छन् तब तिनीहरूले पानी पाउन सक्‍दैनन् । तिनीहरू असफल भएर फर्कन्छन् । तिनीहरू लज्‍जित र बेइजत आफ्ना शिर ढाक्छन् ।
4 ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
देशमा पानी नपरेको हुनाले, जमिन चिराचिरा परेको छ । हलो जोत्‍नेहरू लज्‍जित भएका छन् र आफ्ना शिर ढाक्छन् ।
5 ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
घाँस नभएकोले मुडुली मृगले पनि आफ्ना बच्‍चाहरूलाई मैदानमा छोड्‍छ र तिनलाई त्‍यगिदिन्‍छ ।
6 ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
जङ्गली गधाहरू नाङ्गा मैदानहरूमा खडा हुन्छन्, र तिनीहरू स्यालझैं हाँप्छन् । हरियो खर्क नभएको कारणले तिनीहरूका आँखा तिरमिराउँछन् ।”
7 ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
हे परमप्रभु, हाम्रा अधर्मले हाम्रो विरुद्धमा गवाही दिए तापनि तपाईंकै नाउँको नाम्‍ति काम गर्नुहोस् । किनकि हाम्रा विश्‍वासहीन कामहरू वृद्धि हुन्छन् । हामीले तपाईंको विरुद्धमा पाप गरेका छौं ।
8 ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
तपाईं नै इस्राएलको आशा हुनुहुन्छ, जसले सङ्कष्‍टको समयमा त्यसलाई बचाउनुहुन्छ । पाल टाँग्‍ने र एक रातको निम्ति मात्र बस्‍ने अपरिचित परदेशीजस्तै तपाईं यस देशमा किन बन्‍नुहुन्‍छ?
9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
तपाईं किन आश्‍चर्यमा परेको मानिसझैं व छुटकाराको निम्ति शक्ति नभएको योद्धाजस्तै हुनुहुन्छ? हे परमप्रभु, तपाईं हाम्रा बिचमा हुनुहुन्छ, र हाम्रा बिचमा तपाईंकै नाउँ पुकारिन्छ । हामीलाई नत्‍याग्‍नुहोस् ।
10 ೧೦ ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
परमप्रभु आफ्‍ना मानिसलाई यसो भन्‍नुहुन्छ, “तिनीहरू बरालिन मन पराउने भएको हुनाले त्यसो गर्नदेखि तिनीहरूले आफ्ना खुट्टालाई रोकेका छैनन् ।” परमप्रभु तिनीहरूसित खुसी हुनुहुन्‍न । अब उहाँले तिनीहरूका अधर्म सम्झनुभएको छ, र तिनीहरूका पापलाई दण्ड दिनुभएको छ ।
11 ೧೧ ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
परमप्रभुले मलाई यसो भन्‍नुभयो, “यी मानिसहरूको पक्षमा भलाइको निम्ति प्रार्थना नगर् ।
12 ೧೨ ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
किनकि तिनीहरूले उपवास बसे भने म तिनीहरूका विलाप सुन्‍नेछैनँ, अनि तिनीहरूले होमबलि र अन्‍नबलि चढाए भने म तिनमा खुशी हुनेछैन । किनकि तरवार, अनिकाल र विपत्तिले म तिनीहरूको अन्त्य ल्याउनेछु ।”
13 ೧೩ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
तब मैले भनें, “हे परमप्रभु परमेश्‍वर, हेर्नुहोस्, अगमवक्ताहरूले मानिसहरूलाई भन्दैछन्, 'तिमीहरूले तरवार देख्‍नेछैनौ । तिमीहरूका निम्ति अनिकाल पर्नेछैन, किनकि म यस ठाउँमा तिमीहरूलाई साँचो सुरक्षा दिनेछु' ।”
14 ೧೪ ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
परमप्रभुले मलाई भन्‍नुभयो, “अगमवक्ताहरूले मेरो नाउँमा छलको अगमवाणी बोल्छन् । मैले तिनीहरूलाई पठाइनँ, न मैले तिनीहरूलाई कुनै आज्ञा दिएँ वा तिनीहरूसित बोलेँ । तर छली दर्शन र बेकम्मा, छली मन्त्रतन्त्र तिनीहरूका आफ्नै समझबाट आएका हुन्, जुन तिनीहरूले तिमीहरूलाई अगमवाणी बोल्दैछन् ।”
15 ೧೫ ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
त्यसकारण परमप्रभु यसो भन्‍नुहुन्छ, “मैले नपठाएका अगमवक्ताहरू जसले मेरो नाउँमा अगमवाणी बोल्छन्, जसले यस देशमा कुनै तरवार वा अनिकाल पर्नेछैन भन्छन्, यी अगमवक्ताहरू तरवार र अनिकालले नष्‍ट पारिनेछन् ।
16 ೧೬ ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
त्यसपछि ती मानिसहरू जसलाई तिनीहरूले अगमवाणी बोले, तिनीहरू अनिकाल र तरवारको कारणले यरूशलेमका सडकहरूमा फ्याँकिनेछन्, किनकि त्यहाँ तिनीहरू, तिनीहरूका पत्‍नीहरू, छोराछोरीलाई गाड्ने कोही हुने छैनन्, किनकि म तिनीहरूका दुष्‍टता तिनीहरूमाथि नै खन्याउनेछु ।
17 ೧೭ ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
तिनीहरूलाई यो वचन भन्, ‘मेरा आँखाबाट दिनरात आँसु बगिरहोस् । त्यसलाई नरोक्, किनकि मेरो जातिकी कन्याको ठुलो विनाश हुनेछ । त्यसले ठुलो र निको नहुने चोट पाउनेछ ।
18 ೧೮ ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
म मैदानमा गएँ भने, त्यहाँ तरवारले मारिएकाहरू हुन्छन् । म सहरमा आएँ भने, त्यहाँ अनिकालले ल्याएका रोगहरू हुन्छन् । अगमवक्ता र पुजारी दुवै देशको यताउता बरालिन्छन्, र तिनीहरूलाई थाहैछैन' ।”
19 ೧೯ ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
के तपाईंले यहूदालाई बिलकुलै इन्कार गर्नुभएको हो? के तपाईं सियोनलाई घृणा गर्नुहुन्छ? जब हामी निको हुनुछैन भने किन तपाईं हामीलाई कष्‍ट दिनुहुन्छ? हामीले शान्तिको आशा गर्‍यौँ, तर त्यहाँ कुनै असल कुरा थिएन र निको हुने समय थिएन, तर हेर्नुहोस् त्‍यहाँ त्रास मात्र छ ।
20 ೨೦ ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
हे परमप्रभु, हामी हाम्रा दोष, हाम्रा पुर्खाहरूका अपराध स्वीकार गर्छौं, किनकि हामीले तपाईंको विरुद्धमा पाप गरेका छौं ।
21 ೨೧ ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
हामीलाई नत्याग्‍नुहोस् । तपाईंको नाउँको निम्‍ति तपाईंको महिमित सिंहासनलाई अपमानित नगर्नुहोस् । हामीसित बाँध्‍नुभएको आफ्‍नो करार सम्झनुहोस्, र त्‍यसलाई नतोड्नुहोस् ।
22 ೨೨ ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
के जातिहरूका कुनै बेकम्मा मूर्तिले वर्षा ल्याउँछ सक्‍छ र? वा के आकाश आफैले झरी पठाउँछ? हे परमप्रभु तपाईं नै हाम्रा परमेश्‍वर हुनुहुन्‍न र? हामीले तपाईंमा प्रतीक्षा गर्छौं, किनकि यी सबै कुरा गर्नुहुने तपाईं नै हुनुहुन्छ ।

< ಯೆರೆಮೀಯನು 14 >