< ಯೆರೆಮೀಯನು 15 >

1 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
तब परमप्रभुले मलाई भन्‍नुभयो, “मोशा र शमूएल मेरो सामु खडा भए तापनि म यी मानिसका पक्षमा खडा हुन्‍नँ । तिनीहरूलाई टाढा जानलाई मेरो सामुबाट तिनीहरूलाई हटाइदे ।
2 ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
यस्‍तो हुनेछ, तिनीहरूले तँलाई यसो भन्‍नेछन्, 'हामी कहाँ जाने?' तब तैंले तिनीहरूलाई भन्‍नुपर्छ, 'परमप्रभु यसो भन्‍नुहुन्छः मृत्युको निम्ति साँचिएकाहरू मृत्युमा जानुपर्छ । तरवारको निम्ति साँचिएकाहरू तरवारमा जानुपर्छ । अनिकालको निम्ति साँचिएकाहरू अनिकालमा जानुपर्छ, र निर्वासनको निम्ति साँचिएकाहरू निर्वासनमा जानुपर्छ ।'
3 “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.
म तिनीहरूलाई चारवटा समूहमा विभाजन गर्नेछु, यो परमप्रभुको घोषणा हो— केहीलाई मार्न तरवारलाई, केहीलाई घिसार्न कुकुरहरूलाई, केहीलाई स्वाहा पार्न र नष्‍ट पार्नलाई आकाशका चराहरू र जमिनका पशुहरूलाई ।
4 “ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
यहूदाका राजा हिजकियाहका छोरा मनश्शेले यरूशलेममा जे गरेका थिए, त्यसैको कारणले म तिनीहरूलाई पृथ्वीका सबै राज्यका लागि एक डरलाग्दो कुरो तुल्याउनेछु ।
5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
ए यरूशलेम, तँलाई कसले दया देखाउने छ? तेरो निम्ति कसले शोक गर्नेछ?
6 ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
तैंले मलाई त्यागेको छस्, यो परमप्रभुको घोषणा हो— तँ मबाट फर्केर गएको छस् । त्यसैले म आफ्‍नो हातले तँलाई प्रहार गर्नेछु र तलाई नाश पार्नेछु । तँलाई दया देखाउँदा-देखाउँदा म थकित भइसकेको छु ।
7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
त्यसैल म तिनीहरूलाई देशका मूल ढोकाहरूमा नाङ्लोले निफन्‍नेछु । म तिनीहरूलाई शोकमा पार्नेछु । मेरा मानिसहरू आफ्ना मार्गबाट नफर्कने भएकाले म तिनीहरूलाई नष्‍ट पार्नेछु ।
8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
म तिनीहरूका विधवाहरूको सङ्ख्या समुद्रतटको बालुवाभन्दा धेरै बनाउनेछु । युवाहरूका आमाहरूको विरुद्धमा म दिउँसै विनाशक पठाउनेछु । शोक र त्रासलाई तिनीहरूमा अकस्मात् आउने म बनाउनेछु ।
9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.
सात जना सन्तान जन्माउने आमा उजाड हुनेछे । त्‍यसले उफ् उफ् गर्नेछे । दिन छँदै त्यसको घाम अस्ताउनेछ । त्यो लज्‍जित र अपमानित हुनेछे, किनकि बाँकी रहेकाहरूलाई म तिनीहरूका शत्रुहरूको उपस्थितिमा तरवारलाई दिनेछु, यो परमप्रभुको घोषणा हो ।”
10 ೧೦ ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
हे मेरी आमा, मलाई धिक्‍कार छ! किनकि तपाईंले मलाई जन्म दिनुभयो, म जो देशैभरि तर्क र विवादको मानिस हुँ । मैले ऋण दिएको छैनँ, न कसैले मलाई ऋण दिएको छ, तर तिनीहरू सबैले मलाई श्राप दिन्छन् ।
11 ೧೧ ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
परमप्रभुले भन्‍नुभयो, “के म भलाइको लागि तँलाई छुटानेछैनँ र? निश्‍चय नै सङ्कष्‍ट र विपत्तिको समयमा म तेरा शत्रुहरूलाई मदतको निम्ति तँसित बिन्ती गर्न लगाउनेछु ।
12 ೧೨ ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು.
के कसैले फलामलाई टुक्रा-टुक्रा पार्न सक्छ? खास गरी, उत्तरबाट आउने काँसा मिसिएको फलामलाई?
13 ೧೩ “ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
म तेरा शत्रुहरूलाई तेरा धन-सम्पत्ति र खजाना सित्तैंमा लुटको मालको रूपमा दिनेछु । तेरा सबै सिमानभित्र गरिएका तेरा सबै पापको कारणले म यसो गर्नेछु ।
14 ೧೪ ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”
त्यसपछि तैंले नचिन्‍ने देशमा म तँलाई तेरा शत्रुहरूको सेवा गर्न लगाउनेछु, किनकि तेरो विरुद्धमा मेरो रिसमा आगो दन्कने छ ।”
15 ೧೫ ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
हे परमप्रभु, तपाईं जान्‍नुहुन्छ । मलाई सम्झनुहोस्, र सहायता गर्नुहोस् । मलाई सतावट गर्नेहरूको विरुद्धमा मेरो पक्षमा बदला लिनुहोस् । तपाईं धैर्यवान् हुनुहुन्छ, तर मलाई टाढा लाने अनुमति तिनीहरूलाई नदिनुहोस् । तपाईंको निम्‍ति मैले निन्दा भोग्छु भनी जान्‍नुहोस् ।
16 ೧೬ ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
तपाईंका वचनहरू भेट्टाइएका छन्, र मैले ती खाएँ । तपाईंका वचनहरू मेरो लागि रमाहट बने, र मेरो हृदयको आनन्द बने, किनकि हे सर्वशक्तिमान् परमप्रभु परमेश्‍वर म तपाईंको नाउँ लिन्‍छु ।
17 ೧೭ ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.
म उत्सव मनाउने वा रमाहट गर्नेहरूका बिचमा बसिनँ । तपाईंको शक्तिशाली हातको कारणले म एकान्तमा बसेँ, किनकि तपाईंले मलाई क्रोधले भर्नुभयो ।
18 ೧೮ ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
किन मेरो पिडा निरन्‍तर छ, र मेरो चोट निको हुन नमान्‍ने, निको नहुने भएको छ? के तपाईं मेरो लागि झुक्‍किने खोला, सुकेर जाने खोलाजस्तो बन्‍नुहुने छ र?
19 ೧೯ ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
त्यसकारण परमप्रभुले यसो भन्‍नुभयो, “ए यर्मिया, तैंले पश्‍चात्ताप गरिस् भने म तँलाई पुनर्स्थापित गर्नेछु, र तँ मेरो सामु खडा हुनेछस् र मेरो सेवा गर्नेछस् । किनकि तैंले मूर्ख थोकहरूलाई मुल्यवान् थोकहरूबाट अलग गरिस् भने तँ मेरो मुखजस्तै हुनेछस् । मानिसहरू तँकहाँ फर्केर आउने छन्, तर तँ आफै भने तिनीहरूकहाँ जानुहुँदैन ।
20 ೨೦ ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
यी मानिसको निम्ति म तँलाई छेड्नै नसकिने काँसाको पर्खालजस्तै बनाउनेछु, र तिनीहरूले तेरो विरुद्धमा युद्ध छेड्नेछन् । तर तिनीहरूले तँलाई पराजित गर्नेछैनन्, किनकि तँलाई बचाउन र छुटकारा दिन म तँसितै हुन्‍छु, यो परमप्रभुको घोषणा हो ।
21 ೨೧ ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.
किनकि म तँलाई दुष्‍टहरूको हातबाट बचाउनेछु, र निर्दयीको हातबाट छुटकारा दिनेछु ।”

< ಯೆರೆಮೀಯನು 15 >