< ಯೆರೆಮೀಯನು 17 >
1 ೧ ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
「ユダの罪は、鉄の筆、金剛石のとがりをもってしるされ、彼らの心の碑と、祭壇の角に彫りつけられている。
2 ೨ ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
彼らの子供たちは青木の下と、高い丘の上、野の山の上にある祭壇とアシラのことを覚えている。
3 ೩ ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
わたしはあなたの富とすべての宝とを、あなたの全領域の内で犯した罪の代価として、ぶんどり物とならせる。
4 ೪ ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
わたしがあなたに与えた嗣業からあなたは手をはなすようになる。またわたしは、あなたの知らない地で、あなたの敵に仕えさせる。わたしの怒りによって、火は点じられ、いつまでも燃え続けるからである」。
5 ೫ ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
主はこう言われる、「おおよそ人を頼みとし肉なる者を自分の腕とし、その心が主を離れている人は、のろわれる。
6 ೬ ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
彼は荒野に育つ小さい木のように、何も良いことの来るのを見ない。荒野の、干上がった所に住み、人の住まない塩地にいる。
7 ೭ ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
おおよそ主にたより、主を頼みとする人はさいわいである。
8 ೮ ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
彼は水のほとりに植えた木のようで、その根を川にのばし、暑さにあっても恐れることはない。その葉は常に青く、ひでりの年にも憂えることなく、絶えず実を結ぶ」。
9 ೯ ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
心はよろずの物よりも偽るもので、はなはだしく悪に染まっている。だれがこれを、よく知ることができようか。
10 ೧೦ ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
「主であるわたしは心を探り、思いを試みる。おのおのに、その道にしたがい、その行いの実によって報いをするためである」。
11 ೧೧ ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
しゃこが自分が産んだのではない卵を抱くように、不正な財産を得る者がある。その人は一生の半ばにそれから離れて、その終りには愚かな者となる。
12 ೧೨ ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
初めから高くあげられた栄えあるみ座は、われわれの聖所のある所である。
13 ೧೩ ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
またイスラエルの望みである主よ、あなたを捨てる者はみな恥をかき、あなたを離れる者は土に名をしるされます。それは生ける水の源である主を捨てたからです。
14 ೧೪ ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
主よ、わたしをいやしてください、そうすれば、わたしはいえます。わたしをお救いください、そうすれば、わたしは救われます。あなたはわたしのほめたたえる者だからです。
15 ೧೫ ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.
彼らはわたしに言います、「主の言葉はどこにあるのか。今、それを出して見せよ」と。
16 ೧೬ ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
悪をつかわされるようにとは、わたしはたって求めませんでした。また災の日を願わなかったのを、あなたはごぞんじです。わたしのくちびるから出たことは、み前にあります。
17 ೧೭ ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
どうか、わたしを恐れさせないでください。災のときに、あなたはわたしののがれ場です。
18 ೧೮ ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
わたしを攻め悩ます者をはずかしめてください。しかしわたしをはずかしめないでください。彼らを恐れさせてください。しかしわたしを恐れさせないでください。災の日を彼らにきたらせ、滅びを倍にして彼らを滅ぼしてください。
19 ೧೯ ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
主はわたしにこう言われた、「行って、ユダの王たちの出入りするベニヤミンの門、およびエルサレムのすべての門に立って、
20 ೨೦ ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
言いなさい、『これらの門からはいるユダの王たち、およびユダのすべての民とエルサレムに住むすべての者よ、主の言葉を聞きなさい。
21 ೨೧ ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
主はこう言われる、命が惜しいならば気をつけるがよい。安息日に荷をたずさえ、またはそれを持ってエルサレムの門にはいってはならない。
22 ೨೨ ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
また安息日にあなたがたの家から荷を運び出してはならない。なんのわざをもしてはならない。わたしがあなたがたの先祖に命じたように安息日を聖別して守りなさい。
23 ೨೩ ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
しかし彼らは従わず耳を傾けず、聞くことも、戒めをうけることをも強情に拒んだ。
24 ೨೪ ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
主は言われる、もしあなたがたがわたしに聞き従い、安息日に荷をたずさえてこの町の門にはいらず、安息日を聖別して、なんのわざをもしないならば、
25 ೨೫ ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
ダビデの位に座する王たち、つかさたち、ユダの人々、エルサレムに住む者は、車と馬に乗ってこの町の門からはいることができる。そしてこの町には長く人が住むようになる。
26 ೨೬ ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
また人々はユダの町々やエルサレムの周囲、ベニヤミンの地、平地と山地およびネゲブから来て燔祭、犠牲、素祭、乳香、感謝祭をたずさえて主の家にはいる。
27 ೨೭ ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
しかし、もしあなたがたがわたしに聞き従わないで、安息日を聖別して守ることをせず、安息日に荷をたずさえてエルサレムの門にはいるならば、わたしは火をその門の中に燃やして、エルサレムのもろもろの宮殿を焼き滅ぼす。その火は消えることがない』」。