< ಯೆರೆಮೀಯನು 23 >

1 “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
ὦ οἱ ποιμένες οἱ διασκορπίζοντες καὶ ἀπολλύοντες τὰ πρόβατα τῆς νομῆς μου
2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
διὰ τοῦτο τάδε λέγει κύριος ἐπὶ τοὺς ποιμαίνοντας τὸν λαόν μου ὑμεῖς διεσκορπίσατε τὰ πρόβατά μου καὶ ἐξώσατε αὐτὰ καὶ οὐκ ἐπεσκέψασθε αὐτά ἰδοὺ ἐγὼ ἐκδικῶ ἐφ’ ὑμᾶς κατὰ τὰ πονηρὰ ἐπιτηδεύματα ὑμῶν
3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
καὶ ἐγὼ εἰσδέξομαι τοὺς καταλοίπους τοῦ λαοῦ μου ἀπὸ πάσης τῆς γῆς οὗ ἐξῶσα αὐτοὺς ἐκεῖ καὶ καταστήσω αὐτοὺς εἰς τὴν νομὴν αὐτῶν καὶ αὐξηθήσονται καὶ πληθυνθήσονται
4 ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.
καὶ ἀναστήσω αὐτοῖς ποιμένας οἳ ποιμανοῦσιν αὐτούς καὶ οὐ φοβηθήσονται ἔτι οὐδὲ πτοηθήσονται λέγει κύριος
5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
ἰδοὺ ἡμέραι ἔρχονται λέγει κύριος καὶ ἀναστήσω τῷ Δαυιδ ἀνατολὴν δικαίαν καὶ βασιλεύσει βασιλεὺς καὶ συνήσει καὶ ποιήσει κρίμα καὶ δικαιοσύνην ἐπὶ τῆς γῆς
6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
ἐν ταῖς ἡμέραις αὐτοῦ σωθήσεται Ιουδας καὶ Ισραηλ κατασκηνώσει πεποιθώς καὶ τοῦτο τὸ ὄνομα αὐτοῦ ὃ καλέσει αὐτὸν κύριος Ιωσεδεκ
7 ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
διὰ τοῦτο ἰδοὺ ἡμέραι ἔρχονται λέγει κύριος καὶ οὐκ ἐροῦσιν ἔτι ζῇ κύριος ὃς ἀνήγαγεν τὸν οἶκον Ισραηλ ἐκ γῆς Αἰγύπτου
8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
ἀλλά ζῇ κύριος ὃς συνήγαγεν ἅπαν τὸ σπέρμα Ισραηλ ἀπὸ γῆς βορρᾶ καὶ ἀπὸ πασῶν τῶν χωρῶν οὗ ἐξῶσεν αὐτοὺς ἐκεῖ καὶ ἀπεκατέστησεν αὐτοὺς εἰς τὴν γῆν αὐτῶν
9 ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
ἐν τοῖς προφήταις συνετρίβη ἡ καρδία μου ἐν ἐμοὶ ἐσαλεύθη πάντα τὰ ὀστᾶ μου ἐγενήθην ὡς ἀνὴρ συντετριμμένος καὶ ὡς ἄνθρωπος συνεχόμενος ἀπὸ οἴνου ἀπὸ προσώπου κυρίου καὶ ἀπὸ προσώπου εὐπρεπείας δόξης αὐτοῦ
10 ೧೦ ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
ὅτι ἀπὸ προσώπου τούτων ἐπένθησεν ἡ γῆ ἐξηράνθησαν αἱ νομαὶ τῆς ἐρήμου καὶ ἐγένετο ὁ δρόμος αὐτῶν πονηρὸς καὶ ἡ ἰσχὺς αὐτῶν οὐχ οὕτως
11 ೧೧ ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
ὅτι ἱερεὺς καὶ προφήτης ἐμολύνθησαν καὶ ἐν τῷ οἴκῳ μου εἶδον πονηρίας αὐτῶν
12 ೧೨ ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.
διὰ τοῦτο γενέσθω ἡ ὁδὸς αὐτῶν αὐτοῖς εἰς ὀλίσθημα ἐν γνόφῳ καὶ ὑποσκελισθήσονται καὶ πεσοῦνται ἐν αὐτῇ διότι ἐπάξω ἐπ’ αὐτοὺς κακὰ ἐν ἐνιαυτῷ ἐπισκέψεως αὐτῶν φησὶν κύριος
13 ೧೩ ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.
καὶ ἐν τοῖς προφήταις Σαμαρείας εἶδον ἀνομήματα ἐπροφήτευσαν διὰ τῆς Βααλ καὶ ἐπλάνησαν τὸν λαόν μου Ισραηλ
14 ೧೪ ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
καὶ ἐν τοῖς προφήταις Ιερουσαλημ ἑώρακα φρικτά μοιχωμένους καὶ πορευομένους ἐν ψεύδεσι καὶ ἀντιλαμβανομένους χειρῶν πονηρῶν τοῦ μὴ ἀποστραφῆναι ἕκαστον ἀπὸ τῆς ὁδοῦ αὐτοῦ τῆς πονηρᾶς ἐγενήθησάν μοι πάντες ὡς Σοδομα καὶ οἱ κατοικοῦντες αὐτὴν ὥσπερ Γομορρα
15 ೧೫ ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
διὰ τοῦτο τάδε λέγει κύριος ἰδοὺ ἐγὼ ψωμιῶ αὐτοὺς ὀδύνην καὶ ποτιῶ αὐτοὺς ὕδωρ πικρόν ὅτι ἀπὸ τῶν προφητῶν Ιερουσαλημ ἐξῆλθεν μολυσμὸς πάσῃ τῇ γῇ
16 ೧೬ ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
οὕτως λέγει κύριος παντοκράτωρ μὴ ἀκούετε τοὺς λόγους τῶν προφητῶν ὅτι ματαιοῦσιν ἑαυτοῖς ὅρασιν ἀπὸ καρδίας αὐτῶν λαλοῦσιν καὶ οὐκ ἀπὸ στόματος κυρίου
17 ೧೭ ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.
λέγουσιν τοῖς ἀπωθουμένοις τὸν λόγον κυρίου εἰρήνη ἔσται ὑμῖν καὶ πᾶσιν τοῖς πορευομένοις τοῖς θελήμασιν αὐτῶν παντὶ τῷ πορευομένῳ πλάνῃ καρδίας αὐτοῦ εἶπαν οὐχ ἥξει ἐπὶ σὲ κακά
18 ೧೮ ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
ὅτι τίς ἔστη ἐν ὑποστήματι κυρίου καὶ εἶδεν τὸν λόγον αὐτοῦ τίς ἐνωτίσατο καὶ ἤκουσεν
19 ೧೯ ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
ἰδοὺ σεισμὸς παρὰ κυρίου καὶ ὀργὴ ἐκπορεύεται εἰς συσσεισμόν συστρεφομένη ἐπὶ τοὺς ἀσεβεῖς ἥξει
20 ೨೦ ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
καὶ οὐκέτι ἀποστρέψει ὁ θυμὸς κυρίου ἕως ἂν ποιήσῃ αὐτὸ καὶ ἕως ἂν ἀναστήσῃ αὐτὸ ἀπὸ ἐγχειρήματος καρδίας αὐτοῦ ἐπ’ ἐσχάτου τῶν ἡμερῶν νοήσουσιν αὐτά
21 ೨೧ ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.
οὐκ ἀπέστελλον τοὺς προφήτας καὶ αὐτοὶ ἔτρεχον οὐκ ἐλάλησα πρὸς αὐτούς καὶ αὐτοὶ ἐπροφήτευον
22 ೨೨ ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.
καὶ εἰ ἔστησαν ἐν τῇ ὑποστάσει μου καὶ εἰσήκουσαν τῶν λόγων μου καὶ τὸν λαόν μου ἂν ἀπέστρεφον αὐτοὺς ἀπὸ τῶν πονηρῶν ἐπιτηδευμάτων αὐτῶν
23 ೨೩ ಯೆಹೋವನು ಇಂತೆನ್ನುತ್ತಾನೆ, “ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ?
θεὸς ἐγγίζων ἐγώ εἰμι λέγει κύριος καὶ οὐχὶ θεὸς πόρρωθεν
24 ೨೪ ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
εἰ κρυβήσεται ἄνθρωπος ἐν κρυφαίοις καὶ ἐγὼ οὐκ ὄψομαι αὐτόν μὴ οὐχὶ τὸν οὐρανὸν καὶ τὴν γῆν ἐγὼ πληρῶ λέγει κύριος
25 ೨೫ ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
ἤκουσα ἃ λαλοῦσιν οἱ προφῆται ἃ προφητεύουσιν ἐπὶ τῷ ὀνόματί μου ψευδῆ λέγοντες ἠνυπνιασάμην ἐνύπνιον
26 ೨೬ ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
ἕως πότε ἔσται ἐν καρδίᾳ τῶν προφητῶν τῶν προφητευόντων ψευδῆ καὶ ἐν τῷ προφητεύειν αὐτοὺς τὰ θελήματα καρδίας αὐτῶν
27 ೨೭ ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?
τῶν λογιζομένων τοῦ ἐπιλαθέσθαι τοῦ νόμου μου ἐν τοῖς ἐνυπνίοις αὐτῶν ἃ διηγοῦντο ἕκαστος τῷ πλησίον αὐτοῦ καθάπερ ἐπελάθοντο οἱ πατέρες αὐτῶν τοῦ ὀνόματός μου ἐν τῇ Βααλ
28 ೨೮ ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
ὁ προφήτης ἐν ᾧ τὸ ἐνύπνιόν ἐστιν διηγησάσθω τὸ ἐνύπνιον αὐτοῦ καὶ ἐν ᾧ ὁ λόγος μου πρὸς αὐτόν διηγησάσθω τὸν λόγον μου ἐπ’ ἀληθείας τί τὸ ἄχυρον πρὸς τὸν σῖτον οὕτως οἱ λόγοι μου λέγει κύριος
29 ೨೯ ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
οὐχὶ οἱ λόγοι μου ὥσπερ πῦρ φλέγον λέγει κύριος καὶ ὡς πέλυξ κόπτων πέτραν
30 ೩೦ ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
διὰ τοῦτο ἰδοὺ ἐγὼ πρὸς τοὺς προφήτας λέγει κύριος ὁ θεός τοὺς κλέπτοντας τοὺς λόγους μου ἕκαστος παρὰ τοῦ πλησίον αὐτοῦ
31 ೩೧ ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
ἰδοὺ ἐγὼ πρὸς τοὺς προφήτας τοὺς ἐκβάλλοντας προφητείας γλώσσης καὶ νυστάζοντας νυσταγμὸν ἑαυτῶν
32 ೩೨ ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
ἰδοὺ ἐγὼ πρὸς τοὺς προφήτας τοὺς προφητεύοντας ἐνύπνια ψευδῆ καὶ διηγοῦντο αὐτὰ καὶ ἐπλάνησαν τὸν λαόν μου ἐν τοῖς ψεύδεσιν αὐτῶν καὶ ἐν τοῖς πλάνοις αὐτῶν καὶ ἐγὼ οὐκ ἀπέστειλα αὐτοὺς καὶ οὐκ ἐνετειλάμην αὐτοῖς καὶ ὠφέλειαν οὐκ ὠφελήσουσιν τὸν λαὸν τοῦτον
33 ೩೩ ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.
καὶ ἐὰν ἐρωτήσωσί σε ὁ λαὸς οὗτος ἢ ἱερεὺς ἢ προφήτης λέγων τί τὸ λῆμμα κυρίου καὶ ἐρεῖς αὐτοῖς ὑμεῖς ἐστε τὸ λῆμμα καὶ ῥάξω ὑμᾶς λέγει κύριος
34 ೩೪ ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.
καὶ ὁ προφήτης καὶ ὁ ἱερεὺς καὶ ὁ λαός οἳ ἂν εἴπωσιν λῆμμα κυρίου καὶ ἐκδικήσω τὸν ἄνθρωπον ἐκεῖνον καὶ τὸν οἶκον αὐτοῦ
35 ೩೫ ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’
ὅτι οὕτως ἐρεῖτε ἕκαστος πρὸς τὸν πλησίον αὐτοῦ καὶ ἕκαστος πρὸς τὸν ἀδελφὸν αὐτοῦ τί ἀπεκρίθη κύριος καὶ τί ἐλάλησεν κύριος
36 ೩೬ ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
καὶ λῆμμα κυρίου μὴ ὀνομάζετε ἔτι ὅτι τὸ λῆμμα τῷ ἀνθρώπῳ ἔσται ὁ λόγος αὐτοῦ
37 ೩೭ ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.
καὶ διὰ τί ἐλάλησεν κύριος ὁ θεὸς ἡμῶν
38 ೩೮ ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
διὰ τοῦτο τάδε λέγει κύριος ὁ θεός ἀνθ’ ὧν εἴπατε τὸν λόγον τοῦτον λῆμμα κυρίου καὶ ἀπέστειλα πρὸς ὑμᾶς λέγων οὐκ ἐρεῖτε λῆμμα κυρίου
39 ೩೯ ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
διὰ τοῦτο ἰδοὺ ἐγὼ λαμβάνω καὶ ῥάσσω ὑμᾶς καὶ τὴν πόλιν ἣν ἔδωκα ὑμῖν καὶ τοῖς πατράσιν ὑμῶν
40 ೪೦ ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”
καὶ δώσω ἐφ’ ὑμᾶς ὀνειδισμὸν αἰώνιον καὶ ἀτιμίαν αἰώνιον ἥτις οὐκ ἐπιλησθήσεται

< ಯೆರೆಮೀಯನು 23 >