< ಯೆರೆಮೀಯನು 28 >

1 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
मग त्याच वर्षी असे झाले की, यहूदाचा राजा सिद्कीया याच्या कारकिर्दीच्या सुरवातीला चौथ्या वर्षाच्या व पाचव्या महिन्यात अज्जूरचा मुलगा हनन्या संदेष्टा, जो गिबोनाकडचा होता, परमेश्वराच्या मंदिरात तो माझ्याशी याजक व सर्व लोकांसमोर माझ्याशी बोलला. तो म्हणाला,
2 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
“सेनाधीश परमेश्वर, इस्राएलाचा देव, असे म्हणतो, बाबेलाच्या राजाने लादलेले जोखड मी मोडले आहे.
3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
बाबेलाचा राजा नबुखद्नेस्सराने परमेश्वराच्या मंदिरातील सर्व वस्तू घेऊन बाबेलास नेली ती मी दोन वर्षांच्या आत, परत या स्थानात आणीन.
4 “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”
यहूदाचा राजा यहोयाकीम याचा मुलगा यकन्या व बाबेलास कैद करून नेलेले यहूदाचे जे सर्व लोक यांस मी परत या ठिकाणी आणीन असे परमेश्वर म्हणतो, कारण मी बाबेलाच्या राजाचे जोखड मोडीन.
5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
जे याजक हनन्या संदेष्टाच्यासमोर होते आणि सर्व लोक परमेश्वराच्या मंदिरात उभे होते, तेव्हा यिर्मया संदेष्टा बोलला,
6 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
यिर्मया संदेष्टा म्हणाला, आमेन, परमेश्वर असे करो! परमेश्वराच्या मंदिरातील नेलेल्या वस्तू आणि बंदिवासातील सर्व बाबेलाहून परत या स्थानात आणण्यासाठी परमेश्वराने दिलेली सर्व वचने, जी भविष्य म्हणून तू सांगितली आहेत, ती खरी होवोत.
7 ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,
जरी, हे जे वचन मी तुझ्या कानी व सर्व लोकांच्या कानी बोलतो ते आता ऐक.
8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
माझ्यापूर्वी आणि तुझ्यापूर्वी फार पूर्वी अनेक संदेष्टे होऊन गेले, त्यांनीसुद्धा अनेक देशाविषयी व मोठ्या राज्यांविषयी, लढायांविषयी, दुष्काळ व मरी येतील असे भाकीत केले होते.
9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.
जो संदेष्टा शांतीविषयी भविष्य सांगतो त्या संदेष्ट्याचे वचन खरे ठरेल तेव्हा तो संदेष्टा खरोखरच परमेश्वराने पाठविलेला आहे हे समजेल.”
10 ೧೦ ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
१०परंतु हनन्या संदेष्ट्याने यिर्मया संदेष्ट्याच्या मानेवरून जोखड काढून व तोडून टाकले.
11 ೧೧ “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
११मग हनन्या सर्व लोकांसमोर बोलला व म्हणाला, “परमेश्वर असे म्हणतो, ‘ह्याप्रमाणेच बाबेलाचा राजा नबुखद्नेस्सर याने लादलेले जोखड दोन वर्षाच्या आत मी प्रत्येक राष्ट्रांच्या मानेवरून काढून तोडून टाकीन.” मग यिर्मया संदेष्टा आपल्या वाटेने गेला.
12 ೧೨ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
१२जेव्हा हनन्या संदेष्ट्याने यिर्मयाच्या मानेवरून जोखड काढून तोडल्यानंतर यिर्मयाकडे परमेश्वराचे वचन आले.
13 ೧೩ “ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
१३“जा व हनन्याला सांग की, परमेश्वर असे म्हणतो, तू लाकडाचे जोखड तोडलेस, पण त्यांच्याऐवजी मी लोखंडाचे जोखड बनवीन.
14 ೧೪ ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
१४कारण मी सेनाधीश परमेश्वर, इस्राएलाचा देव असे म्हणतो, ‘बाबेलाचा राजा नबुखद्नेस्सर याची सेवा सर्व राष्ट्रांनी करावी म्हणून मी त्यांच्या मानेवर लोखंडाचे जोखड ठेवले आहे, ते त्याची सेवा करतील. याशिवाय मी त्यास शेतातील वन्यपशूंवरही अधिकार देईन.”
15 ೧೫ ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
१५नंतर यिर्मया संदेष्टा हनन्या संदेष्टा म्हणाला, “हनन्या! ऐक! परमेश्वराने तुला पाठविलेले नाही पण तू या लोकांस लबाडीवर विश्वास ठेवावयास लावले.
16 ೧೬ ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
१६म्हणून परमेश्वर असे म्हणतो, ‘पाहा, मी तुला या जगातून उचलीन, या वर्षी तू मरशील, कारण तू परमेश्वराविरूद्ध अप्रामाणिकतेचे निवेदन केलेस.”
17 ೧೭ ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.
१७आणि त्याच वर्षाच्या सातव्या महिन्यात संदेष्टा हनन्या मेला.

< ಯೆರೆಮೀಯನು 28 >