< ಯೆರೆಮೀಯನು 29 >

1 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
निर्वासितहरूका बिचमा बाँकी रहेका धर्म-गुरुहरू, पुजारीहरू, अगमवक्ताहरू र सबै मानिस जसलाई नबूकदनेसरले यरूशलेमबाट बेबिलोनमा निर्वासित गरेर लगेका थिए, तिनीहरूलाई यर्मिया अगमवक्ताले पठाएको मुट्ठोमा लिखित वचनहरू यी नै हुन् ।
2 ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.
राजा यहोयाकीन, राजमाता, उच्‍च अधिकारीहरू, यहूदाका र यरूशलेमका अगुवाहरू र कारीगरहरू यरूशलेमबाट निर्वासनमा लगिएपछि यो वचन लेखियो ।
3 ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
तिनले यो मुट्ठो शापानका छोरा एलासा र हिल्कियाहका छोरा गमर्याहको हातबाट पठाएका थिए, जसलाई यहूदाका राजा सिदकियाहले बेबिलोनका राजा नबूकदनेसरकहाँ पठाएका थिए ।
4 ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,
मुट्ठामा यस्तो लेखियो, “मैले यरूशलेमबाट बेबिलोनमा निर्वासित गरेका सबै कैदीलाई, म, सर्वशक्तिमान् परमप्रभु इस्राएलका परमेश्‍वर यसो भन्‍छु,
5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.
'घरहरू बनाओ र तिनमा बस । बारीहरूमा बीउ रोप र तिनको फल खाओ ।
6 ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
बिहेबारी गर र छोराहरू र छोरीहरू जन्माओ । त्यसपछि आफ्ना छोराहरूका लागि पत्‍नीहरू ल्याओ, र आफ्ना छोरीहरू तिनीहरूका पतिहरूलाई देओ । तिनीहरूले छोराहरू र छोरीहरू जन्माऊन्, र त्यहाँ आफ्नो सङ्ख्या बढाओ, घटाउने होइन ।
7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
मैले तिमीहरूलाई जहाँ निर्वासित गरेको छु, त्यस सहरको शान्ति खोज, र यसको पक्षमा मलाई अन्तर-बिन्ती चढाओ, किनकि यो शान्तिमा रह्‍यो बने तिमीहरूलाई शान्ति हुनेछ ।'
8 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
किनकि सर्वशक्तिमान् परमप्रभु इस्राएलका परमेश्‍वर यसो भन्‍नुहुन्छ, 'तिमीहरूका बिचमा भएका अगमवक्ताहरू र जोखना हेर्नेहरूले तिमीहरूलाई धोका नदेऊन्, र तिमीहरू आफैले देखेका सपनाका कुराहरू नमान ।
9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
किनकि तिनीहरूले मेरो नाउँमा तिमीहरूलाई छलको अगमवाणी बोल्दैछन् । मैले तिनीहरूलाई पठाइनँ, यो परमप्रभुको घोषणा हो ।'
10 ೧೦ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
किनकि परमप्रभु यसो भन्‍नुहुन्छ, 'बेबिलोनले तिमीहरूमाथि सत्तरी वर्षसम्म शासन गरिसकेपछि म तिमीहरूलाई मदत गर्नेछु, र तिमीहरूलाई यस ठाउँमा फर्काएर ल्याउछु भन्‍ने मेरो असल वचन पुरा गर्नेछु ।
11 ೧೧ ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
किनकि तिमीहरूका निम्ति मैले बनाएका योजनाहरू म जान्दछु, यो परमप्रभुको घोषणा हो, तिमीहरूलाई एउटा भविष्य र आशा दिनलाई ती शान्तिका योजनाहरू हुन्, विपत्तिका होइनन् ।
12 ೧೨ ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
तब तिमीहरूले मलाई पुकार्नेछौ, र जानेछौ र मलाई प्रार्थना चढाउनेछौ, र म तिमीहरूको प्रार्थना सुन्‍नेछु ।
13 ೧೩ ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
किनकि तिमीहरूले मलाई खोज्‍नेछौ र भेट्टाउनेछौ, किनभने तिमीहरूले मलाई आफ्‍ना सारा हृदयले खोज्नेछौ ।
14 ೧೪ ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
तब तिमीहरूले मलाई भेट्टाइनेछौ, यो परमप्रभुको घोषणा हो, र म तिमीहरूका सुदिन फर्काउनेछु । मैले तिमीहरूलाई छरपष्‍ट पारेका सबै जाति र ठाउँहरूबाट म तिमीहरूलाई जम्मा गर्नेछु, यो परमप्रभुको घोषणा हो, मैले तिमीहरूलाई जुन ठाउँबाट निर्वासित गरें, त्यहाँबाट म तिमीहरूलाई फर्काएर ल्याउनेछु ।'
15 ೧೫ ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.
परमेश्‍वरले हाम्रा निम्ति बेबिलोनमा नै अगमवक्ताहरू खडा गर्नुभएको छ भनी तिमीहरूले भनेकको हुनाले,
16 ೧೬ ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
दाऊदको सिंहासनमा बस्‍ने राजा र त्यस सहरमा बसोबास गरेका सबै मानिसलाई परमप्रभु यसो भन्‍नुहुन्छ, तिमीहरूका दाजुभाइ जो तिमीहरूसँग निर्वासनमा गएका छैनन्—
17 ೧೭ “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
हेर, तिनीहरूकहाँ मैले तरवार, अनिकाल र विपत्ति ल्याउनै लागेको छु, सर्वशक्तिमान् परमप्रभु यसो भन्‍नुहुन्छ । किनकि म तिनीहरूलाई कुहेका अञ्जीरहरूजस्तै तुल्याउनेछु जुन खानलाई असाध्‍ये खराब हुन्‍छन्‌ ।
18 ೧೮ ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
त्‍यसपछि म तिनीहरूलाई तरवार, अनिकाल र विपत्तिले खेद्‍नेछु, अनि म तिनीहरूलाई पृथ्वीका सबै राज्यमा घृणाको दृश्‍य, मैले तिनीहरूलाई छरपष्‍ट पारेका सबै जातिका बिचमा तिनीहरूलाई त्रास, सराप र गिल्लाको पात्र र लाजका कुरा बनाउनेछु ।
19 ೧೯ ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
तिनीहरूकहाँ मेरा दासहरू र अगमवक्ताहरूमार्फत मैले पठाएको मेरो वचन तिनीहरूले नसुनेको कारणले यसो हुनेछ, यो परमप्रभुको घोषणा हो । मैले तिनीहरूलाई पटक-पटक पठाएँ, तर तिमीहरूले सुनेनौ, यो परमप्रभुको घोषणा हो ।'
20 ೨೦ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.
त्यसैले हे सबै निर्वासितहरू हो, जसलाई उहाँले यरूशलेमबाट बेबिलोनमा पठाउनुभएको छ, तिमीहरू आफूले भने परमप्रभुको वचन सुन ।
21 ೨೧ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
'कोलायाहका छोरा आहाब र मासेयाहका छोरा सिदकियाह, जसले मेरो नाउँमा तिमीहरूलाई झूटा अगमवाणी बोल्‍छन्, हेर्, तिनीहरूको विषयमा सर्वशक्तिमान् परमप्रभु इस्राएलका परमेश्‍वर यसो भन्‍नुहुन्छः मैले तिनीहरूलाई बेबिलोनका राजा नबूकदनेसरको हातमा दिनै लागेको छु । उसले तिनीहरूलाई तिमीहरूकै आँखाको सामु मार्नेछ ।
22 ೨೨ ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.
त्‍यसपछि बेबिलोनमा भएका यहूदाका सबै निर्वासितद्वारा यी व्यक्तिहरूको बारेमा सरापको वचन बोलिनेछ । सराप यस्‍तो हुनेछ, 'परमप्रभुले तिमीहरूलाई सिदकियाह र आहाबजस्तै बनाऊन्, जसलाई बेबिलोनका राजाले आगोमा पोलेका थिए ।
23 ೨೩ ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.
तिनीहरूले आफ्ना छिमेकीहरूका पत्‍नीहरूसित व्यभिचार गरेर अनि मैले तिनीहरूलाई भन्‍नलाई कहिल्यै आज्ञा नगरेका झूटा कुराहरू मेरो नाउँमा घोषणा गरेर, तिनीहरूले इस्राएलमा गरेका लज्‍जित कुराहरूका कारणले यस्‍तो हुनेछ । किनकि मलाई यो कुरा थाहा छ, र म साक्षी हुँ, यो परमप्रभुको घोषणा हो ।
24 ೨೪ ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,
नेहेलामवासी शमायाह बारेमा यसो भन्,
25 ೨೫ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
“सर्वशक्तिमान् परमप्रभु इस्राएलका परमेश्‍वर यसो भन्‍नुहुन्छ, 'यरूशलेमका सबै मानिस, पुजारी मासेयाहका छोरा सपन्याह र सबै पुजारीलाई तेरो आफ्‍नै नाउँमा चिट्ठीहरू लेखेर यसो भनिस्,
26 ೨೬ “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
'पुजारी यहोयादाको सट्टामा परमप्रभुले तिमीलाई परमप्रभुको मन्दिरको जिम्मा लिन पुजारी बनाउनुभएको छ । तिमी बरबराएर आफैलाई अगमवक्ताहरू बनाउने सबै मानिसको नियन्त्रणमा छौ । तिमीहरूले तिनीहरूलाई साङ्लाले बाँधेर ठिंगुरोमा हाल्नू ।
27 ೨೭ ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?
त्यसैले अब, तिम्रो विरुद्धमा आफैलाई अगमवक्ता बनाउने अनातोतको यर्मियालाई किन हप्काएनौ?
28 ೨೮ ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”
किनकि बेबिलोनमा उसले हामीलाई यस्तो चिट्ठी पठाएको छ र भनेको छ, 'निर्वासन लामो समयसम्म हुनेछ । घरहरू बनाओ र तिनमा बस, र खेतबारीमा बीउ रोप र तिनको फल खाओ' ।”
29 ೨೯ ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
यर्मिया अगमवक्ताले सुन्‍ने गरी पुजारी सपन्याहले यो पत्र पढे ।
30 ೩೦ ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.
तब परमप्रभुको वचन यर्मियाकहाँ यसो भनेर आयो,
31 ೩೧ ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
“सबै निर्वासितकहाँ यो खबर पठा र यसो भन्, 'नेहेलामवासी शमायाहको विषयमा परमप्रभु यसो भन्‍नुहुन्छः म आफैले शमायाहलाई नपठाउँदा पनि उसले तिमीहरूलाई अगमवाणी बोलेको र उसले तिमीहरूलाई झूटा कुराहरूमा विश्‍वास गर्न डोर्‍याएको छ,
32 ೩೨ ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.
त्यसकारण परमप्रभु यसो भन्‍नुहुन्छः नेहेलामवासी शमायाह र त्यसका सन्तानहरूलाई मैले दण्ड दिनै लागेको छु । यस जातिको बिचमा बस्‍न त्यसको लागि कुनै मानिस हुनेछैन । मैले आफ्‍ना मानिसहरूलाई गर्ने भलाइ त्यसले देख्‍नेछैन, यो परमप्रभुको घोषणा हो, किनकि उसले परमप्रभुको विरुद्धमा विद्रोहको घोषणा गरेको छ' ।”

< ಯೆರೆಮೀಯನು 29 >