< ಯೆರೆಮೀಯನು 34 >
1 ೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
၁ဗာဗုလုန် ရှင်ဘုရင် နေဗုခဒ်နေဇာ မင်းကြီး သည် ဗိုလ်ခြေအပေါင်း၊ အစိုးရတော်မူသမျှသော တိုင်းနိုင်ငံသား၊ လူမျိုးအသီးအသီး အပေါင်းတို့နှင့်တကွ၊ ယေရုရှလင်မြို့ကို၎င်း၊ ထိုမြို့နှင့်ဆိုင်သမျှသော မြို့ရွာ တို့ကို၎င်း တိုက်သောအခါ၊ ထာဝရဘုရား၏ နှုတ်ကပတ် တော်သည် ယေရမိသို့ရောက်၍၊
2 ೨ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
၂ဣသရေလအမျိုး၏ ဘုရားသခင် ထာဝရဘုရား မိန့်တော်မူသည်ကား၊ သင်သည် ယုဒရှင်ဘုရင် ဇေဒကိကို သွား၍ ပြောရမည်မှာ၊ ထာဝရဘုရား မိန့်တော်မူသည်ကား၊ ဤမြို့ကို ဗာဗုလုန် ရှင်ဘုရင်လက် သို့ ငါအပ်၍၊ သူသည် မီးရှို့လိမ့်မည်။
3 ೩ ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
၃သင်သည် ထိုမင်းလက်နှင့်မလွတ်ရ။ စင်စစ် သင့်ကိုဘမ်းဆီး၍ ထိုမင်းလက်သို့ အပ်ကြလိမ့်မည်။ သင်သည် ဗာဗုလုန်ရှင်ဘုရင်ကို မျက်နှာချင်းဆိုင်၍ တယောက်နှင့်တယောက် စကားပြောရလိမ့်မည်။ ဗာဗုလုန်မြို့သို့လည်း သွားရလိမ့်မည်။
4 ೪ ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
၄သို့ရာတွင်၊ ယုဒရှင်ဘုရင် ဇေဒကိမင်းကြီး၊ ထာဝရဘုရား၏ စကားတော်ကို နားထောင်လော့။ မင်းကြီးကို ရည်မှတ်၍ ထာဝရဘုရား မိန့်တော်မူသည် ကား၊ သင်သည် ထားဖြင့်အသေမခံရ။
5 ೫ ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
၅ငြိမ်ဝပ်စွာသေ၍ သင့်ရှေ့မှာ စိုးစံသော ဘိုးတော်ဘေးတော်တို့အဘို့ ပြုဘူးသည်နည်းတူ၊ သင့် အဘို့ နံ့သာပေါင်းကို မီးရှို့လျက်၊ ဩ သခင်ဟူ၍ ငိုကြွေး မြည်တမ်းကြလိမ့်မည်။ ငါပြောထားပြီဟု ထာဝရဘုရား မိန့်တော်မူ၏။
6 ೬ ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
၆ဗာဗုလုန် ရှင်ဘုရင်၏ ဗိုလ်ခြေတို့သည် ယေရု ရှလင်မြို့ကို၎င်း၊
7 ೭ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
၇ယုဒပြည်၌ ခိုင်ခံ့၍ ကျန်ကြွင်းသောမြို့၊ လာခိရှ မြို့၊ အဇေကာမြို့တည်းဟူသော ယုဒပြည်၌ ကျန်ကြွင်း သော မြို့တို့ကို၎င်း တိုက်သောအခါ၊ ပရောဖက် ယေရမိ သည် ထိုစကားအလုံးစုံတို့ကို ယုဒရှင်ဘုရင် ဇေဒကိအား ဆင့်ဆိုလေ၏။
8 ೮ ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
၈ယေရုရှလင်မြို့သားအပေါင်းတို့သည် အသီး အသီးစေစားသော ယုဒညီအစ်ကိုချင်း၊
9 ೯ “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
၉အစေခံရသော ဟေဗြဲအမျိုးကျွန်ယောက်ျား မိန်းမတို့ကို နောက်တဖန် မစေစားဘဲလွှတ်စေခြင်းငှါ၊ ဇေဒကိမင်းကြီးသည် လွှတ်ခြင်းတရားကို စီရင်မည်ဟု ဝန်ခံပြီးသည်နောက်၊ ထာဝရဘုရား၏ နှုတ်ကပတ်တော် သည် ယေရမိသို့ရောက်လာ၏။
10 ೧೦ ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
၁၀အကြောင်းမူကား၊ ဝန်ခံသောမှူးမတ်၊ ဆင်းရဲ သားအပေါင်းတို့သည် အသီးအသီး စေစားသော ကျွန် ယောက်ျား မိန်းမတို့ကို နောက်တဖန် မစေစားဘဲ လွှတ် မည်ဟု ကြားသောအခါ၊ နားထောင်၍ လွှတ်လိုက်ကြ၏။
11 ೧೧ ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
၁၁နောက်တဖန် ပြောင်းလဲ၍ ယခင်လွှတ်ပြီးသော ကျွန်ယောက်ျား မိန်းမတို့ကို ခေါ်ပြန်၍ အစေကျွန်ခံစေ ကြ၏။
12 ೧೨ ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
၁၂ထိုကြောင့်၊ ထာဝရဘုရား၏ နှုတ်ကပတ်တော် သည် ယေရမိသို့ ရောက်၍၊
13 ೧೩ “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
၁၃ဣသရေလအမျိုး၏ ဘုရားသခင် ထာဝရဘုရား မိန့်တော်မူသည်ကား၊ သင်တို့ ဘိုးဘေးများကို ကျွန်ခံ နေရာ အဲဂုတ္တုပြည်မှ ငါနှုတ်ဆောင်သောအခါ၊
14 ೧೪ ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
၁၄သင်တို့သည် အသီးအသီးဝယ်သော ညီအစ်ကို ချင်း ဟေဗြဲအမျိုးသားတို့ကို ခုနစ်နှစ်စေ့လျှင် လွှတ်ရ မည်။ ခြောက်နှစ်ပတ်လုံး သင်တို့၌ အစေကျွန်ခံပြီးမှ၊ လွတ်သော အခွင့်ကိုပေးရမည်ဟု ပညတ်သော်လည်း၊ သင်တို့ ဘိုးဘေးများတို့သည် ငါ့စကားကို နားမထောင်၊ နားကို ပိတ်လျက်နေကြ၏။
15 ೧೫ ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
၁၅သင်တို့သည် ယခုမှာပြောင်းလဲ၍၊ အသီးအသီး အိမ်နီးချင်းတို့ အား လွတ်ရသော အခွင့်ကို ထင်ရှားစွာ စီရင်သဖြင့်၊ ငါ့ရှေ့၌ တရားသော အမှုကို ပြုလျက်၊ ငါ့နာမဖြင့် သမုတ်သော ဗိမာန်တော်၌ ငါ့ရှေ့မှာ ဝန်ခံ ခြင်း ပဋိညာဉ်ကိုပြုကြသော်လည်း၊
16 ೧೬ ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
၁၆တဖန်ပြောင်းလဲ၍ ငါ၏နာမကို ရှုတ်ချလျက်၊ အသီးအသီး ရှင်းရှင်းလွှတ်ဘူးသော ကျွန်ယောက်ျား မိန်းမတို့ကို ခေါ်ပြန်၍ အစေကျွန်ခံစေကြပြီတကား။
17 ೧೭ ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
၁၇ထိုကြောင့်၊ ထာဝရဘုရား မိန့်တော်မူသည်ကား၊ သင်တို့သည် အသီးအသီး ညီအစ်ကိုချင်း၊ အိမ်နီးချင်းတို့ အား လွတ်ရသောအခွင့်ကို ထင်ရှားစွာ မစီရင်၊ ငါ့စကား ကို နားမထောင်သောကြောင့်၊ ထာဝရဘုရား မိန့်တော်မူ သည်ကား၊ ငါသည် သင်တို့အဘို့၊ ထားဘေး၊ ကာလနာ ဘေး၊ မွတ်သိပ်ခြင်းဘေးတို့အား လွတ်သောအခွင့်ကို ထင်ရှားစွာ စီရင်၍၊ အတိုင်းတိုင်းအပြည်ပြည်တို့၌ အနှောင့်အရှက်ခံစေမည်။
18 ೧೮ ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
၁၈နွားသငယ်ကို ထက်ခြမ်းခွဲ၍၊ အလယ်သို့ ရှောက်သွားလျက်၊ ငါ့ရှေ့မှာပြုသော ဝန်ခံခြင်းပဋိညာဉ် စကားအတိုင်းမကျင့်၊ ငါ၏ပဋိညာဉ်ကို ဖျက်သော သူတည်းဟူသော၊
19 ೧೯ ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,
၁၉ယုဒမင်း၊ ယေရုရှလင်မင်း၊ မှူးမတ်၊ ယဇ်ပုရော ဟိတ် အစရှိသော၊ နွားသငယ်ထက်ခြမ်းအလယ်သို့ ရှောက်သွားသော ပြည်သူပြည်သားအပေါင်းတို့ကို၊
20 ೨೦ ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
၂၀သူတို့ရန်သူများလက်သို့၎င်း၊ သတ်ချင်သော သူများလက်သို့၎င်း ငါအပ်မည်။ သူတို့အသေကောင် များတို့သည် မိုဃ်းကောင်းကင်ငှက်နှင့် တောသားရဲများ စားစရာဘို့ဖြစ်ကြလိမ့်မည်။
21 ೨೧ ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
၂၁ယုဒရှင်ဘုရင် ဇေဒကိမှစ၍ မှူးတော်မတ်တော် တို့ကို သူတို့ရန်သူများလက်သို့၎င်း၊ သတ်ချင်သောလူများ လက်သို့၎င်း၊ ယခုလွှဲသွားသောဗာဗုလုန်ရှင်ဘုရင်၏ ဗိုလ်ခြေများလက်သို့၎င်း ငါအပ်မည်။
22 ೨೨ ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.
၂၂ငါသည် အမိန့်တော်ပေး၍ သူတို့ကို ဤမြို့သို့ ပြန်လာစေမည်။ သူတို့သည် တိုက်ယူ၍မီးရှို့ကြလိမ့်မည်။ ငါသည်လည်း၊ ယုဒမြို့ရွာတို့ကို လူတို့ဆိတ်ညံရာအရပ် ဖြစ်စေမည်ဟု ထာဝရဘုရား မိန့်တော်မူ၏။