< ಯೆರೆಮೀಯನು 39 >

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
यहूदाचा राजा सिद्कीया याच्या नवव्या वर्षात आणि दहाव्या महिन्यात, बाबेलाचा राजा नबुखद्नेस्सर आपले संपूर्ण सैन्य घेऊन यरूशलेमाविरूद्ध चालून आला आणि त्यास वेढा घातला.
2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
सिद्कीयाच्या अकराव्या वर्षाच्या आणि चौथ्या महिन्याच्या नवव्या दिवशी यरूशलेमेच्या तटबंदीला भगदाड पडले.
3 ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
मग बाबेलाच्या राजाचे सर्व वरिष्ठ अधिकारी यरूशलेमेत आले आणि मधल्या दरवाजाजवळ बसले. नेर्गल शरेसर, समगार नबो, व सर्सखीम हे महत्वाचे अधिकारी होते. नेर्गल-शरेसर हा उच्च अधिकारी होता. आणि इतर सर्व बाबेलचे अधिकारी होते.
4 ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
असे झाले की, जेव्हा यहूदाचा राजा सिद्कीया आणि त्याच्या लढाऊ मनुष्यांनी त्यांना पाहिले, ते पळून गेले. ते रात्री राजाच्या बागेच्या वाटेने नगरातून तटबंदीच्या दोन भिंतीमधल्या दारातून निघून गेले. राजा अराबाकडच्या मार्गाने निघून गेला.
5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
पण खास्द्यांच्या सैन्याने त्यांचा पाठलाग करून आणि यार्देन नदीच्या खोऱ्याच्या मैदानात यरिहोच्याजवळ सिद्कीयाला गाठले. मग त्यांनी त्यास पकडले आणि हमाथ देशातील रिब्ला येथे बाबेलचा राजा नबुखद्नेस्सर ह्याच्याकडे आणले, जेथे नबुखद्नेस्सराने त्याच्यावर शिक्षा ठरविली.
6 ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
रिब्लामध्ये, बाबेलाच्या राजाने सिद्कीयाच्या डोळ्यांदेखत, त्याच्या स्वतःच्या मुलांना जिवे मारले; त्याने यहूदातील सर्व वरिष्ठ अधिकाऱ्यांनासुद्धा जिवे मारले.
7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
मग त्याने सिद्कीयाचे डोळे काढले आणि त्यास बाबेलाला नेण्यासाठी कास्य साखळ्यांनी बांधले.
8 ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
नंतर खास्द्यांनी राजाच्या घराला व लोकांच्या घरांना आग लावली. त्यांनी यरूशलेमेची तटबंदी फोडली.
9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
राजाच्या अंगरक्षकांचा प्रमुख नबूजरदान ह्याने नगरामध्ये राहिलेल्या लोकांस, जे लोक खास्द्यांना सोडून गेले होते आणि जे कोणी नगरात उरलेले लोक होते, त्यांना कैदी करून बाबेलास नेले.
10 ೧೦ ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
१०पण राजाच्या अंगरक्षकाचा प्रमुख नबूजरदान याने ज्यांच्याजवळ स्वतःचे काहीच नव्हते अशा गरीब लोकांस यहूदा देशात राहण्याची परवानगी दिली. त्याने त्याच दिवशी त्यांना द्राक्षमळे व शेते दिली.
11 ೧೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
११बाबेलाचा राजा नबुखद्नेस्सराने यिर्मयाच्या बाबतीत, राजाच्या अंगरक्षकांचा प्रमुख नबूजरदानाला ताकीद दिली होती; तो म्हणाला,
12 ೧೨ “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
१२“त्याला घेऊन व त्याची काळजी घे. त्यास इजा करु नको. तो जे काही सांगेल ते त्याच्यासाठी कर.”
13 ೧೩ ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
१३म्हणून राजाच्या अंगरक्षकांचा प्रमुख नबूजरदान याने, नबूशजबान या उच्च अधिकारी, नेर्गल-शरेसर या उच्च अधिकाऱ्याला आणि बाबेल राज्यातील सर्व महत्वाच्या अधिकाऱ्यांना पाठविले.
14 ೧೪ ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
१४त्यांच्या मनुष्यांनी यिर्मयाला पहारेकऱ्यांच्या अंगणातून काढले आणि शाफानाचा मुलगा अहीकाम याचा मुलगा गदल्या याने त्यास घरी न्यावे म्हणून त्यांच्या स्वाधीन केले. मग यिर्मया लोकांमध्ये राहू लागला.
15 ೧೫ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
१५आता तो यिर्मया पहारेकऱ्याच्या अंगणात कैदेत असताना परमेश्वराचे वचन यिर्मयाकडे आले. ते म्हणाले,
16 ೧೬ “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
१६एबद-मलेख कूशीशी बोल आणि सांग, सेनाधीश परमेश्वर, इस्राएलाचा देव असे म्हणतोः पाहा, मी माझी वचने या नगराविरूद्ध अरिष्टासाठी आणील आणि चांगल्यासाठी नाही. त्या दिवशी त्या सर्व तुझ्यासमक्ष खऱ्या होतील.
17 ೧೭ ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
१७पण, मी तुला त्यादिवशी वाचवीन. असे परमेश्वर म्हणतो. आणि तू ज्यांना घाबरतोस, त्यांच्या स्वाधीन मी तुला करणार नाही.
18 ೧೮ ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.
१८कारण मी तुला खात्रीने वाचवीन. तू तलवारीने पडणार नाहीस. तुझा जीव तुला लूट असा होईल, कारण तू माझ्यावर विश्वास ठेवला आहेस. असे परमेश्वर म्हणतो.

< ಯೆರೆಮೀಯನು 39 >