< ಯೆರೆಮೀಯನು 40 >

1 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
रामामा राजाका अङ्गरक्षकका कप्‍तान नबूजरदानले यर्मियालाई मुक्त गरेपछि परमप्रभुबाट यर्मियाकहाँ यो वचन आयो । तिनले यर्मियालाई बेबिलोनमा निर्वासनमा लगिने यरूशलेम र यहूदाका सबै बन्दीका बिचमा साङ्लाले बाँधिएको भेट्टाए ।
2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
अङ्गरक्षकका कप्‍तानले यर्मियालाई लगे र भने, “परमप्रभु तिम्रा परमेश्‍वरले यस ठाउँको लागि यो विपत्तिको आज्ञा दिनुभयो ।
3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
त्यसैले परमप्रभुले नै यो विपत्ति ल्याउनुभयो । उहाँले भन्‍नुभएझैं उहाँले गर्नुभयो, किनकि तिमीहरूले उहाँको विरुद्धमा पाप गर्‍यौ, र उहाँको कुरा मानेनौ । त्यसकारण यो विपत्ति तिमीहरूमाथि आइपरेको हो ।
4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
तर अब हेर, तिम्रा हातमा भएका साङ्लाबाट मैले तिमीलाई आज मुक्त गरेको छु । तिम्रो दृष्‍टिमा मसितै बेबिलोन आउनु उचित हो भने आऊ, र म तिम्रो हेरचाह गर्नेछु । तर तिम्रो दृष्‍टिमा मसितै बेबिलोन आउनु उचित होइन भने, त्‍यसो नगर । तिम्रो सामु भएको सबै देशलाई हेर । तिम्रो दृष्‍टिमा जहाँ जान ठिक र उचित लाग्छ, त्यहीँ जाऊ ।”
5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
यर्मियाले जवाफ नदिएपछि नबूजरदानले भने, “शापानका नाति, अहीकामका छोरा गदल्याहकहाँ जाऊ, जसलाई बेबिलोनका राजाले यहूदाका सहरहरूको रेखदेख गर्ने जिम्मा दिएका छन् । मानिसहरूका बिचमा तिनीसँगै बस वा तिम्रो दृष्‍टिमा जहाँ जानु उचित लाग्छ, त्यहीँ जाऊ ।” राजाक अङ्गरक्षकका कप्‍तानले तिनलाई खाना र उपहार दिए, र त्‍यसपछि तिनलाई पठाए ।
6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
त्यसैले यर्मिया मिस्पामा अहीकामका छोरा गदल्याहकहाँ गए । तिनी देशमा छाडिएका मानिसहरूकै बिचमा तिनीसित बसे ।
7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
बेबिलोनका राजाले अहीकामका छोरा गदल्याहलाई देशको गभर्नरमा नियुक्त गरेका थिए भनी गाउँबस्तीमा बाँकी रहेका यहूदी सिपाहीहरूका केही अधिकारीहरू र तिनीहरूका मानिसहरूले सुने । बेबिलोनमा निर्वासित नभएका सबैभन्दा गरिब पुरुषहरू, स्‍त्रीहरू, बालबालिकाहरूको जिम्मामा तिनलाई नियुक्त गरिएको थियो भनेर पनि तिनीहरूले सुने ।
8 ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
त्यसैले तिनीहरू मिस्पामा गदल्याहकहाँ गए । यी मानिसहरू यी नै थिएः नतन्याहका छोरा इश्माएल, कारेहका दुई छोरा योहानान र जोनाथन, तन्हूमेतका छोरा सरायाह, नतोपाती एफैका छोराहरू, माकातीका छोरा याजन्याह र यी सबैका मानिसहरू ।
9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
शापानका नाति, अहीकामका छोरा गदल्याहले तिनीहरू र तिनीहरूका मानिसहरूलाई शपथ खुवाए र तिनीहरूलाई भने, “कल्दी अधिकारीहरूको सेवा गर्नदेखि नडराओ । यही देशमा बसे र बेबिलोनका राजाको सेवा गर, र तिमीहरूको भलो हुनेछ ।
10 ೧೦ ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
हामीकहाँ आउने कल्दीहरूसित भेट गर्न म मिस्पामा बस्दैछु । त्यसैले तिमीहरूले दाखमद्य, ग्रीष्म ऋतुका फलहरू र तेलको खेती गर र आफ्ना भाँडाहरूमा जम्मा गर । तिमीहरूले छानेका सहरहरूमा बस ।”
11 ೧೧ ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
तब मोआबमा भएका सबै यहूदी, अम्मोनीहरू र एदोमीहरूका बिचमा भएका र हरेक देशमा भएका यहूदीहरूले यो कुरा सुने, कि बेबिलोनका राजाले यहूदाका बाँकी रहेकाहरूलाई बस्‍न दिएका छन्, र शापानका नाति, अहीकामका छोरा गदल्याहलाई तिनीहरूमाथि अधिकारी नियुक्त गरेका छन् ।
12 ೧೨ ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
त्यसैले सबै यहूदी आफू छरपष्‍ट भएको हरेक ठाउँबाट फर्के । तिनीहरू यहूदाको देशको मिस्पामा गदल्याहकहाँ फर्केर आए । तिनीहरूले प्रचुर मात्रा दाखमद्य र ग्रीष्म ऋतुको फल उत्पादन गरे ।
13 ೧೩ ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
कारेहका छोरा योहानान र गाउँबस्तीमा भएका सेनाका अधिकृतहरू मिस्पामा गदल्याहकहाँ आए ।
14 ೧೪ ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
तिनीहरूले तिनलाई भने, “अम्मोनीहरूका राजा बालीसले नतन्याहका छोरा इश्माएललाई तपाईंको हत्या गर्न पठाएका छन् भन्‍ने कुरो तपाईंलाई थाहा छ?” तर अहीकामका छोरा गदल्याहले तिनीहरूको कुरो विश्‍वास गरेनन् ।
15 ೧೫ ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.
त्यसैले मिस्पामा कारेहका छोरा योहानानले गदल्याहलाई गुप्‍तमा कुरा गरे र भने, “नतन्याहको छोरो इश्माएललाई मार्न मलाई अनुमति दिनुहोस् । कसैले मलाई शङ्का गर्नेछैन । त्यसले तपाईंलाई किन मार्ने? तपाईंकहाँ जम्मा भएका सबै यहूदीलाई किन तितर-बितर हुन दिने र यहूदाका बाँकी रहेकाहरूलाई किन नष्‍ट हुन दिने?”
16 ೧೬ ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.
तर अहीकामका छोरा गदल्याहले कारेहका छोरा योहानानलाई भने, “यो कुरो नगर, किनकि तिमीले इश्माएलको विषयमा मसित झूट बोल्दैछौ ।”

< ಯೆರೆಮೀಯನು 40 >