< ಯೆರೆಮೀಯನು 40 >

1 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
वह कलाम जो ख़ुदावन्द की तरफ़ से यरमियाह पर नाज़िल हुआ, इसके बाद के जिलौदारों के सरदार नबूज़रादान ने उसको रामा से रवाना कर दिया, जब उसने उसे हथकड़ियों से जकड़ा हुआ उन सब ग़ुलामों के बीच पाया जो येरूशलेम और यहूदाह के थे, जिनको ग़ुलाम करके बाबुल को ले जा रहे थे
2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
और जिलौदारों के सरदार ने यरमियाह को लेकर उससे कहा, कि “ख़ुदावन्द तेरे ख़ुदा ने इस बला की, जो इस जगह पर आई ख़बर दी थी।
3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
इसलिए ख़ुदावन्द ने उसे नाज़िल किया, और उसने अपने क़ौल के मुताबिक़ किया; क्यूँकि तुम लोगों ने ख़ुदावन्द का गुनाह किया और उसकी नहीं सुनी, इसलिए तुम्हारा ये हाल हुआ।
4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
और देख, आज मैं तुझे इन हथकड़ियों से जो तेरे हाथों में हैं रिहाई देता हूँ। अगर मेरे साथ बाबुल चलना तेरी नज़र में बेहतर हो, तो चल, और मैं तुझ पर ख़ूब निगाह रखूँगा; और अगर मेरे साथ बाबुल चलना तेरी नज़र में बुरा लगे, तो यहीं रह; तमाम मुल्क तेरे सामने है जहाँ तेरा जी चाहे और तू मुनासिब जाने वहीं चला जा।”
5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
वह वहीं था कि उसने फिर कहा, तू जिदलियाह बिन अख़ीक़ाम बिन साफ़न के पास जिसे शाह — ए — बाबुल ने यहूदाह के शहरों का हाकिम किया है, चला जा और लोगों के बीच उसके साथ रह; वर्ना जहाँ तेरी नज़र में बेहतर हो वहीं चला जा। और जिलौदारों के सरदार ने उसे ख़ुराक और इन'आम देकर रुख़्सत किया।
6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
तब यरमियाह जिदलियाह — बिन — अख़ीक़ाम के पास मिस्फ़ाह में गया, और उसके साथ उन लोगों के बीच, जो उस मुल्क में बाक़ी रह गए थे रहने लगा।
7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
जब लश्करों के सब सरदारों ने और उनके आदमियों ने जो मैदान में रह गए थे, सुना के शाह — ए — बाबुल ने जिदलियाह — बिन — अख़ीक़ाम को मुल्क का हाकिम मुक़र्रर किया है; और मर्दों और 'औरतों और बच्चों को, और ममलुकत के ग़रीबों को जो ग़ुलाम होकर बाबुल को न गए थे, उसके सुपुर्द किया है;
8 ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
तो इस्माईल — बिन — नतनियाह और यूहनान और यूनतन बनी क़रिह और सिरायाह — बिन — तनहुमत और बनी 'ईफ़ी नतुफ़ाती और यज़नियाह — बिन — मा'काती अपने आदमियों के साथ जिदलियाह के पास मिस्फ़ाह में आए।
9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
और जिद्लियाह — बिन — अख़ीक़ाम — बिन — साफ़न ने उन से और उन के आदमियों से क़सम खाकर कहा, तुम कसदियों की ख़िदमत गुज़ारी से न डरो। अपने मुल्क में बसो, और शाह — ए — बाबुल की ख़िदमत करो तो तुम्हारा भला होगा।
10 ೧೦ ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
देखो, मैं तो इसलिए मिस्फ़ाह में रहता हूँ कि जो कसदी हमारे पास आएँ, उनकी ख़िदमत में हाज़िर रहूँ पर तुम मय और ताबिस्तानी मेवे, और तेल जमा' करके अपने बर्तनों में रख्खो, और अपने शहरो में जिन पर तुम ने क़ब्ज़ा किया है बसो।
11 ೧೧ ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
और इसी तरह जब उन सब यहूदियों ने जो मोआब और बनी 'अम्मोन और अदोम' और तमाम मुमालिक में थे, सुना कि शाह — ए — बाबुल ने यहूदाह के चन्द लोगों को रहने दिया है, और जिदलियाह — बिन — अख़ीक़ाम — बिन — साफ़न को उन पर हाकिम मुक़र्रर किया है;
12 ೧೨ ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
तो सब यहूदी हर जगह से, जहाँ वह तितर — बितर किए गए थे, लौटे और यहूदाह के मुल्क में मिस्फ़ाह में जिदलियाह के पास आए, और मय और ताबिस्तानी मेवे कसरत से जमा' किए।
13 ೧೩ ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
और यूहनान — बिन — क़रीह और लश्करों के सब सरदार जो मैदानों में थे, मिस्फ़ाह में जिदलियाह के पास आए
14 ೧೪ ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
और उससे कहने लगे, क्या तू जानता है कि बनी 'अम्मोन के बादशाह बा'लीस ने इस्माईल — बिन — नतनियाह को इसलिए भेजा है कि तुझे क़त्ल करे? लेकिन जिदलियाह — बिन — अख़ीक़ाम ने उनका यक़ीन न किया।
15 ೧೫ ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.
और यूहनान — बिन — क़रीह ने मिस्फ़ाह में जिदलियाह से तन्हाई में कहा, इजाज़त हो तो मैं इस्माईल — बिन — नतनियाह को क़त्ल करूँ, और इसको कोई न जानेगा; वह क्यूँ तुझे क़त्ल करे, और सब यहूदी जो तेरे पास जमा' हुए हैं, तितर — बितर किए जाएँ, और यहूदाह के बाक़ी मान्दा लोग हलाक हों?
16 ೧೬ ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.
लेकिन जिदलियाह — बिन — अख़ीक़ाम ने यूहनान — बिन — क़रीह से कहा, तू ऐसा काम हरगिज़ न करना, क्यूँकि तू इस्माईल के बारे में झूट कहता है।

< ಯೆರೆಮೀಯನು 40 >