< ಯೆರೆಮೀಯನು 44 >
1 ೧ ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
१जे सर्व यहूदी मिसर देशामध्ये राहत होते, जे मिग्दोल, तहपन्हेस, मेमफिस व पथ्रोस येथे राहत होते, त्यांच्याविषयी परमेश्वराचे वचन यिर्मयाकडे आले ते असे होते.
2 ೨ “ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.
२सेनाधीश परमेश्वर, इस्राएलाचा देव, असे म्हणतो, यरूशलेम व यहूदाच्या सर्व नगरांवर जे अरिष्ट मी आणली, ते तुम्ही पाहिली आहेत. पाहा, आता ती नगरे उजाड झाली आहेत. तेथे राहण्यास कोणीही जिवंत नाही.
3 ೩ ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
३कारण हे त्यांच्या स्वतःचे नाहीत किंवा तुम्हास किंवा तुमच्या पूर्वजांना माहित नाहीत अशा दुसऱ्या देवांना धूप जाळून आणि त्यांची उपासना करण्यासाठी जाऊन वाईट गोष्टी करून त्यांनी माझे मन दुःखावले.
4 ೪ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
४मग मी माझे सर्व सेवक संदेष्टे वारंवार पाठवत आलो. मी त्यांना सांगण्यासाठी पाठवले, ज्यांचा मी द्वेष करतो त्या तिरस्कारणीय गोष्टी थांबवा.
5 ೫ ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.
५पण त्यांनी ऐकले नाही; त्यांनी दुसऱ्या देवाला धूप जाळणाऱ्या दुष्कृत्यापासून वळण्यास किंवा त्यांनी लक्ष देण्याचे नाकारले.
6 ೬ ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.
६म्हणून माझा क्रोध व संताप ओतला गेला आणि यहूदाच्या नगरांत व यरूशलेमेच्या रस्त्यावर अग्नी पेटला. यास्तव ती ओसाड व उजाड झाली आहेत.
7 ೭ ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
७म्हणून आता, सेनाधीश परमेश्वर आणि इस्राएलाचा देव असे म्हणतो, “तुम्ही आपल्या स्वत: विरूद्ध हे मोठे अनिष्ट का करता? तुम्ही आपणासाठी पुरुष व स्त्रिया, मुले व बालके यांना यहूदापासून तोडण्याचे कारण का होता? तुमचा अवशेष उरणार नाही.
8 ೮ ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.
८कारण तुम्ही जेथे राहण्यास गेला आहात त्या मिसर देशात दुसऱ्या देवाला धूप जाळून तुमच्या हातच्या कृत्यांनी मूर्तीपूजा करुन तुम्ही मला दुःखवता. तुम्ही तेथे जात आहात याकरिता की तुमचा नाश व्हावा आणि शापीत व्हावे व पृथ्वीवरच्या सर्व राष्ट्रांमध्ये तुमची निंदा व्हावी.
9 ೯ ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
९तुमच्या पूर्वजांनी केलेली दुष्कृत्ये आणि यहूदा राजा व त्याच्या बायकांनी केलेली दुष्कृत्ये तुम्ही विसरलात का? तुम्ही आणि तुमच्या बायकांनी यहूदाच्या देशात व यरूशलेमेच्या रस्त्यावर केलेली वाइट कृत्ये विसरलात का?
10 ೧೦ ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
१०ते या दिवसापर्यंत, अजून नम्र झालेले नाहीत. ते माझे जे नियमशास्त्र व माझे जे विधी मी तुम्हापुढे आणि तुमच्या पूर्वजांपुढे ठेवले, त्यांचा त्यांनी आदर केला नाही किंवा ते त्याप्रमाणे चालले नाहीत.”
11 ೧೧ “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
११“यास्तव सेनाधीश परमेश्वर, इस्राएलाचा देव, असे म्हणतो, पाहा, मी तुमचे अनिष्ट करण्यासाठी आणि सर्व यहूदाचा नाश करण्यासाठी तुमच्या विरोधात होईन.
12 ೧೨ ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.
१२कारण मिसर देशात जाऊन तेथे राहण्याचा यहूदाच्या अवशिष्टांनी निश्चय केला. मी हे यासाठी करीन की, ते सर्व मिसर देशात नष्ट होतील. तलवारीने आणि दुष्काळाने त्यांचा नायनाट होईल. लहानापासून थोरापर्यंत सर्व तलवारीने व दुष्काळाने नष्ट होतील. ते मरतील आणि अपशब्द, शाप, निंदा आणि भयानक गोष्टींचे विषय होतील.
13 ೧೩ ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.
१३जशी मी यरूशलेमेला शिक्षा केली, त्याप्रमाणे मिसर देशात राहणाऱ्या लोकांस तलवार, दुष्काळ व मरीने शिक्षा करीन.
14 ೧೪ ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
१४म्हणून यहूदाचे जे कोणी उरलेले, फरारी, वाचलेले मिसर देशात उपरी म्हणून राहायला गेले आहेत, त्यातले जे कोणी ज्यांची यहूदा देशात परत जाण्याची आणि तेथे राहण्याची इच्छा आहे. त्यातील कोणीही परत जाणार नाही, कारण जे कोणी थोडके निसटून जातील त्यांच्यावाचून दुसरे कोणी परत जाणार नाहीत.”
15 ೧೫ “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
१५नंतर आपल्या स्त्रिया दुसऱ्या देवास धूप जाळतात असे ज्या सर्व पुरुषांस माहित होते ते आणि ज्या सर्व स्त्रिया मोठ्या मंडळीत होत्या आणि मिसर देशात पथ्रोसात जे लोक राहत होते, अशा सर्वांनी यिर्मयाला उत्तर दिले.
16 ೧೬ “ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.
१६ते म्हणाले, “तू आम्हास परमेश्वराच्या नावात जे वचन सांगितले त्याच्याविषयी आम्ही तुझे ऐकणार नाही.
17 ೧೭ ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
१७पण जसे आमचे पूर्वज, आमचे राजे व आमचे अधिकारी यहूदाच्या नगरांत आणि यरूशलेमेच्या रस्त्यावर करीत असत, तसे आम्ही आकाशाच्या राणीला धूप जाळणे व तिला पेयार्पणे ओतण्याविषयी जो प्रत्येक शब्द आमच्या मूखातून निघाला आहे तो आम्ही खचित पूर्ण करू. कारण त्यावेळी आम्ही अन्नाने तृप्त होतो आणि कोणत्याही अनिष्टाचा अनुभव न घेता उन्नतीत होतो.
18 ೧೮ ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
१८जेव्हा आम्ही आकाशाच्या राणीला धूप जाळणे व तिला पेयार्पणे ओतणे यापासून परावृत्त झालो तेव्हापासून आम्ही सर्व दारिद्र्याने दुःखी आहोत व तलवारीने व दुष्काळाने मरत आहोत.”
19 ೧೯ ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.
१९मग स्त्रिया म्हणाल्या, “जेव्हा आम्ही आकाशाच्या राणीला धूप जाळला व तिला पेयार्पणे ओतली, या गोष्टी आम्ही आपल्या पतीच्या संमतीशिवाय केल्या काय?”
20 ೨೦ ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,
२०मग यिर्मया सर्व लोकांस, स्त्रिया व पुरुषांस आणि ज्या सर्व लोकांनी त्यास उत्तर दिले, त्याने घोषणा केली व म्हणाला,
21 ೨೧ “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
२१“तुम्ही यहूदाच्या नगरांत आणि यरूशलेमेच्या रस्त्यात, तुम्ही, तुमचे पूर्वज, तुमचे राजे आणि अधिकारी व देशातील लोक जो धूप जाळीत होते, त्याची परमेश्वरास आठवण नव्हती काय? कारण परमेश्वराच्या मनात हे आले. ते त्याच्या विचारात आले.
22 ೨೨ ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
२२मग तुमच्या वाईट व्यवहारामुळे, तिरस्करणीय कृत्यामुळे परमेश्वराची सहनशक्ती संपली. नंतर त्याने तुमचा देश ओसाड, भीतीजनक आणि शापीत केला, म्हणून आजपर्यंत तेथे कोणी रहिवासी नाही.
23 ೨೩ ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.
२३तुम्ही धूप जाळला आणि परमेश्वराविरूद्ध पाप केले व तुम्ही त्याची वाणी, त्याचे नियमशास्त्र त्याचे विधी किंवा त्याचे कराराचे आदेश, ऐकले नाहीत, हे अनिष्ट तुमच्याविरुध्द आजपर्यंत घडत आहेत.”
24 ೨೪ ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.
२४मग यिर्मया त्या सर्व लोकांस आणि स्त्रियांना म्हणाला, “यहूदातले जे तुम्ही मिसर देशामध्ये आहात ते सर्व तुम्ही परमेश्वराचे वचन ऐका.
25 ೨೫ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
२५सेनाधीश परमेश्वर, इस्राएलाचा देव, असे म्हणतो, ‘आम्ही आकाशाच्या राणीला धूप जाळायला व तिच्यासाठी पेयार्पणे ओतायला जे नवस केले आहेत ते खचित फेडू असे तुम्ही आणि तुमच्या स्त्रिया तुम्ही दोघांनी आपल्या मुखाने बोलून आणि आपल्या हातांनी पूर्ण केले आहे. तर तुम्ही आपले नवस खचित स्थापित करा आणि आपले नवस फेडा.”
26 ೨೬ ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
२६यास्तव जे तुम्ही यहूदी देशातले मिसर देशात राहता ते सर्व तुम्ही परमेश्वराची वचने ऐका; पाहा, मी आपल्या थोर नावाची शपथ वाहिली आहे की, सर्व मिसर देशामध्ये राहणाऱ्या यहूदा देशातल्या कोणत्याही मनुष्याच्या मुखाने परमेश्वर जिवंत आहे असे म्हणून माझे नाव पुन्हा घेण्यात येणार नाही.
27 ೨೭ ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.
२७पाहा, मी त्यांच्या चांगल्यासाठी नाही तर त्यांच्या अनिष्टासाठी त्यांच्यावर लक्ष ठेवीन. यहूदा देशातला जो प्रत्येक व्यक्ती मिसर देशामध्ये आहे त्यांचा अंत होईपर्यंत ते तलवारीने नाश होईल.
28 ೨೮ ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.
२८नंतर जे काही थोडके लोक तलवारीपासून सुटतील ते मिसर देशामधून यहूदा देशात परत येतील. मग सर्व अवशिष्ट यहूदी मिसर देशात राहण्यास गेलेल्यांना कोणाचे शब्द खरे ठरले आहेत माझे किंवा त्यांचे ते त्यांना समजेल.
29 ೨೯ ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
२९परमेश्वराचे हे सांगणे आहे की, माझी वचने तुमच्या अनिष्टाची ठरतील हे तुम्हास कळून यावे म्हणून मी या जागी तुम्हास शिक्षा करीन. हेच तुम्हास चिन्ह होय.
30 ೩೦ ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.
३०परमेश्वर असे म्हणतो, पाहा, जसे मी यहूदाचा राजा सिद्कीयाला त्याचा शत्रू बाबेलचा राजा नबुखद्नेस्सर याच्या हाती दिले त्याप्रमाणे मी मिसराचा राजा फारो हफ्रा याला त्याच्या शत्रूंच्या हाती व त्याचा जीव घेऊ पाहणाऱ्यांच्या हाती देईन.