< ಯೆರೆಮೀಯನು 49 >

1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
अम्मोनी लोकांविषयी परमेश्वर असे म्हणतो, “इस्राएली लोकांस मुले नाहीत का? इस्राएलात कोणीही वारीस नाही काय? तर मिलकोमने गाद ताब्यात का घेतो आणि त्याचे लोक त्याच्या नगरात का राहतात?”
2 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
यास्तव परमेश्वर म्हणतो, “पाहा, असे दिवस येत आहेत की, अम्मोनाच्या लोकांस राब्बाविरूद्ध जेव्हा मी लढाईसाठी संकेताचा आवाज ऐकावयास लावीन, तेव्हा ते ओसाडीचा ढीग होईल आणि त्यांच्या कन्या अग्नीने जाळल्या जातील. कारण जे कोणी त्याच्या ताब्यात होते त्याचा ताबा इस्राएल घेईल.” असे परमेश्वर म्हणतो.
3 “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
हे हेशबोना, विलापात आक्रोश कर, कारण आय याचा नाश झाला आहे! राब्बातील कन्यांनो, मोठ्याने ओरडा! तागाची वस्त्रे घाला, आकांत करा आणि तुम्ही व्यर्थ इकडे तिकडे धावाल कारण मिलकोम राजा आपले याजक व अधिकाऱ्याबरोबर एकत्रित बंदिवान होऊन जाईल.
4 ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
तू आपल्या सामर्थ्याबद्दल का गर्व करते? हे अविश्वासू कन्ये, तुझे सामर्थ्य दूर वाहून जाईल, तू आपल्या संपत्तीवर भरवसा ठेवते. तू म्हणते, माझ्याविरूद्ध कोण येईल?
5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
सेनाधीश परमेश्वर असे म्हणतो, “पाहा, मी तुझ्यावर दहशत आणीन. ही दहशत जे कोणी तुझ्या सभोवताली आहेत त्यांच्या सर्वांपासून येईल. तुमच्यातला प्रत्येकजण त्यांच्यापुढे विखरला जाईल. तेथे पळून जाणाऱ्यांना एकत्र जमवायला कोणी असणार नाही.”
6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
परंतु यानंतर मी अम्मोनी लोकांचा बंदिवास उलटवीन. असे परमेश्वर म्हणतो.
7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
अदोमाविषयी, सेनाधीश परमेश्वर हे म्हणतो, “तेमानात आता काही ज्ञान नाही काय? ज्या कोणाला गोष्टी समजतात त्यांचे चांगले सल्ले अदृश्य झाले आहेत काय? त्यांचे ज्ञान दूर गेले आहे का?
8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
ददानातल्या रहिवाश्यांनो, पळा! माघारी फिरा! जमिनीतल्या विवरात रहा. कारण मी त्यास शिक्षा करणार आहे त्या समयी मी एसावाची अरिष्टे त्याच्यावर आणीन.
9 ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
जर द्राक्षे काढणारे तुझ्याकडे आले, तर ते थोडे मागे ठेवणार नाहीत का? जर चोर रात्रीत आला, तर तो त्यास पाहिजे तितके चोरणार नाही का?
10 ೧೦ ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
१०पण एसावाचे कपडे काढून त्यास उघडे केले आहे. मी त्याची लपण्याची ठिकाणे उघड केली आहेत. म्हणून त्याच्याने आपल्याला लपवता येत नाही. त्याची मुले, भाऊ व त्याचे शेजारी नष्ट झाले आहेत आणि तो गेला आहे.
11 ೧೧ ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
११तुझे अनाथ मागे ठेव. मी त्यास जिवंत ठेवण्याची काळजी घेईल आणि तुझ्या विधवा माझ्यावर भरवसा ठेवू शकतील.”
12 ೧೨ ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
१२कारण परमेश्वर असे म्हणतो, “पाहा, ज्यांची योग्यता नाही त्यांना खचित काही पेला प्यावा लागेल. तर तू स्वतःशी असा विचार करतो की तू शिक्षेशिवाय राहशील? तुला शिक्षा झाल्याशिवाय राहणार नाही, कारण तुला तो खचित प्यावा लागेल.”
13 ೧೩ ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
१३परमेश्वर म्हणतो, “कारण मी आपलीच शपथ वाहिली आहे की, बस्रा दहशत, निंदा, उध्वस्त, आणि शापासाठीचा विषय होईल. ते शहर पडझड झालेल्या दगडांची रास होईल. त्यांची सर्व नगरे कायमची उध्वस्त होतील.”
14 ೧೪ ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
१४मी परमेश्वराकडून वर्तमान ऐकले आहे की, राष्ट्रांकडे दूत पाठविला आहे, “एकत्र व्हा आणि हल्ला करा. लढायला सज्ज व्हा.”
15 ೧೫ ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
१५कारण पाहा, दुसऱ्या राष्ट्रांच्या तुलनेत मी तुला लहान, लोकांकडून तुच्छ केले आहे.
16 ೧೬ ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
१६जी तू खडकाच्या कपाऱ्यांमध्ये राहतेस व डोंगरांचा माथा धरून राहतेस त्या तुझ्या भयंकरपणाने व तुझ्या हृदयाच्या गर्वाने तुला फसविले आहे. जरी तू गरुडाप्रमाणे उंच घरटे बांधलेस तरी तेथून मी तुला खाली आणीन. असे परमेश्वराचे म्हणणे आहे.
17 ೧೭ ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
१७तेथून जाणाऱ्या प्रत्येकाला अदोम दहशत होईल. तशा प्रत्येक व्यक्ती थरथरेल आणि त्याच्या सर्व अरिष्टाविषयी फूत्कार टाकेल.
18 ೧೮ ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
१८परमेश्वर म्हणतो, सदोम व गमोरा व त्यांचे शेजारी यांना जसे उलथून टाकले तसे होईल. तेथे कोणीही जिवंत राहणार नाही. तेथे कोणी व्यक्ती मुक्काम करणार नाही. देव असे म्हणाला,
19 ೧೯ ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
१९“पाहा, तो सिंहासारखा यार्देनेच्या वनातून वर टिकाऊ कुरणाच्या देशात येईल. कारण मी अदोमाला त्यातून जलद पळून जायला भाग पाडीन आणि जो कोणी मी निवडलेला आहे त्यास तिच्यावर नेमून ठेवीन. कारण माझ्यासारखा कोण आहे आणि मला कोण हुकूम करीन? कोणता मेंढपाळ मला विरोध करण्यास समर्थ आहे?”
20 ೨೦ ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
२०म्हणून अदोमाविरूद्ध परमेश्वराने ठरवलेली योजना काय आहे? तेमानाच्या रहिवाश्याविरूद्ध त्याने जी योजना तयार केली ती ऐका; ते खचित लहानातील लहान कळपालासुद्धा ओढून नेतील. त्यांची कुरणाचे देश ओसाड जागेत बदलतील.
21 ೨೧ ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
२१त्यांच्या पडण्याच्या आवाजाने धरणी हादरेल. त्यांच्या दुःखाचा आक्रोश तांबड्या समुद्रापर्यंत ऐकू येत आहे.
22 ೨೨ ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
२२पाहा, कोणीतरी गरुडासारखा हल्ला करील आणि खाली झडप घालील व बस्रावर आपले पंख पसरेल. मग त्या दिवशी, अदोमाच्या सैनिकांचे हृदय प्रसूती वेदना होणाऱ्या स्त्रीप्रमाणे होईल.
23 ೨೩ ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
२३दिमिष्काविषयीः हमाथ व अर्पद लज्जित होतील, कारण त्यांनी अरिष्टाची बातमी ऐकली आहे. ते नाहीसे झाले आहेत! ते समुद्रासारखे खवळले आहेत, ते शांत होऊ शकत नाही.
24 ೨೪ ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
२४दिमिष्क फार दुबळे झाले आहे. ती पळून जाण्यास माघारी फिरली आहे. दहशतीने तिला वेढले आहे. दुःखाने तिला घेरले आहे, प्रसूत होणाऱ्या स्त्रीप्रमाणे वेदना होत आहेत.
25 ೨೫ ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
२५तिचे लोक म्हणतात, “प्रसिद्ध नगरी, ज्या एक नगरीवर मी हर्ष करीत होते. अजूनपर्यंत कशी खाली केली नाही?
26 ೨೬ ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
२६म्हणून त्याची तरुण माणसे त्याच्या चौकात पडतील आणि लढणारी माणसे त्या दिवशी नष्ट होतील.” असे सेनाधीश परमेश्वर म्हणतो.
27 ೨೭ ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
२७“कारण मी दिमिष्काच्या तटाला आग लावीन. आणि ती बेन-हदादचे बालेकिल्ले खाऊन टाकील.”
28 ೨೮ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
२८केदाराविषयी व हासोराची राज्ये, परमेश्वर नबुखद्नेस्सरास हे म्हणत आहे (आता बाबेलाचा राजा नबुखद्नेस्सर या ठिकणी हल्ला करण्यास जाणार होता) “उठा आणि केदारावर हल्ला करा व पूर्वेच्या त्या लोकांचा नाश करा.
29 ೨೯ “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
२९त्यांचे सैन्य त्यांचे तंबू व त्यांचे कळप, त्यांच्या तंबूचे पडदे व त्यांचे सर्व साहित्य घेऊन जातील. केदारच्या लोकांकडून त्यांचे उंट आपणासाठी घेऊन जातील आणि त्यांना ओरडून सांगतील. ‘चोहोकडे सर्व दहशत आहे.’
30 ೩೦ ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
३०परमेश्वर म्हणतो, पळा! हासोराच्या रहिवाश्यांनो, दूर भटका, जमिनीच्या विवरात रहा. कारण बाबेलाचा राजा नबुखद्नेस्सराने तुमच्याविरुध्द नवीन योजना योजली आहे. पळा! माघारी फिरा!
31 ೩೧ ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
३१परमेश्वर म्हणतो, उठा! स्वस्थ व सुरक्षित राहणाऱ्या राष्ट्रावर हल्ला करा. त्यास त्यामध्ये वेशी व अडसर नाहीत आणि त्यांच्यात त्यांचे लोक राहतात.
32 ೩೨ ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
३२कारण त्यांचे उंट लुटले जातील व त्यांची विपुल संपत्ती युद्धाची लूट अशी होईल. त्यांच्या दाढीच्या कडा कापलेल्यांना सर्व दिशांकडे विखरीन आणि मी त्यांच्यावर सर्व बाजूने संकटे आणीन.” असे परमेश्वर म्हणतो.
33 ೩೩ ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
३३“हासोर कोल्ह्यांची वस्ती होईल, कायमचे ओसाड होईल. तेथे कोणीही राहणार नाही. कोणी मनुष्यप्राणी तेथे राहणार नाही.”
34 ೩೪ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
३४यहूदाचा राजा सिद्कीया याच्या राज्याच्या सुरवातीच्या काळात एलामाविषयी यिर्मया संदेष्ट्याकडे परमेश्वराचे वचन आले. ते म्हणाले,
35 ೩೫ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
३५सेनाधीश परमेश्वर असे म्हणतो, “पाहा, त्यांच्या बलाचा मुख्य भाग एलामाचे धनुर्धारी माणसे यांना मी लवकरच मोडीन.
36 ೩೬ ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
३६कारण मी आकाशाच्या चार कोपऱ्यातून चार वारे आणीन, आणि मी एलामाच्या लोकांस त्या सर्व वाऱ्यांकडे विखरीन. ज्याकडे एलामाचे घालवलेले जाणार नाहीत असे एकही राष्ट्र असणार नाही.
37 ೩೭ ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
३७म्हणून मी एलामाच्या शत्रूसमोर आणि जे त्याचा जीव घेऊ पाहतात त्यांच्यासमोर तुकडे तुकडे करीन. कारण मी त्यांच्याविरुद्ध अरिष्ट, माझा संतप्त क्रोध आणीन. असे परमेश्वर म्हणत आहे. आणि मी त्यांना संपूर्ण नाश करीपर्यंत तलवार त्यांच्या पाठीस लावीन.
38 ೩೮ ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
३८मग मी एलामात आपले राजासन ठेवीन आणि तेथून त्याचा राजा व त्याचे अधिकारी यांना नष्ट करीन.” असे परमेश्वराचे सांगणे आहे.
39 ೩೯ ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
३९“शेवटल्या दिवसात असे घडेल की, मी एलामात बंदिवासात गेलेले परत आणीन,” असे परमेश्वराचे सांगणे आहे.

< ಯೆರೆಮೀಯನು 49 >