< ಯೆರೆಮೀಯನು 49 >

1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
अम्मोनीहरूको विषयमा परमप्रभु यसो भन्‍नुहुन्छ, “के इस्राएलका छोराछोरी छैनन् र? के इस्राएलमा कुनै उत्तराधिकारी छैन? किन मोलोखले गाद कब्जा गर्छ र त्यसका मानिसहरू यसका सहरहरूमा बस्छन् त?
2 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
त्यसैले, यो परमप्रभुको घोषणा हो, हेर्, यस्‍ता दिनहरू आउँदैछन्, जति बेला म अम्मोनीहरूका बिचमा रब्बाको विरुद्धमा युद्ध-ध्वनीको लागि सङ्केतको आवाज निकाल्नेछु, यसरी यो भग्‍नावशेषको थुप्रो हुनेछ, र यसका गाउँहरूमा आगो लगाइनेछ । किनकि इस्राएललाई अधिकार गर्नेहरूलाई त्यसले अधिकार गर्नेछ,” परमप्रभु भन्‍नुहुन्छ ।
3 “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ए हेश्बोन, विलापको आवाज निकाल्, किनकि ऐ सहरलाई सर्वानाश गरिनेछ । ए रब्बाकी छोरीहरू हो, चिच्‍च्याओ । भाङ्ग्रा लगाओ । विलाप गर, र व्यर्थैमा यताउता कुद, किनकि मोलोख त्यसका पुजारीहरू र अगुहरूसँगै निर्वासनमा लगिनेछ ।
4 ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
ए विश्‍वासहीन छोरी, तँ किन तेरा ज्यादै फलवन्त बेँसीहरूको विषयमा घमण्ड गर्छेस्? आफ्नो धन-सम्पत्तिमा भरोसा गरी तँ भन्छस्, 'मेरो विरुद्धमा को आउनेछ?'
5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
यो सर्वशक्तिमान् परमप्रभुको घोषणा हो, हेर्, मैले तँमाथि त्रास ल्याउनै लागेको छु, यो त्रास तेरो वरिपरि भएका सबैबाट आउनेछ । यसको सामु तिमीहरू हरेक तितरबितर हुनेछौ । ती भाग्‍नेहरूलाई जम्मा गर्ने कोही पनि हुनेछैन ।
6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
तर यसपछि म अम्मोनका मानिसहरूको सुदिन फर्काउनेछु, यो परमप्रभुको घोषणा हो ।”
7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
एदोमको विषयमा सर्वशक्तिमान् परमप्रभु यसो भन्‍नुहुन्छ, “के तेमानमा अबदेखि कुनै बुद्धि पाइँदैन? के समझदारहरूबाट असल सल्लाह गायब भएको छ? के तिनीहरूको बुद्धि भ्रष्‍ट भएको छ?
8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
ए ददानमा बासिन्दाहरू हो, भाग र फर्क, जमिनका गुफाहरूमा बस । किनकि मैले त्यसलाई दण्ड दिने बेलामा म त्यसमाथि एसावको विपत्ति ल्याउँदैछु ।
9 ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
दाख टिप्नेहरू तँकहाँ आए भने के तिनीहरूले केही दानाहरू छोड्‍दैनन् र? रातमा चोरहरू आए भने के तिनीहरूले आफूले चाहे जति मात्र लैजाँदैनन् र?
10 ೧೦ ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
तर मैले एसावलाई नाङ्गै पारेको छु । मैले त्यसका लुक्‍ने ठाउँहरू देखाएको छु, यसैले उसले आफैलाई लुकाउन सक्‍नेछैन । त्यसका छोराछोरी, दाजुभाइ र छिमेकीहरू नष्‍ट पारिएका छन्, र त्यो नष्‍ट भएको छ ।
11 ೧೧ ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
तेरा अनाथहरूलाई पछाडि छोड् । तिनीहरूका जीवनको हेरचाह म गर्नेछु, र तेरा विधवाहरूले ममाथि भरोसा गर्न सक्छन् ।”
12 ೧೨ ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
किनकि परमप्रभु यसो भन्‍नुहुन्छ, “हेर, कचौरा पिउनु नपर्नेले त निश्‍चय नै केही पिउनैपर्छ । के तँचाहिं दण्डविना उम्कन्छस् भनी सोच्छस्? तँ उम्कने छैनस्, किनकि तैंले निश्‍चय नै पिउनेछस् ।
13 ೧೩ ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
यो परमप्रभुको घोषणा हो, म आफैले यो शपथ खाएको छु, कि बोज्रा त्रास, अपमान, उजाड र सरापको पात्र बन्‍नेछ । यसका सबै सहर सदाको लागि सर्वनाश पारिनेछन् ।
14 ೧೪ ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
मैले परमप्रभुबाट समाचार सुनेको छु, र जातिहरूकहाँ एक जना सन्देशवाहक पठाइएको छ, 'एकसाथ जम्मा होओ र त्यसलाई आक्रमण गर । युद्धको लागि तयार रहो ।'
15 ೧೫ ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
“किनकि हेर! अरू जातिहरूको तुलनामा मैले तँलाई सानो, मानिसहरूद्वारा घृणित तुल्याएको छु ।
16 ೧೬ ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
तेरो त्रासको विषयमा, ए चट्टानका ठाउँहरूमा बस्‍ने बासिन्दाहरू हो, तेरो हृदयको घमण्डले तँलाई धोका दिएको छ, गरुडले झैं तैंले आफ्नो गुँड अग्लो ठाउँमा बनाउन भनेर अग्ला डाँडाका टाकुराहरू ओगटेर बस्‍नेहरू हो, म त्यहाँबाट तँलाई तल झार्नेछु, यो परमप्रभुको घोषणा हो ।
17 ೧೭ ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
एदोमबाट भएर जाने हरेकको लागि यो त्रासको पात्र बन्‍नेछ । यसका सबै विपत्तिको कारण हरेक व्यक्ति तर्सनेछ र गिल्ला गर्नेछ ।
18 ೧೮ ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
जसरी सदोम र गमोरा अनि तिनीहरूका छिमेकीहरूको पतन भयो,” परमप्रभु भन्‍नुहुन्‍छ, “त्यहाँ कोही पनि बस्‍नेछैन । कुनै पनि व्यक्ति त्यहाँ रहनेछैन ।
19 ೧೯ ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
हेर्, यर्दनका जङ्गलहरूबाट हरिया खर्कहरूमा सिंहझैं ऊ माथितिर उक्लनेछ । किनकि म एदोमलाई त्‍यहाँबाट तुरुन्‍तै भाग्‍ने बनाउने छु, र चुनिएको कुनै व्‍यक्‍तिलाई म त्‍यसको जिम्मा लगाउनेछु । किनकि मजस्तो को छ र कसले मलाई बोलाउनेछ? कुनचाहिं गोठालोले मेरो विरोध गर्न सक्छ?”
20 ೨೦ ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
“त्यसैले परमप्रभुले एदोमको विरुद्धमा निधो गर्नुभएका योजनाहरू, तेमानका बासिन्दाहरूको विरुद्धमा बनाउनुभएका योजनाहरू सुन । निश्‍चय नै तिनीहरूका स-साना बगालका पनि घिस्याएर लगिनेछन् । तिनीहरूका खर्कहरू उजाड-स्थानमा परिणत हुनेछन् ।
21 ೨೧ ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
तिनीहरूको पतनको सोरमा पृथ्वी हल्लिन्छ । निराशाको चित्‍कारको सोर लाल समुद्रमा सुनिनेछ ।
22 ೨೨ ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
हेर्, कसैले बोज्रालाई गरुडझैं आक्रमण गर्नेछ, तलतिर बेग हानी यसमाथि आफ्ना पखेटा फैलाउनेछ । तब त्यस दिनमा एदोमका सिपाहीहरूका हृदयहरू प्रसव-वेदनामा भएकी स्‍त्रीको हृदयजस्तै हुनेछन् ।”
23 ೨೩ ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
दमस्कसको विषयमाः “हमात र अर्पाद लाजमा पर्नेछन्, किनकि तिनीहरूले विपत्तिको खबर सुनेका छन् । तिनीहरू पग्‍लेर जान्छन् । तिनीहरू शान्त नरहने समुद्रझैं छटपठीमा हुन्छन् ।
24 ೨೪ ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
दमस्कस साह्रै कमजोर भएको छ । यो भाग्‍नलाई फर्कन्छ । त्रासले यसलाई पक्रन्‍छ । प्रसव-वेदनामा भएकी स्‍त्रीझैं निराशा र पीडाले यसलाई पक्रन्छन् ।
25 ೨೫ ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
त्यो प्रशंसाको सहर अर्थात् मेरो आनन्दको नगर किन त्यागिएको छैन?
26 ೨೬ ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
त्यसकारण त्यस दिन त्‍यसका युवाहरू सार्वजनिक ठाउँहरूमा ढल्नेछन्, र सबै योद्धा नष्‍ट हुनेछन्, यो सर्वशक्तिमान् यो परमप्रभुको घोषणा हो ।”
27 ೨೭ ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
“किनकि दमस्कसको पर्खालमा म आगो लगाउनेछु, र यसले बेन-हददका किल्लाहरूलाई भस्म पार्नेछ ।”
28 ೨೮ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
केदार र हासोरका राज्यहरूको विषयमा परमप्रभु नबूकदनेसरलाई यसो भन्‍नुहुन्छ (यति बेला बेबिलोनका राजा नबूकदनेसरले यी ठाउँहरूलाई आक्रमण गर्न लागेका थिए): “उठ्, र केदारलाई आक्रमण गर्, अनि पूर्वका ती मानिसहरूलाई नष्‍ट पार् ।
29 ೨೯ “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
तिनीहरूका पाल र तिनीहरूका बगाल लगिनेछन्, साथमा तिनीहरूका पालका पर्दाहरू र तिनका सबै सरसामान पनि । तिनीहरूका ऊँटहरू तिनीहरूबाट लगिनेछन्, र मानिसहरू तिनीहरूमाथि चिच्‍याउनेछन्, 'त्रास जताततै छ!”
30 ೩೦ ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
ए हासोरका बासिन्दाहरू हो, भाग, धेरै टाढा जाओ, जमिनका गुफाहरूमा लुक, यो परमप्रभुको घोषणा हो— किनकि बेबिलोनका राजा नबूकदनेसरले तिमीहरूको विरुद्धमा योजना रच्दैछ । भाउ, पछि फर्क ।
31 ೩೧ ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
उठ्, आराम भएको जातिलाई आक्रमण गर, जुन सुरक्षामा बस्‍छ,” परमप्रभु भन्‍नुहुन्छ । “तिनीहरूका मूल ढोकाहरू वा तिनमा गजबारहरू छैनन्, अनि त्यसका मानिसहरू त्‍यत्तिकै बस्छन् ।
32 ೩೨ ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
किनकि तिनीहरूका ऊँटहरू लुटको माल बन्‍नेछन्, र तिनीहरूको प्रचुर धन-सम्पत्ति युद्धमा लुटिने माल बन्‍नेछन् । तब शोकमा आफ्‍ना कपाल काट्ने हरेकलाई म हावामा तितरबितर पार्नेछु, र तिनीहरूमाथि म हरेक कुनाबाट विपत्ति ल्याउनेछु, यो परमप्रभुको घोषणा हो ।
33 ೩೩ ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
हासोर स्यालहरूको अखडा अर्थात् सदाको निम्ति उजाड-स्थान बन्‍नेछ । त्यहाँ कोही बस्‍नेछैन । कुनै मानिस त्यहाँ रहनेछैन ।”
34 ೩೪ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
एलामको विषयमा यर्मिया अगमवक्ताकहाँ आएको परमप्रभुको वचन यही हो । यहूदाका राजा सिदकियाहले राज्‍य गर्न सुरु गर्दा यो वचन आएको थियो, र तिनले भने,
35 ೩೫ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
“सर्वशक्तिमान् परमप्रभु यसो भन्‍नुहुन्छः हेर्, मैले एलामका धनुर्धारीहरूलाई तोड्नै लागेको छु, जुन तिनीहरूको शक्तिको मुख्य कुरा हो ।
36 ೩೬ ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
किनकि आकाशका चार कुनाबाट म चारवटा बतास ल्याउनेछु, र एलामका मानिसहरूलाई म ती सबै हावामा तितरबितर पार्नेछु । त्‍यहाँ कुनै राज्‍य नै हुनेछैन जहाँ एलामबाट छरिएकाहरू नपुगेको होस् ।
37 ೩೭ ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
यसरी एलामीहरूलाई म तिनीहरूका शत्रुहरू र तिनीहरूको ज्यान लिन खोज्नेहरूको सामु चूरचूर पार्नेछु । किनकि म तिनीहरूको विरुद्धमा विपत्ति अर्थात् मेरो क्रोधको ज्वाला दन्काउनेछु— यो परमप्रभुको घोषणा हो— र मैले तिनीहरूलाई निमिट्ट्यान्‍न नपारेसम्म म तिनीहरूका पछि तरवार पठाउनेछु ।
38 ೩೮ ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
त्यसपछि एलाममा म आफ्‍नो सिंहासन स्थापित गर्नेछु, र त्‍यहाँबाट त्‍यसका राजाहरू र अगुवाहरूलाई नष्‍ट पार्नेछु— यो परमप्रभुको घोषणा हो—
39 ೩೯ ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
र यस्‍तो हुनेछ कि पछिल्ला दिनहरूमा म एलामको सुदिन फर्काउनेछु— यो परमप्रभुको घोषणा हो ।”

< ಯೆರೆಮೀಯನು 49 >