< ಯೆರೆಮೀಯನು 5 >

1 ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
“यरूशलेमका सडकहरूबाट छिटो जा । त्यसका चोकहरूमा पनि खोजी गर् । त्यसपछि हेरे अनि यस कुरा बारेमा विचार गर्: न्यायपूर्वक काम गर्ने र इमानदारीपूर्वक काम गर्न खोज्ने कुनै मानिस तैंले फेला पारिस् भने, म यरूशलेमलाई क्षमा दिनेछु ।
2 ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
तिनीहरू भन्‍छन्‍छन्, 'जीवित परमप्रभुको नाउँमा' तापनि तिनीहरूले झूटा शपथ खाँदैछन् ।”
3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
हे परमप्रभु, के तपाईंका आँखाले विश्‍वसनीयताको खोजी गर्दैनन् र? तपाईंले मानिसहरूलाई प्रहार गर्नुभयो, तर तिनीहरूलाई पिडा महसुस हुँदैन । तपाईंले तिनीहरूलाई पूर्ण रूपमा पराजित गर्नुभएको छ, तर तिनीहरू अझै पनि अनुशासन मान्‍न इन्कार गर्छन् । तिनीहरूले आफ्ना अनुहार चट्टानभन्दा कडा बनाउँछन्, किनकि तिनीहरू पश्‍चात्ताप गर्न इन्कार गर्छन् ।
4 ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
त्यसैले मैले भनें, “निश्‍चय नै यिनीहरू मात्र दुःखी मानिसहरू रहेछन् । तिनीहरू मूर्ख छन्, किनकि तिनीहरू परमप्रभुका मार्ग जान्दैनन्, न त तिनीहरूका परमेश्‍वरका आज्ञाहरू जान्दछन् ।
5 ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
म ठुला मानिसहरूकहाँ जानेछु, र तिनीहरूलाई परमेश्‍वरको सन्देश घोषणा गर्नेछु, किनकि कमसेकम आफ्‍ना परमेश्‍वरका मार्ग, परमेश्‍वरका आज्ञाहरू तिनीहरूले त जान्दछन् ।” तर तिनीहरू सबैले आफ्‍ना जुवा सँगसँगै भाँचे । तिनीहरू सबैले आफूलाई परमेश्‍वरसित बाँध्‍ने बन्धनलाई चुँडाले ।
6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
त्यसैले झाडीबाट निस्केर आउने सिंहले तिनीहरूलाई आक्रमण गर्नेछ । अराबाबाट आउने ब्वाँसोले तिनीहरूलाई नष्‍ट पार्नेछ । ढुकेर बस्‍ने चितुवा तिनीहरूका सहरहरूको विरुद्धमा आउनेछ । आफ्नो सहरबाहिर जाने कोही पनि टुक्राटुक्रा पारिनेछ । किनकि तिनीहरूका अपराध बढ्दो छन् । तिनीहरूका विश्‍वासहीन कामहरू असीमित छन् ।
7 ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
यी मानिसहरूलाई मैले किन क्षमा दिने? तिमीहरूका छोराहरूले मलाई त्यागेका छन्, र तिनीहरूले त्‍यो नाउँमा शपथ खान्छन् जो ईश्‍वरहरू नै होइनन् । मैले तिनीहरूलाई पेटभरि खुवाएँ, तर तिनीहरूले व्यभिचार गरे, र ठुलो सङ्ख्यामा वेश्याहरूका घरहरूमा गए ।
8 ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
तिनीहरू कामवासनाले मस्‍त घोडाहरूजस्ता थिए । मैथुनको चाहनाले तिनीहरू चारैतिर डुल्दै थिए । प्रत्येक आफ्नो छिमेकीको पत्‍नीको लागि हिनहिनायो ।
9 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
त्यसैले, यो परमप्रभुको घोषणा हो, के मैले तिनीहरूलाई दण्ड दिनुपर्दैन र, के मैले यस्तो जातिसित बदला लिनुपर्दैन र? ।
10 ೧೦ “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
त्यसका दाखबारीका गराहरूमा जा र नष्‍ट गरिदे। तर तिनमा पूर्ण विनाश नगर । तिनका हाँगाहरू छिंवल, किनकि ती दाखका बोट परमप्रभुबाट आएका होइनन् ।
11 ೧೧ ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.
किनकि इस्राएल र यहूदाका घरानाहरूले मलाई पूर्ण रूपमा धोका दिएक छन्, यो परमप्रभुको घोषणा हो ।
12 ೧೨ ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
तिनीहरूको परमप्रभुको बारेमा झूट बोलेका छन् र यसो भनेका छन्, “उहाँले केही गर्नुहुने छैन । हामीमाथि कुनै हानि आउनेछैन, र हामीले कुनै तरवार वा अनिकाल देख्‍ने छैनौं ।
13 ೧೩ ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’” ಅಂದುಕೊಂಡಿದ್ದಾರೆ.
अगमवक्ताहरू हावा हुनेछन्, र तिनीहरूमा वचन छैन । त्यसैले तिनीहरूले भनेका कुरा तिनीहरूमाथि नै आइपरून् ।”
14 ೧೪ ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
त्यसैले सर्वशक्तिमान् परमप्रभु परमेश्‍वर यसो भन्‍नुहुन्छ, “तैंले यसो भनेको हुनाले हेर, म तेरो मुखमा मेरो वचन हाल्नै लागेको छु । यो आगोजस्तो हुनेछ, र यी मानिसहरू दाउराजस्ता हुनेछन् । किनकि यसले तिनीहरूलाई भस्म पार्ने छ ।
15 ೧೫ ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
हेर! ए इस्राएलको घराना हो, मैले तेरो विरुद्धमा धेरै टाढाबाट एउटा जातिलाई ल्याउनै लागेको छु, यो परमप्रभुको घोषणा हो, यो एउटा दिगो र प्राचीन जाति हो । यो एउटा त्‍यस्तो जाति हो जसको भाषा तैंले जान्दैनस्, न त तिनीहरूले के भन्‍छन् त्‍यो तैंले बुझ्नेछस् ।
16 ೧೬ ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.
तिनीहरूका वाणका ठोक्राहरू खुला चिहानजस्तै छन् । तिनीहरू सबै सिपाही हुन् ।
17 ೧೭ ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
त्यसैले तिमीहरूका फसल, तिमीहरूका छोराछोरी अनि तिमीहरूका खानेकुरा स्वाहा पारिनेछन् । तिनीहरूले तिमीहरूका भेडा-बाख्रा र गाईवस्तु खानेछन् । तिनीहरूले तिमीहरूका दाखका बोट र अञ्जीरका बोटहरूका फल खानेछन् । तिमीहरूले भरोसा गरेका तिमीहरूका किल्ला भएका सहरहरूलाई तिनीहरूले तरवारले नष्‍ट पार्नेछन् ।
18 ೧೮ ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.
तर ती दिनमा पनि म तिमीहरूलाई पूर्ण रूपमा नाश पार्ने इच्छा गर्दिनँ, यो परमप्रभुको घोषणा हो ।
19 ೧೯ “ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.
जब तँ, इस्राएल र यहूदाले यसो भन्‍छस्, ‘परमप्रभु हाम्रा परमेश्‍वरले किन हामीलाई यी सबै कुरा गर्नुभएको?’ तब तँ यर्मियाले तिनीहरूलाई भन्‍नेछस्, “जसरी तिमीहरूले परमप्रभुलाई त्याग्‍यौ र आफ्‍नै देशमा विदेशी देवताहरूको सेवा गर्‍यौ, त्यसरी नै तिमीहरूले विदेशमा पनि विदेशीहरूको सेवा गर्नुपर्नेछ ।”
20 ೨೦ ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,
याकूबको घरानामा यो प्रचार गर्, र यहूदामा यो सुनियोस् । यसो भन्,
21 ೨೧ ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
“हे समझ नभएको मूर्ख मानिस हो, यो कुरा सुन । तिमीहरूका आँखा छन्, तर देख्‍न सक्दैनौ, कान छन्, तर सुन्‍न सक्दैनौ ।
22 ೨೨ ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
मदेखि नडराओ, न त मेरो मुहारको सामु थरथर होओ, यो परमप्रभुको घोषणा हो । समुद्रलाई बालुवाको सिमाना राखेको छु जुन नभत्‍किने स्थायी, निरन्‍तर रहने आज्ञा हो, छाल ठोकिने र फर्किने भए तापनि त्‍यसले अझै भत्‍काउनेछैन । यसका तरङ्गहरू गर्जे तापनि तिनले यसलाई पार गर्दैनन् ।
23 ೨೩ ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
तर यी मानिसहरूको हठी हृदय छ । यो विद्रोहमा बरालिन्‍छ र टाढा जान्छ ।
24 ೨೪ “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
किनकि तिनीहरूले आफ्ना हृदयमा यसो भन्दैनन्, “हामी परमप्रभु हाम्रा परमेश्‍वरको भय मानौं जसले वर्षा ल्‍याउनुहुन्‍छ, हामीले खेति गर्नुपर्ने हप्‍ताहरूमा, ठिक समयमा अगिल्लो र पछिल्लो वर्षा दिनुहुन्‍छ।”
25 ೨೫ ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.
तिमीहरूका अधर्महरूले गर्दा यी कुरा हुनबाट रोकिएका छन् । तिमीहरूका पापले गर्दा भलाइ तिमीहरूकहाँ आउन रोकिएको छ ।
26 ೨೬ ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
किनकि मेरा मानिसहरूसँगै दुष्‍ट मानिसहरू भेट्टाइएका छन् । कोही मानिस चरा समाउनलाई चुप बसेझैं तिनीहरू ढुकिबस्छन् । तिनीहरूले पासो थाप्‍छन् र मानिसहरू समात्छन् ।
27 ೨೭ ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
चराहरूले भरिएका पिंजराजस्तै तिनीहरूका घरहरू छलले भरिएका छन् । त्यसैले तिनीहरू ठुला र धनी भएका छन् ।
28 ೨೮ ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
तिनीहरू मोटाएका छन् । तिनीहरू सकुसल चिल्ला भएका छन् । तिनीहरूले दुष्‍टताको सबै सीमा पार गरेका छन् । तिनीहरूले मानिसहरू वा अनाथहरूको भलाइको निम्ति बिन्ती गर्दैनन् । तिनीहरूले खाँचोमा परेकाहरूलाई न्याय नदिए तापनि तिनीहरूको उन्‍नति हुन्‍छ ।
29 ೨೯ ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
के यी कुराको लागि मैले तिनीहरूलाई दण्ड नदिने त, के यस्तो जातिलाई मैले बदला नलिते त? यो परमप्रभुको घोषणा हो ।
30 ೩೦ ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;
यस देशमा बीभत्स र त्रासदीपूर्ण कामहरू भएका छन् ।
31 ೩೧ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
अगमवक्ताहरूले छलपूर्ण अगमवाणी गर्छन्, र पुजारीहरूले आफ्नै शक्तिले शासन गर्छन् । मेरो मानिसहरूले यही तरिका मन पराउँछन्, तर अन्त्यमा के हुने छ?”

< ಯೆರೆಮೀಯನು 5 >