< ಯೆರೆಮೀಯನು 52 >

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
जब सीदकियाहू ने शासन शुरू किया उसकी उम्र इक्कीस साल थी. येरूशलेम में उसने ग्यारह साल शासन किया. उसकी माता का नाम हामुतल था. वह लिबनाहवासी येरेमियाह की पुत्री थी.
2 ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
उसने वह किया, जो याहवेह की दृष्टि में बुरा था—वही सब, जो यहोइयाकिम ने किया था.
3 ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
वस्तुतः येरूशलेम और यहूदिया ने याहवेह को इस सीमा तक क्रोधित कर दिया था, कि याहवेह ने उन्हें अपनी नज़रों से ही दूर कर दिया. सीदकियाहू ने बाबेल के राजा के विरुद्ध विद्रोह कर दिया था.
4 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
तब उसके शासन के नवें साल के दसवें महीने के दसवें दिन बाबेल के राजा नबूकदनेज्ज़र ने अपनी सारी सेना के साथ आकर येरूशलेम को घेर लिया, उसके आस-पास छावनी ड़ाल दी और इसके चारों ओर घेराबंदी की दीवार बना ली.
5 ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
राजा सीदकियाहू के शासन के ग्यारहवें साल तक नगर घिरा रहा.
6 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
चौथे महीने के नवें दिन से नगर में अकाल ऐसा भयंकर हो गया कि नागरिकों के लिए कुछ भी भोजन न बचा.
7 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
तब उन्होंने शहरपनाह को तोड़ दिया और रात में सारे योद्धा दो दीवारों के बीच के द्वार से, जो राजा की वाटिका के पास था, निकल भागे. कसदी इस समय नगर को घेरे हुए थे. ये योद्धा अराबाह की दिशा में आगे बढ़ते गए,
8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
कसदी सेना ने राजा का पीछा किया और सीदकियाहू को येरीख़ो के मैदानों में जा पकड़ा. उसकी सारी सेना उसे छोड़कर भाग गई.
9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
राजा को बंदी बनाकर वे उसे हामाथ में रिबलाह नामक स्थान पर बाबेल के राजा के समक्ष ले गए, वहां सीदकियाहू पर दंड की आज्ञा घोषित की गई.
10 ೧೦ ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
बाबेल के राजा ने सीदकियाहू के समक्ष ही उसके पुत्रों का वध कर दिया, तब उसने रिबलाह में यहूदिया के सभी उच्चाधिकारियों का भी वध कर दिया.
11 ೧೧ ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
इसके बाद बाबेल के राजा ने सीदकियाहू की आंखें निकाल लीं और उसे कांसे की सांकलों में बांधकर बाबेल ले गया और उसे बंदीगृह में डाल दिया, जहां वह मृत्युपर्यंत रखा गया.
12 ೧೨ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
पांचवें माह के दसवें दिन, जो वस्तुतः बाबेल के राजा नबूकदनेज्ज़र के राज्य-काल का उन्‍नीसवां वर्ष था, बाबेल के राजा का सेवक, अंगरक्षकों का प्रधान नेबुज़रादान येरूशलेम आ गया.
13 ೧೩ ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
उसने याहवेह के भवन में, राजमहल में और येरूशलेम के सभी भवनों में आग लगा दी. हर एक अच्छा भवन भस्म कर दिया गया.
14 ೧೪ ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
अंगरक्षकों के प्रधान के साथ आई हुई कसदियों की सारी सेना ने येरूशलेम के चारों ओर बनाई हुई दीवारों को ढाह दिया.
15 ೧೫ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
तब अंगरक्षकों के प्रधान नेबुज़रादान ने प्रजा में से कुछ गरीब लोगों को, नगर में शेष रह गए लोगों को, उन लोगों को, जो बाबेल के राजा के अधीन में हो गए थे तथा वहां शेष रह गए शिल्पियों को अपने साथ बंधुआई में ले गया.
16 ೧೬ ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
नेबुज़रादान ने कुछ गरीब लोगों को कृषि तथा द्राक्षा उद्यानों की देखभाल के लिए वहीं रहने दिया.
17 ೧೭ ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
याहवेह के भवन के कांस्य स्तंभ, कांस्य के आधार तथा कांस्य जलबर्तनों को कसदी तोड़कर उनके टुकड़ों को बाबेल ले गए.
18 ೧೮ ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
वे याहवेह के भवन के पवित्र बर्तन, फावड़े, चिलमचियां, दीपषमक तथा सभी कांस्य बर्तन, जो मंदिर में आराधना के लिए अधीन होते थे, अपने साथ ले गए.
19 ೧೯ ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
अंगरक्षकों का प्रधान अपने साथ शुद्ध स्वर्ण एवं चांदी के कटोरे, अग्निबर्तन, चिलमचियां, बर्तन, दीवट, तवे, पेय बलि के कटोरे भी ले गया.
20 ೨೦ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
दो स्तंभ, एक विशाल जल बर्तन, बारह कांस्य बैल, जो इस जल बर्तन के नीचे आधार के रूप में रहते थे, जो राजा शलोमोन द्वारा याहवेह के भवन में अधीन किए जाने के लिए निर्मित किए गए थे, इन सबका कांस्य अतुलनीय था.
21 ೨೧ ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
हर एक स्तंभ की ऊंचाई लगभग आठ मीटर तथा हर एक की परिधि साढ़े पांच मीटर थी; तथा इनकी परत की मोटाई आठ सेंटीमीटर थी, ये स्तंभ खोखले थे.
22 ೨೨ ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
इन सबके ऊपर शीर्ष था, जो कांस्य का बनाया गया था. हर एक शीर्ष की ऊंचाई सवा दो मीटर थी, शीर्ष के चारों ओर अनारों की आकृति की जाली निर्मित की गई थी. दूसरा स्तंभ भी इसी प्रकार का था, उस पर भी अनारों की आकृति निर्मित थी.
23 ೨೩ ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
अनारों की कुल संख्या सौ थी तथा इनमें से छियानवे स्पष्टतः दिखाई देते थे; ये सभी चारों ओर की जाली में गढ़े गए थे.
24 ೨೪ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
इसके बाद अंगरक्षकों के प्रधान ने प्रमुख पुरोहित सेराइयाह, सहपुरोहित ज़ेफनियाह, तीन मंदिर अधिकारियों,
25 ೨೫ ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
नगर में से सैनिकों के पर्यवेक्षक अधिकारी तथा राजा के सात परामर्शकों को, जो वहीं नगर में थे, तथा सेना के आदेशक के लेखापाल को, जो देश के लोगों को सेना में तैयार करता था तथा देश के साठ व्यक्तियों को, जो उस समय नगर में पाए गए थे, अपने साथ बंदी बनाकर ले गया.
26 ೨೬ ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
नेबुज़रादान, जो अंगरक्षकों का प्रधान था, उसने इन सभी को रिबलाह ले जाकर बाबेल के राजा के समक्ष प्रस्तुत कर दिया.
27 ೨೭ ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
तब बाबेल के राजा ने हामाथ देश के रिबलाह नगर में इन सभी का वध कर दिया. इस प्रकार यहूदिया अपने देश से बंधुआई में ले जाया गया.
28 ೨೮ ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
नबूकदनेज्ज़र द्वारा बंधुआई में ले जाए गए व्यक्तियों की सूची इस प्रकार है: सातवें वर्ष में, तीन हजार तेईस यहूदी;
29 ೨೯ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
नबूकदनेज्ज़र के राज्य-काल के अठारहवें वर्ष में, येरूशलेम से आठ सौ बत्तीस व्यक्ति;
30 ೩೦ ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
नबूकदनेज्ज़र के राज्य-काल के तेईसवें वर्ष में, अंगरक्षकों के प्रधान नेबुज़रादान द्वारा सात सौ पैंतालीस यहूदी बंधुआई में ले जाए गए. इन सभी व्यक्तियों की कुल संख्या चार हजार छः सौ पाई गई.
31 ೩೧ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
यहूदिया के राजा यहोइयाखिन के बंधुआई के सैंतीसवें वर्ष में, बारहवें माह के पच्चीसवें दिन में बाबेल के राजा एवील-मेरोदाख ने अपने राज्य-काल के पहले वर्ष में यहूदिया के राजा यहोइयाखिन पर कृपा प्रदर्शित की और उसे कारागार से बाहर निकाल लिया.
32 ೩೨ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
उसने उससे कृपाभाव में वार्तालाप किया तथा उसके लिए उन राजाओं से उच्चतर स्थान पर सिंहासन स्थापित किया, जो बाबेल में इस समय उसके साथ थे.
33 ೩೩ ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
फिर यहोइयाखिन ने कारागार के वस्त्र त्याग दिए. साथ ही, वह मृत्युपर्यंत राजा के साथ भोजन करता रहा.
34 ೩೪ ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.
बाबेल के राजा की ओर से उसे नियमित रूप से उपवेतन दिया जाता रहा, तथा मृत्युपर्यंत उसकी दैनिक आवश्यकताएं पूर्ण की जाती रहीं.

< ಯೆರೆಮೀಯನು 52 >