< ಯೆರೆಮೀಯನು 52 >
1 ೧ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
၁ဇေဒကိသည်နန်းတက်စဉ်အခါကအသက် နှစ်ဆယ့်တစ်နှစ်ရှိ၍ ယေရုရှလင်မြို့တွင်တစ် ဆယ့်တစ်နှစ်မျှနန်းစံရလေသည်။ သူ့မယ် တော်မှာလိဗနမြို့သားယေရမိ၏သမီး ဟာမုတလဖြစ်၏။-
2 ೨ ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
၂ဇေဒကိမင်းသည်ယောယကိမ်မင်းကဲ့သို့ ပင်ထာဝရဘုရား၏ရှေ့တော်၌မကောင်း မှုများကိုပြု၏။-
3 ೩ ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
၃ယေရုရှလင်မြို့နှင့်ယုဒပြည်၏အခြေ အနေသည်အလွန်ဆိုးရွား၍လာသဖြင့် ထာဝရဘုရားသည်အမျက်ထွက်ပြီး လျှင်ပြည်သားတို့အားပြည်နှင်ဒဏ်သင့် စေတော်မူ၏။ ဇေဒကိသည်ဗာဗုလုန်ဘုရင်ကိုပုန်ကန် သဖြင့်၊-
4 ೪ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
၄ယုဒဘုရင်ဇေဒကိနန်းစံနဝမနှစ်၊ ဒသမလ၊ ဆယ်ရက်နေ့၌ဗာဗုလုန်ဘုရင် နေဗုခဒ်နေဇာသည် မိမိ၏စစ်သည်တပ် သားအပေါင်းတို့နှင့်အတူယေရုရှလင် မြို့ကိုတိုက်ခိုက်ရန်ချီတက်လာ၏။ သူတို့ သည်မြို့ပြင်တွင်တပ်စခန်းချ၍မြို့ပတ် လည်တွင်မြေကတုတ်များကိုဖို့လုပ်ကြ၏။-
5 ೫ ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
၅ထိုမြို့သည်ဇေဒကိနန်းစံဆယ့်တစ်နှစ် မြောက်တိုင်အောင်အဝိုင်းခံရလေသည်။-
6 ೬ ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
၆ထိုနှစ်စတုတ္ထလ၊ ကိုးရက်နေ့၌အစာငတ် မွတ်ခေါင်းပါးမှုသည်အလွန်ဆိုးရွား၍ လာသဖြင့် လူတို့တွင်အစာရေစာ အလျှင်းမရှိကြတော့ပေ။-
7 ೭ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
၇ထိုအခါမြို့ရိုးများသည်ကျိုးပေါက်၍သွား တော့၏။ မြို့ကိုဗာဗုလုန်အမျိုးသားတို့ဝိုင်းရံ လျက်ထားသော်လည်း စစ်သည်တပ်သားအပေါင်း သည်ညဥ့်အခါတွင်ထွက်ပြေးရန်ကြိုးစားကြ ၏။ သူတို့သည်ဘုရင့်ဥယျာဉ်တော်အတိုင်း သွားပြီးလျှင် မြို့ရိုးနှစ်ထပ်အကြားရှိတံခါး ပေါက်မှထွက်၍ယော်ဒန်ချိုင့်ဝှမ်းဘက်သို့ပြေး ကြ၏။-
8 ೮ ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
၈သို့ရာတွင်ဗာဗုလုန်တပ်မတော်သားတို့ သည်ဇေဒကိမင်းကိုလိုက်လံဖမ်းဆီးကြ ရာ ယေရိခေါမြို့အနီးရှိလွင်ပြင်တွင်မိ လေသည်။ ဇေဒကိ၏စစ်သူရဲအပေါင်းတို့ သည်သူ့အားစွန့်ပစ်၍ထွက်ပြေးကြ၏။-
9 ೯ ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
၉ရန်သူတို့သည်ဇေဒကိကိုဖမ်းဆီးပြီးလျှင် နေဗုခဒ်နေဇာမင်းရှိရာဟာမတ်နယ်မြေ၊ ရိဗလမြို့သို့ခေါ်ဆောင်သွားကြ၏။ ထို အရပ်၌ပင်နေဗုခဒ်နေဇာသည်ဇေဒကိ အပေါ်တွင်စီရင်ချက်ချမှတ်တော်မူ၏။-
10 ೧೦ ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
၁၀ရိဗလမြို့တွင်ဗာဗုလုန်ဘုရင်သည်ဇေ ဒကိ၏သားတို့ကိုဖခင်၏မျက်မှောက်၌ ပင်လျှင်ကွပ်မျက်စေလေသည်။ ယုဒမှူးမတ် တို့ကိုလည်းကွပ်မျက်စေသေး၏။-
11 ೧೧ ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
၁၁ထိုနောက်ဇေဒကိ၏မျက်စိများကိုဖောက် စေ၍သူ့အားဗာဗုလုန်မြို့သို့ခေါ်ဆောင် သွားရန်သံကြိုးများနှင့်ချည်နှောင်စေ၏။ ဇေဒကိသည်သေသည်တိုင်အောင်ဗာဗုလုန် မြို့တွင်ထောင်ထဲ၌နေရလေ၏။
12 ೧೨ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
၁၂ဗာဗုလုန်ဘုရင်နေဗုခဒ်နေဇာနန်းစံတစ် ဆယ့်ကိုးနှစ်မြောက်၊ ပဉ္စမလဆယ်ရက်နေ့၌ မင်းကြီး၏အတိုင်ပင်ခံအမတ်နှင့်အစောင့် တပ်မတော်မှူးနေဗုဇရဒန်သည် ယေရုရှ လင်မြို့သို့ဝင်ရောက်လာ၏။-
13 ೧೩ ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
၁၃သူသည်ဗိမာန်တော်နှင့်နန်းတော်ကိုလည်း ကောင်း၊ ယေရုရှလင်မြို့ရှိအရေးပါအရာ ရောက်သူလူအပေါင်းတို့၏နေအိမ်များကို လည်းကောင်းမီးရှို့ပစ်လေသည်။-
14 ೧೪ ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
၁၄သူ၏တပ်သားများကလည်းမြို့ရိုးများကို ဖြိုချကြ၏။-
15 ೧೫ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
၁၅ထိုနောက်မင်းကြီး၏အစောင့်တပ်မတော်မှူး နေဗုဇာရဒန်သည်မြို့ထဲတွင်ကျန်ရှိနေ သေးသည့်သူများ၊ လက်မှုပညာသည်အကြွင်း အကျန်များနှင့် ဗာဗုလုန်မြို့သားတို့ဘက် သို့ကူးပြောင်းလာသူများအား ဗာဗုလုန် မြို့သို့ခေါ်ဆောင်သွားလေသည်။-
16 ೧೬ ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
၁၆သို့ရာတွင်အလွန့်အလွန်ဆင်းရဲသောသူ အချို့ကိုမူ ယုဒပြည်တွင်ချန်ထားခဲ့၍ စပျစ်ဥယျာဉ်များနှင့်လယ်ယာများတွင် အလုပ်လုပ်စေ၏။
17 ೧೭ ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
၁၇ဗာဗုလုန်အမျိုးသားတို့သည်ဗိမာန်တော် ထဲရှိကြေးဝါတိုင်ကြီးများ၊ ကြေးဝါအောက် ခံခုံများနှင့်ကြေးဝါရေကန်ကြီးကိုအစိတ် စိတ်အမြွှာမြွှာချိုးဖဲ့ပြီးလျှင် ကြေးဝါမှန် သမျှကိုဗာဗုလုန်ပြည်သို့ယူဆောင်သွား ကြ၏။-
18 ೧೮ ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
၁၈သူတို့သည်ယဇ်ပလ္လင်သန့်ရှင်းရေးအတွက် အသုံးပြုသည့်တူရွင်းပြားများ၊ ယဇ်ပလ္လင် ကိုသန့်ရှင်းမှုပြုရာ၌အသုံးပြုသည့် ပြာခွက်များ၊ မီးခွက်များတိုက်ချွတ်ပြင် ဆင်ရာတွင်အသုံးပြုသည့်တန်ဆာပလာ များ၊ ယဇ်ကောင်သွေးခံခွက်ဖလားများ၊ နံ့ သာပေါင်းကိုမီးရှို့ရာခွက်ဖလားများနှင့် ဗိမာန်တော်အတွင်း ကိုးကွယ်ဝတ်ပြုရာ တွင်အသုံးပြုသည့်အခြားကြေးဝါ ပစ္စည်းအသုံးအဆောင်များကိုလည်း ယူဆောင်သွားကြ၏။-
19 ೧೯ ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
၁၉မီးကျီးခဲများသယ်ယူရာတွင်အသုံးပြု သည့်ခွက်ငယ်များနှင့်အိုးကင်းများ၊ ယဇ် ကောင်သွေးခံခွက်ဖလားများ၊ ပြာခွက်များ၊ မီးတင်ခုံများ၊ နံ့သာပေါင်းကိုမီးရှို့ရာ ခွက်ဖလားများ၊ စပျစ်ရည်ပူဇော်သကာ သွန်းလောင်းရာတွင်အသုံးပြုသည့်ခွက် ဖလားအစရှိသည့်ရွှေသို့မဟုတ်ငွေဖြင့် ပြီးသည့်ပစ္စည်းမှန်သမျှကိုလည်း ယူဆောင် သွားလေသည်။-
20 ೨೦ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
၂၀ဗိမာန်တော်အတွက်ရှောလမုန်မင်းပြု လုပ်ခဲ့သောကြေးဝါပစ္စည်းများဖြစ်သည့် တိုင်ကြီးနှစ်လုံး၊ အောက်ခံခုံများ၊ ရေကန် ကြီးနှင့်အောက်ခံနွားရုပ်တစ်ဆယ့်နှစ်ခု တို့သည်ချိန်တွယ်၍မရအောင်ပင်လေးလံ ပေသည်။-
21 ೨೧ ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
၂၁တိုင်ကြီးနှစ်လုံးသည်ဆင်တူဖြစ်၍အမြင့် နှစ်ဆယ့်ခုနစ်ပေ၊ လုံးပတ်တစ်ဆယ့်ရှစ်ပေ ရှိ၏။ ထိုတိုင်တို့သည်ခေါင်းပွဖြစ်၍ဒုသုံး လက်မရှိလေသည်။ ကြေးဝါတိုင်ထိပ်ပိုင်း များသည်အမြင့်ပေခုနစ်ပေခွဲစီရှိ၍ ယင်း တို့၏ပတ်လည်တွင်သလဲသီးများနှင့်တန် ဆာဆင်ထားသောကွန်ရွက်များရှိ၏။ ယင်း တို့အားလုံးကိုကြေးဝါများနှင့်ပြုလုပ် ထား၏။-
22 ೨೨ ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
၂၂
23 ೨೩ ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
၂၃တိုင်တစ်တိုင်ရှိကွန်ရွက်များတွင်သလဲသီး အလုံးတစ်ရာရှိ၍ကိုးဆယ့်ခြောက်လုံး ကိုမြေပြင်မှတွေ့မြင်နိုင်လေသည်။
24 ೨೪ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
၂၄ထိုမှတစ်ပါးလည်းမင်းကြီး၏အစောင့်တပ် မတော်မှူးနေဗုဇာရဒန်သည် ယဇ်ပုရောဟိတ် မင်းစရာယ၊ သူ၏လက်ထောက်ဇေဖနိနှင့် အခြားအရေးကြီးသည့် ဗိမာန်တော်အရာ ရှိသုံးဦးတို့ကိုခေါ်ဆောင်၍သွား၏။-
25 ೨೫ ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
၂၅သူသည်ယုဒတပ်မှူးဟောင်းတစ်ဦး၊ မြို့တွင်း ၌ကျန်ရှိနေသေးသောဘုရင်အတိုင်ပင်ခံ အမတ်ခုနစ်ဦး၊ တပ်မတော်မှတ်တမ်းထိန်း သည့်လက်ထောက်တပ်မှူးနှင့်အခြားအရေး ပါအရာရောက်သူလူခြောက်ဆယ်တို့ကို လည်းယေရုရှလင်မြို့မှခေါ်ဆောင်သွား လေသည်။-
26 ೨೬ ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
၂၆နေဗုဇရဒန်သည်ထိုသူတို့ကိုဗာဗုလုန် ဘုရင်ရှိရာရိဗလမြို့သို့ခေါ်ဆောင်သွားရာ၊-
27 ೨೭ ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
၂၇မင်းကြီးသည်ဟာမတ်နယ်မြေရိဗလမြို့ ၌ သူတို့အားရိုက်နှက်၍ကွပ်မျက်စေတော် မူ၏။ ဤသို့လျှင်ယုဒပြည်သားတို့သည်သုံ့ပန်း များအဖြစ်နှင့် မိမိတို့ပြည်မှသိမ်းသွား ခြင်းကိုခံရကြလေသည်။-
28 ೨೮ ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
၂၈နေဗုခဒ်နေဇာဖမ်းသွားသည့်သုံ့ပန်းစာရင်း မှာ သူ၏နန်းစံသတ္တမနှစ်၌သုံးထောင်နှစ် ဆယ့်သုံးယောက်၊-
29 ೨೯ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
၂၉နန်းစံရှစ်နှစ်မြောက်၌ယေရုရှလင်မြို့မှ ရှစ်ရာသုံးဆယ့်နှစ်ယောက်၊-
30 ೩೦ ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
၃၀နန်းစံနှစ်ဆယ့်သုံးနှစ်မြောက်၌နေဗုဇာရဒန် ခေါ်ဆောင်သွားသူခုနစ်ရာလေးဆယ့်ငါးယောက်၊ စုစုပေါင်းလေးထောင့်ခြောက်ရာဖြစ်သတည်း။
31 ೩೧ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
၃၁ဗာဗုလုန်ဘုရင်ဧဝိလမရောဒက်သည် မိမိ နန်းတက်တော်မူသောနှစ်၌ယုဒဘုရင် ယေခေါနိအား အကျဉ်းထောင်မှလွတ်၍ ကရုဏာပြတော်မူ၏။ ဤသို့ဖြစ်ပျက်သည် မှာယေခေါနိအကျဉ်းကျပြီးနောက် သုံး ဆယ့်ခုနစ်နှစ်မြောက်ဒွါဒသမလ၊ နှစ် ဆယ့်ငါးရက်နေ့ဖြစ်သတည်း။-
32 ೩೨ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
၃၂ဧဝိလမရောဒက်သည်ယေခေါနိအား ကြင်နာစွာဆက်ဆံ၍ ဗာဗုလုန်ပြည်တွင် သူနှင့်အတူပြည်နှင်ဒဏ်သင့်သူအခြား ဘုရင်များထက်ပိုမိုချီးမြှင့်မြှောက်စား တော်မူ၏။-
33 ೩೩ ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
၃၃သို့ဖြစ်၍ယေခေါနိသည်ထောင်အဝတ်များ ကိုလဲခွင့်ရလျက် အသက်ရှင်သမျှကာလ ပတ်လုံးမင်းကြီးနှင့်အတူပွဲတော်တည် ခွင့်ကိုရရှိ၏။-
34 ೩೪ ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.
၃၄ထို့ပြင်မိမိလိုအပ်သလိုသုံးစွဲနိုင်ရန်သူ အသက်ရှင်သမျှကာလပတ်လုံး နေ့စဉ်မှန် မှန်အသုံးစရိတ်ကိုလည်းရရှိလေသည်။ ပရောဖက်ယေရမိစီရင်ရေးထားသော အနာဂတ္တိကျမ်းပြီး၏။