< ಯೋವೇಲನು 1 >

1 ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
यहोवा का वचन जो पतूएल के पुत्र योएल के पास पहुँचा, वह यह है:
2 ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?
हे पुरनियों, सुनो, हे देश के सब रहनेवालों, कान लगाकर सुनो! क्या ऐसी बात तुम्हारे दिनों में, या तुम्हारे पुरखाओं के दिनों में कभी हुई है?
3 ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.
अपने बच्चों से इसका वर्णन करो और वे अपने बच्चों से, और फिर उनके बच्चे आनेवाली पीढ़ी के लोगों से।
4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
जो कुछ गाजाम नामक टिड्डी से बचा; उसे अर्बे नामक टिड्डी ने खा लिया। और जो कुछ अर्बे नामक टिड्डी से बचा, उसे येलेक नामक टिड्डी ने खा लिया, और जो कुछ येलेक नामक टिड्डी से बचा, उसे हासील नामक टिड्डी ने खा लिया है।
5 ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
हे मतवालों, जाग उठो, और रोओ; और हे सब दाखमधु पीनेवालों, नये दाखमधु के कारण हाय, हाय, करो; क्योंकि वह तुम को अब न मिलेगा।
6 ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.
देखो, मेरे देश पर एक जाति ने चढ़ाई की है, वह सामर्थी है, और उसके लोग अनगिनत हैं; उसके दाँत सिंह के से, और डाढ़ें सिंहनी की सी हैं।
7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
उसने मेरी दाखलता को उजाड़ दिया, और मेरे अंजीर के वृक्ष को तोड़ डाला है; उसने उसकी सब छाल छीलकर उसे गिरा दिया है, और उसकी डालियाँ छिलने से सफेद हो गई हैं।
8 ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
जैसे युवती अपने पति के लिये कमर में टाट बाँधे हुए विलाप करती है, वैसे ही तुम भी विलाप करो।
9 ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
यहोवा के भवन में न तो अन्नबलि और न अर्घ आता है। उसके टहलुए जो याजक हैं, वे विलाप कर रहे हैं।
10 ೧೦ ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
१०खेती मारी गई, भूमि विलाप करती है; क्योंकि अन्न नाश हो गया, नया दाखमधु सूख गया, तेल भी सूख गया है।
11 ೧೧ ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.
११हे किसानों, लज्जित हो, हे दाख की बारी के मालियों, गेहूँ और जौ के लिये हाय, हाय करो; क्योंकि खेती मारी गई है
12 ೧೨ ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
१२दाखलता सूख गई, और अंजीर का वृक्ष कुम्हला गया है अनार, खजूर, सेब, वरन्, मैदान के सब वृक्ष सूख गए हैं; और मनुष्य का हर्ष जाता रहा है।
13 ೧೩ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
१३हे याजकों, कमर में टाट बाँधकर छाती पीट-पीट के रोओ! हे वेदी के टहलुओ, हाय, हाय, करो। हे मेरे परमेश्वर के टहलुओ, आओ, टाट ओढ़े हुए रात बिताओ! क्योंकि तुम्हारे परमेश्वर के भवन में अन्नबलि और अर्घ अब नहीं आते।
14 ೧೪ ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.
१४उपवास का दिन ठहराओ, महासभा का प्रचार करो। पुरनियों को, वरन् देश के सब रहनेवालों को भी अपने परमेश्वर यहोवा के भवन में इकट्ठा करके उसकी दुहाई दो।
15 ೧೫ ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.
१५उस दिन के कारण हाय! क्योंकि यहोवा का दिन निकट है। वह सर्वशक्तिमान की ओर से सत्यानाश का दिन होकर आएगा।
16 ೧೬ ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!
१६क्या भोजनवस्तुएँ हमारे देखते नाश नहीं हुईं? क्या हमारे परमेश्वर के भवन का आनन्द और मगन जाता नहीं रहा?
17 ೧೭ ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.
१७बीज ढेलों के नीचे झुलस गए, भण्डार सूने पड़े हैं; खत्ते गिर पड़े हैं, क्योंकि खेती मारी गई।
18 ೧೮ ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
१८पशु कैसे कराहते हैं? झुण्ड के झुण्ड गाय-बैल विकल हैं, क्योंकि उनके लिये चराई नहीं रही; और झुण्ड के झुण्ड भेड़-बकरियाँ पाप का फल भोग रही हैं।
19 ೧೯ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.
१९हे यहोवा, मैं तेरी दुहाई देता हूँ, क्योंकि जंगल की चराइयाँ आग का कौर हो गईं, और मैदान के सब वृक्ष ज्वाला से जल गए।
20 ೨೦ ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.
२०वन-पशु भी तेरे लिये हाँफते हैं, क्योंकि जल के सोते सूख गए, और जंगल की चराइयाँ आग का कौर हो गईं।

< ಯೋವೇಲನು 1 >