< ಯೋವೇಲನು 1 >

1 ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
पथूएलाचा मुलगा योएल, ह्याच्याकडे परमेश्वराचे वचन आले ते हे.
2 ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?
अहो वडिलांनो, हे ऐका, आणि देशात राहणाऱ्या तुम्ही सर्वांनी कान द्या. तुमच्या पूर्वजांच्या दिवसात किंवा तुमच्या दिवसात पूर्वी कधी असे हे घडले काय?
3 ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.
ह्याविषयी आपल्या मुलाबाळांना सांगा, आणि तुमच्या मुलांनी आपल्या मुलाबाळांना सांगावे, व त्यांच्या मुलांनी आपल्या पुढच्या पिढीस सांगावे.
4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
कुरतडणाऱ्या टोळापासून जे राहिले ते झुंडीने येणाऱ्या टोळांनी खाल्ले; झुंडीने येणाऱ्या टोळापासून जे राहिले ते चाटून खाणाऱ्या टोळांनी खाल्ले; आणि चाटून खाणाऱ्या टोळापासून, जे राहिले ते अधाशी टोळांनी खाल्ले.
5 ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
दारू पिणाऱ्यांनो, तुम्ही जागे व्हा व रडा! तुम्ही सर्व दारू पिणाऱ्यांनो, आक्रोश करा, कारण गोड दारू तुमच्यापासून काढून घेतली आहे.
6 ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.
कारण एक राष्ट्र माझ्या देशावर आले आहे, ते बळकट व अगणित आहेत. त्यांचे दात सिंहाचे आहेत, आणि त्यांना सिंहिणीचे दात आहेत.
7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
त्यांनी माझा द्राक्षमळा घाबरून सोडवण्याची जागा केली आहे आणि माझ्या अंजिराचे झाड सोलून उघडे केले आहे. त्यांने साल सोलून दूर फेकली आहे. फांद्या उघड्या करून पांढऱ्या केल्या आहेत.
8 ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
जशी कुमारी गोणताट नेसून आपल्या तरुणपणाच्या पतीकरता शोक करते, तसा शोक करा.
9 ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
परमेश्वराच्या मंदिरातून अन्नार्पणे व पेयार्पणे नाहीसे झाले आहेत. परमेश्वराची सेवा करणारे याजक शोक करत आहेत.
10 ೧೦ ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
१०शेतांचा नाश झाला आहे. आणि भूमी रडते. कारण धान्याचा नाश झाला आहे, नवा द्राक्षरस सुकून गेला आहे आणि तेल नासले आहे.
11 ೧೧ ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.
११तुम्ही शेतकऱ्यांनो, गहू व जवाबद्दल लज्जित व्हा, आणि द्राक्षमळेवाल्यांनो, गहू व जवसासाठी आक्रोश करा, कारण शेतातील पीक नष्ट झाले आहे.
12 ೧೨ ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
१२द्राक्षवेली शुष्क झाल्या आहेत, आणि अंजिराचे झाड सुकून गेले आहे, डाळिंबाचे झाड, खजुराचे झाड आणि सफरचंदाचे झाड अशी शेतातील सर्व झाडेसुद्धा शुष्क झाली आहेत. मानवजातीच्या वंशातून आनंद नष्ट झाला आहे.
13 ೧೩ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
१३याजकांनो, गोणताट घाला आणि शोक करा! वेदीची सेवा करणाऱ्यांनो, आक्रोश करा. माझ्या परमेश्वराच्या सेवकांनो, या, तुम्ही पूर्ण रात्र गोणताट घालून राहा. कारण तुमच्या देवाच्या मंदिरात यापुढे अन्नार्पणे व पेयार्पणे अडकवून ठेवलेली आहेत.
14 ೧೪ ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.
१४पवित्र उपास नेमा, आणि पवित्र सभेसाठी लोकांस एकत्र बोलवा. तुमचा देव परमेश्वर याच्या मंदिरात वडिलांस व देशात राहणाऱ्या लोकांस एकत्र गोळा करा. आणि परमेश्वरास आरोळी मारा.
15 ೧೫ ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.
१५त्या भयानक दिवसाकरता हायहाय! कारण परमेश्वराचा दिवस जवळ आला आहे. सर्वसमर्थ देवापासून जसा नाश तसा तो येईल.
16 ೧೬ ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!
१६आमच्या डोळ्यादेखत आमचे अन्न काढून घेतले, आणि देवाच्या मंदिरातील आनंद व उल्लास नष्ट झाले नाहीत काय?
17 ೧೭ ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.
१७बियाणे त्यांच्या ढेकळाखाली कुजून गेले आहे, धान्याची कोठारे ओसाड झाली आहेत, कोठ्या खाली पाडल्या गेल्या आहेत, कारण धान्य सुकून गेले आहे.
18 ೧೮ ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
१८प्राणी कसे कण्हत आहेत! गुरांचे कळप घाबरले आहेत. त्यांना खाण्यास कुरणे नाहीत. मेंढ्यांचे कळपसुद्धा पीडले आहेत.
19 ೧೯ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.
१९हे परमेश्वरा, मी तुझा धावा करतो. कारण आग्नीने रानातील कुरणे खाऊन टाकली आहेत. आणि शेतातील सर्व झाडे ज्वालांनी भस्म केली आहेत.
20 ೨೦ ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.
२०रानातील वनपशूंनासुध्दा तुझी उत्कंठा लागली आहे, कारण पाण्याचे ओहोळ कोरडे झाले आहेत आणि आग्नीने रानातील कुरणे खाऊन टाकली आहेत.

< ಯೋವೇಲನು 1 >