< ಯೋವೇಲನು 1 >

1 ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
पतुएलका छोरा योएलकहाँ आएको परमप्रभु वचन यही हो ।
2 ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?
ए धर्मगुरुहरू हो, यो कुरा सुन, र ए देशका सबै बासिन्दाहरू हो ध्यानसँग सुन । तिमीहरूका दिनमा वा तिमीहरूका पुर्खाहरूका दिनमा कहिल्यै यस्तो भएको छ?
3 ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.
यसको विषयमा आफ्ना छोराछोरीलाई भन, र तिमीहरूका छोराछोरीले आफ्‍ना छोराछोरीलाई भनून्, र तिनीहरूका छोराछोरीले अर्को पुस्तालाई भनून् ।
4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
बथानमा हिंड्ने सलहहरूले जे बाँकी छोडेका छन्, ती ठुला सलहले खाएका छन्, ठुला सलहले जे बाँकी छोडेका छन् ती फट्‍याङ्‍ग्राले खाएका छन्, र फट्‍याङ्‍ग्राले जे बाँकी छोडेका छन् ती झुसिल्‍किराले खाएका छन् ।
5 ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
ए मद्यले मातेकाहरू हो, उठ र रोओ! ए दाखमद्य पिउनेहरू, सबै विलाप गर, किनभने मिठो दाखमद्यलाई तिमीहरूबाट खोसिएको छ ।
6 ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.
किनकि मेरो देशमा एउटा जाति आएको छ, बलियो र अनगिन्ती छ । त्यसका दाँत सिंहका दाँतझैं छन्, र त्यसका दाह्रा सिंहनीका झैं छन् ।
7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
त्यसले मेरो दाखबारीलाई उजाड ठाउँ बनाएको छ र मेरो नेभाराका बोटलाई लाछेर नाङ्गो पारेको छ । त्यसका बोक्राहरू त्यसले ताछेको छ र टाढा फालेको छ, र हाँगाहरू केवल सेता मात्र छन् ।
8 ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
आफ्नो भर्खरको पतिको मृत्यु भएर भाङ्‍ग्रा लगाएकी कन्या केटीले झैं विलाप गर ।
9 ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
परमप्रभुको मन्‍दिरबाट अन्‍नबलि र अर्घबलि हटाइएका छन् । परमप्रभुको सेवा गर्ने पुजारीहरू विलाप गर्छन् ।
10 ೧೦ ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
खेतहरू सखाप पारिएका छन्, र अन्‍नहरू नष्‍ट पारिएका हुनाले भूमिले विलाप गर्दैछ । नयाँ दाखमद्य सुकेको छ, तेल बाँकी छैन ।
11 ೧೧ ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.
ए किसानहरू हो, लज्‍जित होओ, र दाखबारी लगाउनेहरू हो, विलाप गर । किनभने भूमिको उब्जनी नष्‍ट भएको छ । गहुँ र जौका बढिरहेका छैनन् ।
12 ೧೨ ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
दाखका बोटहरू ओइलाएका छन् र नेभाराका बोटहरू सुकेका छन्, र अनार बोटहरू, खजूर बोटहरू र स्याउको बोटहरू, खेतबारीका सबै बोटहरू ओइलाएका छन् । किनभने मानवजातिका सन्तानबाट आनन्द विलाएर गएको छ ।
13 ೧೩ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
ए पुजारीहरू हो, भाङ्‍ग्रा लगाओ र विलाप गर! वेदीमा सेवा गर्नेहरू हो, विलाप गर । ए मेरा परमेश्‍वरका सेवा गर्नेहरू हो, आओ, र रातभर भाङ्‍ग्रा लगाएर बस । किनभने तिमीहरूका परमेश्‍वरको मन्‍दिरबाट अन्‍नबलि र अर्घबलि हटाइएका छन् ।
14 ೧೪ ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.
पवित्र उपवासको घोषणा गर, र पवित्र सभा आव्‍हान गर । परमप्रभु आफ्‍ना परमेश्‍वरको मन्‍दिरमा देशका सबै धर्मगुरुहरू र बासिन्दाहरूलाई भेला गराओ र, अनि परमप्रभुमा पुकार ।
15 ೧೫ ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.
हाय! त्यो दिन, किनकि परमप्रभुको दिन नजिकै छ । त्योसँगै सर्वशक्तिमान्‌बाट विनाश आउनेछ ।
16 ೧೬ ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!
के हाम्रै आँखाका सामु खानेकुरा, अनि हाम्रा परमेश्‍वरको मन्‍दिरबाट आनन्द र रमाहट रोकिएको छैन र?
17 ೧೭ ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.
माटोका डल्‍लामुनि बीउहरू सडे, भण्‍डारहरू उजाड भए, र अन्‍नका भकारीहरू भत्‍काइए, किनकि अन्‍न सुकेको छ ।
18 ೧೮ ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
पशुहरू कसरी विलाप् गर्छन्! पाल्‍तु पशुका बथानहरूले कष्‍ट भोग्‍दैछन्, किनकि तिनीहरूका निम्ति खर्क छैन । साथै, भेडाका बगालहरू पनि कष्‍ट भोग्‍दैछन् ।
19 ೧೯ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.
हे परमप्रभु, म तपाईंमा पुकारा गर्दछु । किनकि उजाड-स्‍थानका खर्कहरूलाई आगोले भस्म पारेका छ, र खेतका सबै रूखहरूलाई आगोले जलाएको छ ।
20 ೨೦ ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.
जमिनका पशुहरू पनि तपाईंका निम्ति तड्‍पिन्‍छन्, किनकि पानीका खोलाहरू सुकेका छन्, र उजाड-स्‍थानका खर्कहरूलाई आगोले भस्‍म पारेको छ ।

< ಯೋವೇಲನು 1 >