< ಯೆಹೋಶುವನು 17 >
1 ೧ ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.
१मनश्शेच्या वंशजाला हे वतन नेमून दिलेले होते. कारण मनश्शे योसेफाचा प्रथम पुत्र, याच्या वंशाचा भाग चिठ्ठ्या टाकून ठरवला तो हा, म्हणजे मनश्शेचा प्रथम पुत्र माखीर, गिलादाचा बाप हा तर मोठा शूर होता, आणि त्यास गिलाद व बाशान हा भाग मिळाला होता.
2 ೨ ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.
२मनश्शेच्या राहिलेल्या वंशजांनाही त्यांच्या कुळांप्रमाणे विभाग मिळाले ते असे, अबीयेजेर व हेलेक व अस्रियेल व शेखेम व हेफेर व शमीदा हे आपआपल्या कुळांप्रमाणे योसेफ पुत्र जो मनश्शे त्याच्या वंशातले पुरुष होते, त्यांच्या निरनिराळ्या कुळांसाठी हे विभाग ठरले;
3 ೩ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.
३मनश्शेचा पुत्र माखीर, याचा पुत्र गिलाद, याचा पुत्र हेफेर, याचा पुत्र सलाफहाद, याला मुलगा नव्हता, परंतु मुली होत्या; आणि त्याच्या मुलींची नावे ही आहेत: महला व नोआ, होग्ला, मिल्का व तिरसा.
4 ೪ ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
४आणि एलाजार याजक व नूनाचा पुत्र यहोशवा व अधिकारी यांच्यापुढे त्या येऊन त्या म्हणाल्या, “परमेश्वराने मोशेला अशी आज्ञा दिली की आम्हांला आमच्या भाऊबंदांमध्ये वतन द्यावे.” यास्तव त्याने परमेश्वराच्या सांगण्याप्रमाणे त्यांना त्यांच्या वडिलाच्या भाऊबंदांमध्ये वतन दिले.
5 ೫ ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
५आणि यार्देनेच्या पश्चिमेकडे गिलाद व बाशान या प्रांतांखेरीज मनश्शेला दहा भाग मिळाले.
6 ೬ ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
६कारण की मनश्शेच्या मुलींना त्याच्या मुलांमध्ये वतन मिळाले, आणि मनश्शेच्या इतर वंशजांना गिलाद प्रांत मिळाला.
7 ೭ ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.
७आणि मनश्शेची सीमा आशेरापासून शखेमाच्या समोरल्या मिखमथाथा नगरापर्यंत झाली, आणि ती सीमा एन-तप्पूहाच्या लोकवस्तीच्या उजव्या भागापर्यंत पोहचते.
8 ೮ ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;
८तप्पूहा प्रांत मनश्शेचा होता, परंतु मनश्शेच्या सीमेजवळचे तप्पूहा नगर एफ्राइमाच्या वंशाचे होते.
9 ೯ ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.
९आणि सीमा काना ओढ्यावरून, ओढ्याच्या दक्षिणेस गेली; ही नगरे एफ्राइमाची होती, ती मनश्शेच्या नगरांमध्ये होती; आणि मनश्शेची सीमा ओढ्याच्या उत्तरेस होती, आणि तिचा शेवट भूमध्य समुद्राजवळ होता.
10 ೧೦ ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.
१०दक्षिणभाग एफ्राइमाचा, आणि उत्तरभाग मनश्शेचा, आणि समुद्र त्याची सीमा होता, आणि उत्तरेस आशेरात व पूर्वेस इस्साखारात ते एकत्र झाले.
11 ೧೧ ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.
११आणि इस्साखारात व आशेरात बेथ-शान व त्याची खेडी, आणि इब्लाम व त्याची खेडी, आणि दोर व त्याची खेडी यामध्ये राहणारे, आणि एन-दोर व त्यांची खेडी यामध्ये राहणारे, आणि तानख व त्यांची खेडी यांत राहणारे, आणि मगिद्दो व त्यांची खेडी यांत राहणारे, हे तीन परगणे मनश्शेचे झाले.
12 ೧೨ ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.
१२पण या नगरातील रहिवाश्यांना मनश्शेचे वंशज बाहेर घालवायला समर्थ नव्हते; या देशातच राहण्याचा कनान्यांनी तर हट्ट धरला.
13 ೧೩ ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.
१३तरी असे झाले की जेव्हा इस्राएल लोक बळकट झाले, तेव्हा त्यांनी कनान्यांना नेमलेले काम करायला लावले आणि त्यांना अगदीच घालवून दिले नाही.
14 ೧೪ ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು
१४तेव्हा योसेफाचे वंशज यहोशवाला म्हणाले की, “परमेश्वराने मला येथपर्यंत आशीर्वाद दिला आहे आम्ही संख्येने बहुत झालो आहो तर तू चिठ्ठी टाकून आम्हांला वतनाचा एकच विभाग का दिला आहेस?”
15 ೧೫ ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.
१५तेव्हा यहोशवाने त्यांना म्हटले, “जर तुम्ही संख्येने बहुत आहात व लोक आणखी एफ्राइम डोंगराळ प्रदेश तुम्हाला पुरत नाहीतर परिज्जी व रेफाई यांच्या देशांतले रान तोडून तेथे वस्ती करा.”
16 ೧೬ ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು
१६नंतर योसेफाच्या वंशजांनी म्हटले, “डोंगराळ प्रदेश आम्हांला पुरत नाही; आणि जे कनानी तळप्रांतात राहतात, त्या सर्वांना लोखंडी रथ आहेत; म्हणजे बेथ-शान व तिजकडली खेडी यांतले, आणि इज्रेल खोरे जे, त्यामध्ये आहेत.”
17 ೧೭ ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.
१७तेव्हा यहोशवाने योसेफाच्या घराण्यास, म्हणजे एफ्राइम व मनश्शे यांना असे म्हटले की, “तुम्ही संख्येने फार आहात, व तुमचे सामर्थ्यही मोठे आहे; तुम्हाला एकच वाटा नसावा;
18 ೧೮ ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.
१८तेव्हा डोंगराळ प्रदेशही तुझा होईल; तो अरण्य आहे तरी तू ते तोडशील; बाहेरील भागही तुझे होतील, कारण कनान्यांना जरी लोखंडी रथ आहेत आणि ते बळकट आहेत तरी तू त्यांना घालवशील.”