< ಯೆಹೋಶುವನು 24 >

1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.
యెహోషువ ఇశ్రాయేలీయుల గోత్రాలన్నిటినీ షెకెంలో పోగుచేసి, వారి పెద్దలనూ అధికారులనూ న్యాయాధిపతులనూ నాయకులనూ పిలిపించినపుడు వారు దేవుని సన్నిధిలో హాజరయ్యారు.
2 ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
యెహోషువ ప్రజలందరితో ఇలా అన్నాడు “ఇశ్రాయేలీయుల దేవుడు యెహోవా ఇలా చెబుతున్నాడు, మునుపు మీ పూర్వీకులు, అబ్రాహాము నాహోరుల తండ్రి తెరహు, యూఫ్రటీసు నది అవతల నివసించి, ఇతర దేవుళ్ళను పూజించేవారు.
3 ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.
అయితే నేను నది అవతల నుండి మీ పూర్వీకుడు అబ్రాహామును కనాను దేశానికి తీసుకొచ్చి, ఇస్సాకు ద్వారా అతని సంతానాన్ని విస్తరింపజేశాను.
4 ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.
ఇస్సాకుకు నేను యాకోబునూ ఏశావునూ ఇచ్చాను. శేయీరు కొండప్రాంతాలను స్వాధీనపరచుకొనేలా ఏశావుకిచ్చాను. అయితే యాకోబు అతని కుమారులు దిగువనున్న ఐగుప్తుకు వెళ్ళారు.
5 ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.
తరువాత నేను మోషే అహరోనులను పంపి, ఐగుప్తీయులను తెగుళ్ళతో బాధపెట్టి మిమ్మల్ని వెలుపలికి రప్పించాను.
6 ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.
నేను ఐగుప్తులోనుండి మీ పూర్వీకులను రప్పించినప్పుడు మీరు సముద్రం దగ్గరికి వచ్చారు. ఐగుప్తీయులు రథాలతో రౌతులతో వారిని ఎర్రసముద్రం వరకూ తరిమారు.
7 ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.
మీ పూర్వీకులు యెహోవాకు మొర్రపెడితే ఆయన మీకూ ఐగుప్తీయులకూ మధ్య చీకటి కలిగించాడు. సముద్రం వారి మీద పడి వారిని ముంచి వేసేలా చేశాడు. ఐగుప్తు దేశంలో నేను చేసిన దాన్ని మీరు కళ్ళారా చూశారు. తరువాత మీరు చాలా కాలం ఎడారిలో నివసించారు.
8 ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.
యొర్దాను అవతల ఉండే అమోరీయుల దేశానికి నేను మిమ్మల్ని తీసుకువచ్చాను. వారు మీతో యుద్ధం చేశారు గానీ నేను వారిని మీ చేతికి అప్పగించాను. మీరు వారి దేశాన్ని స్వాధీనపరచుకున్నారు. వారిని మీ ముందే నాశనం చేశాను.
9 ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
తరువాత సిప్పోరు కొడుకూ మోయాబు రాజు బాలాకూ బయలుదేరి ఇశ్రాయేలీయులతో యుద్ధం చేశాడు. మిమ్మల్ని శపించడానికి బెయోరు కుమారుడు బిలామును పిలిపిస్తే
10 ೧೦ ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.
౧౦నేను బిలాము మాట వినలేదు. అయితే అతడు మిమ్మల్ని దీవించాడు. అతని చేతినుండి నేనే మిమ్మల్ని విడిపించాను.
11 ೧೧ ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.
౧౧మీరు యొర్దాను దాటి యెరికో దగ్గరికి వచ్చారు. అమోరీయులూ పెరిజ్జీయులూ కనానీయులూ హీత్తీయులూ గిర్గాషీయులూ హివ్వీయులూ యెబూసీయులతో కలిసి యెరికో అధికారులు మీతో యుద్ధం చేస్తే నేను వారిని మీ చేతికప్పగించాను.
12 ೧೨ ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.
౧౨నేను మీకు ముందుగా కందిరీగలను పంపాను. నీ కత్తి వల్ల నీ విల్లు వల్ల కాదు గాని అవే అమోరీయుల రాజుల నిద్దరిని తోలివేశాయి.
13 ೧೩ ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”
౧౩మీరు సేద్యం చేయని దేశాన్నీ మీరు కట్టని పట్టణాలనూ మీకిచ్చాను. మీరు వాటిలో నివసిస్తున్నారు. మీరు నాటని ద్రాక్షతోటల పండ్లనూ ఒలీవ తోటల పండ్లనూ తింటున్నారు.
14 ೧೪ ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.
౧౪కాబట్టి మీరు యెహోవా పట్ల భయభక్తులు కలిగి, ఆయన్ని నిష్కపటంగా నమ్మకంగా సేవించండి. యూఫ్రటీసు నది అవతల ఐగుప్తులో మీ పూర్వీకులు పూజించిన దేవుళ్ళను విడిచిపెట్టి యెహోవానే సేవించండి.
15 ೧೫ ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
౧౫యెహోవాను సేవించడం మీ దృష్టికి చెడుగా ఉంటే మీరు ఎవర్ని సేవిస్తారో, నది అవతల మీ పూర్వీకులు సేవించిన దేవుళ్ళను సేవిస్తారో, మీరు నివసిస్తున్నఅమోరీయుల ఈ దేశంలోని దేవుళ్ళను సేవిస్తారో ఈ రోజే కోరుకోండి. నేనూ నా ఇంటివాళ్ళూ యెహోవానే సేవిస్తాం” అన్నాడు.
16 ೧೬ ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.
౧౬అందుకు ప్రజలు ఇలా జవాబిచ్చారు. “యెహోవాను విసర్జించి ఇతర దేవుళ్ళను ఎన్నడూ సేవించం.
17 ೧೭ ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
౧౭ఐగుప్తుదేశం నుండి, బానిసత్వపు ఇంట్లో నుండి మమ్మల్ని, మా పూర్వీకులను రప్పించి, మా కళ్ళముందు ఆ గొప్ప సూచక క్రియలను చేసి, మేము చేసిన ప్రయాణమంతా, మేము వచ్చిన ప్రాంతాల ప్రజలందరి మధ్య మమ్మల్ని కాపాడిన యెహోవాయే మా దేవుడు.
18 ೧೮ ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
౧౮యెహోవా యీ దేశంలో నివసించిన అమోరీయులూ మిగతా ప్రజలందరినీ మా దగ్గరనుండి వెళ్ళగొట్టాడు. ఆయనే మా దేవుడు కాబట్టి మేము కూడా యెహోవానే సేవిస్తాం.”
19 ೧೯ ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
౧౯అయితే యెహోషువ ప్రజలతో ఇలా చెప్పాడు. “యెహోవా పరిశుద్ధ దేవుడు, రోషం గల దేవుడు, ఆయన మీ అపరాధాలనూ మీ పాపాలనూ క్షమించడు. మీరాయన్ని సేవించలేరు.
20 ೨೦ ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.
౨౦మీరు యెహోవాను విసర్జించి అన్యదేవుళ్ళను సేవిస్తే ఆయన తన మనస్సు తిప్పుకుని మిమ్మల్ని శిక్షిస్తాడు. ఆయన మీకు మేలు చేసిన తరువాత మిమ్మల్ని నాశనం చేస్తాడు.”
21 ೨೧ ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
౨౧అప్పుడు ప్రజలు “అలా కాదు, మేము యెహోవానే సేవిస్తాం” అని యెహోషువతో అన్నారు.
22 ೨೨ ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು
౨౨అప్పుడు యెహోషువ “మీరు యెహోవానే సేవిస్తామని ఆయన్ని కోరుకున్నందుకు మీ గురించి మీరే సాక్షులు” అన్నాడు. వారు “మేమే సాక్షులం” అన్నారు.
23 ೨೩ ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
౨౩అందుకతడు “అలాగైతే మీ మధ్య ఉన్న అన్యదేవుళ్ళను పారవేయండి. ఇశ్రాయేలీయుల దేవుడైన యెహోవా వైపు మీ హృదయాలను తిప్పుకోండి” అన్నాడు.
24 ೨೪ ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
౨౪ప్రజలు “మన దేవుడైన యెహోవానే సేవిస్తాం, ఆయన మాటే వింటాం” అని యెహోషువతో చెప్పారు.
25 ೨೫ ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
౨౫యెహోషువ ఆ రోజు ప్రజలతో నిబంధన చేసి వారికి షెకెంలో కట్టడలనూ విధులనూ నియమించాడు.
26 ೨೬ ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
౨౬దేవుని ధర్మశాస్త్రగ్రంథంలో ఈ మాటలు రాయించి పెద్ద రాతిని తెప్పించి యెహోషువ పరిశుద్ధస్థలం లో ఉన్న సింధూర వృక్షం కింద దాన్ని నిలబెట్టాడు.
27 ೨೭ ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ
౨౭యెహోషువ ప్రజలందరితో “గమనించండి, యెహోషువ మనతో చెప్పిన మాటలన్నీ ఈ రాయి విన్నది. కాబట్టి అది మనమీద సాక్షిగా ఉంటుంది. మీరు మీ దేవుని విసర్జిస్తే అది మీ మీద సాక్షిగా ఉంటుంది” అన్నాడు.
28 ೨೮ ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.
౨౮అప్పుడు యెహోషువ ప్రజలను ఎవరి స్వాస్థ్యానికి వారిని పంపివేశాడు.
29 ೨೯ ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.
౨౯ఈ సంగతులు జరిగిన తరువాత నూను కుమారుడు, యెహోవా సేవకుడు అయిన యెహోషువ 110 సంవత్సరాల వయసులో చనిపోయాడు.
30 ೩೦ ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
౩౦అతడు స్వాస్థ్యంగా పొందిన ప్రాంతపు భూమి, తిమ్నత్సెరహులో వారతన్ని పాతిపెట్టారు. అది ఎఫ్రాయిమీయుల కొండప్రాంతంలోని గాయషు కొండకు ఉత్తరంగా ఉంది.
31 ೩೧ ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.
౩౧యెహోషువ బతికిన కాలమంతా, యెహోషువ తరువాత యింకా బతికి యెహోవా ఇశ్రాయేలీయుల కోసం చేసిన పనులన్నీ ఎరిగిన పెద్దల కాలమంతా ఇశ్రాయేలీయులు యెహోవాను సేవిస్తూ వచ్చారు.
32 ೩೨ ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.
౩౨ఇశ్రాయేలీయులు ఐగుప్తులోనుండి తెచ్చిన యోసేపు ఎముకలను షెకెంలో, అంటే యాకోబు వంద వెండి నాణేలిచ్చి షెకెం తండ్రి హమోరు కుమారుల దగ్గర కొన్న భూభాగంలో పాతిపెట్టారు. అది యోసేపు సంతానానికి స్వాస్థ్యం అయింది.
33 ೩೩ ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
౩౩అహరోను కుమారుడు ఎలియాజరు చనిపోయినప్పుడు ఎఫ్రాయీమీయుల కొండప్రాంతంలో అతని కుమారుడు ఫీనెహాసుకు ఇచ్చిన గిబియాలో వారతన్ని పాతిపెట్టారు.

< ಯೆಹೋಶುವನು 24 >