< ಯೆಹೋಶುವನು 9 >

1 ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ
त्यसपछि यर्दन पारिको पहाडी देशहरू र लेबनानपट्टि महासमुद्रको किनारका मैदानहरूमा हित्तीहरू, एमोरीहरू, कनानीहरू, परिज्‍जीहरू, हिव्वीहरू र यबूसीहरू बस्थे ।
2 ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು.
यिनीहरू यहोशू र इस्राएलविरुद्ध युद्ध गर्न एउटै समूहमा सहभागी भए ।
3 ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು
जब गिबोनका बासिन्दाहरूले यहोशूले यरीहो र ऐलाई गरेका कुरा सुने,
4 ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,
उनीहरूले धूर्त योजना बनाएर काम गरे । उनीहरू समाचारवाहकको रूपमा गए । उनीहरूले फाटिसकेको बोराहरू लिए र उनीहरूका गधामाथि राखे । उनीहरूले पुरानो, फाटेको र मरम्मत गरिएका मशकहरू पनि लिए ।
5 ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
उनीहरूले खुट्टामा पुरानो र टालेका जुत्ताहरू अनि लुगा पनि पुरानो फाटेको नै लगाए । उनीहरूले खानलाई लगेका सबै रोटी सुकिसकेका र ढुसी परेका थिए ।
6 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
उनीहरू गिलगालमा यहोशूको छाउनीमा गए र तिनलाई र इस्राएलका मानिसहरूलाई भने, “हामी धेरै टाढाको देशबाट आएका हौँ, त्यसैले अहिले हामीसँग सन्धि गर्नुहोस् ।
7 ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
इस्राएलका मानिसहरूले हिव्वीहरूलाई भने, “सायद तिमीहरू हाम्रो नजकै बस्‍छौ । हामीले तिमीहरूसँग कसरी सन्धि गर्नु?”
8 ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.
उनीहरूले भने, “हामी तपाईंहरूका दासहरू हौँ ।” यहोशूले उनीहरूलाई भने, “तिमीहरू को हौ? तिमीहरू कहाँबाट आएका हौ?”
9 ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.
उनीहरूले तिनलाई भने, “परमप्रभु तपाईंका परमेश्‍वरको नाउँको कारण तपाईंका दासहरू टाढा देशबाट यहाँ आएका छन् । उहाँको बारेमा र उहाँले मिश्रमा गर्नुभएका सबै कुरा,
10 ೧೦ ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.
र यर्दन पारिका एमोरी राजाहरू अर्थात् हेश्बोनका राजा सीहोन, अस्तारोतमा बस्‍ने बाशानका राजा ओगलाई उहाँले गर्नुभएका सबै कुरा हामीले सुनेका छौँ ।
11 ೧೧ ‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.
हाम्रा धर्म-गुरुहरू र हाम्रा देशका बासिन्दाहरूले हामीलाई भने, 'यात्राको निम्ति खानेकुराहरू लैजाओ । तिनीहरूलाई भेट्न जाओ र तिनीहरूलाई भन, 'हामी तपाईंका दासहरू हौँ । हामीसँग सन्धि गर्नुहोस् ।'
12 ೧೨ ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.
हामी तपाईंहरूकहाँ आउनलाई हाम्रो घरबाट यात्रा सुरु गरेको दिन यो रोटी तातै थियो । तर अहिले हेर्नुहोस्, यो सुकिसकेको र ढुसी परेको छ ।
13 ೧೩ ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
१३ हामीले मशकहरू भर्दा यिनीहरू नयाँ नै थिए र हेर्नुहोस्, अहिले यी चुहिरहेका छन् । धेरै लामो यात्राको कारण हाम्रा लुगा र जुत्ताहरू फाटिसकेका छन्' ।”
14 ೧೪ ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.
त्यसैले इस्राएलीहरूले उनीहरूका केही खानेकुरा लिए, तर उनीहरूले परमप्रभुको निर्देशनको खोजी गरेनन् ।
15 ೧೫ ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
यहोशूले उनीहरूसँग शान्ति सम्झौता गरे, उनीहरूसँग सन्धि गरे र उनीहरूलाई जीवित रहन दिए । मानिसहरूका अगुवाहरूले पनि उनीहरूसँग शपथ खाए ।
16 ೧೬ ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.
इस्राएलीहरूले उनीहरूसँग यो सन्धि गरेको तिन दिनपछि उनीहरू छिमेकी रहेछन् र उनीहरू नजिकै बस्दा रहेछन् भनी तिनीहरूले थाहा पाए ।
17 ೧೭ ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.
त्यसपछि इस्राएलका मानिसहरू निस्के र तेस्रो दिनमा सहरमा आए । उनीहरूका सहरहरू गिबोन, कपीरा, बरोत, किर्यात-यारीम थिए ।
18 ೧೮ ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.
इस्राएलका मानिसहरूले उनीहरूलाई आक्रमण गरेनन्, किनभने तिनीहरूका अगुवाहरूले परमप्रभु इस्राएलका परमेश्‍वरको सामु उनीहरूबाट शपथ खाएका थिए । सबै इस्राएलीले तिनीहरूका अगुवाहरूविरुद्ध गनगन गरे ।
19 ೧೯ ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.
तर सबै अगुवाले मानिसहरूलाई भने, “हामीले उनीहरूको बारेमा परमप्रभु इस्राएलका परमेश्‍वरद्वारा शपथ खाएका छौँ र अहिले हामी उनीहरूको हानि गर्न सक्दैनौ ।
20 ೨೦ ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ
हामी उनीहरूलाई यसो गर्ने छौँ: हामीले उनीहरूसँग शपथ खाएका कारण हामीमाथि आइपर्ने क्रोधबाट बच्‍न हामी उनीहरूलाई बाँच्‍न दिने छौँ ।”
21 ೨೧ ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
अगुवाहरूले तिनीहरूका मानिसहरूलाई भने, “उनीहरूलाई बाँच्‍न देओ ।” त्यसैले अगुवाहरूले तिनीहरूलाई भने झै गिबोनीहरू सबै इस्राएलीका निम्ति पानी बोक्‍ने र दाउरा काट्ने मानिसहरू भए ।
22 ೨೨ ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
यहोशूले उनीहरूलाई बोलाए र भने, “'हामी टाढाबाट आएका हौँ' भनी तिमीहरूले हामीसँग किन छल गर्‍यौ, जब कि तिमीहरू हाम्रै माझमा बस्दा रहेछौ?
23 ೨೩ ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.
अब यसैकारण तिमीहरू श्रापित भएका छौ र तिमीहरूमध्‍ये केही सधैँको निम्ति मेरा परमेश्‍वरको भवनमा दाउरा काट्ने र पानी तान्‍ने दासहरू हुने छौ ।”
24 ೨೪ ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
उनीहरूले यहोशूलाई जवाफ दिए र भने, “परमप्रभु तपाईंका परमेश्‍वरले उहाँका दास मोशालाई सबै भूमि दिन र तपाईं सामु भएका भूमिका सबै बासिन्दालाई नष्‍ट पार्नलाई आज्ञा दिनुभएको तपाईंका दासहरूलाई बताइएको हुनाले तपाईंहरूको कारण हामी हाम्रो जीवनको निम्ति साह्रै भयभीत भएका थियौँ । यसैले हामीले यसो गर्‍यौँ ।
25 ೨೫ ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.
अब हेर्नुहोस्, हामीलाई तपाईंको शक्‍तिमा राख्‍नुहोस् । तपाईंको नजरमा हामीलाई जे गर्न असल र उचित लाग्छ, त्यही गर्नुहोस् ।”
26 ೨೬ ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.
त्यसैले यहोशूले उनीहरूका निम्ति यसो गरेः तिनले उनीहरूलाई इस्राएलका मानिसहरूको नियन्त्रणबाट छुटकारा दिए । त्यसैले इस्राएलीहरूले उनीहरूलाई मारेनन् ।
27 ೨೭ ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.
त्यस दिन यहोशूले गिबोनीहरूलाई समुदायको निम्ति र परमप्रभुले चुन्‍नुभएको ठाउँको निम्ति दाउरा काट्ने र पानी बोक्‍नेहरू बनाए ।

< ಯೆಹೋಶುವನು 9 >