< ನ್ಯಾಯಸ್ಥಾಪಕರು 11 >

1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
गिलादी यिप्‍ता एक जना शक्तिशाली योद्धा थिए, तर तिनी एक जना वेश्याका छोरा थिए । गिलाद तिनका पिता थिए ।
2 ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
गिलादकी पत्‍नीले पनि तिनका निम्‍ति अरू छोराहरू जन्माइन् । जब तिनकी पत्‍नीकी छोराहरू हुर्के, तिनीहरूले यिप्‍तालाई घर छोड्न बाध्‍य पारे र तिनलाई भने, “हाम्रो परिवारबाट तैंले केही पनि पैतृक अंश पाउनेछैनस् । तँ अर्कै स्‍त्रीको छोरा होस् ।”
3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.
यसैले यिप्‍ता आफ्ना दाजुभाइबाट भागे र तोब देशमा बसोबास गरे । हुर्दुङ्गे मानिसहरू यिप्‍तासँग मिले र उनीहरू आए र तिनीसँगै गए ।
4 ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.
केही दिनपछि, अम्मोनका मानिसहरूले इस्राएलको विरुद्ध युद्ध सुरु गरे ।
5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.
जब अम्मोनका मानिसहरूले इस्राएलको विरुद्ध युद्ध गरे, तब गिलादका एल्डरहरू तोब देशबाट यिप्‍तालाई फर्काएर ल्याउनको निम्ति त्यहाँ गए ।
6 ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.
तिनीहरूले यिप्‍तालाई भने, “आउनुहोस् र हाम्रो अगुवा हुनुहोस् ताकि हामी अम्मोनका मानिहरूसँग युद्ध लड्न सकौं ।”
7 ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು
यिप्‍ताले गिलादका अगुवाहरूलाई भने, “तपाईंहरूले मलाई हेला गर्नुभयो र मेरो पिताको घर छोडेर जान मलाई बाध्‍ये पार्नुभयो । अब तपाईंहरू समस्यामा पर्नुहुँदा चाहिं तपाईंहरू मकहाँ किन आउनुहुन्‍छ?”
8 ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.
गिलादका अगुवाहरूले यिप्‍तालाई भने, “त्यसकारण अब हामी तपाईंकहाँ फर्केका छौं । हामीसँग आउनुहोस् र अम्मोनका मानिसहरूसँग युद्ध गर्नुहोस्, र तपाईं नै गिलादमा बस्‍ने सबैका अगुवा हुनुहुनेछ ।”
9 ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು
यिप्‍ताले गिलादका अगुवाहरूलाई भने, “अम्मोनका मानिसहरूसँग युद्ध गर्नलाई तपाईंहरूले मलाई फेरि घर लानुभयो भने, र परमप्रभुले हामीलाई तिनीहरूमाथि विजय दिनुभयो भने, म तपाईंहरूका अगुवा हुनेछु ।”
10 ೧೦ ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
गिलादका अगुवाहरूले यिप्‍तालाई भने, “हामीले जस्‍तो भन्‍छौं त्यस्‍तै गरेनौं भने हाम्रा बिचमा परमप्रभु नै साक्षी हुनुहुन्‍छ!”
11 ೧೧ ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
यसैले यिप्‍ता गिलादका अगुवाहरूसँग गए, र मानिसहरूले तिनलाई आफूमाथि अगुवा र कमाण्‍डर बनाए । जब यिप्‍ता मिस्पामा परमप्रभुको सामु थिए, तब तिनले आफूले गरेका सबै प्रतिज्ञाहरू दोहोर्‍याए ।
12 ೧೨ ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
अनि यिप्‍ताले अम्मोनका मानिसहरूका राजाकहाँ यसो भनेर दूतहरू पठाए, “हाम्रा बिचमा के कुराले द्वन्द भएको हो? हाम्रो देश कब्‍जा गर्न सेनासित तपाईं किन आउनुभएको छ?”
13 ೧೩ ಆ ಅರಸನು ದೂತರಿಗೆ, “ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.
अम्मोनका मानिसहरूका राजाले यिप्‍ताका दूतहरूलाई जवाफ दिए, “किनभने जब इस्राएल मिश्रदेशबाट आए, तब तिनीहरूले मेरो देशलाई अर्नोनदेखि यब्बोक हुँदै यर्दनसम्म कब्‍जा गरे । अब शान्तिसित ती जमिन फिर्ता दिनुहोस् ।”
14 ೧೪ ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
फेरि यिप्‍ताले अम्मोनका मानिसहरूका राजाकहाँ दूतहरू पठाए,
15 ೧೫ “ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
र तिनले भने, “यिप्‍ता यसो भन्छन्: इस्राएलले मोआब देश र अम्मोनका मानिसहरूका देशलाई लिएको थिएन,
16 ೧೬ ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
तर तिनीहरू मिश्रदेशबाट आए, र इस्राएल उजाड-स्‍थान हुँदै लाल समुद्रमा र कादेशमा गए ।
17 ೧೭ ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
जब इस्राएलले यसो भनेर एदोमका राजालाई दूतहरू पठाए, ‘कृपया हामीलाई तपाईंको देशबाट भएर जान दिनुहोस्,’ एदोमका राजाले सुनेनन् । तिनीहरूले मोआबका राजाकहाँ पनि दूतहरू पठाए, तर तिनले इन्कार गरे । यसरी इस्राएलचाहिं कादेशमा नै बसे ।
18 ೧೮ ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
त्यसपछि तिनीहरू उजाड-स्‍थानबाट गए र एदोम र मोआबको देशबाट टाढा गए, र तिनीहरू मोआब देशको पूर्वी ठाउँ हुँदै हिंडे र तिनीहरूले अर्नोनको अर्कोपट्टि छाउनी हाले । तर तिनीहरू मोआबको सिमानाभित्र गएनन्, किनकि अर्नोनचाहिं मोआबको सिमानामा थियो ।
19 ೧೯ ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
इस्राएलले हेश्बोनमा राज्‍य गर्ने एमोरीहरूका राजा सीहोनकहाँ दूतहरू पठाए । इस्राएलले उनलाई भने, ‘कृपया हामीलाई आफ्‍नो देशमा जानलाई तपाईंको देशको बाटो भएर जान दिनुहोस् ।’
20 ೨೦ ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
तर आफ्नो सिमानाभित्रबाट जानको निम्ति सीहोनले इस्राएलमाथि विश्‍वास गरेनन् । यसैले सीहोनले आफ्ना सबै सेना जाम्‍मा गरे र उनले तिनीहरूलाई यहसामा लगे, र त्यहाँ उनले इस्राएलको विरुद्ध युद्ध गरे ।
21 ೨೧ ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
तब इस्राएलका परमप्रभु परमेश्‍वरले सीहोन र तिनका सारा मानिसलाई इस्राएलको हातमा दिनुभयो र तिनीहरूले उनीहरूलाई परास्त गरे । यसैले इस्राएलले एमोरीहरूको देशको सबै जमिन अधिकार गरे ।
22 ೨೨ ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
तिनीहरूले एमोरीहरूका सिमानाभित्र अर्नोनदेखि यब्बोकसम्म, र उजाड-स्‍थानदेखि यर्दनसम्म हरेक कुरामा अधीन गरे ।
23 ೨೩ ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?
यसरी इस्राएलका परमप्रभु परमेश्‍वरले आफ्‍ना मानिस इस्राएलको सामुबाट एमोरीहरूलाई खेद्‍नुभएको हो, र के तपाईं अब उनीहरूको देशमाथि अधिकार गर्नुहुन्‍छ?
24 ೨೪ ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
के तपाईंहरूका देवता कमोशले तपाईंहरूलाई जुन देश दिन्छन्, त्यही तपाईंहरू लिनुहुन्‍छ होइन र? यसैले हाम्रा परमप्रभु परमेश्‍वरले जुन देश हामीलाई दिनुभएको छ, त्‍यो हामी अधिकार गर्छौं ।
25 ೨೫ ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
के अब तपाईं मोआबका राजा, सिप्पोरका छोरा बालकभन्दा असल हुनुहुन्‍छ र? के तिनले इस्राएलसँग बहस गर्ने आँट गरे?
26 ೨೬ ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
जब इस्राएल हेश्बोन र त्यसका गाउँहरू, र अरोएर र त्यसका गाउँहरू, र अर्नोनका किनारका सबै सहरहरूमा तिन सय वर्षसम्‍म बसोबास गर्दा, तपाईंहरूले किन त्यस बेला ती फिर्ता लिनुभएन?
27 ೨೭ ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.
मैले तपाईंहरूलाई केही गलत गरेको छैनँ, तर तपाईंहरूले मलाई आक्रमण गरेर मेरो खराबी गर्दै हुनुहुन्‍छ । न्यायकर्ता परमप्रभुले नै आज इस्राएलका मानिस र अम्मोनका मानिसहरूका बिचमा निर्णय गर्नुहुनेछ ।”
28 ೨೮ ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.
तर अम्मोनका मानिसहरूका राजाले यिप्‍ताले पठाएका चेतावनीलाई इन्कार गरे ।
29 ೨೯ ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
तब परमप्रभुको आत्मा यिप्‍तामाथि आउनुभयो, र तिनी गिलाद र मनश्शेबाट भएर गए, र गिलादको मिस्पाबाट भएर तिनी अम्मोनका मानिसहरूकहाँ पुगे ।
30 ೩೦ ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
यिप्‍ताले परमप्रभुसँग एउटा बाकल गरे र भने, “तपाईंले मलाई अम्मोनका मानिसहरूमाथि विजय दिनुभयो भने,
31 ೩೧ ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.
अम्मोनका मानिसहरूबाट म शान्‍तमा फर्केर आउँदा मेरा घरको ढोकाहरूबाट मलाई भेट्न जेसुकै कुरा बाहिर आए पनि त्‍यो परमप्रभुको हुनेछ, र त्‍यसलाई म होमबलिको रूपमा चढाउनेछु ।”
32 ೩೨ ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.
यसैले अम्मोनीहरूसँग युद्ध गर्न यिप्‍ता तिनीहरूकहाँ गए, र परमप्रभुले उनलाई विजय दिनुभयो ।
33 ೩೩ ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.
तिनले तिनीहरूलाई आक्रमण गरे र अरोएरदेखि मिन्‍नीतसम्म बिसवटा सहर र हाबिल-करमीमसम्म ठुलो सङ्ख्यामा मारे । यसरी अम्मोनका मानिसहरूलाई इस्राएलका मानिसहरूको अधीनमा पारे ।
34 ೩೪ ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
यिप्‍ता आफ्नो घर मिस्पामा आए र त्यहाँ तिनकी छोरी तिनलाई भेट्न खैंजडी बजाउँदै र नाच्दै बाहिर आइन् । यिनी तिनकी एक मात्र छोरी थिइन्, र यिनीबाहेक तिनको अरू छोरा वा छोरी थिएन ।
35 ೩೫ ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
तिनले उनलाई देख्‍नेबित्तिकै, तिनले आफ्ना लुगाहरू च्याते र भने, “ओहो, मेरी छोरी! तिमीले मलाई दुःखले चुर पारेकी छ्‍यौ, र मलाई कष्‍ट दिने एउटा कारण तिमी भएकी छ्‍यौ! किनकि मैले परमप्रभुसँग एउटा भाकल गरेको छु, र मेरो भाकलबाट म पछि हट्न सक्दिनँ ।”
36 ೩೬ ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.
उनले तिनलाई भनिन्, “मेरा बुबा, तपाईंले परमप्रभुसँग भाकल गर्नुभएको छ, तपाईंले प्रतिज्ञा गर्नुभएको हरेक कुरा मलाई गर्नुहोस्, किनभने परमप्रभुले तपाईंका शत्रु अम्मोनीहरूसँग बदला लिनुभएको छ ।”
37 ೩೭ ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.
उनले आफ्नो बुबालाई भनिन्, “मेरो निम्ति यो प्रतिज्ञा पुरा होस् । मलाई दुई महिनाको लागि मात्र छोडिदिनुहोस्, ताकि म र मेरा सहेलीहरू तल पहाडहरूमा जान र आफ्नो कुमारी अवस्थाको मृत्युको निम्ति शोक पाऊँ ।”
38 ೩೮ ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
तिनले भने, “जाऊ ।” तिनले उनलाई दुई महिनाको निम्ति पठाइदिए । उनी र उनका सहेलीहरू तिनीसँग बिदा भए, र तिनीहरूले उनको कुमारी अवस्थाको मृत्युको निम्ति पहाडहरूमा शोक गरे ।
39 ೩೯ ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
दुई महिनाको अन्त्यमा उनी आफ्ना बुबाकहाँ फर्किन्, र आफूले गरेको भाकलअनुसार तिनले उनलाई गरे । यति बेलासम्‍म उनले कुनै मानिससित सहवास गरेकी थिइनन्, र इस्राएलमा एउटा यस्तो प्रचलन बन्यो,
40 ೪೦ ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
कि हरेक वर्ष इस्राएलका छोरीहरूले चार दिनसम्म गिलादी यिप्‍ताकी छोरीको कथालाई दोहोर्‍याउने गर्थे ।

< ನ್ಯಾಯಸ್ಥಾಪಕರು 11 >