< ನ್ಯಾಯಸ್ಥಾಪಕರು 3 >

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
ואלה הגוים אשר הניח יהוה לנסות בם את ישראל את כל אשר לא ידעו את כל מלחמות כנען
2 ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
רק למען דעת דרות בני ישראל ללמדם מלחמה--רק אשר לפנים לא ידעום
3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
חמשת סרני פלשתים וכל הכנעני והצידני והחוי ישב הר הלבנון--מהר בעל חרמון עד לבוא חמת
4 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
ויהיו לנסות בם את ישראל--לדעת הישמעו את מצות יהוה אשר צוה את אבותם ביד משה
5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
ובני ישראל ישבו בקרב הכנעני החתי והאמרי והפרזי והחוי והיבוסי
6 ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
ויקחו את בנותיהם להם לנשים ואת בנותיהם נתנו לבניהם ויעבדו את אלהיהם
7 ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
ויעשו בני ישראל את הרע בעיני יהוה וישכחו את יהוה אלהיהם ויעבדו את הבעלים ואת האשרות
8 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
ויחר אף יהוה בישראל וימכרם ביד כושן רשעתים מלך ארם נהרים ויעבדו בני ישראל את כושן רשעתים שמנה שנים
9 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
ויזעקו בני ישראל אל יהוה ויקם יהוה מושיע לבני ישראל וישיעם--את עתניאל בן קנז אחי כלב הקטן ממנו
10 ೧೦ ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
ותהי עליו רוח יהוה וישפט את ישראל ויצא למלחמה ויתן יהוה בידו את כושן רשעתים מלך ארם ותעז ידו על כושן רשעתים
11 ೧೧ ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
ותשקט הארץ ארבעים שנה וימת עתניאל בן קנז
12 ೧೨ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
ויספו בני ישראל לעשות הרע בעיני יהוה ויחזק יהוה את עגלון מלך מואב על ישראל על כי עשו את הרע בעיני יהוה
13 ೧೩ ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
ויאסף אליו את בני עמון ועמלק וילך ויך את ישראל ויירשו את עיר התמרים
14 ೧೪ ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
ויעבדו בני ישראל את עגלון מלך מואב שמונה עשרה שנה
15 ೧೫ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
ויזעקו בני ישראל אל יהוה ויקם יהוה להם מושיע את אהוד בן גרא בן הימיני איש אטר יד ימינו וישלחו בני ישראל בידו מנחה לעגלון מלך מואב
16 ೧೬ ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
ויעש לו אהוד חרב ולה שני פיות--גמד ארכה ויחגר אותה מתחת למדיו על ירך ימינו
17 ೧೭ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
ויקרב את המנחה לעגלון מלך מואב ועגלון איש בריא מאד
18 ೧೮ ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
ויהי כאשר כלה להקריב את המנחה וישלח את העם נשאי המנחה
19 ೧೯ ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
והוא שב מן הפסילים אשר את הגלגל ויאמר דבר סתר לי אליך המלך ויאמר הס--ויצאו מעליו כל העמדים עליו
20 ೨೦ ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
ואהוד בא אליו והוא ישב בעלית המקרה אשר לו לבדו ויאמר אהוד דבר אלהים לי אליך ויקם מעל הכסא
21 ೨೧ ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
וישלח אהוד את יד שמאלו ויקח את החרב מעל ירך ימינו ויתקעה בבטנו
22 ೨೨ ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
ויבא גם הנצב אחר הלהב ויסגר החלב בעד הלהב--כי לא שלף החרב מבטנו ויצא הפרשדנה
23 ೨೩ ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
ויצא אהוד המסדרונה ויסגר דלתות העליה בעדו--ונעל
24 ೨೪ ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
והוא יצא ועבדיו באו ויראו והנה דלתות העליה נעלות ויאמרו אך מסיך הוא את רגליו בחדר המקרה
25 ೨೫ ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
ויחילו עד בוש והנה איננו פתח דלתות העליה ויקחו את המפתח ויפתחו והנה אדניהם נפל ארצה מת
26 ೨೬ ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
ואהוד נמלט עד התמהמהם והוא עבר את הפסילים וימלט השעירתה
27 ೨೭ ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
ויהי בבואו ויתקע בשופר בהר אפרים וירדו עמו בני ישראל מן ההר והוא לפניהם
28 ೨೮ ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
ויאמר אלהם רדפו אחרי כי נתן יהוה את איביכם את מואב בידכם וירדו אחריו וילכדו את מעברות הירדן למואב ולא נתנו איש לעבר
29 ೨೯ ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
ויכו את מואב בעת ההיא כעשרת אלפים איש--כל שמן וכל איש חיל ולא נמלט איש
30 ೩೦ ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
ותכנע מואב ביום ההוא תחת יד ישראל ותשקט הארץ שמונים שנה
31 ೩೧ ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.
ואחריו היה שמגר בן ענת ויך את פלשתים שש מאות איש במלמד הבקר ויושע גם הוא את ישראל

< ನ್ಯಾಯಸ್ಥಾಪಕರು 3 >