< ನ್ಯಾಯಸ್ಥಾಪಕರು 3 >

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
इस्राएल लोकांस कनान देशांतील लढायांचा अनुभव नव्हता त्यांची परीक्षा पाहण्यासाठी परमेश्वराने काही राष्ट्रे देशात राहू दिली.
2 ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
इस्राएलाच्या नव्या पिढ्यांना, ज्यांना पूर्वी त्या लढायांविषयी काहीच माहीत नव्हते त्यांना तिचे शिक्षण मिळावे म्हणून परमेश्वराने जी राष्ट्रे राहू दिली ती ही;
3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
पलिष्ट्यांचे पाच सरदार आणि सर्व कनानी, सीदोनी आणि बाल-हर्मोन डोंगरापासून हमाथाच्या घाटापर्यंत लबानोन डोंगरात राहणारे हिव्वी.
4 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
इस्राएलाच्या पूर्वजांना मोशेद्वारे दिलेल्या आज्ञा ते पाळतात की नाही ह्याची परीक्षा पाहावी म्हणून परमेश्वराने त्यांना मागे ठेवले होते.
5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
अशा प्रकारे इस्राएल लोक कनानी, हित्ती, अमोरी, परिज्जी, हिव्वी व यबूसी यांच्यामध्ये राहू लागले.
6 ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
त्यांनी त्यांच्या मुली आपणास स्त्रिया करून घेतल्या व आपल्या मुली त्यांच्या मुलांना दिल्या आणि त्यांच्या देवांची सेवा केली.
7 ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
इस्राएल लोकांनी परमेश्वराच्या दृष्टीने वाईट ते केले, आपला देव परमेश्वर ह्याला ते विसरले आणि बआल व अशेरा मूर्तींची उपासना करू लागले;
8 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
म्हणून इस्राएलावर परमेश्वराचा कोप भडकला आणि त्याने त्यांना अराम-नहराईम राजा कुशन-रिशाथईम ह्याच्या हाती विकत दिले, आणि इस्राएल लोकांनी आठ वर्षेपर्यंत कुशन-रिशाथईम ह्याची सेवा केली.
9 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
इस्राएल लोकांनी परमेश्वराजवळ मोठ्याने आरोळी केली तेव्हा परमेश्वराने त्यांच्यासाठी कालेबाचा धाकटा भाऊ कनाज ह्याचा मुलगा अथनिएल ह्याला इस्राएल लोकांच्या मदतीला उभे केले आणि त्याने त्यांची सुटका केली.
10 ೧೦ ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
१०त्याच्यावर परमेश्वराचा आत्मा उतरला व त्याने इस्राएलाचा न्याय केला; तो लढाईला निघाला तेव्हा परमेश्वराने अरामाचा राजा कुशन-रिशाथईम ह्याला त्याच्या हाती दिले व त्याच्यावर त्याचे वर्चस्व झाले,
11 ೧೧ ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
११त्यानंतर चाळीस वर्षे देशाला शांतता लाभली मग कनाजाचा मुलगा अथनिएल मृत्यू पावला.
12 ೧೨ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
१२पुन्हा इस्राएल लोकांनी देवाच्या दृष्टीने वाईट ते करून आज्ञा मोडली; आणि त्यांनी काय केले ते त्याने पाहिले म्हणून परमेश्वराने मवाबाचा राजा एग्लोन ह्याला इस्राएलावर सबळ केले, कारण इस्राएलांनी जे वाईट ते केले होते हे याप्रकारे परमेश्वराने ते पाहिले होते.
13 ೧೩ ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
१३तेव्हा एग्लोन राजाने अम्मोनी व अमालेकी ह्यांना आपल्याबरोबर घेऊन त्यांच्यावर चाल केली आणि इस्राएलांना पराभूत करून खजुरीचे नगर ताब्यात घेतले.
14 ೧೪ ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
१४इस्राएल लोकांनी मवाबाचा राजा एग्लोन ह्याची अठरा वर्षे सेवा केली.
15 ೧೫ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
१५परंतु इस्राएल लोकांनी देवाकडे मोठ्याने आरोळी केली, तेव्हा परमेश्वराने गेराचा मुलगा एहूद ह्याला त्यांच्या मदतीला उभा केला; तो बन्यामिनी असून डावखुरा होता; त्याच्या हाती इस्राएल लोकांनी मवाबाचा राजा एग्लोन ह्याला भेट पाठवली.
16 ೧೬ ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
१६एहूदाने हातभर लांब दुधारी तलवार आपल्यासाठी बनवून आपल्या कपड्याखाली उजव्या बाजूला लटकावली
17 ೧೭ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
१७त्याने मवाबाचा राजा एग्लोन ह्याच्यापुढे भेट सादर केली; एग्लोन हा फार लठ्ठ होता.
18 ೧೮ ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
१८भेट दिल्यानंतर त्याने भेट घेऊन आलेल्या लोकांस त्याने निरोप दिला;
19 ೧೯ ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
१९पण गिलगालाजवळील कोरीव मूर्तीपर्यंत गेल्यावर एहूद स्वतः परत मागे येऊन तो म्हणाला, महाराज, मला आपल्याला काही गुप्त गोष्ट सांगायची आहे. राजा म्हणाला, “गप्प राहा, तेव्हा त्याच्याजवळ उभे असलेले सगळे लोक बाहेर गेले.”
20 ೨೦ ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
२०एहूद त्याच्याजवळ आला त्या वेळी तो हवेशीर माडीवर एकटा बसला होता. “एहूद म्हणाला,” “मी आपणासाठी देवाचा संदेश आणला आहे,” तेव्हा तो आसनावरून उठला.
21 ೨೧ ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
२१मग एहूदाने आपल्या डाव्या हाताने उजव्या मांडीवरली तलवार काढून राजाच्या पोटात खुपसली;
22 ೨೨ ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
२२पात्यांबरोबर मूठही आत गेली, आणि चरबीत रूतून बसली त्याने त्याच्या पोटातून तलवार काढली नाही; त्याचे टोक पाठीतून बाहेर निघाली होती.
23 ೨೩ ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
२३मग द्वारमंडपाच्या बाहेर येऊन वर जाऊन एहूदाने माडीचे दरवाजे कुलूप लावून बंद केले.
24 ೨೪ ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
२४तो निघून गेल्यावर त्याचे दास येऊन पाहतात तो माडीचे दरवाजे बंद असल्याचे त्यांना दिसले. तेव्हा त्यांना वाटले की, “तो आपल्या हवेशीर खोलीच्या संडासात गेला असेल.”
25 ೨೫ ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
२५त्यांना मोठी काळजी वाटू लागली, आपण कर्तव्यात दुर्लक्ष करीत आहोत असे त्यांना वाटले, तो माडीचे दरवाजे उघडीत नाही असे पाहून त्यांनी किल्ली घेऊन ते उघडले आणि पाहतात तर त्यांचा स्वामी मरून भूमीवर पडला होता.
26 ೨೬ ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
२६सेवक तर आश्चर्य करीत काय करावे वाट पाहत होते तोपर्यंत एहूद निसटून पळून कोरीव मूर्तींच्या जागेच्या पलिकडे सईर येथे जाऊन पोहचला.
27 ೨೭ ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
२७तेथे गेल्यावर त्याने एफ्राइमाच्या डोंगराळ प्रदेशात रणशिंग फुंकले, तेव्हा त्याच्याबरोबर इस्राएल लोक डोंगराळ प्रदेशातून उतरले, आणि तो त्यांच्यापुढे चालला.
28 ೨೮ ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
२८तो त्यांना म्हणाला, “माझ्या पाठोपाठ या, कारण परमेश्वराने तुमचे मवाबी शत्रू तुमच्या हाती दिले आहेत.” तेव्हा त्यांनी त्याच्या पाठोपाठ जाऊन मवाब देशाजवळचे यार्देनेचे उतार रोखून धरले आणि कोणालाही पार जाऊ दिले नाही.
29 ೨೯ ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
२९त्या वेळी त्यांनी मवाब्यांचे सुमारे दहा हजार लोक मारले; ते सर्व धिप्पाड व शूर वीर होते; त्यांच्यातला कोणीही बचावला नाही.
30 ೩೦ ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
३०अशा प्रकारे मवाब त्या दिवशी इस्राएलाच्या सत्तेखाली आला. ह्यानंतर देशाला ऐंशी वर्षे विसावा मिळाला.
31 ೩೧ ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.
३१एहूदानंतर अनाथाचा मुलगा शमगार न्यायाधीश झाला; त्याने सहाशे पलिष्ट्यांना बैलाच्या पराणीने जिवे मारले; अशा प्रकारे त्यानेही इस्राएलाची संकटातून सुटका केली.

< ನ್ಯಾಯಸ್ಥಾಪಕರು 3 >