< ನ್ಯಾಯಸ್ಥಾಪಕರು 1 >

1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
यहोशवाच्या मृत्यूनंतर, इस्राएल लोकांनी परमेश्वरास असे म्हणून विचारले, “कनानी लोकांशी लढावयास आम्ही जाऊ तेव्हा आमच्या वतीने पहिल्याने कोणी स्वारी करावी?”
2 ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.
परमेश्वर म्हणाला, “यहूदा तुमचे नेतृत्व करील; पाहा, हा देश मी त्याच्या हाती दिला आहे.”
3 ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.
यहूदाच्या लोकांनी आपले भाऊ, “शिमोन याच्या लोकांस म्हटले, आमच्याबरोबर आमच्या प्रदेशात वर या, म्हणजे आपण एकत्र मिळून कनान्यांविरुद्ध लढाई करू, त्याप्रमाणे तुमच्या प्रदेशात आम्हीही तुम्हामध्ये येऊ;” तेव्हा शिमोनाचा वंश त्यांच्याबरोबर गेला.
4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
मग यहूदाचे लोक वर चढून गेले, या प्रकारे परमेश्वराने कनानी व परिज्जी ह्यांच्यावर त्यांना विजय दिला व त्यांनी बेजेक शहर येथे त्यांच्या दहा हजार लोकांस ठार मारले.
5 ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
बेजेक येथे त्यांना अदोनी-बेजेक सापडला आणि तेव्हा त्यांनी त्याच्याशी लढाई केली व कनानी व परिज्जी यांचा पराभव केला.
6 ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
पण अदोनी-बेजेक पळून गेला, तेव्हा त्यांनी त्यांचा पाठलाग करून त्यास पकडले आणि त्यांच्या हातांचे व पायांचे अंगठे कापून टाकले.
7 ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
तेव्हा अदोनी-बेजेक म्हणाला, “हातांचे व पायांचे अंगठे कापून टाकलेले सत्तर राजे माझ्या मेजाखाली अन्न वेचीत होते; जसे मी केले तसे देवाने माझे केले आहे.” त्यांनी त्यास यरूशलेमेस आणले; तेथे तो मेला.
8 ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
यहूदाच्या लोकांनी यरूशलेम नगराविरुद्ध लढाई करून ते घेतले, आणि तलवारीच्या धारेने त्यावर हल्ला करून त्या नगराला आग लावली.
9 ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
नंतर यहूदाचे लोक डोंगराळ प्रदेश, नेगेब आणि पश्चिमेकडील तळवटीच्या डोंगराळ प्रदेशात राहणाऱ्या कनान्यांशी लढावयाला खाली गेले.
10 ೧೦ ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
१०मग हेब्रोनात राहणाऱ्या कनान्यांविरुद्ध यहूदा पुढे चालून गेला. (हेब्रोनाचे पूर्वीचे नाव किर्याथ-आर्बा होते) आणि त्यांनी शेशय, अहीमान व तलमय यांचा पराभव केला.
11 ೧೧ ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
११तेथून यहूदाचे लोक दबीरच्या रहिवाश्यांवर पुढे चालून गेले. (दबीरचे पूर्वीचे नाव किर्याथ-सेफर होते)
12 ೧೨ ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
१२कालेब म्हणाला, “जो कोणी लढून किर्याथ-सेफर काबीज करील त्यास मी आपली मुलगी अखसा पत्नी म्हणून देईन.”
13 ೧೩ ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
१३तेव्हा कालेबाचा धाकटा भाऊ कनाज अथनिएल ह्याचा मुलगा ह्याने दबीर नगर काबीज केले आणि म्हणून कालेबाने आपली मुलगी अखसा त्यास पत्नी करून दिली.
14 ೧೪ ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
१४ती आली तेव्हा आपल्या पित्यापासून काही शेतजमीन मागून घेण्यासाठी तिने त्यास गळ घातली. ती गाढवावरून उतरली तेव्हा कालेबाने तिला विचारले, “मी तुझ्यासाठी काय करू शकतो?”
15 ೧೫ ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
१५ती त्यास म्हणाली, “मला आशीर्वाद द्या; तुम्ही मला नेगेब प्रदेशात स्थायिक केले आहे तेव्हा मला पाण्याचे झरेही द्या” आणि कालेबाने तिला वरचे व खालचे झरे दिले.
16 ೧೬ ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
१६मोशेचा मेहुणा जो केनी त्यांचे वंशज यहूदाच्या लोकांबरोबर खजुरीच्या नगराहून अरादाजवळील यहूदातले (जे नेगेबात आहे) रान आहे तेथे चढून गेले; आणि तेथे जाऊन यहूदा लोक अराद जवळ त्या लोकांबरोबर राहिले.
17 ೧೭ ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
१७आणि यहूदाची माणसे त्यांचा भाऊ शिमोन ह्याच्या मनुष्यांबरोबर गेली आणि त्यांनी सफाथ येथे राहणारे कनानी यांच्यावर हल्ला करून त्यांचा पूर्णपणे नाश केला; त्या नगराचे नाव हर्मा असे म्हटले होते.
18 ೧೮ ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
१८यहूदाच्या लोकांनी गज्जा व त्याच्या सभोवतालची जमीन, अष्कलोन व त्याच्या सभोवतालची जागा आणि एक्रोन व त्याच्या सभोवतालची जागा ही नगरे घेतली.
19 ೧೯ ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
१९यहूदाच्या लोकांबरोबर परमेश्वर होता आणि त्यांनी डोंगराळ प्रदेश ताब्यात घेतला, पण खोऱ्यात राहणाऱ्या लोकांजवळ लोखंडी रथ असल्याने त्यांना घालवून देणे त्यांना जमेना.
20 ೨೦ ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
२०मोशेच्या सांगण्याप्रमाणे हेब्रोन कालेबाला देण्यात आले व त्याने तेथून अनाकाच्या तिघा मुलांना घालवून दिले.
21 ೨೧ ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
२१पण बन्यामिनाच्या लोकांनी यरूशलेमेत राहणाऱ्या यबूसी लोकांस बाहेर घालवले नाही, म्हणून आजपर्यंत यबूसी लोक यरूशलेमेत बन्यामिनाच्या लोकांबरोबर राहत आहेत.
22 ೨೨ ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
२२योसेफाच्या घराण्यानेही बेथेलावर हल्ला करण्याची तयारी केली; आणि परमेश्वर त्यांच्याबरोबर होता.
23 ೨೩ ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.
२३योसेफाच्या घराण्याने हेरगिरी करण्यास बेथेल येथे माणसे पाठवली. त्या नगराचे पूर्वीचे नाव लूज होते.
24 ೨೪ ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
२४त्या हेरांनी नगरातून एक मनुष्य बाहेर निघताना पाहिला; आणि त्यांनी त्यास म्हटले, “नगरात कसे जायचे ते आम्हांला दाखव म्हणजे आम्ही तुझ्यावर दया करू.”
25 ೨೫ ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
२५तेव्हा त्याने त्यांना नगरात जाण्याचा मार्ग दाखवला आणि त्यांनी त्या नगरावर तलवार चालवली, पण त्या मनुष्यास व त्याच्या सर्व परिवाराला त्यांनी सुखरूप जाऊ दिले.
26 ೨೬ ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
२६त्या मनुष्याने हित्ती लोकांच्या देशात जाऊन एक नगर बांधले व त्याचे नाव लूज ठेवले. त्याचे नाव आजपर्यंत तेच आहे.
27 ೨೭ ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
२७मनश्शेच्या लोकांनी बेथ-शान व त्याची खेडी, तानख व त्याची खेडी, दोर व त्याच्या खेड्यात राहणाऱ्यांना, इब्लाम व त्याची खेडी यामध्ये राहणाऱ्यांना आणि मगिद्दो व त्याची खेडी यामध्ये राहणाऱ्यांना बाहेर घालवून दिले नाही. कारण त्या कनान्यांनी त्या प्रदेशात राहण्याचा निश्चय केला.
28 ೨೮ ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
२८जेव्हा इस्राएल लोक सामर्थ्यवान झाले तेव्हा त्यांनी कनानी लोकांस कठोर परिश्रमाचे काम करायला लावले; पण त्यांना कधीच पूर्णपणे घालवून दिले नाही.
29 ೨೯ ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.
२९एफ्राइमने गेजेर येथे राहणाऱ्या कनान्यांना घालवून दिले नाही, ते कनानी गेजेर येथे त्यांच्यामध्येच राहिले.
30 ೩೦ ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.
३०जबुलूनाने कित्रोन व नहलोल येथील रहिवाश्यांना घालवून दिले नाही; पण जबुलूनाने कनान्यांवर बळजबरी करून कठोर परिश्रमाच्या कामास नेमले.
31 ೩೧ ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
३१आशेराने अक्को यातले राहणारे आणि सीदोन व अहलाब व अकजीब व हेल्बा, अफीक व रहोब येथील रहिवाश्यांना घालवून दिले नाही;
32 ೩೨ ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.
३२म्हणून आशेराचे वंशज त्या देशाच्या कनानी रहिवाश्यांमध्ये राहिले; कारण त्यांनी त्यांना घालवून दिले नाही.
33 ೩೩ ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.
३३नफतालीच्या वंशजांनी बेथ-शेमेश व बेथ-अनाथ येथील रहिवाश्यांना घालवून दिले नाही; नफताली त्या देशाच्या कनानी रहिवाश्यांमध्ये राहिले; पण बेथ-शेमेश व बेथ-अनाथ येथील रहिवासी नफताली लोकांची कठीण कष्टाची कामे करू लागले.
34 ೩೪ ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
३४अमोरी लोकांनी दानाच्या वंशजांना डोंगराळ प्रदेशात राहण्यास भाग पाडले. ते त्यांना खाली मैदानात उतरू देईनात;
35 ೩೫ ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
३५अमोऱ्यांनी हेरेस डोंगरावर अयालोन व शालबीम येथे राहण्याचा निश्चय केला; पण योसेफाचे घराणे प्रबळ झाल्यावर त्यांनी त्यांना जिंकले आणि कठीण कष्टाचे काम करण्यास त्यांना भाग पाडले.
36 ೩೬ ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.
३६अमोऱ्यांची सीमा अक्रब्बीमाचा चढावापसून आणि सेला येथून डोंगराळ प्रदेशावर गेली होती.

< ನ್ಯಾಯಸ್ಥಾಪಕರು 1 >