< ಯಾಜಕಕಾಂಡ 14 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
फिर यहोवा ने मूसा से कहा,
2 “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
“कोढ़ी के शुद्ध ठहराने की व्यवस्था यह है।, वह याजक के पास पहुँचाया जाए;
3 ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
और याजक छावनी के बाहर जाए, और याजक उस कोढ़ी को देखे, और यदि उसके कोढ़ की व्याधि चंगी हुई हो,
4 ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
तो याजक आज्ञा दे कि शुद्ध ठहरानेवाले के लिये दो शुद्ध और जीवित पक्षी, देवदार की लकड़ी, और लाल रंग का कपड़ा और जूफा ये सब लिये जाएँ;
5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
और याजक आज्ञा दे कि एक पक्षी बहते हुए जल के ऊपर मिट्टी के पात्र में बलि किया जाए।
6 “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
तब वह जीवित पक्षी को देवदार की लकड़ी और लाल रंग के कपड़े और जूफा इन सभी को लेकर एक संग उस पक्षी के लहू में जो बहते हुए जल के ऊपर बलि किया गया है डुबा दे;
7 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
और कोढ़ से शुद्ध ठहरनेवाले पर सात बार छिड़ककर उसको शुद्ध ठहराए, तब उस जीवित पक्षी को मैदान में छोड़ दे।
8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
और शुद्ध ठहरनेवाला अपने वस्त्रों को धोए, और सब बाल मुँण्डवाकर जल से स्नान करे, तब वह शुद्ध ठहरेगा; और उसके बाद वह छावनी में आने पाए, परन्तु सात दिन तक अपने डेरे से बाहर ही रहे।
9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
और सातवें दिन वह सिर, दाढ़ी और भौहों के सब बाल मुँड़ाएँ, और सब अंग मुँण्ड़न कराए, और अपने वस्त्रों को धोए, और जल से स्नान करे, तब वह शुद्ध ठहरेगा।
10 ೧೦ “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
१०“आठवें दिन वह दो निर्दोष भेड़ के बच्चे, और एक वर्ष की निर्दोष भेड़ की बच्ची, और अन्नबलि के लिये तेल से सना हुआ एपा का तीन दहाई अंश मैदा, और लोज भर तेल लाए।
11 ೧೧ ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
११और शुद्ध ठहरानेवाला याजक इन वस्तुओं समेत उस शुद्ध होनेवाले मनुष्य को यहोवा के सम्मुख मिलापवाले तम्बू के द्वार पर खड़ा करे।
12 ೧೨ ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
१२तब याजक एक भेड़ का बच्चा लेकर दोषबलि के लिये उसे और उस लोज भर तेल को समीप लाए, और इन दोनों को हिलाने की भेंट के लिये यहोवा के सामने हिलाए;
13 ೧೩ ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
१३और वह उस भेड़ के बच्चे को उसी स्थान में जहाँ वह पापबलि और होमबलि पशुओं का बलिदान किया करेगा, अर्थात् पवित्रस्थान में बलिदान करे; क्योंकि जैसे पापबलि याजक का निज भाग होगा वैसे ही दोषबलि भी उसी का निज भाग ठहरेगा; वह परमपवित्र है।
14 ೧೪ ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
१४तब याजक दोषबलि के लहू में से कुछ लेकर शुद्ध ठहरनेवाले के दाहिने कान के सिरे पर, और उसके दाहिने हाथ और दाहिने पाँव के अँगूठों पर लगाए।
15 ೧೫ ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
१५तब याजक उस लोज भर तेल में से कुछ लेकर अपने बाएँ हाथ की हथेली पर डाले,
16 ೧೬ ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
१६और याजक अपने दाहिने हाथ की उँगली को अपनी बाईं हथेली पर के तेल में डुबाकर उस तेल में से कुछ अपनी उँगली से यहोवा के सम्मुख सात बार छिड़के।
17 ೧೭ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
१७और जो तेल उसकी हथेली पर रह जाएगा याजक उसमें से कुछ शुद्ध होनेवाले के दाहिने कान के सिरे पर, और उसके दाहिने हाथ और दाहिने पाँव के अँगूठों पर दोषबलि के लहू के ऊपर लगाए;
18 ೧೮ ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
१८और जो तेल याजक की हथेली पर रह जाए उसको वह शुद्ध होनेवाले के सिर पर डाल दे। और याजक उसके लिये यहोवा के सामने प्रायश्चित करे।
19 ೧೯ “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
१९याजक पापबलि को भी चढ़ाकर उसके लिये जो अपनी अशुद्धता से शुद्ध होनेवाला हो प्रायश्चित करे; और उसके बाद होमबलि पशु का बलिदान करके
20 ೨೦ ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
२०अन्नबलि समेत वेदी पर चढ़ाए: और याजक उसके लिये प्रायश्चित करे, और वह शुद्ध ठहरेगा।
21 ೨೧ “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
२१“परन्तु यदि वह दरिद्र हो और इतना लाने के लिये उसके पास पूँजी न हो, तो वह अपना प्रायश्चित करवाने के निमित्त, हिलाने के लिये भेड़ का बच्चा दोषबलि के लिये, और तेल से सना हुआ एपा का दसवाँ अंश मैदा अन्नबलि करके, और लोज भर तेल लाए;
22 ೨೨ ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
२२और दो पंडुक, या कबूतरी के दो बच्चे लाए, जो वह ला सके; और इनमें से एक तो पापबलि के लिये और दूसरा होमबलि के लिये हो।
23 ೨೩ ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
२३और आठवें दिन वह इन सभी को अपने शुद्ध ठहरने के लिये मिलापवाले तम्बू के द्वार पर, यहोवा के सम्मुख, याजक के पास ले आए;
24 ೨೪ ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
२४तब याजक उस लोज भर तेल और दोषबलिवाले भेड़ के बच्चे को लेकर हिलाने की भेंट के लिये यहोवा के सामने हिलाए।
25 ೨೫ ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
२५फिर दोषबलि के भेड़ के बच्चे का बलिदान किया जाए; और याजक उसके लहू में से कुछ लेकर शुद्ध ठहरनेवाले के दाहिने कान के सिरे पर, और उसके दाहिने हाथ और दाहिने पाँव के अँगूठों पर लगाए।
26 ೨೬ ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
२६फिर याजक उस तेल में से कुछ अपने बाएँ हाथ की हथेली पर डालकर,
27 ೨೭ ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
२७अपने दाहिने हाथ की उँगली से अपनी बाईं हथेली पर के तेल में से कुछ यहोवा के सम्मुख सात बार छिड़के;
28 ೨೮ ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
२८फिर याजक अपनी हथेली पर के तेल में से कुछ शुद्ध ठहरनेवाले के दाहिने कान के सिरे पर, और उसके दाहिने हाथ और दाहिने पाँव के अँगूठों, पर दोषबलि के लहू के स्थान पर लगाए।
29 ೨೯ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
२९और जो तेल याजक की हथेली पर रह जाए उसे वह शुद्ध ठहरनेवाले के लिये यहोवा के सामने प्रायश्चित करने को उसके सिर पर डाल दे।
30 ೩೦ ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
३०तब वह पंडुक या कबूतरी के बच्चों में से जो वह ला सका हो एक को चढ़ाए,
31 ೩೧ ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
३१अर्थात् जो पक्षी वह ला सका हो, उनमें से वह एक को पापबलि के लिये और अन्नबलि समेत दूसरे को होमबलि के लिये चढ़ाए; इस रीति से याजक शुद्ध ठहरनेवाले के लिये यहोवा के सामने प्रायश्चित करे।
32 ೩೨ “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
३२जिसे कोढ़ की व्याधि हुई हो, और उसके इतनी पूँजी न हो कि वह शुद्ध ठहरने की सामग्री को ला सके, तो उसके लिये यही व्यवस्था है।”
33 ೩೩ ಯೆಹೋವನು ಮೋಶೆ ಮತ್ತು ಆರೋನರಿಗೆ,
३३फिर यहोवा ने मूसा और हारून से कहा,
34 ೩೪ “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
३४“जब तुम लोग कनान देश में पहुँचो, जिसे मैं तुम्हारी निज भूमि होने के लिये तुम्हें देता हूँ, उस समय यदि मैं कोढ़ की व्याधि तुम्हारे अधिकार के किसी घर में दिखाऊँ,
35 ೩೫ ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
३५तो जिसका वह घर हो वह आकर याजक को बता दे कि मुझे ऐसा देख पड़ता है कि घर में मानो कोई व्याधि है।
36 ೩೬ ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
३६तब याजक आज्ञा दे कि उस घर में व्याधि देखने के लिये मेरे जाने से पहले उसे खाली करो, कहीं ऐसा न हो कि जो कुछ घर में हो वह सब अशुद्ध ठहरे; और इसके बाद याजक घर देखने को भीतर जाए।
37 ೩೭ ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
३७तब वह उस व्याधि को देखे; और यदि वह व्याधि घर की दीवारों पर हरी-हरी या लाल-लाल मानो खुदी हुई लकीरों के रूप में हो, और ये लकीरें दीवार में गहरी देख पड़ती हों,
38 ೩೮ ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
३८तो याजक घर से बाहर द्वार पर जाकर घर को सात दिन तक बन्द कर रखे।
39 ೩೯ ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
३९और सातवें दिन याजक आकर देखे; और यदि वह व्याधि घर की दीवारों पर फैल गई हो,
40 ೪೦ ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
४०तो याजक आज्ञा दे कि जिन पत्थरों को व्याधि है उन्हें निकालकर नगर से बाहर किसी अशुद्ध स्थान में फेंक दें;
41 ೪೧ ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
४१और वह घर के भीतर ही भीतर चारों ओर खुरचवाए, और वह खुरचन की मिट्टी नगर से बाहर किसी अशुद्ध स्थान में डाली जाए;
42 ೪೨ ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
४२और उन पत्थरों के स्थान में और दूसरे पत्थर लेकर लगाएँ और याजक ताजा गारा लेकर घर की जुड़ाई करे।
43 ೪೩ “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
४३“यदि पत्थरों के निकाले जाने और घर के खुरचे और पुताई जाने के बाद वह व्याधि फिर घर में फूट निकले,
44 ೪೪ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
४४तो याजक आकर देखे; और यदि वह व्याधि घर में फैल गई हो, तो वह जान ले कि घर में गलित कोढ़ है; वह अशुद्ध है।
45 ೪೫ ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
४५और वह सब गारे समेत पत्थर, लकड़ी और घर को खुदवाकर गिरा दे; और उन सब वस्तुओं को उठवाकर नगर से बाहर किसी अशुद्ध स्थान पर फिंकवा दे।
46 ೪೬ ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
४६और जब तक वह घर बन्द रहे तब तक यदि कोई उसमें जाए तो वह साँझ तक अशुद्ध रहे;
47 ೪೭ ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
४७और जो कोई उस घर में सोए वह अपने वस्त्रों को धोए; और जो कोई उस घर में खाना खाए वह भी अपने वस्त्रों को धोए।
48 ೪೮ “ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
४८“पर यदि याजक आकर देखे कि जब से घर लेसा गया है तब से उसमें व्याधि नहीं फैली है, तो यह जानकर कि वह व्याधि दूर हो गई है, घर को शुद्ध ठहराए।
49 ೪೯ ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
४९और उस घर को पवित्र करने के लिये दो पक्षी, देवदार की लकड़ी, लाल रंग का कपड़ा और जूफा लाए,
50 ೫೦ ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
५०और एक पक्षी बहते हुए जल के ऊपर मिट्टी के पात्र में बलिदान करे,
51 ೫೧ ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
५१तब वह देवदार की लकड़ी, लाल रंग के कपड़े और जूफा और जीवित पक्षी इन सभी को लेकर बलिदान किए हुए पक्षी के लहू में और बहते हुए जल में डुबा दे, और उस घर पर सात बार छिड़के।
52 ೫೨ ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
५२इस प्रकार वह पक्षी के लहू, और बहते हुए जल, और जीवित पक्षी, और देवदार की लकड़ी, और जूफा और लाल रंग के कपड़े के द्वारा घर को पवित्र करे;
53 ೫೩ ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
५३तब वह जीवित पक्षी को नगर से बाहर मैदान में छोड़ दे; इसी रीति से वह घर के लिये प्रायश्चित करे, तब वह शुद्ध ठहरेगा।”
54 ೫೪ “ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
५४सब भाँति के कोढ़ की व्याधि, और सेंहुएँ,
55 ೫೫ ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
५५और वस्त्र, और घर के कोढ़,
56 ೫೬ ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
५६और सूजन, और पपड़ी, और दाग के विषय में,
57 ೫೭ ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.
५७शुद्ध और अशुद्ध ठहराने की शिक्षा देने की व्यवस्था यही है। सब प्रकार के कोढ़ की व्यवस्था यही है।

< ಯಾಜಕಕಾಂಡ 14 >