< ಯಾಜಕಕಾಂಡ 2 >

1 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
और अगर कोई ख़ुदावन्द के लिए नज़्र की क़ुर्बानी का हदिया लाए, तो अपने हदिये के लिए मैदा ले और उसमें तेल डाल कर उसके ऊपर लुबान रख्खे;
2 ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
और वह उसे हारून के बेटों के पास जो काहिन हैं लाए, और तेल मिले हुए मैदे में से इस तरह अपनी मुट्ठी भर कर निकाले कि सब लुबान उसमें आ जाए। तब काहिन उसे नज़्र की क़ुर्बानी की यादगारी के तौर पर मज़बह के ऊपर जलाए। यह ख़ुदावन्द के लिए राहतअंगेज़ ख़ुशबू की आतिशी क़ुर्बानी होगी।
3 ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
और जो कुछ उस नज़्र की क़ुर्बानी में से बाक़ी रह जाए, वह हारून और उसके बेटों का होगा। यह ख़ुदावन्द की आतिशी क़ुर्बानियों में पाकतरीन चीज़ है।
4 “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
“और जब तू तनूर का पका हुआ नज़्र की क़ुर्बानी का हदिया लाए, तो वह तेल मिले हुए मैदे के बेख़मीरी गिरदे या तेल चुपड़ी हुई बेख़मीरी चपातियाँ हों।
5 ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
और अगर तेरी नज़्र की क़ुर्बानी का चढ़ावा तवे का पका हुआ हो, तो वह तेल मिले हुए बेख़मीरी मैदे का हो।
6 ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
उसको टुकड़े — टुकड़े करके उस पर तेल डालना, तो वह नज़्र की क़ुर्बानी होगी।
7 ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
और अगर तेरी नज़्र की क़ुर्बानी का चढ़ावा कढ़ाई का तला हुआ हो, तो वह मैदे से तेल में बनाया जाए।
8 ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
तू इन चीज़ों की नज़्र की क़ुर्बानी का चढ़ावा ख़ुदावन्द के पास लाना, वह काहिन को दिया जाए। और वह उसे मज़बह के पास लाए।
9 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
और काहिन उस नज़्र की क़ुर्बानी में से उसकी यादगारी का हिस्सा उठा कर मज़बह पर जलाए, यह ख़ुदावन्द के लिए राहतअंगेज़ ख़ुशबू की आतिशी क़ुर्बानी होगी।
10 ೧೦ ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
और जो कुछ उस नज़्र की क़ुर्बानी में से बच रहे वह हारून और उसके बेटों का होगा। यह ख़ुदावन्द की आतिशी क़ुर्बानियों में पाकतरीन चीज़ है।
11 ೧೧ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
कोई नज़्र की क़ुर्बानी जो तुम ख़ुदावन्द के सामने चढ़ाओ, वह ख़मीर मिला कर न बनाई जाए; तुम कभी आतिशी क़ुर्बानी के तौर पर ख़ुदावन्द के सामने ख़मीर या शहद न जलाना।
12 ೧೨ ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
तुम इनको पहले फलों के हदिये के तौर पर ख़ुदावन्द के सामने लाना, लेकिन राहतअंगेज़ ख़ुशबू के लिए वह मज़बह पर न पेश किये जाएँ।
13 ೧೩ ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
और तू अपनी नज़्र की क़ुर्बानी के हर हदिये को नमकीन बनाना, और अपनी किसी नज़्र की क़ुर्बानी को अपने ख़ुदा के 'अहद के नमक बग़ैर न रहने देना; अपने सब हदियों के साथ नमक भी पेश करना।
14 ೧೪ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
'और अगर तू पहले फलों की नज़्र का हदिया ख़ुदावन्द के सामने पेश करे तो अपने पहले फलों की नज़्र के चढ़ावे के लिए अनाज की भुनी हुई बालें, या'नी हरी — हरी बालों में से हाथ से मलकर निकाले हुए अनाज को चढ़ाना।
15 ೧೫ ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
और उसमें तेल डालना और उसके ऊपर लुबान रखना, तो वह नज़्र की क़ुर्बानी होगी।
16 ೧೬ ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
और काहिन उसकी यादगारी के हिस्से को, या'नी थोड़े से मल कर निकाले हुए दानों को और थोड़े से तेल को और सारे लुबान को जला दे; यह ख़ुदावन्द के लिए आतिशी क़ुर्बानी होगी।

< ಯಾಜಕಕಾಂಡ 2 >