< ಯಾಜಕಕಾಂಡ 27 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
యెహోవా మోషేకు ఇలా ఆజ్ఞాపించాడు.
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
“నీవు ఇశ్రాయేలీయులతో ఇలా చెప్పు. ఎవరన్నా విశేషమైన మ్రొక్కుబడి చేస్తే నీవు నిర్ణయించిన వెల చొప్పున వారు యెహోవాకు దాన్ని చెల్లించాలి.
3 ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.
నీవు నిర్ణయించవలసిన వెల ఇది. ఇరవై ఏళ్ళు మొదలు అరవై ఏళ్ల వయస్సు వరకూ పురుషుడికి పరిశుద్ధ స్థలం తులం లెక్క ప్రకారం ఏభై తులాల వెండి నిర్ణయించాలి.
4 ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
స్త్రీకి ముప్ఫై తులాలు నిర్ణయించాలి.
5 ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
ఐదేళ్ళు మొదలు ఇరవై ఏళ్ల లోపలి వయస్సు గల పురుషుడికి ఇరవై తులాల వెలను, స్త్రీకి పది తులాల వెలను నిర్ణయించాలి.
6 ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
ఒక నెల మొదలు ఐదేళ్ళ లోపు వయస్సుగల పురుషుడికి ఐదు తులాల వెండి వెలను స్త్రీకి మూడు తులాల వెండి వెలను నిర్ణయించాలి.
7 ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
అరవై ఏళ్ల వయసు దాటిన పురుషుడికి పదిహేను తులాల వెలను స్త్రీకి పది తులాల వెలను నిర్ణయించాలి.
8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
ఎవరైనా నీవు నిర్ణయించిన వెల చెల్లించలేనంత పేద వాడైతే అతడు యాజకుని ఎదుటికి రావాలి. అప్పుడు యాజకుడు అతని వెల నిర్ణయిస్తాడు. మొక్కుకున్న వాడి తాహతు చొప్పున వాడికి వెలను నిర్ణయించాలి.
9 “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
యెహోవాకు అర్పణంగా అర్పించే పశువుల్లో ప్రతిదాన్నీ యెహోవాకు ప్రతిష్ఠితంగా ఎంచాలి.
10 ೧೦ ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
౧౦దాన్ని మార్చకూడదు. చెడ్డదానికి బదులు మంచిదాన్ని గానీ మంచిదానికి బదులు చెడ్డదాన్ని గానీ ఒక దానికి బదులు మరొక దాన్నిగానీ ఇయ్యకూడదు. మొక్కుకున్న జంతువుకు బదులు వేరొక జంతువును మారిస్తే అదీ దానికి బదులుగా ఇచ్చినదీ కూడా ప్రతిష్ఠితం అయిపోతుంది.
11 ೧೧ ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
౧౧ప్రజలు యెహోవాకు అర్పించకూడని అపవిత్ర జంతువుల్లో ఒకదాన్ని తెస్తే ఆ జంతువును యాజకుని ఎదుట నిలబెట్టాలి.
12 ೧೨ ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
౧౨అది మంచిదైనా చెడ్డదైనా యాజకుడు దాని వెలను నిర్ణయించాలి. యాజకుడివైన నీవు నిర్ణయించిన వెల ఖాయం.
13 ೧೩ ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
౧౩అయితే ఎవరైనా అలాటి జంతువును విడిపించుకోవాలనుకుంటే నీవు నిర్ణయించిన వెలలో ఐదో వంతు దానితో కలపాలి.
14 ೧೪ “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
౧౪ఎవరైనా తన ఇల్లు యెహోవాకు సమర్పించడానికి దాన్ని ప్రతిష్ఠించినట్టయితే అది మంచిదైనా చెడ్డదైనా యాజకుడు దాని వెల నిర్ణయించాలి. యాజకుడు నిర్ణయించిన వెల ఖాయం అవుతుంది.
15 ೧೫ ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
౧౫తన ఇల్లు దేవునికి అర్పించిన వాడు దాన్ని విడిపించుకోవాలనుకుంటే అతడు నీవు నిర్ణయించిన వెలలో ఐదో వంతు దానితో కలపాలి. అప్పుడు ఆ ఇల్లు అతనిదవుతుంది.
16 ೧೬ “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
౧౬ఒకడు తన పిత్రార్జితమైన పొలంలో కొంత యెహోవాకు ప్రతిష్ఠించినట్టయితే దానిలో చల్లే విత్తనాల కొలత చొప్పున దాని వెల నిర్ణయించాలి. పది తూముల బార్లీ విత్తనాలకు ఏభై తులాల వెండి నిర్ణయించాలి.
17 ೧೭ ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
౧౭అతడు సునాద సంవత్సరం మొదలు తన పొలాన్ని ప్రతిష్ఠించినట్టయితే నీవు నిర్ణయించే వెల ఖాయం.
18 ೧೮ ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
౧౮సునాద సంవత్సరమైన తరువాత ఒకడు తన పొలాన్ని ప్రతిష్ఠించినట్టయితే యాజకుడు మిగిలిన సంవత్సరాల లెక్క చొప్పున, అంటే మరుసటి సునాద సంవత్సరం వరకూ ఉన్న సంవత్సరాలను బట్టి వెలను నిర్ణయించాలి. నీవు నిర్ణయించిన వెలలో దాని అంచనాను తగ్గించాలి.
19 ೧೯ ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
౧౯పొలాన్ని ప్రతిష్ఠించినవాడు దాన్ని విడిపించుకోవాలనుకుంటే నీవు నిర్ణయించిన వెలలో ఐదో వంతును అతడు దానితో కలపాలి. అప్పుడు అది అతనిదవుతుంది.
20 ೨೦ ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
౨౦అతడు ఆ పొలాన్ని విడిపించకపోతే లేదా దాన్ని వేరొకడికి అమ్మితే ఇక ఎన్నటికీ దాన్ని విడిపించడం వీలు కాదు.
21 ೨೧ ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
౨౧ఆ పొలం సునాద సంవత్సరంలో విడుదల అయితే అది ప్రతిష్ఠించిన పొలం లాగానే యెహోవాకు ప్రతిష్ఠితం అవుతుంది. ఆ ఆస్తి యాజకునిది అవుతుంది.
22 ೨೨ “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
౨౨ఒకడు తాను కొన్న పొలాన్ని, అంటే తన ఆస్తిలో చేరని దాన్ని యెహోవాకు ప్రతిష్ఠించినట్టయితే
23 ೨೩ ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
౨౩యాజకుడు సునాద సంవత్సరం వరకూ నిర్ణయించిన వెల చొప్పున అతనికి నియమించాలి. ఆ రోజునే నీవు నిర్ణయించిన వెల చొప్పున యెహోవాకు ప్రతిష్ఠితంగా దాని చెల్లించాలి.
24 ೨೪ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
౨౪సునాద సంవత్సరంలో ఆ భూమి ఎవరి పిత్రార్జితమో వాడికి, అంటే ఆ పొలాన్ని అమ్మిన వాడికి అది తిరిగి రావాలి.
25 ೨೫ ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
౨౫నీ వెలలన్నీ పరిశుద్ధ స్థలం వెల చొప్పున నిర్ణయించాలి. ఒక తులం ఇరవై చిన్నాలు.
26 ೨೬ “‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
౨౬జంతువుల్లో తొలిపిల్ల యెహోవాది గనక ఎవరూ దాన్ని ప్రతిష్ఠించకూడదు. అది ఎద్దు అయినా గొర్రెమేకల మందలోనిదైనా యెహోవాదే.
27 ೨೭ ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.
౨౭అది అపవిత్ర జంతువైతే వాడు నీవు నిర్ణయించే వెలలో ఐదో వంతు దానితో కలిపి దాని విడిపించవచ్చు. దాని విడిపించకపోతే నీవు నిర్ణయించిన వెలకు దాని అమ్మాలి.
28 ೨೮ “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
౨౮అయితే మనుషుల్లోగాని జంతువుల్లోగాని సొంత పొలంలోగాని తనకు కలిగినవాటన్నిటిలో దేనినైనా ఒకడు యెహోవాకు ప్రతిష్టించినట్టయితే ప్రతిష్ఠించిన దాన్ని అమ్మకూడదు, విడిపించ కూడదు. ప్రతిష్ఠించిన ప్రతిదీ యెహోవాకు అతి పరిశుద్ధంగా ఉంటుంది.
29 ೨೯ ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
౨౯మనుషులు ప్రతిష్ఠించే వాటిలో దేనినైనా విడిపించకుండా చంపి వేయాలి.
30 ೩೦ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
౩౦ధాన్యంలో, చెట్ల కాయల్లో, భూమి ఫలమంతటిలో పదవ వంతు యెహోవా స్వంతం. అది యెహోవాకు ప్రతిష్ఠితం అవుతుంది.
31 ೩೧ ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
౩౧ఒకడు తాను చెల్లించవలసిన దశమభాగాల్లో దేనినైనా విడిపించుకోవాలి అనుకుంటే దానిలో ఐదో వంతును దానితో కలపాలి.
32 ೩೨ ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
౩౨ఆవుల్లోగాని, గొర్రె మేకల్లోగాని, కాపరి కర్రతో తోలే వాటన్నిటిలో దశమభాగం ప్రతిష్ఠితం అవుతుంది.
33 ೩೩ ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
౩౩అది మంచిదో చెడ్డదో పరీక్ష చెయ్యకూడదు, దాన్ని మార్చకూడదు. దాని మారిస్తే అదీ దానికి బదులుగా ఇచ్చినది కూడా ప్రతిష్ఠితాలు అవుతాయి. అలాటి దాన్ని విడిపించ కూడదు అని చెప్పు.”
34 ೩೪ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.
౩౪ఇవి యెహోవా సీనాయి కొండ మీద ఇశ్రాయేలీయుల కోసం మోషేకు ఇచ్చిన ఆజ్ఞలు.

< ಯಾಜಕಕಾಂಡ 27 >