< ಯಾಜಕಕಾಂಡ 7 >

1 “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
दोषार्पणाविषयीचा विधी असा आहे: हे अर्पण परमपवित्र आहे.
2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ज्या स्थानी होमबलीचा वध करावयाचा त्याच स्थानी दोषार्पणाच्या बलीचा वध करावा, आणि याजकाने त्या बलीचे रक्त वेदीवर सभोवती टाकावे.
3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,
त्याची सर्व चरबी त्याने अर्पावी; त्याचे चरबीदार शेपूट, आतड्यावरील चरबी,
4 ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
दोन्ही गुरदे, त्याच्यावरील कमरेजवळील चरबी व गुरद्यापर्यंतचा काळजावरील चरबीचा पडदा वेगळे करावेत.
5 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
या सर्वांचा याजकाने होम करावा; हे परमेश्वरासाठी होमार्पण आहे. हेच दोषार्पण होय.
6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.
याजक वर्गातील प्रत्येक पुरुषाला हे दोषार्पण बली खाण्याचा हक्क आहे; ते परमपवित्र आहे, ते पवित्र स्थानी बसून खावे.
7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.
दोषार्पण पापार्पणासारखेच आहे; त्या दोघांचे विधी एकच आहेत; जो याजक ह्याच्याद्वारे प्रायश्चित करील त्याचा त्या अर्पणावर हक्क आहे.
8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
प्रायश्चित करणाऱ्या याजकाचा त्या होमार्पणाच्या बलीच्या कातड्यावरही हक्क असेल.
9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
भट्टीत भाजलेले कढईत किंवा तव्यावर तळलेले सर्व अन्नार्पण, ते अर्पण करणाऱ्या याजकाचे होईल.
10 ೧೦ ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
१०प्रत्येक अन्नार्पण तेल मिश्रित किंवा कोरडे, ते अर्पण करणाऱ्या अहरोनाच्या मुलांचे आहे; त्या सर्वाचा त्यांच्यावर सारखाच हक्क आहे.
11 ೧೧ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
११परमेश्वरासाठी कोणाला शांत्यर्पणाचा यज्ञ करावयाचा असेल तर त्याचा विधी असा:
12 ೧೨ ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
१२त्यास तो शांत्यर्पणाचा यज्ञ उपकारस्तुतीसाठी करावयाचा असेल तर त्याने तेलात मळलेल्या, बेखमीर पोळ्या, तेल लावलेल्या बेखमीर चपात्या आणि तेलात मळलेल्या सपिठाच्या तळलेल्या पोळया उपकारस्तुतीच्या यज्ञासोबत अर्पाव्या.
13 ೧೩ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
१३त्याच्या उपकारस्तुतीच्या शांत्यर्पणाच्या यज्ञासोबत त्याने खमिर घातलेल्या भाकरीही अर्पाव्या
14 ೧೪ ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.
१४या प्रत्येक अर्पणातून परमेश्वरासाठी प्रत्येकी एक पोळी अर्पावी; शांत्यर्पणाचे रक्त शिंपडणाऱ्या याजकाचा त्या पोळीवर हक्क आहे.
15 ೧೫ ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
१५त्याने उपकारस्तुतीसाठी केलेल्या शांत्यर्पणाच्या यज्ञबलीचे मांस, अर्पण करण्याच्या दिवशीच खावे; त्यातील काही सकाळपर्यंत ठेवू नये.
16 ೧೬ “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
१६यज्ञबलीचे अर्पण नवसाचे किंवा स्वखुशीचे असेल तर ज्या दिवशी तो ते अर्पील त्यादिवशीच त्याने ते खावे आणि जर त्यातून काही उरेल तर त्याने दुसऱ्या दिवशीही खावे.
17 ೧೭ ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
१७त्या यज्ञबलीचे काही मांस तिसऱ्या दिवसापर्यंत उरले तर ते अग्नीत जाळूत टाकावे.
18 ೧೮ ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
१८जर कोणी शांत्यर्पणाच्या यज्ञबलीच्या मांसातून तिसऱ्या दिवशी मांस खाईल तर परमेश्वरास ते आवडणार नाही, व तो ते अर्पण मान्य करणार नाही; ते अर्पण अमंगळ होईल; त्या पापाबद्दल भोगाव्या लागणाऱ्या शिक्षेस तो स्वत: जबाबदार राहील.
19 ೧೯ ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
१९ज्या मांसास कोणत्याही अशुद्ध वस्तूचा स्पर्श झाला असेल ते खाऊ नये; ते अग्नीत जाळून टाकावे. शुद्ध असणाऱ्यानेच यज्ञबलीचे मांस खावे;
20 ೨೦ ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.
२०परंतु जर कोणी अशुद्ध असून परमेश्वरास अर्पिलेल्या शांत्यर्पणाच्या यज्ञबलीचे मांस खाईल तर त्यास आपल्या लोकांतून बाहेर काढावे.
21 ೨೧ ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
२१एखादा मनुष्य जर एखाद्या अशुद्ध वस्तुला स्पर्श करेल मग ती अशुद्धता मनुष्याची, पशूची किंवा दुसऱ्या कोणत्या अमंगळ पदार्थाची असो, तर तो अशुद्ध होईल आणि परमेश्वरास अर्पण केलेल्या शांत्यर्पणाच्या यज्ञबलीचे जर तो मांस खाईल तर त्यास आपल्या लोकांतून बाहेर काढावे.
22 ೨೨ ಯೆಹೋವನು ಮೋಶೆಗೆ,
२२परमेश्वर मोशेला म्हणाला,
23 ೨೩ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
२३सर्व इस्राएल लोकांस असे सांग: तुम्ही बैलाची मेंढराची किंवा बकऱ्याची चरबी खाऊ नये.
24 ೨೪ ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
२४मरण पावलेल्या जनावराची चरबी किंवा इतर पशूंनी फाडून टाकलेल्या जनावराची चरबी तुम्ही इतर कामासाठी वापरावी पण ती मुळीच खाऊ नये.
25 ೨೫ ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
२५परमेश्वरास होमाद्ववारे अर्पिलेल्या पशूची चरबी जर कोणी खाईल तर त्यास आपल्या लोकांतून बाहेर काढावे
26 ೨೬ ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
२६“तुम्ही कोठेही राहत असला तरी आपल्या घरात पक्ष्याचे किंवा जनावराचे रक्त तुम्ही कधीही खाऊ नये.
27 ೨೭ ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
२७जर कोणी कोणतेही रक्त खाईल तर त्यास आपल्या लोकांतून बाहेर काढावे.”
28 ೨೮ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
२८परमेश्वर मोशेला म्हणाला,
29 ೨೯ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
२९“इस्राएल लोकांस असे सांग: जर कोणी परमेश्वरासमोर आपल्या शांत्यर्पणाचा यज्ञबली अर्पील तर त्याने त्या अर्पणातून काही भाग परमेश्वराकडे आणावा.
30 ೩೦ ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.
३०त्याने आपल्या हाताने परमेश्वरासाठी अर्पणे आणावी; त्याने चरबी व ऊर याजकाकडे आणावा; ते ऊर परमेश्वरासमोर ओवाळले जाईल; हे ओवाळणीचे अर्पण होय.
31 ೩೧ ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.
३१मग याजकाने त्या चरबीचा होम करावा परंतु ऊर अहरोन व त्याचे पुत्र ह्यांचा होईल.
32 ೩೨ ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.
३२तसेच तुम्ही आपल्या शांत्यर्पणाच्या यज्ञबलीची उजवी मांडीही समर्पित केलेला अंश म्हणून याजकाला द्यावी.
33 ೩೩ ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.
३३अहरोनाच्या मुलांपैकी जो कोणी शांत्यर्पणाचे रक्त व चरबी अर्पील त्याचा त्या मांडीवर हक्क असावा.
34 ೩೪ ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.
३४मी परमेश्वर इस्राएल लोकांच्या शांत्यर्पणाच्या यज्ञबलीतून ओवाळणीचा ऊर व उजवी मांडी काढून घेऊन अहरोन याजक व त्याचे पुत्र ह्याना दिली आहे; हा इस्राएल लोकांकडून त्यांना मिळणारा नेहमीचा हिस्सा आहे. इस्राएल लोकांनी हा निरंतरचा विधी म्हणून पिढ्यानपिढया पाळावा.”
35 ೩೫ ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
३५परमेश्वराकरिता अर्पिलेल्या अर्पणातून हे भाग अहरोन व त्याचे पुत्र ह्यांना देण्यात आलेले आहेत; जेव्हा जेव्हा ते याजक म्हणून परमेश्वराची सेवा करतात तेव्हा तेव्हा त्या समर्पणातून ते भाग त्यांना मिळावेत. देवाची सेवा करणारे याजक म्हणून ज्या दिवशी त्यांची नेमणूक करण्यात आली त्याच दिवसापासून असे ठरले आहे.
36 ೩೬ ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.
३६परमेश्वराने ज्या दिवशी त्यांना अभिषेक केला त्यादिवशी त्याने इस्राएल लोकांकडून हा भाग त्यांना मिळावा अशी आज्ञा दिली व हा त्यांचा पिढ्यानपिढ्या कायमचा हक्क ठरला आहे.
37 ೩೭ ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.
३७हे विधी होमार्पण, अन्नार्पण, पापार्पण, दोषार्पण, याजकाच्या समर्पणाच्या वेळचे अर्पण आणि शांत्यर्पण या विषयीचे आहे;
38 ೩೮ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.
३८इस्राएल लोकांनी परमेश्वराकरिता काय अर्पणे आणावीत या विषयी त्याने त्यांना सीनाय रानात आज्ञा दिली त्यावेळी त्याने मोशेला ह्याप्रमाणे सीनाय पर्वतावर हे विधी लावून दिले.

< ಯಾಜಕಕಾಂಡ 7 >