< ಲೂಕನು 8 >

1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
येको बाद यीशु नगर-नगर अऊर गांव-गांव प्रचार करतो हुयो, अऊर परमेश्वर को राज्य को सुसमाचार सुनावतो हुयो फिरन लग्यो, अऊर हि बारा चेला ओको संग होतो,
2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
अऊर कुछ बाईयां भी होती जो दुष्ट आत्मावों सी अऊर बीमारियों सी छुड़ायी गयी होती, अऊर हि यो आय: मरियम जो मगदलीनी कहलावत होती, जेको म सी सात दुष्ट आत्मायें निकली होती,
3 ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
अऊर हेरोदेस को भण्डारी खुजा की पत्नी योअन्ना, अऊर सूसन्नाह, अऊर बहुत सी दूसरी बाईयां। जो अपनी जायजाद सी यीशु अऊर ओको चेलावों की सेवा करत होती।
4 ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
जब बड़ी भीड़ जमा भयी अऊर नगर-नगर को लोग ओको जवर आवत होतो, त ओन दृष्टान्त म कह्यो।
5 “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
“एक बोवन वालो बीज बोवन निकल्यो। बोवतो हुयो कुछ बीज रस्ता को किनार गिरयो, अऊर खुंद्यो गयो, अऊर आसमान को पक्षिंयों न ओख खाय लियो।
6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.
कुछ गोटाड़ी जागा पर गिरयो, अऊर उग्यो पर ओल नहीं मिलनो सी सूख गयो।
7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
कुछ बीज काटा को बीच म गिरयो, अऊर झाड़ियों न संग-संग बढ़ क ओख दबाय दियो।
8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.
कुछ बीज अच्छी जमीन पर गिरयो, अऊर उग क सौ गुना फर लायो।” यो कह्य क यीशु न ऊचो आवाज सी कह्यो, “जेको सुनन को कान हय ऊ सुन ले!”
9 ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
यीशु को चेलावों न ओको सी पुच्छ्यो कि यो दृष्टान्त को अर्थ का हय?
10 ೧೦ ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
ओन कह्यो, “तुम ख परमेश्वर को राज्य को भेदो की समझ दियो हय, पर दूसरों ख दृष्टान्तों म सुनायो जावय हय, येकोलायी कि ‘हि देखतो हुयो भी नहीं देखय, अऊर सुनतो हुयो भी नहीं समझय।’
11 ೧೧ ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
“दृष्टान्त को अर्थ यो हय: बीज परमेश्वर को वचन हय।
12 ೧೨ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
रस्ता को किनार को हि आय, जिन्न सुन्यो, तब शैतान आय क उन्को मन म सी वचन उठाय लेवय हय कि कहीं असो नहीं होय कि हि विश्वास कर क् उद्धार पायेंन।
13 ೧೩ ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
चट्टान पर को हि आय कि जब सुनय हंय, त खुशी सी वचन ख स्वीकार त करय हंय, पर जड़ी नहीं पकड़न सी हि थोड़ी देर तक विश्वास रखय हंय अऊर परीक्षा को समय बहक जावय हंय।
14 ೧೪ ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
काटो की झाड़ियों म गिरयो, यो हि आय जो सुनय हंय, पर आगु चल क, चिन्ता अऊर धन, अऊर जीवन को सूख विलाश म फस जावय हंय अऊर उन्को फर नहीं पकय।
15 ೧೫ ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
पर अच्छी जमीन म को हि आय, जो वचन सुन क अच्छो अऊर शुद्ध मन म सम्भाल्यो रह्य हंय, अऊर धीरज सी फर लावय हंय।
16 ೧೬ “ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
“कोयी दीया जलाय क बर्तन सी नहीं झाकय, अऊर नहीं खटिया को खल्लो रखय हय, पर दीवट पर रखय हय कि अन्दर आवन वालो प्रकाश पाये।
17 ೧೭ ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
“कुछ लूक्यो नहाय जो जान्यो नहीं जाये, अऊर नहीं कुछ लूक्यो हय जो जाननो नहीं पाये अऊर दिख नहीं जाय।
18 ೧೮ ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
“येकोलायी चौकस रहो कि तुम कौन्सो तरह सी सुनय हय? कहालीकि जेको जवर हय ओख दियो जायेंन, अऊर जेको जवर नहाय ओको सी ऊ भी ले लियो जायेंन, जेक ऊ अपनो समझय हय।”
19 ೧೯ ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
यीशु की माय अऊर ओको भाऊ ओको जवर आयो, पर भीड़ को वजह ओको सी मुलाखात नहीं कर सक्यो।
20 ೨೦ ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
ओको सी कह्यो गयो, “तोरी माय अऊर तोरो भाऊ बाहेर खड़ो हुयो, तोरो सी मिलनो चाहवय हंय।”
21 ೨೧ ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
यीशु न येको उत्तर म उन्को सी कह्यो, “मोरी माय अऊर मोरो भाऊ हि आय, जो परमेश्वर को वचन सुनय अऊर मानय हंय।”
22 ೨೨ ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
फिर एक दिन यीशु अऊर ओको चेला डोंगा पर चढ़्यो, अऊर ओन उन्को सी कह्यो, “आवो, झील को ओन पार चलबो।” येकोलायी उन्न डोंगा खोल दियो अऊर निकल गयो।
23 ೨೩ ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
पर जब डोंगा चल रह्यो होतो, त यीशु सोय गयो: अऊर झील म अचानक आन्धी आयी, अऊर डोंगा पानी सी भरन लग्यो अऊर हि खतरा म पड़ गयो।
24 ೨೪ ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
तब उन्न जवर आय क ओख जगायो, अऊर कह्यो, “मालिक! मालिक! हम नाश होय रह्यो हंय।” तब यीशु न उठ क आन्धी ख अऊर पानी की लहरो ख डाट्यो अऊर हि थम गयी अऊर चैन मिल गयो।
25 ೨೫ ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
तब ओन उन्को सी कह्यो, “तुम्हरो विश्वास कित हय?” पर हि डर गयो अऊर अचम्भित होय क आपस म कहन लग्यो, “यो कौन आय जो आन्धी अऊर पानी ख भी आज्ञा देवय हय, अऊर हि ओकी मानय हंय?”
26 ೨೬ ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
तब यीशु अऊर ओको चेला गिरासेनियों को देश म पहुंच्यो, जो गलील की झील को ओन पार होतो।
27 ೨೭ ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
जब ऊ किनार पर उतरयो त ऊ नगर को एक आदमी ओख मिल्यो जेको म दुष्ट आत्मायें होती। ऊ बहुत दिनो सी कपड़ा नहीं पहिनत होतो अऊर घर म नहीं रहत होतो बल्की कब्रस्थान म रहत होतो।
28 ೨೮ ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
ऊ यीशु ख देख क चिल्लायो अऊर ओको आगु गिर क ऊंचो आवाज सी कह्यो, “हे परमेश्वर को बेटा यीशु! मोख तोरो सी का काम? मय तोरो सी बिनती करू हय, मोख सजा मत दे।”
29 ೨೯ ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
कहालीकि यीशु ऊ दुष्ट आत्मा ख ऊ आदमी म सी निकालन की आज्ञा दे रह्यो होतो, येकोलायी कि ऊ ओख पर बार बार हावी होत होती। लोग ओख संकली अऊर बेड़ियों सी हाथ पाय बान्धत होतो अऊर पहरा देत होतो तब भी ऊ बन्धनों ख तोड़ डालत होतो, अऊर दुष्ट आत्मा ओख जंगल म भटकावत फिरत होती।
30 ೩೦ ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
यीशु न ओको सी पुच्छ्यो, “तोरो का नाम हय?” ओन कह्यो, “सेना,” कहालीकि बहुत सी दुष्ट आत्मायें ओको म घुस गयी होती।
31 ೩೧ ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos g12)
उन्न यीशु सी बिनती करी कि हम्ख अधोलोक म जान की आज्ञा मत दे। (Abyssos g12)
32 ೩೨ ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
उत पहाड़ी पर डुक्कर को एक बड़ो झुण्ड चर रह्यो होतो, येकोलायी उन्न ओको सी बिनती करी कि हम्ख उन्म घुसन दे। ओन उन्ख जान दियो।
33 ೩೩ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
तब दुष्ट आत्मायें ऊ आदमी म सी निकल क डुक्कर म गयी अऊर ऊ झुण्ड ढलान पर सी झपट क झील म जाय गिरयो अऊर डुब मरयो।
34 ೩೪ ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
चरावन वालो न यो जो भयो होतो देख क भग्यो, अऊर नगर म अऊर गांव म जाय क ओको खबर दियो।
35 ೩೫ ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
लोग यो जो भयो होतो ओख देखन ख निकल्यो, अऊर यीशु को जवर आय क जो आदमी सी दुष्ट आत्मायें निकली होती, ओख यीशु को पाय को जवर कपड़ा पहिन्यो सुदबुद म बैठ्यो हुयो देख्यो अऊर डर गयो;
36 ೩೬ ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
अऊर देखन वालो न लोगों ख बतायो कि ऊ दुष्ट आत्मावों को सतायो हुयो आदमी कसो तरह सी अच्छो भयो।
37 ೩೭ ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
तब गिरासेनियों को आजु बाजू को सब लोगों न यीशु सी बिनती करी कि हमरो इत सी चली जा; कहालीकि उन पर बड़ो डर छाय गयो होतो। येकोलायी ऊ डोंगा पर चढ़ क लौट गयो।
38 ೩೮ ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
जो आदमी म सी दुष्ट आत्मायें निकली होती ऊ ओको सी बिनती करन लग्यो कि मोख अपनो संग रहन दे, पर यीशु न ओख बिदा कर क् कह्यो।
39 ೩೯ ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
“अपनो घर ख लौट जा अऊर लोगों सी बताव कि परमेश्वर न तोरो लायी कसो बड़ो बड़ो काम करयो हंय।” ऊ जाय क पूरो नगर म प्रचार करन लग्यो कि यीशु न मोरो लायी कसो बड़ो-बड़ो काम करयो।
40 ೪೦ ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
जब यीशु लौट्यो त लोग ओको सी खुशी को संग मिल्यो, कहालीकि हि सब ओकी रस्ता देख रह्यो होतो।
41 ೪೧ ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
इतनो म याईर नाम को एक आदमी जो यहूदियों को आराधनालय को मुखिया होतो, आयो अऊर यीशु को पाय पर गिर क ओको सी बिनती करन लग्यो कि मोरो घर चल।
42 ೪೨
कहालीकि ओकी बारा साल की एकलौती बेटी होती, अऊर वा मरन पर होती। जब यीशु जाय रह्यो होतो, तब लोग ओको पर गिरत पड़त होतो।
43 ೪೩ ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
एक बाई जेक बारा साल सी खून बहन को रोग होतो, अऊर जो अपनी पूरी जीवन की कमायी बैद्धो को पीछू कुछ खर्चा कर लियो होती, तब भी कोयी को हाथ सी चंगी नहीं भय सकी,
44 ೪೪ ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
भीड़ को पीछू सी आय क ओको कपड़ा को कोना ख छूयो, अऊर तुरतच ओको खून बहन की बीमारी सी ठीक भय गयी।
45 ೪೫ ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
येख पर यीशु न कह्यो, “मोख कौन छूयो?” जब सब मुकरन लग्यो, त पतरस न कह्यो। “हे मालिक, तोख त भीड़ दबाय रही हय अऊर तोरो पर गिर पड़य हय।”
46 ೪೬ ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
पर यीशु न कह्यो, “कोयी न मोख छूयो हय, कहालीकि मय न जान लियो हय कि मोरो म सी सामर्थ निकली हय।”
47 ೪೭ ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.
जब बाई न देख्यो कि मय लूक नहीं सकू, तब कापती हुयी आयी अऊर ओको पाय पर गिर क सब लोगों को आगु बतायो कि ओन कौन्सो वजह सी ओख छूयो, अऊर कसी तुरतच चंगी भय गयी।
48 ೪೮ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
यीशु न ओको सी कह्यो, “बेटी, तोरो विश्वास न तोख चंगो करयो हय, शान्ति सी चली जा।”
49 ೪೯ ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
यीशु यो कहतच रह्यो होतो कि कोयी न यहूदी आराधनालय को मुखिया को तरफ सी आय क कह्यो, “तोरी बेटी मर गयी: गुरु ख दु: ख मत दे।”
50 ೫೦ ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
यीशु न यो सुन क याईर ख कह्यो, “मत डर; केवल विश्वास रख, त वा ठीक होय जायेंन।”
51 ೫೧ ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.
घर म आय क ओन पतरस, यूहन्ना, याकूब, अऊर बेटी को माय-बाप ख छोड़ दूसरों कोयी ख अपनो संग अन्दर आवन नहीं दियो।
52 ೫೨ ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
सब ओको लायी विलाप कर क् रोय रह्यो होतो, पर यीशु न कह्यो, “रोवो मत; वा मरी नहाय पर सोय रही हय।”
53 ೫೩ ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.
हि यो जान क कि वा मर गयी हय ओकी हसी करन लग्यो।
54 ೫೪ ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.
पर यीशु न ओको हाथ पकड़्यो, अऊर पुकार क कह्यो, “हे बेटी, उठ!”
55 ೫೫ ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
तब ओको जीव लौट आयो अऊर वा तुरतच उठ क खड़ी भय गयी। तब यीशु न आज्ञा दियो कि ओख कुछ खान ख दे।
56 ೫೬ ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.
ओको माय-बाप अचम्भित भयो, पर यीशु न उन्ख चितायो कि यो जो भयो हय कोयी सी मत कहजो।

< ಲೂಕನು 8 >