< ಮತ್ತಾಯನು 16 >

1 ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
Καὶ προσελθόντες οἱ Φαρισαῖοι καὶ Σαδδουκαῖοι πειράζοντες ἐπηρώτησαν αὐτὸν σημεῖον ἐκ τοῦ οὐρανοῦ ἐπιδεῖξαι αὐτοῖς.
2 ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
ὁ δὲ ἀποκριθεὶς εἶπεν αὐτοῖς· ⸂Ὀψίας γενομένης λέγετε· Εὐδία, πυρράζει γὰρ ὁ οὐρανός·
3 ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
καὶ πρωΐ· Σήμερον χειμών, πυρράζει γὰρ στυγνάζων ὁ οὐρανός. ⸀τὸ μὲν πρόσωπον τοῦ οὐρανοῦ γινώσκετε διακρίνειν, τὰ δὲ σημεῖα τῶν καιρῶν οὐ δύνασθε.⸃
4 ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
Γενεὰ πονηρὰ καὶ μοιχαλὶς σημεῖον ἐπιζητεῖ, καὶ σημεῖον οὐ δοθήσεται αὐτῇ εἰ μὴ τὸ σημεῖον ⸀Ἰωνᾶ καὶ καταλιπὼν αὐτοὺς ἀπῆλθεν.
5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
Καὶ ἐλθόντες οἱ ⸀μαθηταὶεἰς τὸ πέραν ἐπελάθοντο ἄρτους λαβεῖν.
6 ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
ὁ δὲ Ἰησοῦς εἶπεν αὐτοῖς· Ὁρᾶτε καὶ προσέχετε ἀπὸ τῆς ζύμης τῶν Φαρισαίων καὶ Σαδδουκαίων.
7 ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
οἱ δὲ διελογίζοντο ἐν ἑαυτοῖς λέγοντες ὅτι Ἄρτους οὐκ ἐλάβομεν.
8 ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
γνοὺς δὲ ὁ Ἰησοῦς ⸀εἶπεν Τί διαλογίζεσθε ἐν ἑαυτοῖς, ὀλιγόπιστοι, ὅτι ἄρτους οὐκ ⸀ἐλάβετε
9 ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
οὔπω νοεῖτε, οὐδὲ μνημονεύετε τοὺς πέντε ἄρτους τῶν πεντακισχιλίων καὶ πόσους κοφίνους ἐλάβετε;
10 ೧೦ ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
οὐδὲ τοὺς ἑπτὰ ἄρτους τῶν τετρακισχιλίων καὶ πόσας σπυρίδας ἐλάβετε;
11 ೧೧ ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
πῶς οὐ νοεῖτε ὅτι οὐ περὶ ⸀ἄρτωνεἶπον ὑμῖν; ⸂προσέχετε δὲ ἀπὸ τῆς ζύμης τῶν Φαρισαίων καὶ Σαδδουκαίων.
12 ೧೨ ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
τότε συνῆκαν ὅτι οὐκ εἶπεν προσέχειν ἀπὸ τῆς ζύμης ⸂τῶν ἄρτων ἀλλὰ ἀπὸ τῆς διδαχῆς τῶν Φαρισαίων καὶ Σαδδουκαίων.
13 ೧೩ ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
Ἐλθὼν δὲ ὁ Ἰησοῦς εἰς τὰ μέρη Καισαρείας τῆς Φιλίππου ἠρώτα τοὺς μαθητὰς αὐτοῦ λέγων· ⸀Τίναλέγουσιν οἱ ἄνθρωποι εἶναι τὸν υἱὸν τοῦ ἀνθρώπου;
14 ೧೪ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
οἱ δὲ εἶπαν· Οἱ μὲν Ἰωάννην τὸν βαπτιστήν, ἄλλοι δὲ Ἠλίαν, ἕτεροι δὲ Ἰερεμίαν ἢ ἕνα τῶν προφητῶν.
15 ೧೫ ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
λέγει αὐτοῖς· Ὑμεῖς δὲ τίνα με λέγετε εἶναι;
16 ೧೬ ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
ἀποκριθεὶς δὲ Σίμων Πέτρος εἶπεν· Σὺ εἶ ὁ χριστὸς ὁ υἱὸς τοῦ θεοῦ τοῦ ζῶντος.
17 ೧೭ ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
⸂ἀποκριθεὶς δὲ ὁ Ἰησοῦς εἶπεν αὐτῷ· Μακάριος εἶ, Σίμων Βαριωνᾶ, ὅτι σὰρξ καὶ αἷμα οὐκ ἀπεκάλυψέν σοι ἀλλʼ ὁ πατήρ μου ὁ ἐν τοῖς οὐρανοῖς·
18 ೧೮ ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs g86)
κἀγὼ δέ σοι λέγω ὅτι σὺ εἶ Πέτρος, καὶ ἐπὶ ταύτῃ τῇ πέτρᾳ οἰκοδομήσω μου τὴν ἐκκλησίαν, καὶ πύλαι ᾅδου οὐ κατισχύσουσιν αὐτῆς· (Hadēs g86)
19 ೧೯ ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
⸀δώσωσοι τὰς ⸀κλεῖδαςτῆς βασιλείας τῶν οὐρανῶν, καὶ ὃ ⸀ἐὰνδήσῃς ἐπὶ τῆς γῆς ἔσται δεδεμένον ἐν τοῖς οὐρανοῖς, καὶ ὃ ⸁ἐὰνλύσῃς ἐπὶ τῆς γῆς ἔσται λελυμένον ἐν τοῖς οὐρανοῖς.
20 ೨೦ ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
τότε ⸀διεστείλατοτοῖς ⸀μαθηταῖςἵνα μηδενὶ εἴπωσιν ὅτι αὐτός ⸀ἐστινὁ χριστός.
21 ೨೧ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
Ἀπὸ τότε ἤρξατο ⸂ὁ Ἰησοῦς δεικνύειν τοῖς μαθηταῖς αὐτοῦ ὅτι δεῖ αὐτὸν ⸂εἰς Ἱεροσόλυμα ἀπελθεῖν καὶ πολλὰ παθεῖν ἀπὸ τῶν πρεσβυτέρων καὶ ἀρχιερέων καὶ γραμματέων καὶ ἀποκτανθῆναι καὶ τῇ τρίτῃ ἡμέρᾳ ἐγερθῆναι.
22 ೨೨ ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
καὶ προσλαβόμενος αὐτὸν ὁ Πέτρος ἤρξατο ἐπιτιμᾶν αὐτῷ λέγων· Ἵλεώς σοι, κύριε· οὐ μὴ ἔσται σοι τοῦτο.
23 ೨೩ ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
ὁ δὲ στραφεὶς εἶπεν τῷ Πέτρῳ· Ὕπαγε ὀπίσω μου, Σατανᾶ· σκάνδαλον ⸂εἶ ἐμοῦ, ὅτι οὐ φρονεῖς τὰ τοῦ θεοῦ ἀλλὰ τὰ τῶν ἀνθρώπων.
24 ೨೪ ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Τότε ὁ Ἰησοῦς εἶπεν τοῖς μαθηταῖς αὐτοῦ· Εἴ τις θέλει ὀπίσω μου ἐλθεῖν, ἀπαρνησάσθω ἑαυτὸν καὶ ἀράτω τὸν σταυρὸν αὐτοῦ καὶ ἀκολουθείτω μοι.
25 ೨೫ ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
ὃς γὰρ ⸀ἐὰνθέλῃ τὴν ψυχὴν αὐτοῦ σῶσαι ἀπολέσει αὐτήν· ὃς δʼ ἂν ἀπολέσῃ τὴν ψυχὴν αὐτοῦ ἕνεκεν ἐμοῦ εὑρήσει αὐτήν.
26 ೨೬ ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
τί γὰρ ⸀ὠφεληθήσεταιἄνθρωπος ἐὰν τὸν κόσμον ὅλον κερδήσῃ τὴν δὲ ψυχὴν αὐτοῦ ζημιωθῇ; ἢ τί δώσει ἄνθρωπος ἀντάλλαγμα τῆς ψυχῆς αὐτοῦ;
27 ೨೭ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
μέλλει γὰρ ὁ υἱὸς τοῦ ἀνθρώπου ἔρχεσθαι ἐν τῇ δόξῃ τοῦ πατρὸς αὐτοῦ μετὰ τῶν ἀγγέλων αὐτοῦ, καὶ τότε ἀποδώσει ἑκάστῳ κατὰ τὴν πρᾶξιν αὐτοῦ.
28 ೨೮ “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
ἀμὴν λέγω ὑμῖν ⸀ὅτιεἰσίν τινες ⸂τῶν ὧδε ἑστώτων οἵτινες οὐ μὴ γεύσωνται θανάτου ἕως ἂν ἴδωσιν τὸν υἱὸν τοῦ ἀνθρώπου ἐρχόμενον ἐν τῇ βασιλείᾳ αὐτοῦ.

< ಮತ್ತಾಯನು 16 >