< ನೆಹೆಮೀಯನು 13 >

1 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.
त्यस दिन तिनीहरूले मानिसहरूले सुन्‍ने गरी मोशाको व्यवस्था पढे । कुनै अम्मोनी वा मोआबी कहिल्यै पनि परमेश्‍वरको सभामा आउनुहुँदैन भनी त्यसमा लेखिएको भेट्टाइयो ।
2 ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.
किनकि तिनीहरू रोटी र पानी लिएर इस्राएलीहरूकहाँ आएका थिएनन्, तर तिनीहरूले इस्राएललाई सराप दिन बालामलाई भाडामा लिएका थिए । तथापि हाम्रा परमेश्‍वरले सरापलाई आशिष्‌मा परिणत गरिदिनुभयो ।
3 ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
तिनीहरूले व्यवस्था सुन्‍नेबित्तिकै तिनीहरूले इस्राएलबाट हरेक विदेशीबाट अलग गराए ।
4 ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.
अब योभन्दा पहिले पुजारी एल्यासीब हाम्रा परमेश्‍वरको मन्दिरका भण्डार-कोठाहरूका जिम्मावाल नियुक्त भएका थिए । तिनको तोबियासित सम्बन्ध थियो ।
5 ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
एल्यासीबले तोबियाको लागि एउटा ठुलो भण्डार-कोठा तयार पारेका थिए जहाँ पहिले तिनीहरूले लेवीहरू, गायकहरू, द्वारपालहरूका निम्ति अन्‍नबलि, धूप, काठपातहरू, अन्‍नका दशांशहरू, नयाँ दाखमद्य र तेल अनि पुजारीहरूका निम्ति दान राख्‍ने गर्थे ।
6 ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,
तर यी सबै समयमा म यरूशलेममा थिइनँ । किनकि बेबिलोनका राजा अर्तासास्तको बत्तिसौँ वर्षमा म राजाकहाँ गएको थिएँ । केही समयपछि फर्केर जान मैले राजालाई अनुमति मागेँ,
7 ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,
र म यरूशलेम फर्कें । परमेश्‍वरको मन्दिरका चोकहरूमा एल्यासीबले तोबियालाई भण्डार-कोठा दिएर तिनले गरेको दुष्‍टतालाई मैले बुझेँ ।
8 ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.
म सार्‍हैँ रिसाएँ, र मैले भण्डार-कोठाबाट तोबियाका सबै सरसामानहरू फालिदिएँ ।
9 ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.
भण्डार-कोठाहरू शुद्ध पारिऊन् भनी मैले आज्ञा दिएँ, अनि मैले परमेश्‍वरका मन्दिरका सामानहरू, अन्‍नबलिहरू र धूप फेरि त्यहाँ राखेँ ।
10 ೧೦ ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
लेवीहरूलाई तिनीहरूको भाग दिइएको रहेनछ, अनि लेवीहरूसाथै काम गर्ने गायकहरू आ-आफ्नो जग्गामा भागेर गएका रहे छन् भनी मैले थाहा पाएँ ।
11 ೧೧ ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
त्यसैले मैले अधिकारीहरूको सामना गरी तिनीहरूलाई भनेँ, “परमेश्‍वरको मन्दिरलाई किन बेवास्ता गरिएको?” मैले तिनीहरूलाई जम्मा गरी तिनीहरूकै पदमा नियुक्त गरेँ ।
12 ೧೨ ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
तब सारा यहूदाले अन्‍नको दशांश, नयाँ दाखमद्य र तेल भण्डार-कोठाहरूभित्र ल्याए ।
13 ೧೩ ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.
मैले पुजारी शेलेम्याह, शास्‍त्री सादोक र लेवीहरूबाट पदायाहलाई भण्डार-कोठाहरूको कोषाध्यक्षको रूपमा नियुक्त गरेँ । जक्‍कूरका छोरा, मत्तन्याहका नाति हानानलाई तिनीहरूका सहायकको रूपमा नियुक्त गरेँ किनकि तिनीहरू भरोसायोग्य ठानिएका थिए । तिनीहरूका सहायकहरूका खानेकुराहरू वितरण गर्नु नै तिनीहरूको कर्तव्य थियो ।
14 ೧೪ ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
हे मेरा परमेश्‍वर, यस विषयमा मेरो सम्झना गर्नुहोस्, अनि मेरा परमेश्‍वरको मन्दिर र यसका सेवाहरूमा मैले गरेका असल कार्यहरूलाई नमेटिदिनुहोस् ।
15 ೧೫ ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.
ती दिनमा मैले यहूदामा मानिसहरूले शबाथमा कोल पेलिरहेका, अन्‍नका भारीहरू ल्याइरहेका, अनि दाखमद्य, दाख, नेभारा र सबै किसिमका भारीहरू गधाहरूमाथि लादेर शबाथ-दिनमा यरूशलेममा ल्याएको देखेँ । त्यस दिन तिनीहरूले खानेकुरा बेच्दै थिए भनी मैले विरोध जनाएँ ।
16 ೧೬ ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.
यरूशलेममा बस्‍ने टुरोसका मानिसहरूले माछासाथै सबै किसिमका खानेकुरा ल्याए, अनि शबाथमा तिनीहरूले यहूदा र सहरका मानिसहरूलाई ती चिजहरू बेचे ।
17 ೧೭ ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
तब मैले यहूदाका मानिसहरूको सामना गरेँ, “शबाथ-दिनलाई अपवित्र पारी तपाईंहरूले यो दुष्‍ट काम गर्नुको अर्थ के हो?
18 ೧೮ ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.
के तपाईंहरूका पुर्खाहरूले यसै गरेका होइनन् र? के हाम्रा परमेश्‍वरले हामी र हाम्रो सहरमाथि यी सबै खराबी ल्याउनुभएको होइन र? अब शबाथलाई अपवित्र पारी तपाईंहरूले इस्राएलमाथि अझै धेरै क्रोध ल्याउँदै हुनुहुन्छ ।”
19 ೧೯ ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
शबाथअगि यरूशलेमका प्रवेश-द्वारहरूमा साँझ पर्नेबित्तिकै ती बन्द गरेर शबाथ नसकिएसम्म नखोलिऊन् भनी मैले आज्ञा दिएँ । शबाथ-दिनमा कुनै भारी भित्र लैजान नसकियोस् भनेर प्रवेश-द्वारहरूमा मैले मेरा केही सेवकहरू नियुक्त गरेँ ।
20 ೨೦ ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
सबै किसिमका सामान ल्याउने र बेच्नेहरूले एक-दुई पटक यरूशलेमबाहिरै छाउनी हाले ।
21 ೨೧ ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.
तर मैले तिनीहरूलाई चेताउनी दिएँ, “तपाईंहरू किन पर्खालबाहिर छाउनी हाल्नुहुन्छ? तपाईंहरूले फेरि यसो गर्नुभयो भने म तपाईंहरूलाई कारबाही गर्ने छु ।” त्यस समयदेखि तिनीहरू शबाथमा आएनन् ।
22 ೨೨ ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
तब मैले लेवीहरूलाई आ-आफूलाई शुद्ध पारी शबाथलाई पवित्र पार्न प्रवेशद्वारहरूको पहरा दिनू भनी आज्ञा दिएँ । हे मेरा परमेश्‍वर, मप्रति तपाईंको करारको बफादारीको कारणले यसको लागि पनि मलाई सम्झनुहोस्, र मलाई दया देखाउनुहोस् ।
23 ೨೩ ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.
ती दिनमा अश्दोद, अम्मोन र मोआबका स्‍त्रीहरूलाई बिहे गर्ने यहूदीहरूलाई पनि मैले देखेँ ।
24 ೨೪ ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.
तिनीहरूका सन्तानमध्ये आधाले अश्दोदको भाषा बोल्थे । तिनीहरूमध्ये कसैले पनि यहूदाको भाषा बोल्न सक्दैनथ्यो, तर ती मानिसहरूको कुनै एउटा भाषा बोल्दथे ।
25 ೨೫ ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,
मैले तिनीहरूको सामना गरी तिनीहरूलाई सराप दिएँ, र केहीलाई हिर्काएँ र तिनीहरूको जगल्टा लुछेँ । मैले तिनीहरूलाई यसो भनी परमेश्‍वरको नाउँमा शपथ खान लगाएँ, “तिमीहरूले आफ्ना छोरीहरू तिनीहरूका छोराहरूलाई नदिनू अथवा तिनीहरूका छोरीहरू आफ्ना छोराहरू वा आफ्नै लागि नलिनू ।
26 ೨೬ ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.
के यी स्‍त्रीहरूकै कारणले इस्राएलका राजा सोलोमनले पाप गरेका होइनन् र? जाति-जातिहरूका बिचमा तिनीजस्ता राजा कोही थिइनन्, र तिनका परमेश्‍वरले तिनलाई प्रेम गर्नुहुन्थ्यो, अनि परमेश्‍वरले सारा इस्राएलमाथि तिनलाई राजा बनाउनुभयो । तथापि, तिनका विदेशी पत्‍नीहरूले तिनलाई पाप गर्न लगाए । के तपाईंहरूको कुरा सुनी यी सबै दुष्‍ट काम गर्ने अनि विदेशी स्‍त्रीहरूसित बिहे गरी हाम्रा परमेश्‍वरलाई धोका दिने?”
27 ೨೭ ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.
प्रधान पुजारी एल्यासीबका छोरा योयादाको एक जना छोरो होरोनी सन्बलतको ज्वाइँ रहेछ । त्यसकारण मैले त्यसलाई मेरो उपस्थितिबाट भाग्‍न लगाएँ ।
28 ೨೮ ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.
हे मेरा परमेश्‍वर, तिनीहरूलाई सम्झनुहोस्, किनकि तिनीहरूले पुजारीको पद, यसको करार र लेवीहरूलाई दुषित पारेका छन् ।
29 ೨೯ ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.
यसरी मैले तिनीहरूलाई हरेक विदेशीबाट शुद्ध पारेँ, अनि पुजारीहरूसाथै लेवीहरूलाई तिनीहरूको आ-आफ्नै कर्तव्यमा स्थापित गराएँ ।
30 ೩೦ ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.
मैले तोकिएको समयमा दाउराको भेटी र अगौटे फलहरू उपलब्ध गराएँ ।
31 ೩೧ ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
हे मेरा परमेश्‍वर, सदासर्वदा मेरो सम्झना गर्नुहोस् ।

< ನೆಹೆಮೀಯನು 13 >