< ನೆಹೆಮೀಯನು 5 >

1 ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
तेव्हा मनुष्यांनी आणि त्यांच्या बायकांनी आपल्या यहूदी बांधवांविरुध्द तक्रार करायला सुरुवात केली.
2 ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.
त्यांच्यापैकी काहीजण म्हणू लागले, “मुले व मुलींसहीत आम्ही बरेचजण आहोत. आम्हास खायला मिळावे आणि आम्ही जिवंत रहावे यासाठी आम्हांला धान्य तर मिळाले पाहिजे.”
3 ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
काहीजण म्हणत होते “दुष्काळ असताना धान्यासाठी आम्हास आमची शेते, द्राक्षमळे आणि घरे गहाण टाकावी लागत आहेत.”
4 ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
काही असे सुद्धा म्हणत, “आमची शेते आणि द्राक्षमळे यांच्यावरीला राजाचा कर भरण्यासाठी आम्हास पैसे उसने घ्यावे लागत आहेत.
5 ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
आमच्या बांधवाचे व आमचे रक्तमांस एकच आहे आणि त्यांच्या अपत्यांसारखीच आमची अपत्ये आहेत. तरीसुद्धा आम्हांला आमची अपत्ये गुलाम म्हणून विकावी लागत आहेत. काहींना तर आपल्या कन्यांना गुलाम म्हणून विकणे भाग पडलेले आहे. आम्ही असहाय्य आहोत कारण आमची शेती आणि द्राक्षमळे आता इतर लोकांच्या मालकीचे आहेत.”
6 ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.
जेव्हा मी त्यांच्या या तक्रारी आणि त्यांचे हे शब्द ऐकले तेव्हा मला अतिशय संताप आला.
7 ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
मग मी यावर विचार करून मग श्रीमंत कुटुंबे आणि कारभारी यांच्याकडे गेलो. त्यांना म्हणालो, “तुम्ही आपल्या बंधूकडून व्याज घेत आहात” मग मी सर्व लोकांस सभेमध्ये एकत्र बोलावले
8 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
आणि त्यांना मी म्हणालो, “आपले यहूदी बांधव इतर देशामध्ये गुलाम म्हणून विकले गेले होते. त्यांना पुन्हा विकत घेऊन मुक्त करण्याचे आपण सर्वतोपरी प्रयत्न केले. परंतु तुम्ही त्यांना गुलामासारखे विकत आहा!” ते लोक गप्प राहिले आणि त्यांना काही बोलायला जागा उरली नाही.
9 ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
मी असेही म्हणालो, “तुम्ही जे करत आहात ते बरोबर नाही. जी राष्ट्रे आमचे वैरी आहेत त्यांची निंदा टाळण्यासाठी तुम्ही देवाविषयी भय बाळगून चालावे की नाही?
10 ೧೦ ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.
१०तसेच मी, माझे सेवक, माझे भाऊ त्यांस पैसे आणि धान्य उधार देत आहोत. पण त्यावरचे व्याज त्यांना सक्तीने द्यायला लावणे थांबवले पाहिजे.
11 ೧೧ ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
११त्यांची शेती, द्राक्षमळे, जैतूनाचे मळे आणि घरे तुम्ही त्यांना याच दिवशी परत करा. त्यांच्याकडून टक्केवारीने घेतलेले पैसे, धान्य, नवीन द्राक्षरस आणि तेल जे तुम्ही कर्जाऊ दिलेत ते तुम्ही त्यांना परत करा.”
12 ೧೨ ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
१२मग ते म्हणाले “त्यांच्याकडून घेतलेले सर्वकाही आम्ही परत करू व अधिक काही मागणार नाही. आम्ही तुझ्या म्हणण्यानुसार वागू.” मग मी याजकांना बोलावून घेतले आणि त्यांनी वचन दिल्याप्रमाणे मी त्यांना शपथ घ्यावयास लावली.
13 ೧೩ ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.
१३मग मी आपला पदर झटकून म्हणालो, “आपले वचन जो पाळणार नाही त्यास देव त्यांना त्यांच्या घरातून आणि मालमत्तेपासून झटकून टाकील. तो मनुष्य सर्वस्वाला मुकेल.” ते सर्व म्हणाले, “आमेन!” मग त्यांनी परमेश्वराचे गुणगान केले. आपल्या वचनाप्रमाणे लोक वागले.
14 ೧೪ ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.
१४शिवाय, यहूद्यांच्या भूमीवर राज्यपाल म्हणून माझी नेमणूक असतानाच्या काळात मी अथवा माझ्या भाऊबंदांनी राज्यपालाच्या दर्जाचे अन्न घेतले नाही. अर्तहशश्त राजाच्या कारकिर्दीच्या विसाव्या वर्षापासून बत्तिसाव्या वर्षापर्यंत मी अधिकारी होतो. मी यहूदाचा बारा वर्षे अधिकारी होतो.
15 ೧೫ ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
१५पण माझ्या आधी सतेवर असलेले राज्यपाल लोकांवर भारी बोजा लादित व त्यांच्यापासून भाकरी, द्राक्षरस घेऊन आणखी प्रत्येकी चाळीस शेकेल रुपे घेत असत. त्यांचे सेवक देखील लोकांवर जुलूम करीत असत. पण मी तसे केले नाही कारण मला देवाचे भय होते.
16 ೧೬ ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
१६मीसुद्धा तटबंदीच्या कामात सतत होतो आणि आम्ही जमीन विकत घेतली नाही. आणि माझे सर्व सेवक काम करण्यासाठी एकत्र आलो.
17 ೧೭ ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
१७माझ्या मेजावर यहूदी आणि अधिकारी यांच्यातले दीडशे माणसे शिवाय आसपासच्या राष्ट्रातून जे आम्हाकडे आले तेही जेवत असत.
18 ೧೮ ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
१८आता प्रत्येक दिवशी एक बैल, सहा निवडक मेंढरे आणि पक्षीही तयार करीत असत, व प्रत्येक दहा दिवसानी सर्व प्रकारचे द्राक्षरस मुबलक प्रमाणात आणत आणि तरीही, मी राज्यपालाकडून अन्नाचा भत्ता मागितला नाही, कारण लोकांवर कामाचा बोजा खूप भारी होता.
19 ೧೯ ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
१९हे माझ्या देवा, जे मी या देशाच्या लोकांकरता केले त्याचे तू स्मरण करून माझे बरे कर.

< ನೆಹೆಮೀಯನು 5 >