< ಅರಣ್ಯಕಾಂಡ 10 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
၁ထာဝရဘုရားသည်မောရှေအား၊-
2 ೨ “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
၂``သင်သည်လူများကိုစုရုံးခေါ်ယူရာ၌လည်း ကောင်း၊ စခန်းဖြုတ်ရာ၌လည်းကောင်း မှုတ်ရန် အချက်ပေးငွေတံပိုးခရာနှစ်လုံးကိုထု လုပ်လော့။-
3 ೩ ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
၃တံပိုးခရာနှစ်လုံးစလုံးကိုအသံရှည်ဆွဲ ၍မှုတ်သည့်အခါ လူအပေါင်းတို့သည်တဲ တော်တံခါးဝရှိသင့်ထံသို့စုရုံးလာရ ကြမည်။-
4 ೪ ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
၄တံပိုးခရာတစ်လုံးတည်းကိုမှုတ်လျှင်သား ချင်းစုခေါင်းဆောင်တို့သာလျှင် သင့်ထံသို့ စုရုံးလာရကြမည်။-
5 ೫ ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
၅တံပိုးခရာမှအသံပြတ်တောင်းမှုတ်လျှင် အရှေ့ဘက်တွင်စခန်းချသောဣသရေလ အနွယ်တို့ခရီးစထွက်ရကြမည်။-
6 ೬ ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
၆ဒုတိယအကြိမ်တံပိုးခရာမှအသံပြတ် တောင်းမှုတ်လျှင် တောင်ဘက်တွင်စခန်းချသော ဣသရေလအနွယ်တို့ခရီးစထွက်ရ ကြမည်။-
7 ೭ ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
၇သို့ဖြစ်၍တံပိုးခရာကိုပြတ်တောင်းမှုတ်သည့် အခါ စခန်းဖြုတ်ရကြမည်။ သို့ရာတွင်လူ အပေါင်းတို့ကိုစုဝေးစေရန်ဆင့်ခေါ်သည့် အခါ တံပိုးခရာကိုအသံရှည်ဆွဲ၍မှုတ် ရမည်။-
8 ೮ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
၈ယဇ်ပုရောဟိတ်များဖြစ်ကြသောအာရုန် ၏သားများက တံပိုးခရာကိုမှုတ်ရမည်။ ``အောက်ပါပညတ်ကိုသင်တို့အမျိုး အစဉ်အဆက်လိုက်နာစောင့်ထိန်းရမည်။-
9 ೯ ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
၉သင်တို့၏ပြည်ကိုရန်သူများထိပါးတိုက် ခိုက်လာသောအခါ ရန်သူကိုခုခံတိုက်ခိုက် ရန်အတွက် ဤတံပိုးခရာများကိုမှုတ်၍ တပ်လှန့်နှိုးဆော်ရမည်။ သင်တို့ဘုရားသခင်၊ ငါထာဝရဘုရားသည် သင်တို့ကိုသတိရ လျက်ရန်သူ၏လက်မှကယ်တင်တော်မူမည်။-
10 ೧೦ ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
၁၀ထို့အပြင်ပျော်ပွဲရွှင်ပွဲများဖြစ်သောလဆန်း ပွဲများနှင့်အခြားဘာသာရေးပွဲများတွင် မီး ရှို့ရာယဇ်နှင့်မိတ်သဟာယဇ်ကိုပူဇော်သော အခါ သင်တို့သည်တံပိုးခရာများကိုမှုတ် ရမည်။ ထိုအခါငါသည်သင်တို့အားကူညီ ထောက်မတော်မူမည်။ ငါသည်သင်တို့၏ ဘုရားသခင်ထာဝရဘုရားဖြစ်တော် မူသည်'' ဟုမိန့်တော်မူ၏။
11 ೧೧ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
၁၁ဣသရေလအမျိုးသားတို့သည်အီဂျစ် ပြည်မှထွက်လာပြီးနောက်ဒုတိယနှစ်၊ ဒုတိယလ၊ နှစ်ဆယ်ရက်နေ့တွင်တဲတော် ကိုဖုံးလွှမ်းနေသောမိုးတိမ်သည်အထက် သို့တက်ကြွသဖြင့်၊-
12 ೧೨ ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
၁၂သူတို့သည်သိနာတောကန္တာရမှခရီးထွက် ခွာလာကြလေသည်။ မိုးတိမ်သည်ပါရန်ဟု ခေါ်သောတောကန္တာရသို့ရောက်သောအခါ ရပ်တန့်လေသည်။
13 ೧೩ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
၁၃သူတို့သည်မောရှေမှတစ်ဆင့် ထာဝရ ဘုရားမိန့်မှာတော်မူသည်အတိုင်းခရီး ထွက်ကြ၏။-
14 ೧೪ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
၁၄ခရီးထွက်သည့်အခါတိုင်းသတ်မှတ်ထား သောအစီအစဉ်အရချီတက်ကြသည်။ ယုဒအနွယ်တပ်အလံနောက်မှလိုက်ရသော လူစုကို အမိနဒပ်၏သားနာရှုန်ကအုပ် ချုပ်ရသည်။ သူတို့သည်တပ်စုအလိုက်ရှေ့ ဆုံးမှချီတက်ရသည်။-
15 ೧೫ ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
၁၅ဣသခါအနွယ်ကိုဇုအာ၏သားနာသ နေလကလည်းကောင်း၊-
16 ೧೬ ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
၁၆ဇာဗုလုန်အနွယ်ကိုဟေလုန်၏သားဧလျာဘ ကလည်းကောင်းအုပ်ချုပ်ရသည်။
17 ೧೭ ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
၁၇ထိုနောက်တဲတော်ကိုဖြုတ်ချ၍ဂေရရှုန် သားချင်းစုနှင့် မေရာရိသားချင်းစုတို့ သည်တဲတော်ကိုထမ်းလျက်ချီတက်ရသည်။
18 ೧೮ ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
၁၈ထိုနောက်ရုဗင်အနွယ်တပ်အလံနောက်မှ လိုက်ရသောလူစုကို ရှေဒုရ၏သားဧလိ ဇုရသည်အုပ်ချုပ်လျက်တပ်စုအလိုက်ချီ တက်ရသည်။-
19 ೧೯ ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
၁၉ဇုရိရှဒ္ဒဲ၏သားရှေလုမျေလသည် ရှိမောင် အနွယ်ကိုလည်းကောင်း၊-
20 ೨೦ ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
၂၀ဒွေလ၏သားဧလျာသပ်သည်ဂဒ်အနွယ် ကိုလည်းကောင်းအုပ်ချုပ်ရသည်။
21 ೨೧ ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
၂၁ထိုနောက်လေဝိအနွယ်ကောဟတ်သားချင်းစု တို့သည် တဲတော်ဆိုင်ရာပစ္စည်းများကိုထမ်းလျက် ချီတက်ရသည်။ သူတို့သည်နောက်စခန်းသို့ ဆိုက်ရောက်သည့်အခါ တဲတော်ကိုထူနှင့်ပြီး ဖြစ်သည်။
22 ೨೨ ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
၂၂ထိုနောက်ဧဖရိမ်အနွယ်တပ်အလံနောက်မှ လိုက်ရသောလူစုကို အမိဟုဒ်၏သားဧလိ ရှမာသည်အုပ်ချုပ်လျက်တပ်စုအလိုက် ချီတက်ရသည်။-
23 ೨೩ ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
၂၃မနာရှေ၏အနွယ်ကိုပေဒါဇုရ၏သား ဂါမလျေလအုပ်ချုပ်ရသည်။-
24 ೨೪ ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
၂၄ဗင်္ယာမိန်အနွယ်ကိုဂိဒေါနိ၏သားအဘိဒန် အုပ်ချုပ်ရသည်။
25 ೨೫ ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
၂၅နောက်ဆုံးတပ်ဖြစ်သောဒန်အနွယ်တပ်အလံ နောက်မှလိုက်ရသောလူစုကို အမိရှဒ္ဒဲ၏သား အဟေဇာအုပ်ချုပ်လျက်တပ်စုအလိုက် ချီတက်ရသည်။-
26 ೨೬ ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
၂၆အာရှာအနွယ်ကိုသြကရန်၏သားပါဂျေလ အုပ်ချုပ်၍၊-
27 ೨೭ ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
၂၇နဿလိအနွယ်ကိုဧနန်၏သားအဟိရ အုပ်ချုပ်ရသည်။-
28 ೨೮ ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
၂၈ဣသရေလအမျိုးသားတို့သည်စခန်းဖြုတ် ၍ခရီးထွက်သည့်အခါတိုင်း အထက်ဖော်ပြ ပါအစီအစဉ်အရတပ်စုအလိုက်ချီတက် ကြရသည်။
29 ೨೯ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
၂၉မောရှေသည်မိဒျန်အမျိုးသားယေသရော ၏သား မိမိ၏ယောက်ဖဟောဗပ်အား``ထာဝရ ဘုရားကငါတို့အားပေးမည်ဟုကတိထား တော်မူသောပြည်သို့ ငါတို့ယခုသွားကြမည်။ ထာဝရဘုရားသည်ဣသရေလအမျိုးသား တို့အား ကြီးပွားစေမည်ဟူ၍ ကတိတော်ရှိ သဖြင့်ငါတို့နှင့်အတူလိုက်ခဲ့ပါလော့။ သင် သည်ငါတို့နှင့်အကျိုးတူခံစားခွင့်ရလိမ့် မည်'' ဟုဆိုလေ၏။
30 ೩೦ ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
၃၀ဟောဗပ်က``ငါမလိုက်လိုပါ။ ငါ၏နေရင်း ပြည်သို့ပြန်မည်'' ဟုဖြေကြားလေ၏။
31 ೩೧ ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
၃၁ထိုအခါမောရှေက``ငါတို့ကိုစွန့်ပစ်၍မထား ခဲ့ပါနှင့်။ သင်သည်တောကန္တာရခရီးလမ်းသိ ကျွမ်းသူဖြစ်သဖြင့် စခန်းချရာအရပ်ကို ငါတို့အားညွှန်ပြနိုင်မည်ဖြစ်သည်။-
32 ೩೨ ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
၃၂ငါတို့နှင့်အတူလိုက်ခဲ့ပါမူငါတို့အား ထာဝရဘုရားချပေးတော်မူသော ကောင်း ချီးမင်္ဂလာအပေါင်းတို့ကိုသင်လည်းခံ စားခွင့်ရရှိစေပါမည်'' ဟုဆို၏။
33 ೩೩ ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
၃၃ဣသရေလအမျိုးသားတို့သည်ထာဝရ ဘုရား၏သိနာတောင်တော်မှထွက်ခွာ၍ သုံး ရက်ကြာမျှခရီးပြုလေသည်။ သူတို့စခန်း ချရာအရပ်ကိုညွှန်ပြရန် ထာဝရဘုရား ၏ပဋိညာဉ်သေတ္တာတော်သည်သူတို့ရှေ့မှ အစဉ်သွားရ၏။-
34 ೩೪ ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
၃၄သူတို့စခန်းမှထွက်ခွာလာသည့်အခါတိုင်း ထာဝရဘုရား၏မိုးတိမ်သည်နေ့အချိန် တွင်သူတို့၏အပေါ်မှလိုက်ပါလျက်ရှိ၏။
35 ೩೫ ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
၃၅ပဋိညာဉ်သေတ္တာတော်ခရီးစထွက်သည့်အခါ မောရှေက``အို ထာဝရဘုရား၊ ထတော်မူပါ။ ကိုယ်တော်၏ရန်သူတို့ကိုကစဥ့်ကလျား ဖြစ်စေ၍ ကိုယ်တော်အားမုန်းတီးသူတို့ကို ထွက်ပြေးစေတော်မူပါ'' ဟူ၍လည်း ကောင်း၊-
36 ೩೬ ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.
၃၆ပဋိညာဉ်သေတ္တာတော်ရပ်နားသောအခါ``အို ထာဝရဘုရား၊ ထောင်သောင်းမကသောဣသ ရေလအမျိုးသားတို့ထံသို့ပြန်ကြွတော် မူပါ'' ဟူ၍လည်းကောင်းလျှောက်ဆိုလေ့ရှိ၏။