< ಅರಣ್ಯಕಾಂಡ 15 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
फिर यहोवा ने मूसा से कहा,
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
“इस्राएलियों से कह कि जब तुम अपने निवास के देश में पहुँचो, जो मैं तुम्हें देता हूँ,
3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
और यहोवा के लिये क्या होमबलि, क्या मेलबलि, कोई हव्य चढ़ाओं, चाहे वह विशेष मन्नत पूरी करने का हो चाहे स्वेच्छाबलि का हो, चाहे तुम्हारे नियत समयों में का हो, या वह चाहे गाय-बैल चाहे भेड़-बकरियों में का हो, जिससे यहोवा के लिये सुखदायक सुगन्ध हो;
4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
तब उस होमबलि या मेलबलि के संग भेड़ के बच्चे यहोवा के लिये चौथाई हीन तेल से सना हुआ एपा का दसवाँ अंश मैदा अन्नबलि करके चढ़ाना,
5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
और चौथाई हीन दाखमधु अर्घ करके देना।
6 “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
और मेढ़े के बलि के साथ तिहाई हीन तेल से सना हुआ एपा का दो दसवाँ अंश मैदा अन्नबलि करके चढ़ाना;
7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
और उसका अर्घ यहोवा को सुखदायक सुगन्ध देनेवाला तिहाई हीन दाखमधु देना।
8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
और जब तू यहोवा को होमबलि या किसी विशेष मन्नत पूरी करने के लिये बलि या मेलबलि करके बछड़ा चढ़ाए,
9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
तब बछड़े का चढ़ानेवाला उसके संग आधा हीन तेल से सना हुआ एपा का तीन दसवाँ अंश मैदा अन्नबलि करके चढ़ाए।
10 ೧೦ ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
१०और उसका अर्घ आधा हीन दाखमधु चढ़ाए, वह यहोवा को सुखदायक सुगन्ध देनेवाला हव्य होगा।
11 ೧೧ “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
११“एक-एक बछड़े, या मेढ़े, या भेड़ के बच्चे, या बकरी के बच्चे के साथ इसी रीति चढ़ावा चढ़ाया जाए।
12 ೧೨ ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
१२तुम्हारे बलिपशुओं की जितनी गिनती हो, उसी गिनती के अनुसार एक-एक के साथ ऐसा ही किया करना।
13 ೧೩ ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
१३जितने देशी हों वे यहोवा को सुखदायक सुगन्ध देनेवाला हव्य चढ़ाते समय ये काम इसी रीति से किया करें।
14 ೧೪ ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
१४“और यदि कोई परदेशी तुम्हारे संग रहता हो, या तुम्हारी किसी पीढ़ी में तुम्हारे बीच कोई रहनेवाला हो, और वह यहोवा को सुखदायक सुगन्ध देनेवाला हव्य चढ़ाना चाहे, तो जिस प्रकार तुम करोगे उसी प्रकार वह भी करे।
15 ೧೫ ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
१५मण्डली के लिये, अर्थात् तुम्हारे और तुम्हारे संग रहनेवाले परदेशी दोनों के लिये एक ही विधि हो; तुम्हारी पीढ़ी-पीढ़ी में यह सदा की विधि ठहरे, कि जैसे तुम हो वैसे ही परदेशी भी यहोवा के लिये ठहरता है।
16 ೧೬ ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
१६तुम्हारे और तुम्हारे संग रहनेवाले परदेशियों के लिये एक ही व्यवस्था और एक ही नियम है।”
17 ೧೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
१७फिर यहोवा ने मूसा से कहा,
18 ೧೮ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
१८“इस्राएलियों को मेरा यह वचन सुना, कि जब तुम उस देश में पहुँचो जहाँ मैं तुम को लिये जाता हूँ,
19 ೧೯ ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
१९और उस देश की उपज का अन्न खाओ, तब यहोवा के लिये उठाई हुई भेंट चढ़ाया करो।
20 ೨೦ ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
२०अपने पहले गुँधे हुए आटे की एक पपड़ी उठाई हुई भेंट करके यहोवा के लिये चढ़ाना; जैसे तुम खलिहान में से उठाई हुई भेंट चढ़ाओगे वैसे ही उसको भी उठाया करना।
21 ೨೧ “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
२१अपनी पीढ़ी-पीढ़ी में अपने पहले गुँधे हुए आटे में से यहोवा को उठाई हुई भेंट दिया करना।
22 ೨೨ ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
२२“फिर जब तुम इन सब आज्ञाओं में से जिन्हें यहोवा ने मूसा को दिया है किसी का उल्लंघन भूल से करो,
23 ೨೩ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
२३अर्थात् जिस दिन से यहोवा आज्ञा देने लगा, और आगे की तुम्हारी पीढ़ी-पीढ़ी में उस दिन से उसने जितनी आज्ञाएँ मूसा के द्वारा दी हैं,
24 ೨೪ ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
२४उसमें यदि भूल से किया हुआ पाप मण्डली के बिना जाने हुआ हो, तो सारी मण्डली यहोवा को सुखदायक सुगन्ध देनेवाला होमबलि करके एक बछड़ा, और उसके संग नियम के अनुसार उसका अन्नबलि और अर्घ चढ़ाए, और पापबलि करके एक बकरा चढ़ाए।
25 ೨೫ ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
२५तब याजक इस्राएलियों की सारी मण्डली के लिये प्रायश्चित करे, और उनकी क्षमा की जाएगी; क्योंकि उनका पाप भूल से हुआ, और उन्होंने अपनी भूल के लिये अपना चढ़ावा, अर्थात् यहोवा के लिये हव्य और अपना पापबलि उसके सामने चढ़ाया।
26 ೨೬ ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
२६इसलिए इस्राएलियों की सारी मण्डली का, और उसके बीच रहनेवाले परदेशी का भी, वह पाप क्षमा किया जाएगा, क्योंकि वह सब लोगों के अनजाने में हुआ।
27 ೨೭ “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
२७फिर यदि कोई मनुष्य भूल से पाप करे, तो वह एक वर्ष की एक बकरी पापबलि करके चढ़ाए।
28 ೨೮ ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
२८और याजक भूल से पाप करनेवाले मनुष्य के लिये यहोवा के सामने प्रायश्चित करे; अतः इस प्रायश्चित के कारण उसका वह पाप क्षमा किया जाएगा।
29 ೨೯ ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
२९जो कोई भूल से कुछ करे, चाहे वह इस्राएलियों में देशी हो, चाहे तुम्हारे बीच परदेशी होकर रहता हो, सब के लिये तुम्हारी एक ही व्यवस्था हो।
30 ೩೦ ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
३०“परन्तु क्या देशी क्या परदेशी, जो मनुष्य ढिठाई से कुछ करे, वह यहोवा का अनादर करनेवाला ठहरेगा, और वह प्राणी अपने लोगों में से नाश किया जाए।
31 ೩೧ ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
३१वह जो यहोवा का वचन तुच्छ जानता है, और उसकी आज्ञा का टालनेवाला है, इसलिए वह मनुष्य निश्चय नाश किया जाए; उसका अधर्म उसी के सिर पड़ेगा।”
32 ೩೨ ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
३२जब इस्राएली जंगल में रहते थे, उन दिनों एक मनुष्य विश्राम के दिन लकड़ी बीनता हुआ मिला।
33 ೩೩ ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
३३और जिनको वह लकड़ी बीनता हुआ मिला, वे उसको मूसा और हारून, और सारी मण्डली के पास ले गए।
34 ೩೪ ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
३४उन्होंने उसको हवालात में रखा, क्योंकि ऐसे मनुष्य से क्या करना चाहिये वह प्रगट नहीं किया गया था।
35 ೩೫ ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
३५तब यहोवा ने मूसा से कहा, “वह मनुष्य निश्चय मार डाला जाए; सारी मण्डली के लोग छावनी के बाहर उस पर पथरवाह करें।”
36 ೩೬ ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
३६इस प्रकार जैसा यहोवा ने मूसा को आज्ञा दी थी उसी के अनुसार सारी मण्डली के लोगों ने उसको छावनी से बाहर ले जाकर पथरवाह किया, और वह मर गया।
37 ೩೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
३७फिर यहोवा ने मूसा से कहा,
38 ೩೮ “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
३८“इस्राएलियों से कह, कि अपनी पीढ़ी-पीढ़ी में अपने वस्त्रों के छोर पर झालर लगाया करना, और एक-एक छोर की झालर पर एक नीला फीता लगाया करना;
39 ೩೯ ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
३९और वह तुम्हारे लिये ऐसी झालर ठहरे, जिससे जब जब तुम उसे देखो तब-तब यहोवा की सारी आज्ञाएँ तुम को स्मरण आ जाएँ; और तुम उनका पालन करो, और तुम अपने-अपने मन और अपनी-अपनी दृष्टि के वश में होकर व्यभिचार न करते फिरो जैसे करते आए हो।
40 ೪೦ ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
४०परन्तु तुम यहोवा की सब आज्ञाओं को स्मरण करके उनका पालन करो, और अपने परमेश्वर के लिये पवित्र बनो।
41 ೪೧ ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”
४१मैं यहोवा तुम्हारा परमेश्वर हूँ, जो तुम्हें मिस्र देश से निकाल ले आया कि तुम्हारा परमेश्वर ठहरूँ; मैं तुम्हारा परमेश्वर यहोवा हूँ।”

< ಅರಣ್ಯಕಾಂಡ 15 >