< ಅರಣ್ಯಕಾಂಡ 15 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
मग परमेश्वर मोशेशी बोलला. तो म्हणाला,
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
इस्राएल लोकांबरोबर बोल आणि त्यांना सांग. परमेश्वर तुम्हास एक देश वस्ती करण्यासाठी देत आहे. तुम्ही जेव्हा तिथे पोहचाल,
3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
आणि तुम्ही परमेश्वरासाठी सुवास म्हणून गुरेढोरे किंवा शेरडेमेंढरे यांचे परमेश्वराकरता अर्पण कराल, मग ते होमार्पणाचे असो किंवा नवस फेडण्याचा किंवा स्वखुशीचा किंवा तुमच्या सणातला तो यज्ञ असो.
4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
जो कोणी आपले अर्पण परमेश्वराकरता आणतो त्याने हिनाच्या एक चतुर्थाश तेलात मळलेले एफाचा एक दशांश सपिठ अन्नार्पण आणावे.
5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
प्रत्येक कोकऱ्याच्या होमार्पणाकरता किंवा यज्ञाकरता पेयार्पणासाठी एका हीनाचा एक चतुर्थाश द्राक्षरस तयार कर.
6 “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
अन्नार्पण म्हणून प्रत्येक मेंढ्यामागे एकतृतीयांश हिन तेलात मळलेले दोन दशमांश एफा सपीठ तयार करावे.
7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
परमेश्वरास सुवास यावा म्हणून एकतृतीयांश हिनभर द्राक्षरसाचे पेयार्पण तयार करावे.
8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
जेव्हा तू परमेश्वराकरता होमार्पण किंवा नवस फेडण्यासाठी यज्ञ किंवा शांत्यर्पणाचा यज्ञ म्हणून गोऱ्हा म्हणून अर्पण करावा.
9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
तेव्हा अर्पण करणाऱ्याने त्या गोऱ्ह्या बरोबर अर्धां हिन तेलात मळलेल्या तीन दशमांश एफा सपिठाचे अन्नार्पण करावे.
10 ೧೦ ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
१०तू पेयार्पणासाठी अर्धा हीन द्राक्षरस अग्नीतून केलेले अर्पण, परमेश्वरास सुवासाचे अर्पण कर.
11 ೧೧ “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
११तुम्ही परमेश्वरास जो बैल, मेंढा, मेंढी किंवा कोकरा यांचे अर्पण कराल ते याप्रमाणे करावे.
12 ೧೨ ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
१२तुम्ही जे प्रत्येक अर्पण तयार कराल आणि ते अर्पण याप्रमाणे अर्पण करा.
13 ೧೩ ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
१३अग्नीतून केलेले अर्पण परमेश्वरास सुवासाचे असे अर्पण करताना देशात जन्मलेल्या सर्वांनी या वस्तू याप्रमाणे अर्पण कराव्या.
14 ೧೪ ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
१४तुमच्याबरोबर राहत असलेल्या परदेशीयाला अथवा पिढ्यानपिढ्या तुमच्यामध्ये वस्ती करून राहिलेल्या कोणालाही परमेश्वराकरता हे सुवासिक हव्य अर्पण करायची इच्छा झाली तर तुमच्या प्रमाणेच त्यानेही केले पाहिजे.
15 ೧೫ ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
१५हेच नियम सर्वांना लागू आहेत. इस्राएलचे लोक आणि परदेशी लोक तुमच्या देशात राहतात. त्यांना हे नियम सर्वकाळ लागू राहतील. तुम्ही आणि तुमच्याबरोबर राहणारे इतर लोक परमेश्वरापुढे समान आहात.
16 ೧೬ ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
१६हे नियम व विधी तुम्हास आणि तुमच्यात राहणाऱ्या इतरांना एकच असावा.
17 ೧೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
१७परमेश्वर मोशेशी पुन्हा बोलला. तो म्हणाला,
18 ೧೮ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
१८इस्राएल लोकांशी बोल व त्यांना सांग मी ज्या देशात तुम्हास घेऊन जात आहे त्यामध्ये तुम्ही जाऊन पोहचाल.
19 ೧೯ ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
१९जेव्हा तुम्ही तेथे पिकणारे अन्न खाल तेव्हा त्यातला काही भाग समर्पण म्हणून परमेश्वरास अर्पण करा.
20 ೨೦ ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
२०मळलेल्या कणिकेची पहिली पोळी करून परमेश्वरास अर्पण करावा. तुम्ही आपल्या खळ्यातला समर्पण म्हणून जो भाग अर्पण करता त्याप्रमाणे ही अर्पावी.
21 ೨೧ “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
२१मळलेल्या कणिकेतून पहिला काही भाग तुम्ही समर्पण म्हणून परमेश्वरास पिढ्यानपिढ्या द्यावा.
22 ೨೨ ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
२२जेव्हा तुम्ही परमेश्वराने मोशेला सांगितलेल्या या सर्व आज्ञेपैकी कधीतरी नकळत मोडली.
23 ೨೩ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
२३परमेश्वराने त्या आज्ञा तुम्हास मोशे मार्फत दिल्या आहेत त्या दिवसापासून व पुढेही तुमच्या पिढ्यानपिढ्या आहेत.
24 ೨೪ ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
२४तेव्हा असे व्हावे की, मंडळीला नकळत जर तुम्ही पाप केले, तर सर्व मंडळीने मिळून परमेश्वरास सुवास म्हणून एक गोऱ्हा होमार्पण, नियमानुसार अन्नार्पण आणि पेयार्पण करावे. तुम्ही पापार्पणासाठी बकराही अर्पण करावा.
25 ೨೫ ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
२५म्हणून याजकाने इस्राएलाच्या सर्व लोकांसाठी प्रायश्चित करावे. म्हणजे त्याची क्षमा होईल. कारण त्यांचे पाप चुकून झाले असून त्यांनी आपल्या या चुकीबद्दल आपले अर्पण म्हणजे परमेश्वराकरता हव्य आणि आपला पापबलि परमेश्वरासमोर अर्पिला आहे.
26 ೨೬ ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
२६इस्राएलाच्या सर्व लोकांस आणि त्यांच्यात राहणाऱ्या इतर लोकांस क्षमा केली जाईल. त्यांना क्षमा करण्यात येईल. कारण आपण चूक करीत आहोत हे त्यांना माहीत नव्हते.
27 ೨೭ “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
२७पण जर फक्त एकाच मनुष्याने नकळत पाप केले तर त्याने एक वर्ष वयाची बकरी आणली पाहिजे. ती बकरी पापासाठी अर्पण केली जाईल.
28 ೨೮ ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
२८त्या मनुष्याने चुकून परमेश्वरापुढे पाप केले. तर त्या नकळत पाप करणाऱ्या मनुष्यासाठी प्रायश्चित करायला याजकाने प्रायश्चित करावे म्हणजे त्याची क्षमा होईल.
29 ೨೯ ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
२९जो मनुष्य चुकून पाप करतो त्याच्यासाठी हा नियम आहे. इस्राएलच्या कुटुंबात जन्मलेल्या लोकांसाठी व तुमच्यात राहणाऱ्या परदेशी लोकांसाठी सारखेच नियम आहेत.
30 ೩೦ ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
३०पण जर एखादा व्यक्ती काही कृत्य करून उघड विरोध करतो, इस्राएलाच्या वंशात जन्मलेल्या मनुष्यासाठी किंवा परदेशी असो, तो परमेश्वराची निंदा करणारा समजावा. त्या मनुष्यास आपल्या लोकांतून काढून टाकावे.
31 ೩೧ ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
३१कारण त्याने परमेश्वराचा शब्द तुच्छ मानला आहे आणि त्याने माझी आज्ञा मोडली. तर त्या व्यक्तीला पुर्णपणे तुमच्यातून काढून टाकले पाहिजे. त्याचा दोष त्याच्यावरच राहील.
32 ೩೨ ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
३२यावेळी इस्राएल लोक अजून वाळवंटात राहत होते. एका मनुष्यास जळणासाठी लाकूड सापडले म्हणून तो ते गोळा करीत होता. परंतु तो शब्बाथाचा दिवस होता. इतरांनी त्यास ते करताना पाहिले.
33 ೩೩ ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
३३ज्या लोकांनी त्यास लाकडे गोळा करताना पाहिले त्यांनी त्यास मोशे व अहरोनाकडे आणले आणि सर्व लोक भोवती गोळा झाले.
34 ೩೪ ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
३४त्यांनी त्या मनुष्यास तिथेच ठेवले कारण त्यास काय शिक्षा द्यायची ते त्यांना माहीत नव्हते.
35 ೩೫ ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
३५नंतर परमेश्वर मोशेला म्हणाला, “तो मनुष्य मेला पाहिजे. तेव्हा सर्व लोकांनी त्याच्यावर छावणीबाहेर दगडमार करावी.”
36 ೩೬ ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
३६म्हणून लोक त्यास छावणीबाहेर घेऊन गेले आणि त्यास दगडमार करून मारले. परमेश्वराने मोशेला आज्ञा केली त्याप्रमाणे त्यांनी हे केले.
37 ೩೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
३७परमेश्वर मोशेशी बोलला. तो म्हणाला
38 ೩೮ “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
३८इस्राएली वंशजाशी बोल आणि त्यांना आज्ञा कर की, त्यांनी पिढयानपिढया आपल्या वस्त्राच्या टोकांना गोंडे लावावे आणि प्रत्येक टोकाच्या गोंड्यावर एक निळा दोरा बांधा.
39 ೩೯ ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
३९या गोंड्याचा उद्देश असा की, ते बघून परमेश्वराने दिलेल्या सगळ्या आज्ञा लक्षात ठेवाल व आज्ञा पाळाल. तुमचे हृदय व तुमची दृष्टी ज्यांच्यामागे जाऊन तुम्ही व्यभिचारी होत असा, त्याच्यामागे तुम्ही जाऊ नये.
40 ೪೦ ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
४०“माझ्या सगळ्या आज्ञा पाळायच्या आहेत हे तुम्ही लक्षात ठेवावे. आपल्या देवाकरता पवित्र व्हावे.
41 ೪೧ ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”
४१मी तुमचा देव परमेश्वर आहे. तुम्हास मिसर देशातून आणणारा मीच आहे. तुमचा देव होण्यासाठी मी हे केले. मीच तुमचा देव परमेश्वर आहे.”

< ಅರಣ್ಯಕಾಂಡ 15 >