< ಅರಣ್ಯಕಾಂಡ 16 >

1 ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.
कोरह इसहारचा मुलगा, इसहार कहाथचा मुलगा आणि कहाथ लेवीचा मुलगा, दाथान आणि अबीराम भाऊ होते आणि ती अलीयाबाची मुले होती. ओन पेलेथचा मुलगा होता. दाथान, अबीराम आणि ओन रऊबेन वंशातील होते. यांनी काही माणसे जमवली.
2 ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
या चार मनुष्यांनी इस्राएलातून अडीचशे माणसे एकत्र जमविली आणि ते मोशेविरूद्ध उठले. ते लोकांनी निवडलेले नेते होते, हे सर्व लोकांस माहीत होते.
3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
ते मोशेविरूद्ध व अहरोनाविरूद्ध एकत्र समुहाने आले. ते त्यांना म्हणाले, “तुम्ही फारच अधिकार दाखवता आता पुरे झाले! इस्राएलाचे इतर लोकसुद्धा पवित्र आहेत. त्यांच्यात अजूनही परमेश्वर राहतो. तुम्ही परमेश्वराच्या इतर लोकांपेक्षा स्वत: ला अधिक महत्वाचे समजत आहात.”
4 ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
जेव्हा मोशेने ते ऐकले, तो पालथा पडला.
5 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
मग मोशे कोरह व त्याच्या सर्व अनुयायांना म्हणाला, “उद्या सकाळी परमेश्वर कोण खरोखर त्याचा मनुष्य आहे ते दाखवील. कोण खरा पवित्र आहे ते परमेश्वर दाखवील आणि परमेश्वर त्या मनुष्यास त्याच्याजवळ आणिल. परमेश्वर त्या मनुष्याची निवड करील आणि त्यास स्वत: जवळ आणिल.
6 ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
म्हणून कोरह तू आणि तुझ्या गटाने धुपाटणे आणा.
7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
उद्या अग्नी आणि धूप काही खास भांड्यात ठेवा. नंतर ती भांडी परमेश्वरासमोर आणा. खरोखरच जो पवित्र असेल त्याची परमेश्वर निवड करील. लेवीच्या वंशजांनो तुम्ही फार पुढे गेलात. तुम्ही चूक केलीत.”
8 ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
मोशे कोरहाला आणखी म्हणाला, “लेवीच्या वंशजांनो तुम्ही माझे ऐका
9 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
तुमची निवड इस्राएलच्या देवाने केली आहे आणि तुम्हास खास दर्जा दिला आहे म्हणून तुम्ही आनंदी असायला हवे. तुम्ही इस्राएलच्या इतर लोकांपेक्षा वेगळे आहात. परमेश्वराने तुम्हास खास कामासाठी, इस्राएल लोकांस परमेश्वराची भक्ती करायला मदत व्हावी म्हणून त्याच्या पवित्र निवासमंडपात त्याच्याजवळ आणले. हे पुरेसे नाही का?
10 ೧೦ ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
१०परमेश्वराने लेवीच्या वंशजांना याजकांच्या मदतीसाठी जवळ आणले. परंतु आता तुम्हीच याजक होण्याची वेळ प्रयत्न करीत आहात.
11 ೧೧ ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
११तुम्ही आणि तुमचे अनुयायी एकत्र आलात आणि परमेश्वराच्या विरूद्ध गेलात. अहरोनाने काही चूक केली का? नाही. मग तुम्ही अहरोनाविरूद्ध का तक्रार करीत आहात.”
12 ೧೨ ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
१२नंतर मोशेने दाथान, अबीराम, या अलीयाबाच्या मुलांना बोलावले पण ते दोघे म्हणाले, आम्ही येणार नाही.
13 ೧೩ ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
१३तू आम्हास रानात जिवे मारावे म्हणून दूध व मध वाहण्याच्या देशातून काढून वर आणले आहेस हे काय थोडे आहे. आणि आता आमच्यावर तुझी अधिक सत्ता आहे हे तुला दाखवायचे आहे.
14 ೧೪ ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
१४आणखी तू आम्हास दूध व मध वाहण्याच्या देशात आणले नाही आणि आम्हास शेताचे व द्राक्षमळ्याचे वतन दिले नाही. आता तू पोकळ वचने देऊन आमचे डोळे आंधळे करीत आहेस काय? आम्ही तुझ्याकडे येणार नाही.
15 ೧೫ ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
१५म्हणून मोशेला खूप राग आला. तो परमेश्वरास म्हणाला, “मी या लोकांच्या बाबतीत काहीही वाईट केले नाही. मी त्यांच्याकडून एक गाढव देखील घेतले नाही! आणि मी कोणाचेही वाईट केले नाही.
16 ೧೬ ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
१६नंतर मोशे कोरहाला म्हणाला, उद्या तू आणि तुझे अनुयायी परमेश्वरापुढे उभे राहतील. तिथे तू अहरोन आणि तुझे अनुयायी असतील.
17 ೧೭ ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
१७तुम्ही प्रत्येकाने एक भांडे आणावे त्यामध्ये धूप टाकावा आणि ते परमेश्वरास द्यावे. नेत्यांसाठी अडीचशे भांडी असतील आणि एकेक भांडे तुझ्यासाठी व अहरोनासाठी असेल.”
18 ೧೮ ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
१८म्हणून प्रत्येकाने भांडे आणले आणि त्यामध्ये उद धूप जाळला, नंतर ते दर्शनमंडपाच्या दारात उभे राहिले. मोशे आणि अहरोनसुद्धा तिथे उभे राहिले.
19 ೧೯ ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
१९कोरहानेसुद्धा त्याच्याविरुध्द दर्शनमंडपाच्या दारापाशी सर्व लोक जमा केले. नंतर प्रत्येकाला परमेश्वराचे तेज दिसले.
20 ೨೦ ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
२०परमेश्वर मोशेला आणि अहरोनाला म्हणाला,
21 ೨೧ “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
२१या लोकांपासून दूर जा. मला आता त्यांचा नाश करायचा आहे.
22 ೨೨ ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
२२पण मोशे आणि अहरोन जमिनीवर पालथे पडले आणि ओरडले, हे देवा सर्व देहधारी आत्म्यांच्या, देवा! फक्त एका मनुष्याने पाप केले आहे! म्हणून सर्व मंडळीवर रागावू नकोस.
23 ೨೩ ಆಗ ಯೆಹೋವನು ಮೋಶೆಗೆ ಉತ್ತರವಾಗಿ,
२३नंतर परमेश्वर मोशेला म्हणाला,
24 ೨೪ “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
२४सर्व लोकांस कोरह, दाथान, व अबीराम यांच्या तंबूपासून दूर जायला सांग.
25 ೨೫ ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
२५मोशे उभा राहिला आणि दाथान व अबीराम यांच्याकडे गेला. इस्राएलचे सर्व वडिलधारी त्यांच्यामागे गेले.
26 ೨೬ ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
२६मोशेने सर्व लोकांस बजावले, या दुष्टांच्या तंबू पासून दूर जा. त्यांच्या कोणत्याही वस्तुला हात लावू नका. जर तुम्ही हात लावला तर त्यांच्या पापामुळे तुमचाही नाश होईल.
27 ೨೭ ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
२७म्हणून लोक कोरह, दाथान व अबीराम यांच्या तंबू पासून दूर गेले. दाथान आणि अबीराम त्यांच्या तंबूकडे गेले. ते त्यांच्या तंबू बाहेर आपल्या स्त्रिया, मुले आणि लहाण्या मुलांबरोबर उभे राहिले.
28 ೨೮ ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
२८नंतर मोशे म्हणाला, “परमेश्वराने मला मी तुम्हास सांगितलेल्या गोष्टी करायला पाठवले आहे या बद्दलचा पुरावा मी तुम्हास दाखवीन. या गोष्टी करण्याची कल्पना माझी नव्हती हेही मी तुम्हास दाखवीन.
29 ೨೯ ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
२९हे इथले लोक मरतील. पण ते जर सामान्य रीतीने मरण पावले जशी माणसे नेहमी मरतात, तर त्यावरून असे दिसेल की परमेश्वराने मला खरेच पाठवले नाही.
30 ೩೦ ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol h7585)
३०पण जर परमेश्वराने या लोकांस वेगळ्या नव्या रीतीने मारले. तर तुम्हास कळेल की त्यांनी परमेश्वराविरूद्ध पाप केले होते. हा पुरावा आहे. धरती दुभागेल आणि त्या लोकांस आपल्या पोटात घेईल. ते जिवंतपणीच त्यांच्या कबरेत जातील. आणि त्यांची सर्व चीजवस्तू त्यांच्याबरोबर जाईल.” (Sheol h7585)
31 ೩೧ ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
३१जेव्हा मोशेचे बोलणे संपले तेव्हा त्या लोकांच्या पायाखालची जमीन दुभागली.
32 ೩೨ ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
३२धरतीने जणू आपले तोंड उघडून त्यांना गिळून टाकले. कोरहाची सगळी माणसे, त्याचे संपूर्ण घराणे आणि त्यांची सर्व चीजवस्तू त्यांच्याबरोबर जमिनीत गेली.
33 ೩೩ ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol h7585)
३३ते लोक जिवंतपणी कबरेत गेले आणि त्यांची सगळी चीजवस्तूही त्यांच्याबरोबर गेली. नंतर जमीन पूर्ववत झाली. ते नष्ट झाले-लोकांतुन नाहीसे झाले. (Sheol h7585)
34 ೩೪ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
३४इस्राएल लोकांनी नाश होत असलेल्या लोकांचे आक्रोश ऐकले म्हणून ते सर्व सैरावैरा धावू लागले आणि म्हणाले, पृथ्वी आपल्यालासुद्धा गिळून टाकील.
35 ೩೫ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
३५नंतर परमेश्वराकडून अग्नी आला. त्याने धूप जाळणाऱ्या अडीचशे लोकांचा नाश केला.
36 ೩೬ ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ
३६परमेश्वर मोशेशी पुन्हा बोलला व म्हणाला
37 ೩೭ “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
३७याजक अहरोन याचा मुलगा एलाजार याला धुपाटणी अग्नीतून काढ कारण ती पवित्र आहेत आणि तो अग्नी पसरावयाला सांग.
38 ೩೮ ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
३८लोकांनी माझ्याविरूद्ध पाप केले आणि त्यांच्या पापामुळे त्यांना प्राण गमवावे लागले. पण धुपाटणी भांडी अजूनही पवित्र आहेत. ही भांडी पवित्र आहेत कारण ती परमेश्वरास अर्पण केली होती. भांडी ठोकून त्याचा पत्रा कर. या पत्र्याचा उपयोग वेदी झाकायला कर. इस्राएलाच्या सर्व लोकांस हा ताकीद दिल्याचा इशारा असेल.
39 ೩೯ ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
३९म्हणून याजक एलाजाराने लोकांनी आणलेली काशाची सर्व भांडी गोळा केली. ते सगळे लोक जळून गेले पण त्यांची भांडी मात्र होती. नंतर एलाजाराने काही मनुष्यांना भांडी ठोकून त्यांचा पत्रा करायला सांगितले. नंतर त्याने धातूचा पत्रा वेदीवर ठोकला व वेदी मढवली.
40 ೪೦ ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
४०परमेश्वराने मोशेला जशी आज्ञा केली होती तसेच त्याने केले. अहरोनाच्या वंशातीलच कोणीतरी परमेश्वरासमोर धूप जाळू शकतो, दुसऱ्या कोणी परमेश्वरासमोर धूप जाळला तर तो कोरह आणि त्याच्या अनुयायांप्रमाणे मरेल. हे इस्राएल लोकांनी लक्षात ठेवायची ही एक खूण होती.
41 ೪೧ ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
४१दुसऱ्या दिवशी इस्राएलच्या सर्व लोकांनी मोशे आणि अहरोनाविरूद्ध तक्रार केली. ते म्हणाले, तुम्ही परमेश्वराची माणसे मारली.
42 ೪೨ ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
४२मोशे आणि अहरोन दर्शनमंडपाच्या दारात उभे होते. लोक मोशे आणि अहरोन विरूद्ध तक्रार करायला एकत्र जमले. पण जेव्हा त्यांनी दर्शनमंडपाकडे पाहिले तेव्हा ढगांनी त्यास झाकून टाकले आणि तिथे परमेश्वराचे तेज दिसू लागले.
43 ೪೩ ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
४३हे पाहून मोशे आणि अहरोन दर्शनमंडपाच्या पुढच्या भागात आले.
44 ೪೪ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
४४मग परमेश्वर मोशेशी बोलला. तो म्हणाला,
45 ೪೫ “ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
४५त्या लोकांपासून दूर जा म्हणजे मी त्यांचा नाश करीन ताबोडतोब. मोशे आणि अहरोन यांनी त्यांचे चेहरे जमिनीपर्यंत लववून दंडवत घातले.
46 ೪೬ ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
४६नंतर मोशे अहरोनाला म्हणाला, तुझे तांब्याचे भांडे आणि थोडासा अग्नी वेदीवरुन घे. नंतर त्यावर धूप टाक. लवकर मंडळीकडे घेऊन जा आणि त्यांच्यासाठी प्रायश्चित कर. कारण. परमेश्वराचा कोप भडकला आहे; मरी सुरू झाली आहे.
47 ೪೭ ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
४७म्हणून अहरोनाने मोशेने जे सांगितले ते केले. अहरोनाने अग्नी व धूप घेतला आणि मग तो मंडळीमध्ये धावत गेला. परंतु लोकात मरीची लागण झाली होती आणि त्याने धूप घालून लोकांसाठी प्रायश्चित केले.
48 ೪೮ ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
४८अहरोन मरण पावलेल्या आणि अजून जिवंत असलेल्या लोकांच्या मध्ये जाऊन उभा राहिला, अहरोनाने लोकांस पवित्र करण्यासाठी प्रायश्चित केले आणि मरी तिथेच थांबली.
49 ೪೯ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
४९पण त्या मरीमुळे चौदा हजार सातशे लोक मरण पावले. यामध्ये कोरहामुळे मृत्यूमुखी पडलेल्यांचा समावेश नाही.
50 ೫೦ ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.
५०भयानक मरी थांबली आणि अहरोन परत दर्शनमंडपाच्या दाराशी असलेल्या मोशेकडे गेला.

< ಅರಣ್ಯಕಾಂಡ 16 >