< ಅರಣ್ಯಕಾಂಡ 16 >

1 ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.
लेवीका पनाति, कहातका नाति, यिसहारका छोरा कोरहसाथै रूबेनका कुलका एलीआबका छोराहरू दातान र अबीराम अनि पेलेथका छोराले केही मानिसहरू भेला गरे ।
2 ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
तिनीहरू, इस्राएलका मानिसहरूका अन्य मानिसहरूसँगै दुई सय पचास समुदायका अगुवाहरू जो नाम चलेका सदस्यहरू थिए, मोशाको विरुद्धा खडा भए ।
3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
तिनीहरू मोशा र हारूनको सामना गर्न आफै भेला भए । तिनीहरूले उनीहरूलाई भने, “तपाईंहरूले अति गर्नुभयो! सबै समुदाय, तिनीहरूमध्ये हरेकलाई नै अलग गरिएको छ र परमप्रभु तिनीहरूसँग छन् । किन आफैलाई परमप्रभुको समुदायभन्दा माथि उठाउनुहुन्छ?”
4 ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
जब मोशाले त्यो सुने, तिनी घोप्टो परे ।
5 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
तिनले कोरह र उनका साथमा भएकाहरूलाई भने, “को उहाँका हुन् र कसलाई उहाँको निम्ति अलग गरिएको छ भनी परमप्रभुले बिहान देखाउनुहुने छ । त्यस व्‍यक्‍तिलाई उहाँले उहाँको नजिक ल्याउनुहुने छ । उहाँले चुन्‍नुभएकोलाई आफैले आफ्नो नजिक ल्याउनुहुने छ ।
6 ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
कोरह र तिम्रा सबै समूहले यो गर । धुपौराहरू लेओ ।
7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
भोलि त्यसमा परमप्रभुको सामु धूप र आगो राख । परमप्रभुले चुन्‍नुहुने मानिसलाई उहाँको निम्ति अलग गरिनेछ । तिमी लेवीका सन्तानहरू अति धेरै भएका छौ ।”
8 ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
फेरि मोशाले कोरहलाई भने, “सुन, तिमी लेवीका सन्तानहरूः
9 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
के परमप्रभुको पवित्र वासस्थानमा काम गर्न र समुदायको सेवा गर्न तिनीहरूको सामु खडा हुन इस्राएलको समुदायबाट तिमीहरूलाई छुट्ट्याएको तिमीहरूको निम्ति सानो कुरा हो?
10 ೧೦ ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
उहाँले तिमीहरू र तिमीहरूका सबै दाजुभाइ, लेवीका सन्तानहरूलाई तिमीहरूसँगै नजिक ल्याउनुभएको छ, अझै तिमीहरूले पुजारी पद पनि खोजिरहेका छौ!
11 ೧೧ ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
यसैले तिमी र तिमीहरूका सबै समूह सँगसँगै भेला भएका छौ । त्यसैले तिमीहरूले किन हारूनको बारेमा गनगन गरिरहेका छौ, जसले परमप्रभुको आज्ञा पालन गर्छन्?
12 ೧೨ ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
त्यसपछि मोशाले दातान र अबीराम, एलीआबका छोराहरूलाई बोलाए । तर तिनीहरूले भने, “हामी आउँदैनौँ ।
13 ೧೩ ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
के हामीलाई दूध र मह बग्‍ने मुलुकबाट यो मरुभूमिमा मार्नलाई ल्याउनु मामुलि कुरा हो? अब तपाईं आफै हाम्रो शासक हुन चाहन्छ!
14 ೧೪ ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
यसको अतिरिक्‍त, तपाईंले हामीलाई दूध र मह बग्‍ने मुलुकमा ल्याउनुभएको छैन अथवा हामीलाई खेत र दाखबारीहरू उत्तराधिकारको रूपमा दिनुभएको छैन । के अब हामीलाई खोक्रो प्रतिज्ञाले अन्धा बनाउन चाहनुहुन्छ? हामी तपाईंकहाँ आउँदैनौँ ।”
15 ೧೫ ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
मोशा साह्रै रिसाए र परमप्रभुलाई भने, “तिनीहरूको भेटीको कदर नगर्नुहोस् । मैले तिनीहरूबाट एउटा गधा पनि लिएको छैनँ, र मैले तिनीहरू कसैलाई पनि हानि पुर्‍याएको छैनँ ।
16 ೧೬ ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
मोशाले कोरहलाई भने, “भोलि तिमी र तिम्रा सबै दल अर्थात् तिमी, तिनीहरू र हारून परमप्रभुको सामु जानुपर्छ । तिमीहरू हरेकले आ-आफ्ना धुपौरा लिनुपर्छ र यसमा धूप राख्‍नुपर्छ ।
17 ೧೭ ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
अनि हरेकले आ-आफ्ना दुई सय पचासवटा धुपौरा परमप्रभुको सामु ल्याउनुपर्छ । तिमी र हारूनले पनि आ-आफ्ना धुपौरा ल्याउनुपर्छ ।”
18 ೧೮ ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
यसैले हरेकले आ-आफ्ना धुपौरा लिए, यसमा आगो राखे, यसमा धूप राखे र मोशा र हारूनसँगै भेट हुने पालको प्रवेश-द्वारमा खडा भए ।
19 ೧೯ ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
कोरहले सारा समुदायलाई मोशा र हारूनको विरुद्धमा भेट हुने पालको प्रवेश-द्वारमा भेला पारे र परमप्रभुको महिमा सारा समुदायकहाँ देखा पर्‍यो ।
20 ೨೦ ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
परमप्रभु मोशा र हारूनसँग बोल्नुभयो,
21 ೨೧ “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
“यस समुदायबाट अलग होओ, ताकि म तिनीहरूलाई तत्कालै विनाश गर्न सकौँ ।”
22 ೨೨ ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
मोशा र हारून घोप्‍टो परे र भने, “हे परमेश्‍वर, सारा मानव-जातिको आत्माका परमेश्‍वर, एक जनाले पाप गर्दा, के तपाईं सबै समुदायसँग रिसाउनुहुन्छ?”
23 ೨೩ ಆಗ ಯೆಹೋವನು ಮೋಶೆಗೆ ಉತ್ತರವಾಗಿ,
परमप्रभुले मोशालाई जवाफ दिनुभयो,
24 ೨೪ “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
“समुदायलाई भन् । 'कोरह, दातान र अबीरामका पालहरूबाट पर जाओ' भन् ।”
25 ೨೫ ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
अनि मोशा खडा भए र दातान र अबीरामको पालमा गए; इस्राएलका धर्म-गुरुहरू तिनको पछि-पछि गए ।
26 ೨೬ ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
तिनले समुदायलाई यसो भने, “यी दुष्‍टहरूका पालहरूबाट हट र तिनीहरूको कुनै पनि कुरा नछोओ नत्रता तिनीहरूका सबै पापद्वारा नष्‍ट हुनेछौ ।”
27 ೨೭ ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
यसैले कोरह, दातान र अबीरामका पाल वरिपरिका समुदायले तिनीहरूलाई छोडे । दातान र अबीराम तिनीहरूका पत्‍नीहरू, छोराहरू र स-साना बालबालिकाहरूसहित तिनीहरूका पालको प्रवेश-द्वारमा खडा भए ।
28 ೨೮ ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
मोशाले भने, “यसैद्वारा यी सबै थोक गर्न मलाई परमप्रभुले पठाउनुभएको छ भन्‍ने तिमीहरूले जान्‍नेछौ, किनभने मैले तिनीहरू मेरो आफ्नै इच्छामा गरेको छैन ।
29 ೨೯ ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
यदि यी मानिसहरू सामान्य रूपमा हुने स्वाभाविक मृत्युद्वारा मर्छन् भने, मलाई परमप्रभुले पठाउनुभएको होइन ।
30 ೩೦ ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol h7585)
तर यदि परमप्रभुले कुनै नयाँ कुरा सृजना गर्नुहुन्छ, धर्तीले आफ्नो मुख उघार्छ र तिनीहरूसाथै तिनीहरूका सबै थोकलाई निल्छ, र तिनीहरू जिउँदै चिहानभित्र जान्छन् भने, यी मानिसहरूले परमप्रभुलाई तिरस्कार गरेका छन् भनी तिमीहरूले बुझ्नुपर्छ ।” (Sheol h7585)
31 ೩೧ ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
मोशाले यी कुराहरू भनी सिद्ध्याउने बित्तिकै ती मानिसहरूमुनिको जमिन फाट्यो ।
32 ೩೨ ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
धर्तीले यसको मुख उघार्‍यो अनि तिनीहरूका परिवारहरू र कोरहसँग भएका सबै मानिसहरूसाथै तिनीहरूका सबै थोकलाई निल्यो ।
33 ೩೩ ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol h7585)
यसैले तिनीहरू र तिनीहरूसँग भएका सबै थोक जिउँदै चिहानभित्र लगिए । धर्ती तिनीहरूमाथि बन्द भयो, र तिनीहरू समुदायबाट नष्‍ट भए । (Sheol h7585)
34 ೩೪ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
तिनीहरूका वरिपरि भएका इस्राएलीहरू चिच्‍च्याउँदै भागे । तिनीहरू, “धर्तीले हामीलाई पनि निल्ने भो!” भन्‍दै चिच्‍च्याए ।
35 ೩೫ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
अनि परमप्रभुबाट आगोको ज्वाला निस्क्यो र धूप बालेका २५० जना मानिसलाई नष्‍ट गर्‍यो ।
36 ೩೬ ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ
फेरि परमप्रभु मोशासँग बोल्नुभयो,
37 ೩೭ “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
“पुजारी हारूनका छोरा एलाजारलाई भन् र त्यसले धुपौराहरूलाई आगोबाट निकालोस्, किनभने धुपौराहरू मेरा निम्ति अलग गरिएका छन् । त्यसले बलिरहेका आगोका फिलुङ्गाहरूलाई छरोस् ।
38 ೩೮ ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
आफ्नो पापको कारण जीवन गुमाउनेहरूको धुपौराहरू ले । तिनीहरूलाई पिटेर वेदीलाई मोहर्ने पाताहरू बनाइयोस् । ती मानिसहरूले तिनीहरूलाई मेरो निम्ति अर्पण गरे । यसैले तिनीहरूलाई मेरो निम्ति अलग गर । तिनीहरू इस्राएलका मानिसहरूका निम्ति मेरो उपस्थितिको चिन्ह हुने छन् ।
39 ೩೯ ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
पुजारी एलाजारले आगोले नष्‍ट भएका मानिसहरूले प्रयोग गरेका काँसाका धुपौराहरू लिए र
40 ೪೦ ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
इस्राएलका मानिसहरूलाई याद दिलाउने कुरा हुनलाई तिनीहरूलाई पिटेर वेदी मोहर्ने बनाइयो, परमप्रभुको सामु धूप बाल्न ताकि हारूनका सन्तान बाहिर कोही पनि नआओस् र परमप्रभुले मोशालाई आज्ञा गर्नुभएझैँ तिनीहरू कोरह र तिनका समूहजस्ता नहोऊन् ।
41 ೪೧ ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
तर अर्को बिहान इस्राएलका सबै मानिसको समुदायले मोशा र हारून विरुद्ध गनगन गरे । तिनीहरूले भने, “तिमीहरूले परमप्रभुका मानिसहरूलाई मारेका छौ ।”
42 ೪೨ ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
समुदाय मोशा र हारूनको विरुद्ध भेला हुँदा तिनीहरूले भेट हुने पालतिर हेरे अनि हेर! यसलाई बादलले ढाकिरहेको थियो । परमप्रभुका महिमा देखा पर्‍यो,
43 ೪೩ ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
र मोशा र हारून भेट हुने पालको अघि आए ।
44 ೪೪ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
अनि परमप्रभुले मोशालाई भन्‍नुभयो,
45 ೪೫ “ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
“यो समुदायबाट गइहाल् ताकि मैले तिनीहरूलाई अहिलै नष्‍ट पार्न सकौँ ।” अनि मोशा र हारून जमिनमा घोप्टो परे ।
46 ೪೬ ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
मोशाले हारूनलाई भने, “धुपौरा लिनुहोस्, वेदीबाट यसमा आगो हाल्नुहोस्, यसमा धूप हाल्नुहोस्, यसलाई समुदायकहाँ छिटो लानुहोस् र तिनीहरूका निम्ति प्रायश्‍चित्त गर्नुहोस्, किनभने परमप्रभुको क्रोध आइरहेको छ । विपत्ति सुरु भएको छ ।
47 ೪೭ ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
यसैले हारूले मोशाले अह्राएबमोजिम गरे । तिनी समुदायको बिचमा दौडेर गए । विपत्ति मानिसहरूबिच फैलिन थालेको थियो, यसैले तिनले धूप राखे र मानिसहरूका निम्ति प्रायश्‍चित्त गरे ।
48 ೪೮ ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
हारून जीवित र मृतकहरूका बिचमा खडा भए । यसरी विपत्ति रोकियो ।
49 ೪೯ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
कोरहको विषयमा पनि मरेका अतिरिक्‍त विपत्तिमा मर्नेहरूको सङ्ख्या १४,७०० थियो ।
50 ೫೦ ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.
हारून भेट हुने पालको प्रवेश-द्वारमा मोशाकहाँ फर्केर आए र विपत्ति रोकियो ।

< ಅರಣ್ಯಕಾಂಡ 16 >