< ಅರಣ್ಯಕಾಂಡ 23 >

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
बलाम बालाकाला म्हणाला, इथे सात वेद्या बांधा आणि माझ्यासाठी सात बैल आणि सात मेंढे तयार ठेवा.
2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
बलामाने सांगितले तसे बालाकाने एक मेंढा व एक बैल प्रत्येक वेदीवर मारला.
3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
नंतर बलाम बालाकाला म्हणाला, तू या होमबली जवळ थांब. मी दुसरीकडे जातो. नंतर परमेश्वर माझ्याकडे येईल आणि मी काय बोलायचे ते मला सांगेल. नंतर बलाम उंच जागी गेला.
4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
देव त्या जागी बलामाकडे आला आणि बलाम म्हणाला, मी सात वेद्या तयार केल्या आहेत. आणि प्रत्येक वेदीवर मी एकेक मेंढा व बैल बली दिला आहे.
5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
नंतर परमेश्वराने काय बोलायचे ते बलामास सांगितले. परमेश्वर म्हणाला, बालाकाकडे परत जा आणि मी सांगतो तेच त्यास जाऊन सांग.
6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
तेव्हा बलाम बालाकाकडे परत आला आणि तो आपल्या होमार्पणाजवळ उभा होता आणि मवाबाचे सर्व पुढारी त्याच्याबरोबर होते.
7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
नंतर बलामाने आपला संदेश सांगण्यास सुरवात केली आणि म्हणाला, पूर्वेकडील अराम पर्वतावरुन मवाबाचा राजा बालाक याने मला येथे आणले. तो म्हणाला, ये, माझ्यासाठी याकोबाला शाप दे, ये, इस्राएलींना विरोध कर.
8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
ज्याला देवाने शाप दिला नाही त्यास मी कसा शाप देऊ? ज्याला परमेश्वराने धमकी दिली नाही त्यास मी कशी धमकी देऊ?
9 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
मी त्या लोकांस पर्वतावरुन बघू शकतो; मी त्यांना उंच डोंगरावरुन बघतो. पहा, तेथे लोक एकटेच राहत आहे आणि ते स्वतःला सर्वसाधारण राष्ट्रामध्ये गणित नाहीत.
10 ೧೦ ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
१०इस्राएलाचा केवळ चौथा हिस्सा कोण मोजेल किंवा याकोबाच्या धुळीचे कण कोण मोजू शकेल? मला नीतिमान मनुष्याप्रमाणे मरण येऊ दे, आणि त्यांच्याप्रमाणेच माझ्या जीवनाचा शेवट होऊ दे!
11 ೧೧ ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
११बालाक बलामास म्हणाला, तू हे काय केलेस? माझ्या शत्रूंना शाप देण्यासाठी मी तुला येथे आणले. पण पहा, तू तर त्यांना आशीर्वाद दिलास.
12 ೧೨ ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.
१२बलामाने उत्तर दिले व म्हणाला, परमेश्वराने माझ्या मुखात जे घातले, केवळ तेच मी बोलण्याची काळजी घेऊ नये काय?
13 ೧೩ ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
१३नंतर बालाक त्यास म्हणाला, म्हणून माझ्याबरोबर दुसऱ्या जागी ये. तिथून तुला ह्यातील आणखी बरेच लोक दिसू शकतील. तू त्या सगळ्यांना बघू शकणार नाहीस. पण त्यांचा काही भाग तुला दिसू शकेल. कदाचित त्या जागेवरुन तू त्यांना माझ्यासाठी शाप दे.
14 ೧೪ ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
१४तेव्हा बालाक बलामास पिसगाच्या माथ्यावरील सोफीमाच्या माळ्यावर घेऊन गेला. तेथे बालाकाने सात वेद्या बांधल्या. नंतर बालाकाने प्रत्येक वेदीवर एक बैल आणि एक मेंढा बली दिला.
15 ೧೫ ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
१५तेव्हा बलाम बालाकाला म्हणाला, तू येथे आपल्या होमबलीजवळ या वेदीजवळ थांब. मी तिकडे जाऊन देवाला भेटून येतो.
16 ೧೬ ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
१६परमेश्वर बलामाकडे आला आणि काय बोलायचे ते त्याने त्यास सांगितले. नंतर परमेश्वराने बलामास बालाकाकडे जायला सांगितले. आणि त्याने सांगितलेलेच बोलायला सांगितले.
17 ೧೭ ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
१७म्हणून बलाम बलाकाकडे परत गेला. बालाक वेदीजवळच उभा होता. मवाबाचे पुढारी होमबलीपाशी उभे होते. बालाकाने बलामास येताना पाहिले. आणि तो म्हणाला, परमेश्वराने काय सांगितले?
18 ೧೮ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
१८बलामाने त्याच्या संदेशास सुरवात केली. तो म्हणाला, बालाका, उठ आणि ऐक. तू सिप्पोरेच्या मुला, माझे ऐक,
19 ೧೯ ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
१९देव मनुष्य नाही, की त्याने खोटे बोलावे, किंवा तो काही मनुष्यप्राणी नाही की, त्याने मन बदलावे. जर त्याने काही वचन दिले तर तो ते केल्याशिवाय राहील काय? तो बोलला आहे मी हे करील तर ते तो पुरे केल्याशिवाय राहील काय?
20 ೨೦ ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
२०पहा, मी आशीर्वाद द्यायला आज्ञा केली, देवाने आशीर्वाद दिला आणि मी तो उलटा फिरवू शकत नाही.
21 ೨೧ ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
२१त्यास याकोबात काही कष्ट किंवा इस्राएलात त्रास दिसला नाही. त्यांचा परमेश्वर देव त्यांच्याबरोबर आहे, राजाचा जयघोष त्यांच्यात आहे.
22 ೨೨ ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.
२२देवाने त्यांना मिसर देशातून बाहेर आणले. ते रानबैला इतके शक्तीमान आहेत.
23 ೨೩ ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’
२३याकोबाच्याविरूद्ध मंत्रतंत्र चालणार नाही आणि इस्राएलींना दैवप्रश्र सांगणारे हानी पोचवू शकत नाही, याकोबाविषयी व इस्राएलाविषयी म्हणतील की पहा, देवाने केवढे महान कार्य केले!
24 ೨೪ ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”
२४पहा, लोक सिंहिणीसारखे उठत आहेत, सिंहासारखा बाहेर येतो आणि हल्ला करतो. तो त्याची शिकार खाऊन आणि वधलेल्यांचे रक्त प्यायल्याखेरीज तो खाली बसणार नाही.
25 ೨೫ ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು.
२५नंतर बालाक बलामास म्हणाला, तू त्यांना शापहि देऊ नको आणि आशीर्वादहि देऊ नको.
26 ೨೬ ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
२६बलामाने बालाकाला उत्तर दिले, मी तुला आधीच सांगितले होते की परमेश्वर जे सांगेल तेच मला बोलता येईल.
27 ೨೭ ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.
२७नंतर बालाक बलामास म्हणाला, तेव्हा माझ्याबरोबर दुसऱ्या ठिकाणी ये. कदाचित देव आनंदी होईल आणि तुला त्या लोकांस शाप द्यायची परवानगी देईल.
28 ೨೮ ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
२८म्हणून बालाक बलामास घेऊन पौर पर्वताच्या माथ्यावर गेला. या पर्वतावरुन वाळवंट दिसते.
29 ೨೯ ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
२९बलाम बालाकाला म्हणाला, “इथे सात वेद्या बांध. नंतर सात बैल आणि सात मेंढे बली देण्यासाठी तयार कर.”
30 ೩೦ ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
३०बलामाने सांगितल्याप्रमाणे बालाकाने साऱ्या गोष्टी केल्या. बालाकाने वेदीवर बैल आणि मेंढे बली दिले.

< ಅರಣ್ಯಕಾಂಡ 23 >